Homeಕರ್ನಾಟಕಧರ್ಮಸ್ಥಳ ಪ್ರಕರಣ: Fast Track ಕೋರ್ಟ್ ರಚಿಸಬೇಕು- ಸಿ.ಎಸ್ ದ್ವಾರಕಾನಾಥ್

ಧರ್ಮಸ್ಥಳ ಪ್ರಕರಣ: Fast Track ಕೋರ್ಟ್ ರಚಿಸಬೇಕು- ಸಿ.ಎಸ್ ದ್ವಾರಕಾನಾಥ್

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದ ಸಾಮೂಹಿಕ ಅತ್ಯಾಚಾರ, ಕೊಲೆಗಳು ಮತ್ತು ನೂರಾರು ಹೆಣಗಳನ್ನು ಹೂತ ಪ್ರಕರಣವನ್ನು ತನಿಖೆ ಮಾಡಲು ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು SIT ನೇಮಕ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸುತ್ತೇವೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ವಿಚಾರಣೆಗಾಗಿ ರೆಗ್ಯುಲರ್ ನ್ಯಾಯಾಲಯದ ಬದಲು ‘ವಿಶೇಷ ಫಾಸ್ಟ್ ಟ್ರಾಕ್ ನ್ಯಾಯಾಲಯ’ವನ್ನು ರಚಿಸಲು ಸರಕಾರವನ್ನು ಒತ್ತಾಯಿಸಬೇಕಾಗಿದೆ ಎಂದು  ಹಿರಿಯ ವಕೀಲ ಸಿ.ಎಸ್.ದ್ವಾರಕಾನಾಥ್ ಅವರು ತಿಳಿಸಿದ್ದಾರೆ.

SIT ನೇಮಕ ಸಂಬಂಧ ಅನೇಕ ಜನಪರ ವ್ಯಕ್ತಿಗಳು, ಸಂಘಟನೆಗಳು ಮತ್ತು ಯೂಟ್ಯೂಬ್‌ ಚಾನೆಲ್‌ಗಳು  ಸರ್ಕಾರಕ್ಕೆ ನಿರಂತರವಾಗಿ ತಾಕೀತು ಮಾಡುತ್ತಲೇ ಬಂದಿದ್ದಾರೆ. ಸಮೀರ್ ಎಂ.ಡಿ., ಈದಿನ ಯೂಟ್ಯೂಬ್‌ ಚಾನೆಲ್ ನಿಂದ ಹಿಡಿದು ಗಿರೀಶ್ ಮಟ್ಟಣ್ಣನವರ್, ಡಿಟಾಕ್ ನ ದಿನೇಶ್ ಕುಮಾರ್, ಹರ್ಷಕುಮಾರ್ ಕುಗ್ವೆ , ಥರ್ಡ್ ಐ, ಲಾಯರ್ ಜಗದೀಶ್, ಬಾಲನ್, ನವೀನ್ ಸೂರಿಂಜೆ, ನ್ಯಾಯಮೂರ್ತಿ ಗೋಪಾಲಗೌಡರು, ರವಿಕೃಷ್ಣಾರೆಡ್ಡಿ, ನಟ ಚೇತನ್, ನಟ ಪ್ರಕಾಶ್ ರಾಜ್, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮುಂತಾಗಿ ಇನ್ನೂ ಅನೇಕ, ನಾನು ಮರೆತಿರಬಹುದಾದ ನಾಮಧೇಯರು ಮತ್ತು ಅನಾಮಧೇಯರು ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ ಎಂದು ಅವರು ಹೇಳಿದರು.

ದಿನೇದಿನೇ ಈ ಪ್ರಕರಣವು ಪಕ್ಕದ ರಾಜ್ಯಗಳಾದ ಕೇರಳ, ತಮಿಳುನಾಡಿಗೆ ಹರಡಿದ್ದು, ಅಲ್ಲಿನ ಮಾಧ್ಯಮಗಳೂ ವರದಿ ಮಾಡಲಾರಂಭಿಸಿವೆ. ರಾಷ್ಟ್ರೀಯ ಸುದ್ದಿ ಚಾನಲ್ ಗಳು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸಾರ್ವಜನಿಕರೂ ಈ ಪ್ರಕರಣದ ಬಗ್ಗೆ ಹಾದಿಬೀದಿಯಲ್ಲಿ ಮಾತಾಡಲು ಆರಂಭಿಸಿದ್ದೇ ಮುಂತಾಗಿ ಅನೇಕ ನೇರ ಮತ್ತು ಪರೋಕ್ಷ ಒತ್ತಡಗಳೂ ಕೂಡ SIT ಮಾಡಲು ಕಾರಣಗಳಾಗಿವೆ ಎಂದು ಅವರು ತಿಳಿಸಿದರು.

ಈ ಮಧ್ಯೆ ನಮ್ಮ ವಕೀಲರ ನಿಯೋಗ ಮುಖ್ಯಮಂತ್ರಿ ಗಳನ್ನು ಭೇಟಿಯಾಗಿ SIT ಮಾಡಬೇಕೆಂಬ ವಿನಂತಿಯ ಜತೆಗೆ ಕೆಲವು ಮುಖ್ಯ ಸೂಚನೆಗಳನ್ನು ನಮ್ಮ ಪತ್ರದಲ್ಲಿ ನಮ್ರವಾಗಿ ನೀಡಿದ್ದೆವು. ಅದರಲ್ಲಿ SIT ತನಿಖೆಯನ್ನು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನಡೆಸಬೇಕು, ಶವಗಳನ್ನು ಹೊರ ತೆಗೆಯುವಾಗ(exhume) ಇಡೀ ಪ್ರಕ್ರಿಯೆಯನ್ನು ವಿಡಿಯೋಗ್ರಾಫ್ ಮಾಡಬೇಕು, ಕಡ್ಡಾಯವಾಗಿ FSL(forensic science) ತಜ್ಞರು ಇರಬೇಕು, ಮತ್ತು ನುರಿತ ಪ್ರಾಸಿಕ್ಯೂಟರ್ ಒಬ್ಬರನ್ನು ಸಹಾಯಕರಾಗಿ ನೇಮಿಸಿಕೊಳ್ಳಬೇಕು ಎಂದು ವಿನಂತಿಸಿದ್ದೆವು. ಇದು ಅತ್ಯಂತ ಸೂಕ್ಷ್ಮ ಮತ್ತು ಪ್ರಭಾವಿಗಳಂತವರು ಒಳಗೊಂಡಿರಬಹುದಾದ ಪ್ರಕರಣ ಆಗಿರುವುದರಿಂದ ಇಷ್ಟೆಲ್ಲಾ ಕಾನೂನಾತ್ಮಕ ಮುನ್ನೆಚ್ಚರಿಕೆಗಳು ಅವಶ್ಯಕ ಎಂದಿದ್ದಾರೆ.

ಗೌರಿ ಲಂಕೇಶ್ ಹತ್ಯೆಯಾಗಿ ಹಲವು ವರ್ಷಗಳೇ ಕಳೆದರೂ ಅದರ ವಿಚಾರಣೆ ಇನ್ನೂ ಮುಗಿದಿಲ್ಲ, ಆರೋಪಿಗಳು ಜಾಮೀನು ಪಡೆದು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಧರ್ಮಸ್ಥಳ ಪ್ರಕರಣವನ್ನು ಗಮನಿಸಿದಾಗ ಇದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದ ವಿಶೇಷ ಪ್ರಕರಣವಾಗಿದೆ. ಇಲ್ಲಿನ ಅತ್ಯಾಚಾರ ಮತ್ತು ಕೊಲೆಗಳ ಸಂಖ್ಯೆ ನೂರಾರು ಇರುವುದರಿಂದ ಈ ಪ್ರಕರಣವನ್ನು ರೆಗ್ಯುಲರ್ ಕೋರ್ಟುಗಳಲ್ಲಿ ನಡೆಸಲು ಸಾಧ್ಯವೇ ಇಲ್ಲ. ನೂರು ವರ್ಷಗಳಾದರೂ ನಮ್ಮ ರೆಗ್ಯುಲರ್ ಕೋರ್ಟುಗಳಲ್ಲಿ ಈ ಪ್ರಕರಣ ಅಂತ್ಯ ಕಾಣಲಾರದು! ಹೀಗಾಗಿ ಈ ಪ್ರಕರಣಕ್ಕೆಂದೇ “ವಿಶೇಷ ಫಾಸ್ಟ್ ಟ್ರಾಕ್ ಕೋರ್ಟ”ನ್ನು ನೇಮಿಸಬೇಕೆಂಬುದನ್ನೂ ಸರ್ಕಾರದ ಗಮನಕ್ಕೆ ನಾವೆಲ್ಲ ತರಬೇಕಿದೆ ಎಂದು ಆಗ್ರಹಿಸಿದ್ದಾರೆ.

SIT ನೇಮಕ ಮಾಡಿರುವುದು ಸ್ವಾಗತಾರ್ಹ. ಆದರೆ ಇದಷ್ಟೇ ಅಂತ್ಯವಲ್ಲ, ಇದು ಆರಂಭ ಮಾತ್ರ ಎಂದು ಕೂಡ ಅವರು ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...