Homeಕರ್ನಾಟಕಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

- Advertisement -
- Advertisement -

ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿರುವ ದೂರಿಗೆ ಸಂಬಂಧಿಸಿದಂತೆ, ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ಅದನ್ನು ನಡೆಸುತ್ತಿರುವ ಕುಟುಂಬದ ವಿರುದ್ಧ ಯಾವುದೇ ‘ಮಾನಹಾನಿಕರ ವಿಷಯ’ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಬುಧವಾರ (ಜುಲೈ 23) ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠದ ಮುಂದೆ ಅರ್ಜಿದಾರರಾದ ‘ಥರ್ಡ್ ಐ ಯೂಟ್ಯೂಬ್ ಚಾನೆಲ್’ ಪರ ವಕೀಲರು ವಿಷಯ ಪ್ರಸ್ತಾಪಿಸಿದ್ದರು.

“ಸುಮಾರು 390 ಮಾಧ್ಯಮ ಸಂಸ್ಥೆಗಳ ವಿರುದ್ದ ಗ್ಯಾಗ್ ಆರ್ಡರ್ ನೀಡಲಾಗಿದೆ. ಅರ್ಜಿ ಸಲ್ಲಿಸಿದ ಮೂರು ಗಂಟೆಗಳಲ್ಲಿ ಅದನ್ನು ಪರಿಗಣಿಸಿ ಆದೇಶ ಮಾಡಲಾಗಿದೆ. ಸುಮಾರು 9 ಸಾವಿರ ಯುಆರ್‌ಎಲ್‌ಗಳನ್ನು ತೆಗೆದು ಹಾಕುವಂತೆ ಸೂಚಿಸಲಾಗಿದೆ. ಇದರಿಂದ ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಗೆ ಹಿನ್ನೆಡೆಯಲಾಗಲಿದೆ” ಎಂದು ವಕೀಲರು ತಿಳಿಸಿದ್ದರು.

ಆದರೆ, ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ ವಿನೋದ್ ಚಂದ್ರನ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಈ ವಿಷಯವನ್ನು ನೇರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಪರಿಗಣಿಸಲು ನಿರಾಕರಿಸಿದೆ ಎಂದು livelaw.in ವರದಿ ಮಾಡಿದೆ.

“ನಾವು ಹೈಕೋರ್ಟ್‌ಗಳನ್ನು ನಿರುತ್ಸಾಹಗೊಳಿಸಲು ಸಾಧ್ಯವಿಲ್ಲ” ಎಂದು ಹೇಳಿದ ಪೀಠ, ಮೊದಲು ಹೈಕೋರ್ಟ್‌ಗೆ ಹೋಗಿ ಎಂದು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದೆ. 

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರಿನ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜುಲೈ 18ರಂದು ಆದೇಶ ನೀಡಿದ್ದು, ಹರ್ಷೇಂದ್ರ ಕುಮಾರ್, ಅವರ ಕುಟುಂಬ ಸದಸ್ಯರು, ಹರ್ಷೇಂದ್ರ ಕುಮಾರ್ ಅವರ ಕುಟುಂಬ ನಡೆಸುತ್ತಿರುವ ಸಂಸ್ಥೆಗಳು ಮತ್ತು ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದ ವಿರುದ್ಧ ಯಾವುದೇ ಮಾನನಷ್ಟಕರ ವಿಷಯ ಮತ್ತು ಮಾಹಿತಿಯನ್ನು ಯೂಟ್ಯೂಬ್ ಚಾನೆಲ್‌ಗಳು ಸೇರಿದಂತೆ ಡಿಜಿಟಲ್ ಮಾಧ್ಯಮ, ಎಲ್ಲಾ ಸಾಮಾಜಿಕ ಮಾಧ್ಯಮ ಅಥವಾ ಯಾವುದೇ ರೀತಿಯ ಮುದ್ರಣ ಮಾಧ್ಯಮಗಳಲ್ಲಿ ಪ್ರಕಟಿಸುವುದು, ಪ್ರಸಾರ ಮಾಡುವುದು, ಫಾರ್ವರ್ಡ್ ಮಾಡುವುದು, ಅಪ್‌ಲೋಡ್ ಮಾಡುವುದು, ರವಾನಿಸುವುದು ಮತ್ತು ಪ್ರಸಾರ ಮಾಡುವುದನ್ನು ಮುಂದಿನ ವಿಚಾರಣೆಯವರೆಗೆ ನಿರ್ಬಂಧಿಸಿ ತಡೆಯಾಜ್ಞೆ ಹೊರಡಿಸಿದೆ.

Courtesy : livelaw.in

ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ 20 ಅಧಿಕಾರಿಗಳ ನಿಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...