Homeಕರ್ನಾಟಕಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ - ಪ್ರಕರಣ ದಾಖಲು

ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ಕೊಲೆ ಆರೋಪಿಯ ಸಹೋದರ ಬಜರಂಗದಳ ಜಿಲ್ಲಾ ಸಂಚಾಲಕನಾಗಿದ್ದು, ಹಲ್ಲೆ ಮಾಡುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಬಳಿಯ ಕನ್ಯಾಡಿ ಗ್ರಾಮದ ಪರಶಿಷ್ಟ ಜಾತಿಗೆ ಸೇರಿದ ದಿನೇಶ್ (40) ಎಂಬ ಯುವಕನನ್ನು ಅದೇ ಗ್ರಾಮದ ಕೃಷ್ಣ ಎಂಬ ಬಜರಂಗದಳ ಮುಖಂಡನೊಬ್ಬ ಜಮೀನು ವಿವಾದಕ್ಕೆ ಸಂಬಂಧಿಸಿ ಹತ್ಯೆ ಮಾಡಿದ್ದಾನೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ 45 ಸೆಕೆಂಡ್‌ಗಳ ಸಿಸಿಟಿವಿ ದೃಶ್ಯಾವಳಿ ಇರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಬಜರಂಗದಳ ಮುಖಂಡ ಕೃಷ್ಣ ಎಳೆದಾಡಿ, ಥಳಿಸುವುದು ದಾಖಲಾಗಿದೆ.

ಪ್ರಕರಣದ ವಿವರ

ಫೆಬ್ರವರಿ 23 ರಂದು ಕೃಷ್ಣ ಎಂಬ ಬಜರಂಗದಳ ಮುಖಂಡನು ದಿನೇಶ್‌ಗೆ ನಿನ್ನ ಜಮೀನನ ದಾಖಲೆಗಳನ್ನು ನಾನು ಮಾಡಿಕೊಟ್ಟಿದ್ದೇನೆ. ಆದರೆ ನೀನು ಯಾವಾಗಲೂ ಕಾಂಗ್ರೆಸ್ ಕಾಂಗ್ರೆಸ್ ಎಂದು ಬೊಬ್ಬೆ ಹಾಕುತ್ತೀಯೆ ಎಂದು ಬೈದಿದ್ದಾರೆ. ಆಗ ಕೊಲೆಗೀಡಾದ ದಿನೇಶ್ ಇಲ್ಲ ನನ್ನ ಜಮೀನಿನ ದಾಖಲೆಗಳನ್ನು ಕಾಂಗ್ರೆಸ್‌ನವರು ಮಾಡಿಕೊಟ್ಟಿದ್ದಾರೆ ಸಾರ್ವಜನಿಕವಾಗಿ ಹೇಳಿದ್ದಾನೆ. ಇದರಿಂದ ರೊಚ್ಚಿಗೆದ್ದ ಕೃಷ್ಣ ದಿನೇಶ್‌ಗೆ ಮನಬಂದಂತೆ ಥಳಿಸಿದ್ದಾನೆ. ಆತನ ಹೊಟ್ಟೆ ಮೇಲೆ ಕೈಯಿಂದ ಗುದ್ದಿ, ಕಾಲಿನಿಂದ ಒದ್ದಿದ್ದಾನೆ. ಇಷ್ಟೆಲ್ಲಾ ಹೊಡೆದಾಗ ದಿನೇಶ್ ತನ್ನ ಬಳಿ ಹಣವಿಲ್ಲದ ಕಾರಣ ಹೊಟ್ಟೆ ನೋವೆಂದು ಮನೆಯಲ್ಲಿ ಅಳುತ್ತಾ, ಒದ್ದಾಡುತ್ತಿದ್ದನು. ಆಗ ಕಾರಣ ಕೇಳಿದಾಗ ಕೃಷ್ಣ ಥಳಿಸಿದ್ದನ್ನು ಮನೆಯವರಿಗೆ ತಿಳಿಸಿದ್ದಾನೆ.

ಇದರಿಂದ ಕುಪಿತಗೊಂಡ ಮನೆಯವರು ಕೃಷ್ಣನ ಬಳಿ ಜಗಳವಾಡಿ, ನೀನೆ ಆಸ್ಪತ್ರೆಗೆ ತೋರಿಸು ಎಂದು ತಾಕೀತು ಮಾಡಿದ್ದಾರೆ. ಕೃಷ್ಣ ಸಂತ್ರಸ್ತ ದಿನೇಶ್‌ ರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿದ್ದಾನೆ ಎಂದು ವೈದ್ಯರ ಬಳಿ ಸುಳ್ಳು ಹೇಳಿದ್ದಾನೆ. ಆದರೆ ಹೊಟ್ಟೆಯಲ್ಲಿನ ಒಳನೋವುಗಳಿಂದ ಬಳಲುತ್ತಿದ್ದ ದಿನೇಶ್ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 25ರ ಬೆಳಗ್ಗಿನ ಜಾವ 2.30ರಲ್ಲಿ  ನಿಧನರಾಗಿದ್ದಾರೆ.

ಈ ಕುರಿತು ಮೃತನ ತಾಯಿ ಪದ್ಮಾವತಿಯವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿ ಇತರ ಕಾಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ನಡೆಯುತ್ತಿದ್ದು, ಇದುವರೆಗೂ ಆರೋಪಿಯ ಬಂಧನವಾಗಿಲ್ಲ.

ಪ್ರಕರಣದ ಆರೋಪಿ ಕೃಷ್ಣ ಎಂಬಾತನು ಭಾಸ್ಕರ್ ಧರ್ಮಸ್ಥಳ ಎಂಬ ಸ್ಥಳೀಯ ಬಜರಂಗದಳದ ಜಿಲ್ಲಾ ಸಂಚಾಲಕನ ಸಹೋದರ ಎನ್ನಲಾಗಿದೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳರವರು ಪ್ರಕರಣದ ಕುರಿತು ಮಾತನಾಡಿ, “ದಕ್ಷಿಣ ಕನ್ನಡದಲ್ಲಿ ಸಂಘಪರಿವಾದ ಪರ್ಯಾಯ ಸರ್ಕಾರ ಅಸ್ತಿತ್ವದಲ್ಲಿದೆ. ಅವರು ಅಕ್ರಮ ಮರಳು ಮಾಫಿಯ, ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ. ಅವರನ್ನು ಪ್ರಶ್ನಿಸಿದವರ ಮೇಲೆ ಹಲ್ಲೆ-ಕೊಲೆಗಳು ಸಾಮಾನ್ಯವಾಗಿವೆ. ಸ್ಥಳೀಯ ಬಿಜೆಪಿ ಶಾಸಕರು, ಸಚಿವರ ಅವರ ಬೆನ್ನಿಗಿರುವುದರಿಂದ ಅವರ ಮೇಲೆ ಯಾವುದೇ ಕ್ರಮಗಳು ಜರುಗುತ್ತಿಲ್ಲ. ಕನ್ಯಾಡಿ ಗ್ರಾಮದ ದಲಿತನ ಕೊಲೆಯೂ ಅದರ ಮುಂದುವರಿದ ಭಾಗವಾಗಿದೆ. ಆರಂಭದಲ್ಲಿ ಪೊಲೀಸರು ಪ್ರಕರಣ ದಾಖಲಿಸುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಈಗ ನಾವು ಒತ್ತಡ ತಂದು ಪ್ರಕರಣ ದಾಖಲಿಸಿದ್ದೇವೆ. ಆದರೆ ಆರೋಪಿಗಳ ಬಂಧನವಾಗಿಲ್ಲ. ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತೇವೆ” ಎಂದಿದ್ದಾರೆ.


ಇದನ್ನೂ ಓದಿ: ಉಕ್ರೇನ್ ಯುದ್ಧ ಸಂದರ್ಭದಲ್ಲಿ ವಿಮಾನ ಪ್ರಯಾಣ ದರ ಏರಿಸಿದ ಕಂಪನಿಗಳು: ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....