Homeಕರ್ನಾಟಕಧರ್ಮಸ್ಥಳ ಪ್ರಕರಣ: Fast Track ಕೋರ್ಟ್ ರಚಿಸಬೇಕು- ಸಿ.ಎಸ್ ದ್ವಾರಕಾನಾಥ್

ಧರ್ಮಸ್ಥಳ ಪ್ರಕರಣ: Fast Track ಕೋರ್ಟ್ ರಚಿಸಬೇಕು- ಸಿ.ಎಸ್ ದ್ವಾರಕಾನಾಥ್

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದ ಸಾಮೂಹಿಕ ಅತ್ಯಾಚಾರ, ಕೊಲೆಗಳು ಮತ್ತು ನೂರಾರು ಹೆಣಗಳನ್ನು ಹೂತ ಪ್ರಕರಣವನ್ನು ತನಿಖೆ ಮಾಡಲು ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು SIT ನೇಮಕ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸುತ್ತೇವೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ವಿಚಾರಣೆಗಾಗಿ ರೆಗ್ಯುಲರ್ ನ್ಯಾಯಾಲಯದ ಬದಲು ‘ವಿಶೇಷ ಫಾಸ್ಟ್ ಟ್ರಾಕ್ ನ್ಯಾಯಾಲಯ’ವನ್ನು ರಚಿಸಲು ಸರಕಾರವನ್ನು ಒತ್ತಾಯಿಸಬೇಕಾಗಿದೆ ಎಂದು  ಹಿರಿಯ ವಕೀಲ ಸಿ.ಎಸ್.ದ್ವಾರಕಾನಾಥ್ ಅವರು ತಿಳಿಸಿದ್ದಾರೆ.

SIT ನೇಮಕ ಸಂಬಂಧ ಅನೇಕ ಜನಪರ ವ್ಯಕ್ತಿಗಳು, ಸಂಘಟನೆಗಳು ಮತ್ತು ಯೂಟ್ಯೂಬ್‌ ಚಾನೆಲ್‌ಗಳು  ಸರ್ಕಾರಕ್ಕೆ ನಿರಂತರವಾಗಿ ತಾಕೀತು ಮಾಡುತ್ತಲೇ ಬಂದಿದ್ದಾರೆ. ಸಮೀರ್ ಎಂ.ಡಿ., ಈದಿನ ಯೂಟ್ಯೂಬ್‌ ಚಾನೆಲ್ ನಿಂದ ಹಿಡಿದು ಗಿರೀಶ್ ಮಟ್ಟಣ್ಣನವರ್, ಡಿಟಾಕ್ ನ ದಿನೇಶ್ ಕುಮಾರ್, ಹರ್ಷಕುಮಾರ್ ಕುಗ್ವೆ , ಥರ್ಡ್ ಐ, ಲಾಯರ್ ಜಗದೀಶ್, ಬಾಲನ್, ನವೀನ್ ಸೂರಿಂಜೆ, ನ್ಯಾಯಮೂರ್ತಿ ಗೋಪಾಲಗೌಡರು, ರವಿಕೃಷ್ಣಾರೆಡ್ಡಿ, ನಟ ಚೇತನ್, ನಟ ಪ್ರಕಾಶ್ ರಾಜ್, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮುಂತಾಗಿ ಇನ್ನೂ ಅನೇಕ, ನಾನು ಮರೆತಿರಬಹುದಾದ ನಾಮಧೇಯರು ಮತ್ತು ಅನಾಮಧೇಯರು ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ ಎಂದು ಅವರು ಹೇಳಿದರು.

ದಿನೇದಿನೇ ಈ ಪ್ರಕರಣವು ಪಕ್ಕದ ರಾಜ್ಯಗಳಾದ ಕೇರಳ, ತಮಿಳುನಾಡಿಗೆ ಹರಡಿದ್ದು, ಅಲ್ಲಿನ ಮಾಧ್ಯಮಗಳೂ ವರದಿ ಮಾಡಲಾರಂಭಿಸಿವೆ. ರಾಷ್ಟ್ರೀಯ ಸುದ್ದಿ ಚಾನಲ್ ಗಳು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸಾರ್ವಜನಿಕರೂ ಈ ಪ್ರಕರಣದ ಬಗ್ಗೆ ಹಾದಿಬೀದಿಯಲ್ಲಿ ಮಾತಾಡಲು ಆರಂಭಿಸಿದ್ದೇ ಮುಂತಾಗಿ ಅನೇಕ ನೇರ ಮತ್ತು ಪರೋಕ್ಷ ಒತ್ತಡಗಳೂ ಕೂಡ SIT ಮಾಡಲು ಕಾರಣಗಳಾಗಿವೆ ಎಂದು ಅವರು ತಿಳಿಸಿದರು.

ಈ ಮಧ್ಯೆ ನಮ್ಮ ವಕೀಲರ ನಿಯೋಗ ಮುಖ್ಯಮಂತ್ರಿ ಗಳನ್ನು ಭೇಟಿಯಾಗಿ SIT ಮಾಡಬೇಕೆಂಬ ವಿನಂತಿಯ ಜತೆಗೆ ಕೆಲವು ಮುಖ್ಯ ಸೂಚನೆಗಳನ್ನು ನಮ್ಮ ಪತ್ರದಲ್ಲಿ ನಮ್ರವಾಗಿ ನೀಡಿದ್ದೆವು. ಅದರಲ್ಲಿ SIT ತನಿಖೆಯನ್ನು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನಡೆಸಬೇಕು, ಶವಗಳನ್ನು ಹೊರ ತೆಗೆಯುವಾಗ(exhume) ಇಡೀ ಪ್ರಕ್ರಿಯೆಯನ್ನು ವಿಡಿಯೋಗ್ರಾಫ್ ಮಾಡಬೇಕು, ಕಡ್ಡಾಯವಾಗಿ FSL(forensic science) ತಜ್ಞರು ಇರಬೇಕು, ಮತ್ತು ನುರಿತ ಪ್ರಾಸಿಕ್ಯೂಟರ್ ಒಬ್ಬರನ್ನು ಸಹಾಯಕರಾಗಿ ನೇಮಿಸಿಕೊಳ್ಳಬೇಕು ಎಂದು ವಿನಂತಿಸಿದ್ದೆವು. ಇದು ಅತ್ಯಂತ ಸೂಕ್ಷ್ಮ ಮತ್ತು ಪ್ರಭಾವಿಗಳಂತವರು ಒಳಗೊಂಡಿರಬಹುದಾದ ಪ್ರಕರಣ ಆಗಿರುವುದರಿಂದ ಇಷ್ಟೆಲ್ಲಾ ಕಾನೂನಾತ್ಮಕ ಮುನ್ನೆಚ್ಚರಿಕೆಗಳು ಅವಶ್ಯಕ ಎಂದಿದ್ದಾರೆ.

ಗೌರಿ ಲಂಕೇಶ್ ಹತ್ಯೆಯಾಗಿ ಹಲವು ವರ್ಷಗಳೇ ಕಳೆದರೂ ಅದರ ವಿಚಾರಣೆ ಇನ್ನೂ ಮುಗಿದಿಲ್ಲ, ಆರೋಪಿಗಳು ಜಾಮೀನು ಪಡೆದು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಧರ್ಮಸ್ಥಳ ಪ್ರಕರಣವನ್ನು ಗಮನಿಸಿದಾಗ ಇದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದ ವಿಶೇಷ ಪ್ರಕರಣವಾಗಿದೆ. ಇಲ್ಲಿನ ಅತ್ಯಾಚಾರ ಮತ್ತು ಕೊಲೆಗಳ ಸಂಖ್ಯೆ ನೂರಾರು ಇರುವುದರಿಂದ ಈ ಪ್ರಕರಣವನ್ನು ರೆಗ್ಯುಲರ್ ಕೋರ್ಟುಗಳಲ್ಲಿ ನಡೆಸಲು ಸಾಧ್ಯವೇ ಇಲ್ಲ. ನೂರು ವರ್ಷಗಳಾದರೂ ನಮ್ಮ ರೆಗ್ಯುಲರ್ ಕೋರ್ಟುಗಳಲ್ಲಿ ಈ ಪ್ರಕರಣ ಅಂತ್ಯ ಕಾಣಲಾರದು! ಹೀಗಾಗಿ ಈ ಪ್ರಕರಣಕ್ಕೆಂದೇ “ವಿಶೇಷ ಫಾಸ್ಟ್ ಟ್ರಾಕ್ ಕೋರ್ಟ”ನ್ನು ನೇಮಿಸಬೇಕೆಂಬುದನ್ನೂ ಸರ್ಕಾರದ ಗಮನಕ್ಕೆ ನಾವೆಲ್ಲ ತರಬೇಕಿದೆ ಎಂದು ಆಗ್ರಹಿಸಿದ್ದಾರೆ.

SIT ನೇಮಕ ಮಾಡಿರುವುದು ಸ್ವಾಗತಾರ್ಹ. ಆದರೆ ಇದಷ್ಟೇ ಅಂತ್ಯವಲ್ಲ, ಇದು ಆರಂಭ ಮಾತ್ರ ಎಂದು ಕೂಡ ಅವರು ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...