Homeಕರ್ನಾಟಕಧರ್ಮಸ್ಥಳ ಪ್ರಕರಣ: ಸರಣಿ ಅಪರಾಧಗಳ ತನಿಖೆಗೆ ಎಸ್‌ಐಟಿ ಅಖಾಡಕ್ಕೆ; ದೂರುದಾರರ ವಿಚಾರಣೆ ಆರಂಭ

ಧರ್ಮಸ್ಥಳ ಪ್ರಕರಣ: ಸರಣಿ ಅಪರಾಧಗಳ ತನಿಖೆಗೆ ಎಸ್‌ಐಟಿ ಅಖಾಡಕ್ಕೆ; ದೂರುದಾರರ ವಿಚಾರಣೆ ಆರಂಭ

- Advertisement -
- Advertisement -

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆಗಳು ಮತ್ತು ಅತ್ಯಾಚಾರ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದೆ. ಪ್ರಕರಣದ ನಿರ್ಣಾಯಕ ಹಂತವಾಗಿ, ಶನಿವಾರ ದೂರುದಾರರು ಎಸ್‌ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದು, ತನಿಖೆಗೆ ಹೊಸ ಆಯಾಮ ದೊರಕಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಸಾವಿರಕ್ಕೂ ಹೆಚ್ಚು ಮಂದಿಯನ್ನು, ಅದರಲ್ಲೂ ಹೆಣ್ಣುಮಕ್ಕಳು ಮತ್ತು ಮಹಿಳೆಯರನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ” ಎಂದು ಗುರುತು ಬಯಸದ ದೂರುದಾರರೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದರು. ತಾವೇ ಹಲವಾರು ಮೃತದೇಹಗಳನ್ನು ಹೂತಿದ್ದು, ಅವುಗಳನ್ನು ಹೊರತೆಗೆಯಲು ಸಿದ್ಧವಿರುವುದಾಗಿಯೂ ಅವರು ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ, ಇಂದು ಮಂಗಳೂರಿನ ಕದ್ರಿಯಲ್ಲಿರುವ ಐಬಿ ಕಚೇರಿಯಲ್ಲಿ ಎಸ್‌ಐಟಿ ತಂಡದ ಎದುರು ದೂರುದಾರರು ಹಾಜರಾಗಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿರುವ ಕೃತ್ಯಗಳ ಬಗ್ಗೆ ಅವರು ಎಸ್‌ಐಟಿ ಅಧಿಕಾರಿಗಳಿಗೆ ಸಮಗ್ರ ವಿವರಣೆ ನೀಡುವ ನಿರೀಕ್ಷೆಯಿದೆ. ಡಿಐಜಿ ಎಂ.ಎನ್. ಅನುಚೇತ್ ಅವರ ಸಮ್ಮುಖದಲ್ಲಿ ಈ ಮಹತ್ವದ ವಿಚಾರಣೆ ನಡೆಯಲಿದ್ದು, ಎಸ್‌ಐಟಿ ಅಧಿಕಾರಿಗಳು ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಮತ್ತು ಮುಂದಿನ ತನಿಖೆಯ ರೂಪುರೇಷೆಯನ್ನು ಸಿದ್ಧಪಡಿಸಿಕೊಳ್ಳಲು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರಣೆಯು ಪ್ರಕರಣದ ದಿಕ್ಕನ್ನೇ ಬದಲಿಸುವ ಸಾಧ್ಯತೆ ಇದೆ.

ಪೊಲೀಸ್ ಮಹಾ ನಿರ್ದೇಶಕ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ತಂಡವನ್ನು ರಚಿಸಲಾಗಿದೆ. ಈ ತಂಡದಲ್ಲಿ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್. ಅನುಚೇತ್, ಸಿಎಆರ್ ಕೇಂದ್ರದ ಡಿಸಿಪಿ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರಂತಹ ಅನುಭವಿ ಅಧಿಕಾರಿಗಳು ಇದ್ದು, ಪ್ರಕರಣದ ಸೂಕ್ಷ್ಮತೆ ಮತ್ತು ಗಂಭೀರತೆಯನ್ನು ಪರಿಗಣಿಸಿ ಈ ತಂಡವನ್ನು ನಿಯೋಜಿಸಲಾಗಿದೆ.

ಪ್ರಕರಣದ ಹಿನ್ನೆಲೆ

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಪ್ರದೇಶವು ಕಳೆದ ಕೆಲವು ವರ್ಷಗಳಿಂದ  ವಿವಾದಗಳು ಮತ್ತು ಗಂಭೀರ ಆರೋಪಗಳು ಸುತ್ತುವರಿದಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, 2012ರಲ್ಲಿ ನಡೆದ ಬೆಳ್ತಂಗಡಿಯ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ರಾಜ್ಯಾದ್ಯಂತ ದೊಡ್ಡ ಮಟ್ಟದ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಪ್ರಕರಣದ ತನಿಖೆಯಲ್ಲಿನ ಲೋಪಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇತ್ತೀಚೆಗೆ, ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲವು ಡಿಜಿಟಲ್ ವೇದಿಕೆಗಳಲ್ಲಿ “ಧರ್ಮಸ್ಥಳದಲ್ಲಿ ಸರಣಿ ಕೊಲೆಗಳು ಮತ್ತು ಅತ್ಯಾಚಾರ ಕೃತ್ಯಗಳು ನಡೆದಿದ್ದು, ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ” ಎಂಬ ಗಂಭೀರ ಆರೋಪಗಳು ದೊಡ್ಡ ಪ್ರಮಾಣದಲ್ಲಿ ಹರಿದಾಡಲು ಶುರುವಾಗಿವೆ. ಈ ಆರೋಪಗಳ ಪ್ರಸಾರವನ್ನು ತಡೆಯಲು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ವಿಚಾರಣಾಧೀನ ನ್ಯಾಯಾಲಯವು ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. ಆದರೆ, ಈ ಆದೇಶವನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ನ್ಯಾಯಾಲಯವು “ನಿರ್ಲಜ್ಜವಾಗಿ ಎಲ್ಲರನ್ನು ನಿರ್ಬಂಧಿಸುವ ಇದೆಂಥಾ ಆದೇಶ” ಎಂದು ಪ್ರಶ್ನಿಸಿ, ಮಾಧ್ಯಮ ಸ್ವಾತಂತ್ರ್ಯದ ಪರವಾಗಿ ನಿಂತಿತ್ತು. ಈ ಬೆಳವಣಿಗೆಗಳ ನಡುವೆಯೇ, ರಾಜ್ಯ ಸರ್ಕಾರವು ಇಂತಹ ಗಂಭೀರ ಆರೋಪಗಳ ಸತ್ಯಾಸತ್ಯತೆಯನ್ನು ಹೊರತರಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲು ನಿರ್ಧರಿಸಿತ್ತು. ಈ ಪ್ರಕರಣದ ಸೂಕ್ಷ್ಮತೆ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ, ಎಸ್ಐಟಿ ತನಿಖೆ ಆರಂಭಿಸಿದೆ. ಇದೀಗ ಹೈಕೋರ್ಟ್ ಕೂಡ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ಪ್ರಶ್ನಿಸಿದೆ.

ಧರ್ಮಸ್ಥಳ ಪ್ರಕರಣ: ಮಾಧ್ಯಮಗಳ ನಿರ್ಬಂಧ ಪ್ರಶ್ನಿಸಿದ ಹೈಕೋರ್ಟ್; ಆದೇಶದ ಸಿಂಧುತ್ವದ ಬಗ್ಗೆ ಗಂಭೀರ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...