Homeಕರ್ನಾಟಕಧರ್ಮಸ್ಥಳ ಪ್ರಕರಣ: ನ್ಯಾಯಾಧೀಶರ ಮೇಲೆ ಆಕ್ಷೇಪ, ವಿಚಾರಣೆ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆಗೆ ಅರ್ಜಿ

ಧರ್ಮಸ್ಥಳ ಪ್ರಕರಣ: ನ್ಯಾಯಾಧೀಶರ ಮೇಲೆ ಆಕ್ಷೇಪ, ವಿಚಾರಣೆ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆಗೆ ಅರ್ಜಿ

- Advertisement -
- Advertisement -

ಈ ನ್ಯಾಯಾಧೀಶರು ಈ ಹಿಂದೆ ಧರ್ಮಸ್ಥಳದ ಸಂಸ್ಥೆಗಳಲ್ಲಿ ವಿದ್ಯಾರ್ಥಿಯಾಗಿದ್ದು, ಹೆಗ್ಗಡೆ ಅವರ ಪರ ಎಂಬ ಆರೋಪ ಕೇಳಿಬಂದಿದೆ. ವಿಚಾರಣೆಯನ್ನು  ಪ್ರಕರಣದ ಪ್ರತಿವಾದಿ ನವೀನ್ ಸೂರಿಂಜೆ ಪರವಾಗಿ ಹಿರಿಯ ವಕೀಲ ಎಸ್. ಬಾಲನ್ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಅರ್ಜಿ ಸಲ್ಲಿಸಿದ್ದಾರೆ

ಬೆಂಗಳೂರು: ಧರ್ಮಸ್ಥಳದ ಧರ್ಮದರ್ಶಿ ಡಾ. ವಿರೇಂದ್ರ ಹೆಗ್ಗಡೆ ಅವರ ಕುಟುಂಬ ಸದಸ್ಯರಾದ ಹರ್ಷೇಂದ್ರ ಕುಮಾರ್ ಅವರು 338 ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಮತ್ತು ಸಂಸ್ಥೆಗಳ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೊಸ ತಿರುವು ದೊರೆತಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರು ಈ ಹಿಂದೆ ಧರ್ಮಸ್ಥಳದ ಸಂಸ್ಥೆಗಳಲ್ಲಿ ವಿದ್ಯಾರ್ಥಿಯಾಗಿದ್ದು, ಹೆಗ್ಗಡೆ ಅವರ ಪರವಾಗಿ ವಾದಿಸಿದ್ದ ಕಾನೂನು ಸಂಸ್ಥೆಯೊಂದರಲ್ಲಿ ಕಾರ್ಯನಿರ್ವಹಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಪ್ರಕರಣದ ಪ್ರತಿವಾದಿ ನಂ. 25 ಆಗಿರುವ ಪತ್ರಕರ್ತ ನವೀನ್ ಸೂರಿಂಜೆ ಪರವಾಗಿ ಹಿರಿಯ ವಕೀಲ ಎಸ್. ಬಾಲನ್ ಅವರು ಪ್ರಕರಣದ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಬೆಂಗಳೂರಿನ 26ನೇ ಸಿಟಿ ಸಿವಿಲ್ ಕೋರ್ಟ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ನ್ಯಾಯಾಧೀಶರ ವಿರುದ್ಧ ಆಕ್ಷೇಪ: ಹಿನ್ನೆಲೆ ಏನು?

ಸಲ್ಲಿಕೆಯಾಗಿರುವ ಮನವಿ ಪತ್ರದಲ್ಲಿ, ನ್ಯಾಯಾಧೀಶರು ಧರ್ಮಸ್ಥಳ ಸಂಸ್ಥೆಗಳೊಂದಿಗೆ ಹೊಂದಿದ್ದ ಹಿಂದಿನ ಸಂಬಂಧವನ್ನು ವಿವರವಾಗಿ ಉಲ್ಲೇಖಿಸಲಾಗಿದೆ. ಅವರ ಪ್ರಕಾರ, ಈ ಪ್ರಕರಣದ ನ್ಯಾಯಾಧೀಶರು 1995-1998ರ ಅವಧಿಯಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಟ್ರಸ್ಟ್ ನಡೆಸುತ್ತಿರುವ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದರು. ಕಾನೂನು ಶಿಕ್ಷಣ ಮುಗಿದ ನಂತರ ಅವರು ಮಂಗಳೂರಿನ ಬಲ್ಲಾಳ್ ಬಾಗ್‌ನಲ್ಲಿರುವ ಕಾನೂನು ಸಂಸ್ಥೆಯೊಂದರಲ್ಲಿ ವೃತ್ತಿಜೀವನ ಆರಂಭಿಸಿದ್ದರು.

ಆ ಕಾನೂನು ಸಂಸ್ಥೆಯು ಡಾ. ವಿರೇಂದ್ರ ಹೆಗ್ಗಡೆ ಅವರ ಪರವಾಗಿ ಹಲವಾರು ಕಾನೂನು ಪ್ರಕರಣಗಳನ್ನು ನಿರ್ವಹಿಸಿತ್ತು ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ. ನಿರ್ದಿಷ್ಟವಾಗಿ, ಡಾ. ವಿರೇಂದ್ರ ಹೆಗ್ಗಡೆ ವರ್ಸಸ್ ಬಿ.ವಿ. ಸೀತಾರಾಮ್ ಪ್ರಕರಣದಲ್ಲಿ (CC No. 6143/2004) ನ್ಯಾಯಾಧೀಶರು ಜೂನಿಯರ್ ವಕೀಲರಾಗಿ ಕಾರ್ಯನಿರ್ವಹಿಸಿದ್ದರು ಎಂದು ಉಲ್ಲೇಖಿಸಲಾಗಿದೆ. ಈ ಪ್ರಕರಣವು ಐಪಿಸಿ ಸೆಕ್ಷನ್ 500, 501, 502 ರ ಅಡಿಯಲ್ಲಿ ದಾಖಲಾಗಿದ್ದ ಮಾನಹಾನಿ ಪ್ರಕರಣವಾಗಿದೆ. ಇದೇ ಕಾನೂನು ಸಂಸ್ಥೆಯ ಹಿರಿಯ ವಕೀಲರು ಕರ್ನಾಟಕ ಹೈಕೋರ್ಟ್‌ನಲ್ಲಿ ಬಿ.ವಿ. ಸೀತಾರಾಮ್ ವಿರುದ್ಧದ ಕ್ರಿಮಿನಲ್ ಅರ್ಜಿಗಳಲ್ಲಿ ಹೆಗ್ಗಡೆ ಅವರ ಪರವಾಗಿ ವಾದಿಸಿದ್ದರು ಎಂಬ ಅಂಶವನ್ನೂ ಪತ್ರದಲ್ಲಿ ಒತ್ತಿ ಹೇಳಲಾಗಿದೆ.

ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಧರ್ಮಸ್ಥಳ ಸಂಸ್ಥೆ ಮತ್ತು ಕುಟುಂಬದೊಂದಿಗೆ ನ್ಯಾಯಾಧೀಶರಿಗೆ ಹಿಂದಿನಿಂದಲೂ ಆಳವಾದ ಸಂಪರ್ಕವಿದೆ ಎಂದು ಆರೋಪಿಸಲಾಗಿದೆ. ಇಂತಹ ಸಂದರ್ಭದಲ್ಲಿ ಪ್ರಕರಣದ ವಿಚಾರಣೆ ನಿಷ್ಪಕ್ಷಪಾತವಾಗಿ ನಡೆಯುವುದು ಕಷ್ಟ ಎಂದು ನವೀನ್ ಸೂರಿಂಜೆ ಪರ ವಕೀಲರು ವಾದಿಸಿದ್ದಾರೆ. ಆದ್ದರಿಂದ, ನ್ಯಾಯದ ಹಿತದೃಷ್ಟಿಯಿಂದ ಪ್ರಕರಣವನ್ನು ಕೂಡಲೇ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

ಹೈಕೋರ್ಟ್ ಮತ್ತು ಸಿಟಿ ಸಿವಿಲ್ ಕೋರ್ಟ್ ಆದೇಶಗಳಲ್ಲಿನ ವೈರುಧ್ಯ

ಪತ್ರಕರ್ತ ನವೀನ್ ಸೂರಿಂಜೆ ಅವರು ತಮ್ಮ ಮನವಿ ಪತ್ರದಲ್ಲಿ ನ್ಯಾಯಾಲಯದ ಗಮನಕ್ಕೆ ತಂದಿರುವ ಮತ್ತೊಂದು ಪ್ರಮುಖ ವಿಷಯವೆಂದರೆ ಹೈಕೋರ್ಟ್ ಮತ್ತು ಸಿಟಿ ಸಿವಿಲ್ ಕೋರ್ಟ್ ಆದೇಶಗಳ ನಡುವಿನ ವ್ಯತ್ಯಾಸ. ಅವರು ಈದಿನ.ಕಾಮ್‌ನಲ್ಲಿ ಪ್ರಸಾರವಾಗಿದ್ದ ಧರ್ಮಸ್ಥಳದ ಇತಿಹಾಸ ಕುರಿತು ಮಾತನಾಡಿದ್ದ ವಿಡಿಯೋವನ್ನು ಉಲ್ಲೇಖಿಸಿದ್ದಾರೆ. ಈ ವಿಡಿಯೋವನ್ನು ಮೊದಲು ನಿರ್ಬಂಧಿಸಲಾಗಿತ್ತು. ಆದರೆ, ಹೈಕೋರ್ಟ್‌ನ ಆದೇಶದ (Writ Petition No 15183/2025) ನಂತರ ಆ ವಿಡಿಯೋ ಸೇರಿದಂತೆ ಈದಿನ.ಕಾಮ್‌ನ ಎಲ್ಲಾ ವಿಷಯಗಳು ಮತ್ತೆ ಪ್ರಸಾರಕ್ಕೆ ಲಭ್ಯವಾಗಿದ್ದವು.

ಆದರೆ, ಇದೇ ವಿಡಿಯೋ ತುಣುಕುಗಳನ್ನು ಆಧಾರವಾಗಿಟ್ಟುಕೊಂಡು ಸಿಟಿ ಸಿವಿಲ್ ಕೋರ್ಟ್‌ನಲ್ಲಿ ತಡೆಯಾಜ್ಞೆ ಪಡೆಯಲಾಗಿದೆ. ಅಂದರೆ, ಹೈಕೋರ್ಟ್ ಅನ್‌ಬ್ಲಾಕ್ ಮಾಡಲು ಸೂಚಿಸಿದ್ದ ವಿಡಿಯೋವನ್ನೇ ಸಿಟಿ ಸಿವಿಲ್ ಕೋರ್ಟ್ ಡಿಲೀಟ್ ಮಾಡಲು ಸೂಚಿಸಿದಂತಾಗಿದೆ. ಇದು ನ್ಯಾಯಾಲಯವನ್ನು ದಾರಿತಪ್ಪಿಸಿ ಮಧ್ಯಂತರ ಆದೇಶ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ. ಈ ದಾರಿತಪ್ಪಿಸುವ ಪ್ರಯತ್ನವು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಪ್ರಕರಣ ವರ್ಗಾವಣೆಗೆ ಒಪ್ಪಿಗೆ: ಮುಂದೇನು?

ಪತ್ರಕರ್ತ ನವೀನ್ ಸೂರಿಂಜೆ ಸಲ್ಲಿಸಿರುವ ಈ ಮನವಿ ಪತ್ರ ಮತ್ತು ಮೆಮೋವನ್ನು 26ನೇ ಸಿಟಿ ಸಿವಿಲ್ ಕೋರ್ಟ್ ಸ್ವೀಕರಿಸಿದೆ. ಈ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಧೀಶರು, ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದೂಡಿದ್ದಾರೆ. ಅಷ್ಟೇ ಅಲ್ಲದೆ, ಈ ದಾಖಲೆಗಳನ್ನು ಪ್ರಧಾನ ಸಿಟಿ ಸಿವಿಲ್ ಮುಖ್ಯ ನ್ಯಾಯಾಧೀಶರಿಗೆ ವರ್ಗಾಯಿಸುವುದಾಗಿ ಆದೇಶಿಸಿದ್ದಾರೆ.

ಮುಖ್ಯ ನ್ಯಾಯಾಧೀಶರು ಈ ಮನವಿಯನ್ನು ಪರಿಶೀಲಿಸಿ, ಪ್ರಕರಣವನ್ನು ಬೇರೆ ಯಾವುದೇ ನ್ಯಾಯಾಲಯಕ್ಕೆ ವರ್ಗಾಯಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಬೆಳವಣಿಗೆಯಿಂದಾಗಿ ಪ್ರಕರಣದ ದಿಕ್ಕು ಬದಲಾಗಿದ್ದು, ನ್ಯಾಯಸಮ್ಮತ ವಿಚಾರಣೆಯ ಭರವಸೆಯನ್ನು ಪ್ರತಿವಾದಿಗಳು ವ್ಯಕ್ತಪಡಿಸಿದ್ದಾರೆ. ಈ ವಿಷಯವು ಈಗ ಪ್ರಧಾನ ನ್ಯಾಯಾಲಯದ ಮುಂದಿದ್ದು, ಮುಂದಿನ ದಿನಗಳಲ್ಲಿ ಯಾವ ರೀತಿಯ ನಿರ್ಧಾರ ಹೊರಬೀಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

BIG BREAKING: ಧರ್ಮಸ್ಥಳ ಪ್ರಕರಣ: ಹೊಸ ತಿರುವು; ಎಸ್‌ಐಟಿ ಎದುರು ಪ್ರತ್ಯಕ್ಷನಾದ ಮತ್ತೋರ್ವ ದೂರುದಾರ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...