Homeಕರ್ನಾಟಕಧರ್ಮಸ್ಥಳ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ; ಸಾಕ್ಷಿ ದೂರುದಾರನ ವಿಚಾರಣೆ

ಧರ್ಮಸ್ಥಳ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ; ಸಾಕ್ಷಿ ದೂರುದಾರನ ವಿಚಾರಣೆ

- Advertisement -
- Advertisement -

ಧರ್ಮಸ್ಥಳ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರದಿಂದ (ಜು.25) ಅಧಿಕೃತವಾಗಿ ತನ್ನ ಕೆಲಸವನ್ನು ಪ್ರಾರಂಭಿಸಿದೆ.

ವರದಿಗಳ ಪ್ರಕಾರ, ಎಸ್‌ಐಟಿಯ ಭಾಗವಾಗಿರುವ ಐಪಿಎಸ್ ಅಧಿಕಾರಿ ಎಂ.ಎನ್‌ ಅನುಚೇತ್ ಅವರು, ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಆ ಬಳಿಕ ಎಸ್‌ಐಟಿಯಲ್ಲಿರುವ ಮತ್ತೊಬ್ಬರು ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆದಿದ್ದಾರೆ.

ಈ ನಡುವೆ ಪ್ರಕರಣದ ಸಾಕ್ಷಿ ದೂರುದಾರನಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಅದರಂತೆ, ಶನಿವಾರ (ಜು.26) ಮಂಗಳೂರಿನ ಕದ್ರಿಯಲ್ಲಿರುವ ಐಬಿಗೆ ದೂರುದಾರ ಹಾಜರಾಗಿದ್ದಾರೆ. ಅವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಜುಲೈ 3, 2025ರಂದು ಸಾಕ್ಷಿ ದೂರುದಾರ ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿ ದೂರು ನೀಡಿದ್ದರು. ಇದನ್ನು ಆಧರಿಸಿ ಜುಲೈ 4ರಂದು ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆಯ (ಬಿಎನ್‌ಎಸ್ಎಸ್ ) ಸೆಕ್ಷನ್ 211(a)ಎಫ್‌ಐಆರ್ ದಾಖಲಾಗಿತ್ತು.

ಜುಲೈ 10, 2025 ರಂದು ದೂರುದಾರನಿಗೆ ಸಾಕ್ಷಿ ರಕ್ಷಣಾ ಯೋಜನೆಯಡಿಯಲ್ಲಿ ರಕ್ಷಣೆ ನೀಡಲಾಗಿತ್ತು. ಜುಲೈ 11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಅವರು, ತಲೆಬುರುಡೆ ಮತ್ತು ಫೋಟೋಗಳನ್ನು ಸಲ್ಲಿಸಿ, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದರು.

ಜುಲೈ 15ರಂದು, 2003ರಲ್ಲಿ ನಾಪತ್ತೆಯಾದ ಮೆಡಿಕಲ್ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ವಕೀಲರೊಂದಿಗೆ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿದ್ದರು. ಎಸ್ಪಿ ನೀಡಿದ ಸಲಹೆಯಂತೆ ಅಂದೇ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದಾರೆ.

ಜುಲೈ 19ರಂದು ರಾಜ್ಯ ಸರ್ಕಾರ ಸಾಕ್ಷಿ ದೂರುದಾರನ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದ ಇತರ ಎಲ್ಲಾ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದೆ.

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅತ್ಯಾಚಾರ, ಹತ್ಯೆ ಪ್ರಕರಣಗಳು ನಡೆದಿವೆ. ಅವುಗಳ ಮೃತದೇಹಗಳನ್ನು ಮೇಲಿನವರ ಸೂಚನೆಯಂತೆ ನಾನೇ ಹೂತು ಹಾಕಿದ್ದೇನೆ. ಈಗ ಅದರ ಬಗ್ಗೆ ಪಶ್ಚಾತಾಪ ಕಾಡುತ್ತಿದೆ. ಆದ್ದರಿಂದ ಮೃತದೇಹಗಳನ್ನು ಹೂತು ಹಾಕಿರುವ ಜಾಗಗಳನ್ನು ತೋರಿಸಲು ನಾನು ಸಿದ್ದನ್ನಿದ್ದೇನೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಸಾಕ್ಷಿ ದೂರುದಾರ ದೂರು ದಾಖಲಿಸಿದ್ದಾರೆ. ಈ ವಿಚಾರ ಸಂಚಲನ ಸೃಷ್ಟಿಸಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ.

ರೌಡಿ ಬಿಕ್ಲು ಶಿವ ಹತ್ಯೆ: ಶಾಸಕ ಬೈರತಿ ಬಸವರಾಜ್ ವಿಚಾರಣೆ; ಪ್ರಕರಣ ಸಿಐಡಿ ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...