Homeಕರ್ನಾಟಕಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ - ಪ್ರಕರಣ ದಾಖಲು

ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ಕೊಲೆ ಆರೋಪಿಯ ಸಹೋದರ ಬಜರಂಗದಳ ಜಿಲ್ಲಾ ಸಂಚಾಲಕನಾಗಿದ್ದು, ಹಲ್ಲೆ ಮಾಡುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಬಳಿಯ ಕನ್ಯಾಡಿ ಗ್ರಾಮದ ಪರಶಿಷ್ಟ ಜಾತಿಗೆ ಸೇರಿದ ದಿನೇಶ್ (40) ಎಂಬ ಯುವಕನನ್ನು ಅದೇ ಗ್ರಾಮದ ಕೃಷ್ಣ ಎಂಬ ಬಜರಂಗದಳ ಮುಖಂಡನೊಬ್ಬ ಜಮೀನು ವಿವಾದಕ್ಕೆ ಸಂಬಂಧಿಸಿ ಹತ್ಯೆ ಮಾಡಿದ್ದಾನೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ 45 ಸೆಕೆಂಡ್‌ಗಳ ಸಿಸಿಟಿವಿ ದೃಶ್ಯಾವಳಿ ಇರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಬಜರಂಗದಳ ಮುಖಂಡ ಕೃಷ್ಣ ಎಳೆದಾಡಿ, ಥಳಿಸುವುದು ದಾಖಲಾಗಿದೆ.

ಪ್ರಕರಣದ ವಿವರ

ಫೆಬ್ರವರಿ 23 ರಂದು ಕೃಷ್ಣ ಎಂಬ ಬಜರಂಗದಳ ಮುಖಂಡನು ದಿನೇಶ್‌ಗೆ ನಿನ್ನ ಜಮೀನನ ದಾಖಲೆಗಳನ್ನು ನಾನು ಮಾಡಿಕೊಟ್ಟಿದ್ದೇನೆ. ಆದರೆ ನೀನು ಯಾವಾಗಲೂ ಕಾಂಗ್ರೆಸ್ ಕಾಂಗ್ರೆಸ್ ಎಂದು ಬೊಬ್ಬೆ ಹಾಕುತ್ತೀಯೆ ಎಂದು ಬೈದಿದ್ದಾರೆ. ಆಗ ಕೊಲೆಗೀಡಾದ ದಿನೇಶ್ ಇಲ್ಲ ನನ್ನ ಜಮೀನಿನ ದಾಖಲೆಗಳನ್ನು ಕಾಂಗ್ರೆಸ್‌ನವರು ಮಾಡಿಕೊಟ್ಟಿದ್ದಾರೆ ಸಾರ್ವಜನಿಕವಾಗಿ ಹೇಳಿದ್ದಾನೆ. ಇದರಿಂದ ರೊಚ್ಚಿಗೆದ್ದ ಕೃಷ್ಣ ದಿನೇಶ್‌ಗೆ ಮನಬಂದಂತೆ ಥಳಿಸಿದ್ದಾನೆ. ಆತನ ಹೊಟ್ಟೆ ಮೇಲೆ ಕೈಯಿಂದ ಗುದ್ದಿ, ಕಾಲಿನಿಂದ ಒದ್ದಿದ್ದಾನೆ. ಇಷ್ಟೆಲ್ಲಾ ಹೊಡೆದಾಗ ದಿನೇಶ್ ತನ್ನ ಬಳಿ ಹಣವಿಲ್ಲದ ಕಾರಣ ಹೊಟ್ಟೆ ನೋವೆಂದು ಮನೆಯಲ್ಲಿ ಅಳುತ್ತಾ, ಒದ್ದಾಡುತ್ತಿದ್ದನು. ಆಗ ಕಾರಣ ಕೇಳಿದಾಗ ಕೃಷ್ಣ ಥಳಿಸಿದ್ದನ್ನು ಮನೆಯವರಿಗೆ ತಿಳಿಸಿದ್ದಾನೆ.

ಇದರಿಂದ ಕುಪಿತಗೊಂಡ ಮನೆಯವರು ಕೃಷ್ಣನ ಬಳಿ ಜಗಳವಾಡಿ, ನೀನೆ ಆಸ್ಪತ್ರೆಗೆ ತೋರಿಸು ಎಂದು ತಾಕೀತು ಮಾಡಿದ್ದಾರೆ. ಕೃಷ್ಣ ಸಂತ್ರಸ್ತ ದಿನೇಶ್‌ ರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿದ್ದಾನೆ ಎಂದು ವೈದ್ಯರ ಬಳಿ ಸುಳ್ಳು ಹೇಳಿದ್ದಾನೆ. ಆದರೆ ಹೊಟ್ಟೆಯಲ್ಲಿನ ಒಳನೋವುಗಳಿಂದ ಬಳಲುತ್ತಿದ್ದ ದಿನೇಶ್ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 25ರ ಬೆಳಗ್ಗಿನ ಜಾವ 2.30ರಲ್ಲಿ  ನಿಧನರಾಗಿದ್ದಾರೆ.

ಈ ಕುರಿತು ಮೃತನ ತಾಯಿ ಪದ್ಮಾವತಿಯವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿ ಇತರ ಕಾಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ನಡೆಯುತ್ತಿದ್ದು, ಇದುವರೆಗೂ ಆರೋಪಿಯ ಬಂಧನವಾಗಿಲ್ಲ.

ಪ್ರಕರಣದ ಆರೋಪಿ ಕೃಷ್ಣ ಎಂಬಾತನು ಭಾಸ್ಕರ್ ಧರ್ಮಸ್ಥಳ ಎಂಬ ಸ್ಥಳೀಯ ಬಜರಂಗದಳದ ಜಿಲ್ಲಾ ಸಂಚಾಲಕನ ಸಹೋದರ ಎನ್ನಲಾಗಿದೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳರವರು ಪ್ರಕರಣದ ಕುರಿತು ಮಾತನಾಡಿ, “ದಕ್ಷಿಣ ಕನ್ನಡದಲ್ಲಿ ಸಂಘಪರಿವಾದ ಪರ್ಯಾಯ ಸರ್ಕಾರ ಅಸ್ತಿತ್ವದಲ್ಲಿದೆ. ಅವರು ಅಕ್ರಮ ಮರಳು ಮಾಫಿಯ, ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ. ಅವರನ್ನು ಪ್ರಶ್ನಿಸಿದವರ ಮೇಲೆ ಹಲ್ಲೆ-ಕೊಲೆಗಳು ಸಾಮಾನ್ಯವಾಗಿವೆ. ಸ್ಥಳೀಯ ಬಿಜೆಪಿ ಶಾಸಕರು, ಸಚಿವರ ಅವರ ಬೆನ್ನಿಗಿರುವುದರಿಂದ ಅವರ ಮೇಲೆ ಯಾವುದೇ ಕ್ರಮಗಳು ಜರುಗುತ್ತಿಲ್ಲ. ಕನ್ಯಾಡಿ ಗ್ರಾಮದ ದಲಿತನ ಕೊಲೆಯೂ ಅದರ ಮುಂದುವರಿದ ಭಾಗವಾಗಿದೆ. ಆರಂಭದಲ್ಲಿ ಪೊಲೀಸರು ಪ್ರಕರಣ ದಾಖಲಿಸುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಈಗ ನಾವು ಒತ್ತಡ ತಂದು ಪ್ರಕರಣ ದಾಖಲಿಸಿದ್ದೇವೆ. ಆದರೆ ಆರೋಪಿಗಳ ಬಂಧನವಾಗಿಲ್ಲ. ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತೇವೆ” ಎಂದಿದ್ದಾರೆ.


ಇದನ್ನೂ ಓದಿ: ಉಕ್ರೇನ್ ಯುದ್ಧ ಸಂದರ್ಭದಲ್ಲಿ ವಿಮಾನ ಪ್ರಯಾಣ ದರ ಏರಿಸಿದ ಕಂಪನಿಗಳು: ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...