Homeಕರ್ನಾಟಕಧರ್ಮಸ್ಥಳ ಪ್ರಕರಣ: ಆ ಹುಡುಗಿಯನ್ನು ಕಿಡ್ನಾಪ್ ಮಾಡಿದ್ದು ಕಣ್ಣಾರೆ ಕಂಡಿದ್ದೇನೆ; SITಗೆ ದೂರು ನೀಡಿದ ಹೊಸ...

ಧರ್ಮಸ್ಥಳ ಪ್ರಕರಣ: ಆ ಹುಡುಗಿಯನ್ನು ಕಿಡ್ನಾಪ್ ಮಾಡಿದ್ದು ಕಣ್ಣಾರೆ ಕಂಡಿದ್ದೇನೆ; SITಗೆ ದೂರು ನೀಡಿದ ಹೊಸ ಸಾಕ್ಷಿ

- Advertisement -
- Advertisement -

ಮಂಡ್ಯ: ಧರ್ಮಸ್ಥಳದಲ್ಲಿ ನಡೆದ ಬಹುಚರ್ಚಿತ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡ (SIT) ಮುಂದೆ ಸಾಕ್ಷ್ಯ ನುಡಿಯಲು ಮಂಡ್ಯ ಜಿಲ್ಲೆಯ 62 ವರ್ಷ ವಯಸ್ಸಿನ ವೃದ್ಧೆ ಚಿಕ್ಕಕೆಂಪಮ್ಮ ಮುಂದೆ ಬಂದಿದ್ದಾರೆ. 2012ರಲ್ಲಿ ನಡೆದ ಒಂದು ನಿರ್ದಿಷ್ಟ ಘಟನೆಯ ಕಣ್ಣಾರೆ ಕಂಡ ಸಾಕ್ಷಿಯಾಗಿ ತಾವು ನ್ಯಾಯಕ್ಕೆ ಧ್ವನಿಯಾಗಲು ಬಯಸುವುದಾಗಿ ಅವರು ತಿಳಿಸಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಧರ್ಮ ಮಾರ್ಗದಲ್ಲಿ ನಡೆದ ಅನಾಚಾರ

ಚಿಕ್ಕಕೆಂಪಮ್ಮ, ಮಂಡ್ಯ ಜಿಲ್ಲೆಯವರಾಗಿದ್ದು, ಈ ಕುರಿತು ಎಸ್‌ಐಟಿ ತಂಡಕ್ಕೆ ದೂರು ನೀಡಿದ್ದಾರೆ. ಈ ದೂರಿನಲ್ಲಿ, ತಮ್ಮ ಜೀವನದುದ್ದಕ್ಕೂ ಧರ್ಮ ಮತ್ತು ಪ್ರಾಮಾಣಿಕತೆಯನ್ನು ನಂಬಿಕೊಂಡು ಬಂದವರು. ಅವರ ತಂದೆ ಶ್ರೀ ಮಂಜುನಾಥ ಸ್ವಾಮಿಯ ಅಪ್ಪಟ ಭಕ್ತರಾಗಿದ್ದರು. ತಂದೆಯ ಮರಣದ ನಂತರ ಅವರ ಪುಣ್ಯಸ್ಮರಣೆಯನ್ನು ಧರ್ಮಸ್ಥಳದಲ್ಲಿ ಹುಂಡಿಗೆ ಕಾಣಿಕೆ ಹಾಕಿ ಪಾಲಿಸಿಕೊಂಡು ಬರುತ್ತಿದ್ದರು. ಭಕ್ತಿಯ ಮಾರ್ಗದಲ್ಲಿಯೇ ಅವರು ತಾವೆದುರಿಸಿದ ಅನಾರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು 2012 ಅಕ್ಟೋಬರ್ 8ರಂದು ಧರ್ಮಸ್ಥಳಕ್ಕೆ ತೆರಳಿದ್ದರು. ಅವರ ಜೊತೆ ನಿಂಗಮ್ಮ @ ಕೆಂಚಮ್ಮ ಎಂಬುವವರು ಜೊತೆಯಾಗಿದ್ದರು ಎಂದು ಹೇಳಿದ್ದಾರೆ.

ನನ್ನ ತಂದೆ ದೇವಸ್ಥಾನದ ಹುಂಡಿಗೆ ಕಾಣಿಕೆ ಹಾಕಬೇಕೆಂದು ಬಯಸಿದ್ದರು. ಜೊತೆಗೆ, ನನ್ನ ಚರ್ಮದ ಸಮಸ್ಯೆಗೆ ಪರಿಚಿತರು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ಹೋಗಿ ತೋರಿಸಿಕೊಳ್ಳುವಂತೆ ಸಲಹೆ ನೀಡಿದ್ದರು. ಎರಡು ಉದ್ದೇಶಗಳಿಗಾಗಿ ನಾನು ಧರ್ಮಸ್ಥಳಕ್ಕೆ ಹೋದೆಎಂದು ಅವರು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

ದಿನದ ಘಟನೆಗಳ ನಡುಕ ಹುಟ್ಟಿಸುವ ವಿವರಗಳು

ಅಕ್ಟೋಬರ್ 8, 2012ರಂದು ರಾತ್ರಿ ಮಂಡ್ಯದಿಂದ ರೈಲು ಹತ್ತಿದ ಚಿಕ್ಕಕೆಂಪಮ್ಮ ಮತ್ತು ಕೆಂಚಮ್ಮ ಮರುದಿನ ಮುಂಜಾನೆ ಕುಕ್ಕೆ ಸುಬ್ರಮಣ್ಯ ತಲುಪಿದರು. ಅಲ್ಲಿಂದ ಬಸ್ಸಿನಲ್ಲಿ ಧರ್ಮಸ್ಥಳ ತಲುಪಿ ದೇವಸ್ಥಾನದ ದರ್ಶನ ಪಡೆದರು. ಮಧ್ಯಾಹ್ನದ ನಂತರ ಚಿಕಿತ್ಸಾಲಯಕ್ಕೆ ತೆರಳಲು ಶಾಂತಿವನ ತಲುಪಿದಾಗ ಮಳೆ ಜೋರಾಗಿತ್ತು. ಸುಮಾರು 3.20 ಸಮಯಕ್ಕೆ, ಜನಸಂದಣಿ ಇಲ್ಲದ ನಿರ್ಜನ ಪ್ರದೇಶದಲ್ಲಿ ಬಸ್ ನಿಲ್ದಾಣವೊಂದರಲ್ಲಿ ಆಶ್ರಯ ಪಡೆದರು.

ಅಲ್ಲೇ ನಾವು ಯಾರಾದರೂ ಹಾದುಹೋಗುವವರನ್ನು ವಿಚಾರಿಸೋಣ ಎಂದು ಕಾಯುತ್ತಿದ್ದೆವುಎಂದು ಅವರು ಹೇಳಿದ್ದಾರೆ. ಅಷ್ಟರಲ್ಲಿ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಅವರನ್ನು ಮಾತನಾಡಿಸಿದರು. ಅವರಲ್ಲಿ ಒಬ್ಬ ವ್ಯಕ್ತಿ ತೊದಲುತ್ತಾ ಮಾತನಾಡುತ್ತಿದ್ದ. ಅವರು, ‘ನೀವು ಇಲ್ಲಿ ಯಾಕೆ ಬಂದಿದ್ದೀರಿ? ಇಲ್ಲಿ ಡಾಕ್ಟರ್ ಇಲ್ಲ, ಬೇರೆ ಕಡೆ ಹೋಗಿಎಂದು ಹೇಳಿದರು. ವ್ಯಕ್ತಿ ಫೋನ್ನಲ್ಲಿ ಯಾರೊಂದಿಗೋ ಮಾತನಾಡುತ್ತಾ, ‘ನಿಟ್ಟು ನಿಷ್ಟುಎಂದು ಹೇಳುತ್ತಿದ್ದ. ಮಾತುಗಳು ದಿನ ಆಕೆಗೆ ಅಷ್ಟಾಗಿ ಅರ್ಥವಾಗಿಲ್ಲವಾದರೂ, ಘಟನೆಯ ನಂತರ ಮಾತುಗಳ ಮಹತ್ವ ತಿಳಿದಿದೆ.

ಅಪಹರಣಕಾರರು ಅವರಿಗೆ ಆಟೋದಲ್ಲಿ ಹೋಗುವಂತೆ ಹೇಳಿದರೂ ಚಿಕ್ಕಕೆಂಪಮ್ಮ ನಿರಾಕರಿಸಿದರು. ಆಗ ವ್ಯಕ್ತಿಗಳು ಅವರಿಗೆ ಬೆದರಿಕೆ ಹಾಕುವಂತೆ ಮಾತನಾಡಿದರು. ‘ನಿಮಗೆಲ್ಲ ಯಾಕೆ ಬೇಕು, ಸುಮ್ಮನೆ ಹೋಗಿಎಂದು ಗದರಿಸಿದರು.

ಕಣ್ಣೆದುರಿಗೆ ನಡೆದ ಆತಂಕಕಾರಿ ಅಪಹರಣ

ಅದೇ ಸಮಯದಲ್ಲಿ ಸಮವಸ್ತ್ರ ಧರಿಸಿದ್ದ, ಸುಮಾರು 16 ವರ್ಷ ವಯಸ್ಸಿನ ಹುಡುಗಿಯೊಬ್ಬಳು ಛತ್ರಿ ಹಿಡಿದು ಹಾದುಹೋಗುತ್ತಿದ್ದಳು. ಹುಡುಗಿಯನ್ನು ನೋಡಿದ ಚಿಕ್ಕಕೆಂಪಮ್ಮ, ತಮ್ಮ ಸೋದರತ್ತೆಯ ಮಗಳುಜ್ಯೋತಿಯಂತೆ ಕಾಣುತ್ತಿದ್ದಾಳೆ ಎಂದು ಅಂದುಕೊಂಡರು. ಕಣ್ಣು ಮಿಟುಕಿಸುವಷ್ಟರಲ್ಲಿ ಹುಡುಗಿಯ ಬಳಿ ಹೋದ ವ್ಯಕ್ತಿಗಳು, ಆಕೆಯನ್ನು ಎಳೆದಾಡಿದರು. ಆಕೆಹಾ.. ಅಪ್ಪಆದ್ದು…’ ಎಂದು ಜೋರಾಗಿ ಕಿರುಚಾಡುತ್ತಿದ್ದಳು. ತನ್ನನ್ನು ಬಿಡಿಸಿಕೊಳ್ಳಲು ಅವಳು ಪ್ರಯತ್ನಿಸುತ್ತಿದ್ದಾಗ ಆಕೆಯ ಕೈಯನ್ನು ಹಿಡಿದು ತಿರುಗಿಸಿ, ಬಾಯಿಯನ್ನು ಒತ್ತಿದರು.

ನಾನು ಅಲ್ಲಿಗೆ ಓಡಿ ಹೋಗುವಷ್ಟರಲ್ಲಿ, ಅವರು ಬಾಲಕಿಯನ್ನು ಎಳೆದೊಯ್ದರು. ಹುಡುಗಿಯ ಕೈಯಿಂದ ಛತ್ರಿ ಕೆಳಗೆ ಬಿದ್ದಿತ್ತು. ಮತ್ತೊಂದು ವಸ್ತು ಕೂಡ ಕೆಳಗೆ ಬಿದ್ದಿತು. ಆದರೆ ಅದು ಏನು ಎಂದು ನನಗೆ ತಿಳಿಯಲಿಲ್ಲಎಂದು ಚಿಕ್ಕಕೆಂಪಮ್ಮ ನೋವಿನಿಂದ ಹೇಳಿದ್ದಾರೆ. ಹುಡುಗಿಯನ್ನು ಯಾವ ವಾಹನದಲ್ಲಿ ಎತ್ತಿಕೊಂಡು ಹೋಗಿದ್ದಾರೆ ಎಂದು ನೋಡುವಷ್ಟರಲ್ಲಿ, ಆಟೋ ಮತ್ತು ಕಾರು ವೇಗವಾಗಿ ಹೊರಟು ಹೋದವು.

ಮನಸ್ಸಿಗೆ ನೋವುಂಟು ಮಾಡಿದ ವಿಷಯಗಳು

ಘಟನೆಯ ನಂತರ ಚಿಕ್ಕಕೆಂಪಮ್ಮ ಮತ್ತು ಅವರ ಜೊತೆಗಿದ್ದವರು ಅಲ್ಲಿಂದ ಹೊರಟು ಕುಕ್ಕೆ ಸುಬ್ರಮಣ್ಯಕ್ಕೆ ಬಸ್ ಮೂಲಕ ವಾಪಸ್ಸಾದರು. ಬಸ್ಸಿನಲ್ಲಿ, ‘ಪೊಲೀಸರಿಗೆ ತಿಳಿಸಬೇಕಿತ್ತೇನೋಎಂದು ಮಾತನಾಡಿಕೊಂಡಾಗ, ಕೆಂಚಮ್ಮಅದೆಲ್ಲ ನಮಗ್ಯಾಕೆ, ಸುಮ್ಮನಿರೋಣಎಂದು ಹೇಳಿದ್ದರು. 2012ರಲ್ಲಿ ಸ್ಮಾರ್ಟ್ಫೋನ್ ಮತ್ತು ಟಿವಿ ಮಾಧ್ಯಮಗಳು ಹೆಚ್ಚಿನವರ ಬಳಿ ಇಲ್ಲದ ಕಾರಣ, ಘಟನೆಯ ಬಗ್ಗೆ ಸಾರ್ವಜನಿಕವಾಗಿ ಮಾಹಿತಿ ಸಿಕ್ಕಿರಲಿಲ್ಲ.

ಆದರೆ, ಇತ್ತೀಚೆಗೆ ಮಾಧ್ಯಮಗಳಲ್ಲಿ ಧರ್ಮಸ್ಥಳದ ಪ್ರಕರಣಗಳ ಬಗ್ಗೆ ವರದಿಗಳು ಪ್ರಸಾರವಾದಾಗ, ಚಿಕ್ಕಕೆಂಪಮ್ಮ ಅವರು ಅಪಹರಣದ ಘಟನೆಯನ್ನು ನೆನಪಿಸಿಕೊಂಡರು. ಅವರು ಅಂದು ಕಂಡ ವ್ಯಕ್ತಿಗಳ ಮುಖಚರ್ಯೆ ಮತ್ತು ಘಟನೆಯ ವಿವರಗಳು ಅವರಿಗೆ ಸ್ಪಷ್ಟವಾಗಿ ನೆನಪಿದ್ದವು. ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ನೋಡಿ, ‘ಅದೇ ವ್ಯಕ್ತಿಗಳು, ಅದೇ ಘಟನೆಎಂದು ಅವರು ಖಚಿತಪಡಿಸಿಕೊಂಡರು. ತಾನು ಅಂದು ಕಣ್ಣಾರೆ ಕಂಡ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂಬುದು ತಿಳಿದಾಗ ಅವರಿಗೆ ತೀವ್ರ ನೋವಾಯಿತು.

ನಾನು ದಿನ ನೋಡಿದ ಸನ್ನಿವೇಶ ನನ್ನ ಕಣ್ಣಲ್ಲಿ ಅಚ್ಚಳಿಯದೆ ಉಳಿದಿದೆ. ಇತ್ತೀಚಿಗೆ ಆಗಿರುವ ಅನ್ಯಾಯವನ್ನು ನೆನೆದು ನನಗೆ ನಿದ್ರೆ ಬರುವುದಿಲ್ಲ. ನನಗೂ ಇಬ್ಬರು ಹೆಣ್ಣು ಮಕ್ಕಳು ಹಾಗೂ ಮೊಮ್ಮಕ್ಕಳು ಇರುವುದರಿಂದ ಅತ್ಯಾಚಾರಕ್ಕೆ ಒಳಗಾದ ಹೆಣ್ಣು ಮಗಳ ನೋವು ನನ್ನನ್ನು, ನನ್ನ ನೈತಿಕತೆಯನ್ನು ಹಾಗೂ ಆತ್ಮಸಾಕ್ಷಿಯನ್ನು ಪ್ರಶ್ನೆ ಮಾಡುತ್ತಿದೆಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ನ್ಯಾಯಕ್ಕಾಗಿ ಪ್ರಾಮಾಣಿಕ ಹೋರಾಟ

ಚಿಕ್ಕಕೆಂಪಮ್ಮ ತಮ್ಮ ಹೇಳಿಕೆಯನ್ನು ನ್ಯಾಯಾಲಯದ ಮುಂದೆ ಹೇಳುವ ತನಕ ಮನಸ್ಸಿಗೆ ಶಾಂತಿ ಸಿಗುವುದಿಲ್ಲ ಎಂದು ದೃಢವಾಗಿ ನಂಬಿದ್ದಾರೆ. ‘ನಾನು ನ್ಯಾಯ ಮತ್ತು ಧರ್ಮಕ್ಕೆ ತಲೆಬಾಗಿ ಪ್ರಾಮಾಣಿಕವಾಗಿ ಜೀವಿಸುತ್ತಿದ್ದೇನೆ. ನನಗೆ ಯಾವುದೇ ಭಯವಿಲ್ಲ. ವಿಚಾರದಲ್ಲಿ ಯಾರ ಒತ್ತಡವಾಗಲಿ, ಕುಮ್ಮಕ್ಕಾಗಲಿ ನನ್ನ ಮೇಲೆ ಇರುವುದಿಲ್ಲಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅವರು ಯಾವುದೇ ತನಿಖೆಗೂ ಬದ್ಧರಾಗಿದ್ದು, ಅಪಹರಣದಲ್ಲಿ ಭಾಗಿಯಾದವರನ್ನು ಗುರುತಿಸಬಲ್ಲೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾನೂನು ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕೆಂದು ಅವರು SIT ತಂಡವನ್ನು ಕೋರಿದ್ದಾರೆ. ಚಿಕ್ಕಕೆಂಪಮ್ಮ ಅವರ ಧೈರ್ಯದ ನಿರ್ಧಾರ ಪ್ರಕರಣದ ತನಿಖೆಗೆ ಹೊಸ ದಿಕ್ಕು ನೀಡುವ ನಿರೀಕ್ಷೆ ಇದೆ.

ಉತ್ತರ ಪ್ರದೇಶ| ಬಿಜೆಪಿ ಸಚಿವರಿಂದ ದಲಿತ ಕುಟುಂಬದ ಮೇಲೆ ಹಲ್ಲೆ; ಪ್ರತಿಭಟನೆ ನಂತರ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...