Homeಕರ್ನಾಟಕಧರ್ಮಸ್ಥಳ ಪ್ರಕರಣ| ಎಸ್‌ಐಟಿ ಸೇರಲು ಇಬ್ಬರು ಅಧಿಕಾರಿಗಳು ಹಿಂದೇಟು, ಕಾರಣವೇನು?

ಧರ್ಮಸ್ಥಳ ಪ್ರಕರಣ| ಎಸ್‌ಐಟಿ ಸೇರಲು ಇಬ್ಬರು ಅಧಿಕಾರಿಗಳು ಹಿಂದೇಟು, ಕಾರಣವೇನು?

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸಿ ರಾಜ್ಯ ಸರ್ಕಾರ ಶನಿವಾರ (ಜು.19) ಆದೇಶಿಸಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ 39/2025 ಕಲಂ 211(ಎ) ಬಿಎನ್‌ಎಸ್, ಈ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ.

ಮೇಲೆ ಉಲ್ಲೇಖಿಸಿದ ಪ್ರಕರಣ ಮಾತ್ರವಲ್ಲದೆ, ಅದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಎಸ್‌ಐಟಿಗೆ ವರ್ಗಾಯಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್‌ ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತಂಡದ ಸದಸ್ಯರಾಗಿದ್ದಾರೆ.

ಈ ನಡುವೆ ಎಸ್‌ಐಟಿಯಿಂದ ಅಧಿಕಾರಿಗಳಾದ ಎಂ.ಎನ್‌ ಅನುಚೇತ್ ಮತ್ತು ಸೌಮ್ಯಲತಾ ಅವರು ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಅಧಿಕಾರಿಗಳ ಹಿಂದೇಟು, ಕಾರಣವೇನು?

ಎಂ.ಎನ್‌ ಅನುಚೇತ್‌ ಅವರು ಯಾವುದೇ ಭಯದಿಂದ ಧರ್ಮಸ್ಥಳ ಪ್ರಕರಣದ ತನಿಖೆಯಿಂದ ದೂರು ಉಳಿಯುತ್ತಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ. 2009ರ ಬ್ಯಾಚ್‌ ಐಪಿಎಸ್ ಅಧಿಕಾರಿಯಾಗಿರುವ ಅನುಚೇತ್‌ ಅವರು, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪವಿಭಾಗದ ಸಹಾಯಕ ಪೊಲೀಸ್‌ ವರಿಷ್ಠಾಧಿಕಾರಿಯಾಗಿ (ಎಎಸ್‌ಪಿ) ಮೊದಲ ಭಾರಿಗೆ ಅಧಿಕಾರ ವಹಿಸಿಕೊಂಡಿದ್ದರು. ಅನುಚೇತ್‌ ಅವರು ಪುತ್ತೂರಿನ ಎಎಸ್‌ಪಿಯಾಗಿದ್ದಾಗಲೇ ಸೌಜನ್ಯ ಪ್ರಕರಣ ನಡೆದಿತ್ತು.

ಸೌಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಭಾಸ್ಕರ್ ರೈ ಮತ್ತು ಸಬ್-ಇನ್ಸ್‌ಪೆಕ್ಟರ್ ಯೋಗೇಶ್ ಕುಮಾರ್ ನಾಯಕ್ ಅವರ ಮೇಲೆ ಈಗಾಗಲೇ ಸಾಕ್ಷ ನಾಶದ ಗಂಭೀರ ಆರೋಪಗಳಿವೆ. ಇವರೊಂದಿಗೆ ಆ ವೇಳೆ ತಮ್ಮ ಮೇಲೂ ಆಗಾಗ ಇಂತಹ ಆರೋಪಗಳು ಸ್ಥಳೀಯರಿಂದ ಕೇಳಿಬಂದಿವೆ ಎನ್ನುವ ಕಾರಣ ಮುಂದಿಟ್ಟುಕೊಂಡು ಎಸ್‌ಐಟಿ ತಂಡದಿಂದ ತಮ್ಮನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆಯಲು ಅನುಚೇತ್ ಸಿದ್ಧತೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ಖಚಿತ ಪಡಿಸಿವೆ.

ಈ ಹಿಂದೆ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ತನಿಖೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡದಲ್ಲಿ ಕಾರ್ಯನಿರ್ವಹಿಸಿದ್ದ ಅನುಚೇತ್‌ ಅವರು, ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇನ್ನೊಬ್ಬರು ಅಧಿಕಾರಿ ಸೌಮ್ಯಲತಾ ಅವರೂ ಎಸ್‌ಐಟಿಯಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ. ಆದರೆ, ಅವರು ಯಾವ ಕಾರಣದಿಂದ ತನಿಖೆಯಿಂದ ದೂರ ಉಳಿಯುತ್ತಿದ್ದಾರೆ ಎಂಬ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಧರ್ಮಸ್ಥಳ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...