Homeಕರ್ನಾಟಕಧರ್ಮಸ್ಥಳ ಪ್ರಕರಣ| ಎಸ್‌ಐಟಿ ಸೇರಲು ಇಬ್ಬರು ಅಧಿಕಾರಿಗಳು ಹಿಂದೇಟು, ಕಾರಣವೇನು?

ಧರ್ಮಸ್ಥಳ ಪ್ರಕರಣ| ಎಸ್‌ಐಟಿ ಸೇರಲು ಇಬ್ಬರು ಅಧಿಕಾರಿಗಳು ಹಿಂದೇಟು, ಕಾರಣವೇನು?

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸಿ ರಾಜ್ಯ ಸರ್ಕಾರ ಶನಿವಾರ (ಜು.19) ಆದೇಶಿಸಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ 39/2025 ಕಲಂ 211(ಎ) ಬಿಎನ್‌ಎಸ್, ಈ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ.

ಮೇಲೆ ಉಲ್ಲೇಖಿಸಿದ ಪ್ರಕರಣ ಮಾತ್ರವಲ್ಲದೆ, ಅದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಎಸ್‌ಐಟಿಗೆ ವರ್ಗಾಯಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್‌ ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತಂಡದ ಸದಸ್ಯರಾಗಿದ್ದಾರೆ.

ಈ ನಡುವೆ ಎಸ್‌ಐಟಿಯಿಂದ ಅಧಿಕಾರಿಗಳಾದ ಎಂ.ಎನ್‌ ಅನುಚೇತ್ ಮತ್ತು ಸೌಮ್ಯಲತಾ ಅವರು ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಅಧಿಕಾರಿಗಳ ಹಿಂದೇಟು, ಕಾರಣವೇನು?

ಎಂ.ಎನ್‌ ಅನುಚೇತ್‌ ಅವರು ಯಾವುದೇ ಭಯದಿಂದ ಧರ್ಮಸ್ಥಳ ಪ್ರಕರಣದ ತನಿಖೆಯಿಂದ ದೂರು ಉಳಿಯುತ್ತಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ. 2009ರ ಬ್ಯಾಚ್‌ ಐಪಿಎಸ್ ಅಧಿಕಾರಿಯಾಗಿರುವ ಅನುಚೇತ್‌ ಅವರು, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪವಿಭಾಗದ ಸಹಾಯಕ ಪೊಲೀಸ್‌ ವರಿಷ್ಠಾಧಿಕಾರಿಯಾಗಿ (ಎಎಸ್‌ಪಿ) ಮೊದಲ ಭಾರಿಗೆ ಅಧಿಕಾರ ವಹಿಸಿಕೊಂಡಿದ್ದರು. ಅನುಚೇತ್‌ ಅವರು ಪುತ್ತೂರಿನ ಎಎಸ್‌ಪಿಯಾಗಿದ್ದಾಗಲೇ ಸೌಜನ್ಯ ಪ್ರಕರಣ ನಡೆದಿತ್ತು.

ಸೌಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಭಾಸ್ಕರ್ ರೈ ಮತ್ತು ಸಬ್-ಇನ್ಸ್‌ಪೆಕ್ಟರ್ ಯೋಗೇಶ್ ಕುಮಾರ್ ನಾಯಕ್ ಅವರ ಮೇಲೆ ಈಗಾಗಲೇ ಸಾಕ್ಷ ನಾಶದ ಗಂಭೀರ ಆರೋಪಗಳಿವೆ. ಇವರೊಂದಿಗೆ ಆ ವೇಳೆ ತಮ್ಮ ಮೇಲೂ ಆಗಾಗ ಇಂತಹ ಆರೋಪಗಳು ಸ್ಥಳೀಯರಿಂದ ಕೇಳಿಬಂದಿವೆ ಎನ್ನುವ ಕಾರಣ ಮುಂದಿಟ್ಟುಕೊಂಡು ಎಸ್‌ಐಟಿ ತಂಡದಿಂದ ತಮ್ಮನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆಯಲು ಅನುಚೇತ್ ಸಿದ್ಧತೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ಖಚಿತ ಪಡಿಸಿವೆ.

ಈ ಹಿಂದೆ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ತನಿಖೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡದಲ್ಲಿ ಕಾರ್ಯನಿರ್ವಹಿಸಿದ್ದ ಅನುಚೇತ್‌ ಅವರು, ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇನ್ನೊಬ್ಬರು ಅಧಿಕಾರಿ ಸೌಮ್ಯಲತಾ ಅವರೂ ಎಸ್‌ಐಟಿಯಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ. ಆದರೆ, ಅವರು ಯಾವ ಕಾರಣದಿಂದ ತನಿಖೆಯಿಂದ ದೂರ ಉಳಿಯುತ್ತಿದ್ದಾರೆ ಎಂಬ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಧರ್ಮಸ್ಥಳ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...