Homeಕರ್ನಾಟಕಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ - ಪ್ರಕರಣ ದಾಖಲು

ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ಕೊಲೆ ಆರೋಪಿಯ ಸಹೋದರ ಬಜರಂಗದಳ ಜಿಲ್ಲಾ ಸಂಚಾಲಕನಾಗಿದ್ದು, ಹಲ್ಲೆ ಮಾಡುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಬಳಿಯ ಕನ್ಯಾಡಿ ಗ್ರಾಮದ ಪರಶಿಷ್ಟ ಜಾತಿಗೆ ಸೇರಿದ ದಿನೇಶ್ (40) ಎಂಬ ಯುವಕನನ್ನು ಅದೇ ಗ್ರಾಮದ ಕೃಷ್ಣ ಎಂಬ ಬಜರಂಗದಳ ಮುಖಂಡನೊಬ್ಬ ಜಮೀನು ವಿವಾದಕ್ಕೆ ಸಂಬಂಧಿಸಿ ಹತ್ಯೆ ಮಾಡಿದ್ದಾನೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ 45 ಸೆಕೆಂಡ್‌ಗಳ ಸಿಸಿಟಿವಿ ದೃಶ್ಯಾವಳಿ ಇರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಬಜರಂಗದಳ ಮುಖಂಡ ಕೃಷ್ಣ ಎಳೆದಾಡಿ, ಥಳಿಸುವುದು ದಾಖಲಾಗಿದೆ.

ಪ್ರಕರಣದ ವಿವರ

ಫೆಬ್ರವರಿ 23 ರಂದು ಕೃಷ್ಣ ಎಂಬ ಬಜರಂಗದಳ ಮುಖಂಡನು ದಿನೇಶ್‌ಗೆ ನಿನ್ನ ಜಮೀನನ ದಾಖಲೆಗಳನ್ನು ನಾನು ಮಾಡಿಕೊಟ್ಟಿದ್ದೇನೆ. ಆದರೆ ನೀನು ಯಾವಾಗಲೂ ಕಾಂಗ್ರೆಸ್ ಕಾಂಗ್ರೆಸ್ ಎಂದು ಬೊಬ್ಬೆ ಹಾಕುತ್ತೀಯೆ ಎಂದು ಬೈದಿದ್ದಾರೆ. ಆಗ ಕೊಲೆಗೀಡಾದ ದಿನೇಶ್ ಇಲ್ಲ ನನ್ನ ಜಮೀನಿನ ದಾಖಲೆಗಳನ್ನು ಕಾಂಗ್ರೆಸ್‌ನವರು ಮಾಡಿಕೊಟ್ಟಿದ್ದಾರೆ ಸಾರ್ವಜನಿಕವಾಗಿ ಹೇಳಿದ್ದಾನೆ. ಇದರಿಂದ ರೊಚ್ಚಿಗೆದ್ದ ಕೃಷ್ಣ ದಿನೇಶ್‌ಗೆ ಮನಬಂದಂತೆ ಥಳಿಸಿದ್ದಾನೆ. ಆತನ ಹೊಟ್ಟೆ ಮೇಲೆ ಕೈಯಿಂದ ಗುದ್ದಿ, ಕಾಲಿನಿಂದ ಒದ್ದಿದ್ದಾನೆ. ಇಷ್ಟೆಲ್ಲಾ ಹೊಡೆದಾಗ ದಿನೇಶ್ ತನ್ನ ಬಳಿ ಹಣವಿಲ್ಲದ ಕಾರಣ ಹೊಟ್ಟೆ ನೋವೆಂದು ಮನೆಯಲ್ಲಿ ಅಳುತ್ತಾ, ಒದ್ದಾಡುತ್ತಿದ್ದನು. ಆಗ ಕಾರಣ ಕೇಳಿದಾಗ ಕೃಷ್ಣ ಥಳಿಸಿದ್ದನ್ನು ಮನೆಯವರಿಗೆ ತಿಳಿಸಿದ್ದಾನೆ.

ಇದರಿಂದ ಕುಪಿತಗೊಂಡ ಮನೆಯವರು ಕೃಷ್ಣನ ಬಳಿ ಜಗಳವಾಡಿ, ನೀನೆ ಆಸ್ಪತ್ರೆಗೆ ತೋರಿಸು ಎಂದು ತಾಕೀತು ಮಾಡಿದ್ದಾರೆ. ಕೃಷ್ಣ ಸಂತ್ರಸ್ತ ದಿನೇಶ್‌ ರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿದ್ದಾನೆ ಎಂದು ವೈದ್ಯರ ಬಳಿ ಸುಳ್ಳು ಹೇಳಿದ್ದಾನೆ. ಆದರೆ ಹೊಟ್ಟೆಯಲ್ಲಿನ ಒಳನೋವುಗಳಿಂದ ಬಳಲುತ್ತಿದ್ದ ದಿನೇಶ್ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 25ರ ಬೆಳಗ್ಗಿನ ಜಾವ 2.30ರಲ್ಲಿ  ನಿಧನರಾಗಿದ್ದಾರೆ.

ಈ ಕುರಿತು ಮೃತನ ತಾಯಿ ಪದ್ಮಾವತಿಯವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿ ಇತರ ಕಾಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ನಡೆಯುತ್ತಿದ್ದು, ಇದುವರೆಗೂ ಆರೋಪಿಯ ಬಂಧನವಾಗಿಲ್ಲ.

ಪ್ರಕರಣದ ಆರೋಪಿ ಕೃಷ್ಣ ಎಂಬಾತನು ಭಾಸ್ಕರ್ ಧರ್ಮಸ್ಥಳ ಎಂಬ ಸ್ಥಳೀಯ ಬಜರಂಗದಳದ ಜಿಲ್ಲಾ ಸಂಚಾಲಕನ ಸಹೋದರ ಎನ್ನಲಾಗಿದೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳರವರು ಪ್ರಕರಣದ ಕುರಿತು ಮಾತನಾಡಿ, “ದಕ್ಷಿಣ ಕನ್ನಡದಲ್ಲಿ ಸಂಘಪರಿವಾದ ಪರ್ಯಾಯ ಸರ್ಕಾರ ಅಸ್ತಿತ್ವದಲ್ಲಿದೆ. ಅವರು ಅಕ್ರಮ ಮರಳು ಮಾಫಿಯ, ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ. ಅವರನ್ನು ಪ್ರಶ್ನಿಸಿದವರ ಮೇಲೆ ಹಲ್ಲೆ-ಕೊಲೆಗಳು ಸಾಮಾನ್ಯವಾಗಿವೆ. ಸ್ಥಳೀಯ ಬಿಜೆಪಿ ಶಾಸಕರು, ಸಚಿವರ ಅವರ ಬೆನ್ನಿಗಿರುವುದರಿಂದ ಅವರ ಮೇಲೆ ಯಾವುದೇ ಕ್ರಮಗಳು ಜರುಗುತ್ತಿಲ್ಲ. ಕನ್ಯಾಡಿ ಗ್ರಾಮದ ದಲಿತನ ಕೊಲೆಯೂ ಅದರ ಮುಂದುವರಿದ ಭಾಗವಾಗಿದೆ. ಆರಂಭದಲ್ಲಿ ಪೊಲೀಸರು ಪ್ರಕರಣ ದಾಖಲಿಸುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಈಗ ನಾವು ಒತ್ತಡ ತಂದು ಪ್ರಕರಣ ದಾಖಲಿಸಿದ್ದೇವೆ. ಆದರೆ ಆರೋಪಿಗಳ ಬಂಧನವಾಗಿಲ್ಲ. ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತೇವೆ” ಎಂದಿದ್ದಾರೆ.


ಇದನ್ನೂ ಓದಿ: ಉಕ್ರೇನ್ ಯುದ್ಧ ಸಂದರ್ಭದಲ್ಲಿ ವಿಮಾನ ಪ್ರಯಾಣ ದರ ಏರಿಸಿದ ಕಂಪನಿಗಳು: ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...