Homeಕರ್ನಾಟಕಧರ್ಮಸ್ಥಳ ಪ್ರಕರಣ: Fast Track ಕೋರ್ಟ್ ರಚಿಸಬೇಕು- ಸಿ.ಎಸ್ ದ್ವಾರಕಾನಾಥ್

ಧರ್ಮಸ್ಥಳ ಪ್ರಕರಣ: Fast Track ಕೋರ್ಟ್ ರಚಿಸಬೇಕು- ಸಿ.ಎಸ್ ದ್ವಾರಕಾನಾಥ್

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದ ಸಾಮೂಹಿಕ ಅತ್ಯಾಚಾರ, ಕೊಲೆಗಳು ಮತ್ತು ನೂರಾರು ಹೆಣಗಳನ್ನು ಹೂತ ಪ್ರಕರಣವನ್ನು ತನಿಖೆ ಮಾಡಲು ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು SIT ನೇಮಕ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸುತ್ತೇವೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ವಿಚಾರಣೆಗಾಗಿ ರೆಗ್ಯುಲರ್ ನ್ಯಾಯಾಲಯದ ಬದಲು ‘ವಿಶೇಷ ಫಾಸ್ಟ್ ಟ್ರಾಕ್ ನ್ಯಾಯಾಲಯ’ವನ್ನು ರಚಿಸಲು ಸರಕಾರವನ್ನು ಒತ್ತಾಯಿಸಬೇಕಾಗಿದೆ ಎಂದು  ಹಿರಿಯ ವಕೀಲ ಸಿ.ಎಸ್.ದ್ವಾರಕಾನಾಥ್ ಅವರು ತಿಳಿಸಿದ್ದಾರೆ.

SIT ನೇಮಕ ಸಂಬಂಧ ಅನೇಕ ಜನಪರ ವ್ಯಕ್ತಿಗಳು, ಸಂಘಟನೆಗಳು ಮತ್ತು ಯೂಟ್ಯೂಬ್‌ ಚಾನೆಲ್‌ಗಳು  ಸರ್ಕಾರಕ್ಕೆ ನಿರಂತರವಾಗಿ ತಾಕೀತು ಮಾಡುತ್ತಲೇ ಬಂದಿದ್ದಾರೆ. ಸಮೀರ್ ಎಂ.ಡಿ., ಈದಿನ ಯೂಟ್ಯೂಬ್‌ ಚಾನೆಲ್ ನಿಂದ ಹಿಡಿದು ಗಿರೀಶ್ ಮಟ್ಟಣ್ಣನವರ್, ಡಿಟಾಕ್ ನ ದಿನೇಶ್ ಕುಮಾರ್, ಹರ್ಷಕುಮಾರ್ ಕುಗ್ವೆ , ಥರ್ಡ್ ಐ, ಲಾಯರ್ ಜಗದೀಶ್, ಬಾಲನ್, ನವೀನ್ ಸೂರಿಂಜೆ, ನ್ಯಾಯಮೂರ್ತಿ ಗೋಪಾಲಗೌಡರು, ರವಿಕೃಷ್ಣಾರೆಡ್ಡಿ, ನಟ ಚೇತನ್, ನಟ ಪ್ರಕಾಶ್ ರಾಜ್, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮುಂತಾಗಿ ಇನ್ನೂ ಅನೇಕ, ನಾನು ಮರೆತಿರಬಹುದಾದ ನಾಮಧೇಯರು ಮತ್ತು ಅನಾಮಧೇಯರು ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ ಎಂದು ಅವರು ಹೇಳಿದರು.

ದಿನೇದಿನೇ ಈ ಪ್ರಕರಣವು ಪಕ್ಕದ ರಾಜ್ಯಗಳಾದ ಕೇರಳ, ತಮಿಳುನಾಡಿಗೆ ಹರಡಿದ್ದು, ಅಲ್ಲಿನ ಮಾಧ್ಯಮಗಳೂ ವರದಿ ಮಾಡಲಾರಂಭಿಸಿವೆ. ರಾಷ್ಟ್ರೀಯ ಸುದ್ದಿ ಚಾನಲ್ ಗಳು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸಾರ್ವಜನಿಕರೂ ಈ ಪ್ರಕರಣದ ಬಗ್ಗೆ ಹಾದಿಬೀದಿಯಲ್ಲಿ ಮಾತಾಡಲು ಆರಂಭಿಸಿದ್ದೇ ಮುಂತಾಗಿ ಅನೇಕ ನೇರ ಮತ್ತು ಪರೋಕ್ಷ ಒತ್ತಡಗಳೂ ಕೂಡ SIT ಮಾಡಲು ಕಾರಣಗಳಾಗಿವೆ ಎಂದು ಅವರು ತಿಳಿಸಿದರು.

ಈ ಮಧ್ಯೆ ನಮ್ಮ ವಕೀಲರ ನಿಯೋಗ ಮುಖ್ಯಮಂತ್ರಿ ಗಳನ್ನು ಭೇಟಿಯಾಗಿ SIT ಮಾಡಬೇಕೆಂಬ ವಿನಂತಿಯ ಜತೆಗೆ ಕೆಲವು ಮುಖ್ಯ ಸೂಚನೆಗಳನ್ನು ನಮ್ಮ ಪತ್ರದಲ್ಲಿ ನಮ್ರವಾಗಿ ನೀಡಿದ್ದೆವು. ಅದರಲ್ಲಿ SIT ತನಿಖೆಯನ್ನು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನಡೆಸಬೇಕು, ಶವಗಳನ್ನು ಹೊರ ತೆಗೆಯುವಾಗ(exhume) ಇಡೀ ಪ್ರಕ್ರಿಯೆಯನ್ನು ವಿಡಿಯೋಗ್ರಾಫ್ ಮಾಡಬೇಕು, ಕಡ್ಡಾಯವಾಗಿ FSL(forensic science) ತಜ್ಞರು ಇರಬೇಕು, ಮತ್ತು ನುರಿತ ಪ್ರಾಸಿಕ್ಯೂಟರ್ ಒಬ್ಬರನ್ನು ಸಹಾಯಕರಾಗಿ ನೇಮಿಸಿಕೊಳ್ಳಬೇಕು ಎಂದು ವಿನಂತಿಸಿದ್ದೆವು. ಇದು ಅತ್ಯಂತ ಸೂಕ್ಷ್ಮ ಮತ್ತು ಪ್ರಭಾವಿಗಳಂತವರು ಒಳಗೊಂಡಿರಬಹುದಾದ ಪ್ರಕರಣ ಆಗಿರುವುದರಿಂದ ಇಷ್ಟೆಲ್ಲಾ ಕಾನೂನಾತ್ಮಕ ಮುನ್ನೆಚ್ಚರಿಕೆಗಳು ಅವಶ್ಯಕ ಎಂದಿದ್ದಾರೆ.

ಗೌರಿ ಲಂಕೇಶ್ ಹತ್ಯೆಯಾಗಿ ಹಲವು ವರ್ಷಗಳೇ ಕಳೆದರೂ ಅದರ ವಿಚಾರಣೆ ಇನ್ನೂ ಮುಗಿದಿಲ್ಲ, ಆರೋಪಿಗಳು ಜಾಮೀನು ಪಡೆದು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಧರ್ಮಸ್ಥಳ ಪ್ರಕರಣವನ್ನು ಗಮನಿಸಿದಾಗ ಇದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದ ವಿಶೇಷ ಪ್ರಕರಣವಾಗಿದೆ. ಇಲ್ಲಿನ ಅತ್ಯಾಚಾರ ಮತ್ತು ಕೊಲೆಗಳ ಸಂಖ್ಯೆ ನೂರಾರು ಇರುವುದರಿಂದ ಈ ಪ್ರಕರಣವನ್ನು ರೆಗ್ಯುಲರ್ ಕೋರ್ಟುಗಳಲ್ಲಿ ನಡೆಸಲು ಸಾಧ್ಯವೇ ಇಲ್ಲ. ನೂರು ವರ್ಷಗಳಾದರೂ ನಮ್ಮ ರೆಗ್ಯುಲರ್ ಕೋರ್ಟುಗಳಲ್ಲಿ ಈ ಪ್ರಕರಣ ಅಂತ್ಯ ಕಾಣಲಾರದು! ಹೀಗಾಗಿ ಈ ಪ್ರಕರಣಕ್ಕೆಂದೇ “ವಿಶೇಷ ಫಾಸ್ಟ್ ಟ್ರಾಕ್ ಕೋರ್ಟ”ನ್ನು ನೇಮಿಸಬೇಕೆಂಬುದನ್ನೂ ಸರ್ಕಾರದ ಗಮನಕ್ಕೆ ನಾವೆಲ್ಲ ತರಬೇಕಿದೆ ಎಂದು ಆಗ್ರಹಿಸಿದ್ದಾರೆ.

SIT ನೇಮಕ ಮಾಡಿರುವುದು ಸ್ವಾಗತಾರ್ಹ. ಆದರೆ ಇದಷ್ಟೇ ಅಂತ್ಯವಲ್ಲ, ಇದು ಆರಂಭ ಮಾತ್ರ ಎಂದು ಕೂಡ ಅವರು ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...