Homeಕರ್ನಾಟಕಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ - ಪ್ರಕರಣ ದಾಖಲು

ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ಕೊಲೆ ಆರೋಪಿಯ ಸಹೋದರ ಬಜರಂಗದಳ ಜಿಲ್ಲಾ ಸಂಚಾಲಕನಾಗಿದ್ದು, ಹಲ್ಲೆ ಮಾಡುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಬಳಿಯ ಕನ್ಯಾಡಿ ಗ್ರಾಮದ ಪರಶಿಷ್ಟ ಜಾತಿಗೆ ಸೇರಿದ ದಿನೇಶ್ (40) ಎಂಬ ಯುವಕನನ್ನು ಅದೇ ಗ್ರಾಮದ ಕೃಷ್ಣ ಎಂಬ ಬಜರಂಗದಳ ಮುಖಂಡನೊಬ್ಬ ಜಮೀನು ವಿವಾದಕ್ಕೆ ಸಂಬಂಧಿಸಿ ಹತ್ಯೆ ಮಾಡಿದ್ದಾನೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ 45 ಸೆಕೆಂಡ್‌ಗಳ ಸಿಸಿಟಿವಿ ದೃಶ್ಯಾವಳಿ ಇರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಬಜರಂಗದಳ ಮುಖಂಡ ಕೃಷ್ಣ ಎಳೆದಾಡಿ, ಥಳಿಸುವುದು ದಾಖಲಾಗಿದೆ.

ಪ್ರಕರಣದ ವಿವರ

ಫೆಬ್ರವರಿ 23 ರಂದು ಕೃಷ್ಣ ಎಂಬ ಬಜರಂಗದಳ ಮುಖಂಡನು ದಿನೇಶ್‌ಗೆ ನಿನ್ನ ಜಮೀನನ ದಾಖಲೆಗಳನ್ನು ನಾನು ಮಾಡಿಕೊಟ್ಟಿದ್ದೇನೆ. ಆದರೆ ನೀನು ಯಾವಾಗಲೂ ಕಾಂಗ್ರೆಸ್ ಕಾಂಗ್ರೆಸ್ ಎಂದು ಬೊಬ್ಬೆ ಹಾಕುತ್ತೀಯೆ ಎಂದು ಬೈದಿದ್ದಾರೆ. ಆಗ ಕೊಲೆಗೀಡಾದ ದಿನೇಶ್ ಇಲ್ಲ ನನ್ನ ಜಮೀನಿನ ದಾಖಲೆಗಳನ್ನು ಕಾಂಗ್ರೆಸ್‌ನವರು ಮಾಡಿಕೊಟ್ಟಿದ್ದಾರೆ ಸಾರ್ವಜನಿಕವಾಗಿ ಹೇಳಿದ್ದಾನೆ. ಇದರಿಂದ ರೊಚ್ಚಿಗೆದ್ದ ಕೃಷ್ಣ ದಿನೇಶ್‌ಗೆ ಮನಬಂದಂತೆ ಥಳಿಸಿದ್ದಾನೆ. ಆತನ ಹೊಟ್ಟೆ ಮೇಲೆ ಕೈಯಿಂದ ಗುದ್ದಿ, ಕಾಲಿನಿಂದ ಒದ್ದಿದ್ದಾನೆ. ಇಷ್ಟೆಲ್ಲಾ ಹೊಡೆದಾಗ ದಿನೇಶ್ ತನ್ನ ಬಳಿ ಹಣವಿಲ್ಲದ ಕಾರಣ ಹೊಟ್ಟೆ ನೋವೆಂದು ಮನೆಯಲ್ಲಿ ಅಳುತ್ತಾ, ಒದ್ದಾಡುತ್ತಿದ್ದನು. ಆಗ ಕಾರಣ ಕೇಳಿದಾಗ ಕೃಷ್ಣ ಥಳಿಸಿದ್ದನ್ನು ಮನೆಯವರಿಗೆ ತಿಳಿಸಿದ್ದಾನೆ.

ಇದರಿಂದ ಕುಪಿತಗೊಂಡ ಮನೆಯವರು ಕೃಷ್ಣನ ಬಳಿ ಜಗಳವಾಡಿ, ನೀನೆ ಆಸ್ಪತ್ರೆಗೆ ತೋರಿಸು ಎಂದು ತಾಕೀತು ಮಾಡಿದ್ದಾರೆ. ಕೃಷ್ಣ ಸಂತ್ರಸ್ತ ದಿನೇಶ್‌ ರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿದ್ದಾನೆ ಎಂದು ವೈದ್ಯರ ಬಳಿ ಸುಳ್ಳು ಹೇಳಿದ್ದಾನೆ. ಆದರೆ ಹೊಟ್ಟೆಯಲ್ಲಿನ ಒಳನೋವುಗಳಿಂದ ಬಳಲುತ್ತಿದ್ದ ದಿನೇಶ್ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 25ರ ಬೆಳಗ್ಗಿನ ಜಾವ 2.30ರಲ್ಲಿ  ನಿಧನರಾಗಿದ್ದಾರೆ.

ಈ ಕುರಿತು ಮೃತನ ತಾಯಿ ಪದ್ಮಾವತಿಯವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿ ಇತರ ಕಾಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ನಡೆಯುತ್ತಿದ್ದು, ಇದುವರೆಗೂ ಆರೋಪಿಯ ಬಂಧನವಾಗಿಲ್ಲ.

ಪ್ರಕರಣದ ಆರೋಪಿ ಕೃಷ್ಣ ಎಂಬಾತನು ಭಾಸ್ಕರ್ ಧರ್ಮಸ್ಥಳ ಎಂಬ ಸ್ಥಳೀಯ ಬಜರಂಗದಳದ ಜಿಲ್ಲಾ ಸಂಚಾಲಕನ ಸಹೋದರ ಎನ್ನಲಾಗಿದೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳರವರು ಪ್ರಕರಣದ ಕುರಿತು ಮಾತನಾಡಿ, “ದಕ್ಷಿಣ ಕನ್ನಡದಲ್ಲಿ ಸಂಘಪರಿವಾದ ಪರ್ಯಾಯ ಸರ್ಕಾರ ಅಸ್ತಿತ್ವದಲ್ಲಿದೆ. ಅವರು ಅಕ್ರಮ ಮರಳು ಮಾಫಿಯ, ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ. ಅವರನ್ನು ಪ್ರಶ್ನಿಸಿದವರ ಮೇಲೆ ಹಲ್ಲೆ-ಕೊಲೆಗಳು ಸಾಮಾನ್ಯವಾಗಿವೆ. ಸ್ಥಳೀಯ ಬಿಜೆಪಿ ಶಾಸಕರು, ಸಚಿವರ ಅವರ ಬೆನ್ನಿಗಿರುವುದರಿಂದ ಅವರ ಮೇಲೆ ಯಾವುದೇ ಕ್ರಮಗಳು ಜರುಗುತ್ತಿಲ್ಲ. ಕನ್ಯಾಡಿ ಗ್ರಾಮದ ದಲಿತನ ಕೊಲೆಯೂ ಅದರ ಮುಂದುವರಿದ ಭಾಗವಾಗಿದೆ. ಆರಂಭದಲ್ಲಿ ಪೊಲೀಸರು ಪ್ರಕರಣ ದಾಖಲಿಸುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಈಗ ನಾವು ಒತ್ತಡ ತಂದು ಪ್ರಕರಣ ದಾಖಲಿಸಿದ್ದೇವೆ. ಆದರೆ ಆರೋಪಿಗಳ ಬಂಧನವಾಗಿಲ್ಲ. ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತೇವೆ” ಎಂದಿದ್ದಾರೆ.


ಇದನ್ನೂ ಓದಿ: ಉಕ್ರೇನ್ ಯುದ್ಧ ಸಂದರ್ಭದಲ್ಲಿ ವಿಮಾನ ಪ್ರಯಾಣ ದರ ಏರಿಸಿದ ಕಂಪನಿಗಳು: ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...