Homeಕರ್ನಾಟಕಧರ್ಮಸ್ಥಳ ಪ್ರಕರಣ| ಎಸ್‌ಐಟಿ ಸೇರಲು ಇಬ್ಬರು ಅಧಿಕಾರಿಗಳು ಹಿಂದೇಟು, ಕಾರಣವೇನು?

ಧರ್ಮಸ್ಥಳ ಪ್ರಕರಣ| ಎಸ್‌ಐಟಿ ಸೇರಲು ಇಬ್ಬರು ಅಧಿಕಾರಿಗಳು ಹಿಂದೇಟು, ಕಾರಣವೇನು?

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸಿ ರಾಜ್ಯ ಸರ್ಕಾರ ಶನಿವಾರ (ಜು.19) ಆದೇಶಿಸಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ 39/2025 ಕಲಂ 211(ಎ) ಬಿಎನ್‌ಎಸ್, ಈ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ.

ಮೇಲೆ ಉಲ್ಲೇಖಿಸಿದ ಪ್ರಕರಣ ಮಾತ್ರವಲ್ಲದೆ, ಅದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಎಸ್‌ಐಟಿಗೆ ವರ್ಗಾಯಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್‌ ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತಂಡದ ಸದಸ್ಯರಾಗಿದ್ದಾರೆ.

ಈ ನಡುವೆ ಎಸ್‌ಐಟಿಯಿಂದ ಅಧಿಕಾರಿಗಳಾದ ಎಂ.ಎನ್‌ ಅನುಚೇತ್ ಮತ್ತು ಸೌಮ್ಯಲತಾ ಅವರು ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಅಧಿಕಾರಿಗಳ ಹಿಂದೇಟು, ಕಾರಣವೇನು?

ಎಂ.ಎನ್‌ ಅನುಚೇತ್‌ ಅವರು ಯಾವುದೇ ಭಯದಿಂದ ಧರ್ಮಸ್ಥಳ ಪ್ರಕರಣದ ತನಿಖೆಯಿಂದ ದೂರು ಉಳಿಯುತ್ತಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ. 2009ರ ಬ್ಯಾಚ್‌ ಐಪಿಎಸ್ ಅಧಿಕಾರಿಯಾಗಿರುವ ಅನುಚೇತ್‌ ಅವರು, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪವಿಭಾಗದ ಸಹಾಯಕ ಪೊಲೀಸ್‌ ವರಿಷ್ಠಾಧಿಕಾರಿಯಾಗಿ (ಎಎಸ್‌ಪಿ) ಮೊದಲ ಭಾರಿಗೆ ಅಧಿಕಾರ ವಹಿಸಿಕೊಂಡಿದ್ದರು. ಅನುಚೇತ್‌ ಅವರು ಪುತ್ತೂರಿನ ಎಎಸ್‌ಪಿಯಾಗಿದ್ದಾಗಲೇ ಸೌಜನ್ಯ ಪ್ರಕರಣ ನಡೆದಿತ್ತು.

ಸೌಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಭಾಸ್ಕರ್ ರೈ ಮತ್ತು ಸಬ್-ಇನ್ಸ್‌ಪೆಕ್ಟರ್ ಯೋಗೇಶ್ ಕುಮಾರ್ ನಾಯಕ್ ಅವರ ಮೇಲೆ ಈಗಾಗಲೇ ಸಾಕ್ಷ ನಾಶದ ಗಂಭೀರ ಆರೋಪಗಳಿವೆ. ಇವರೊಂದಿಗೆ ಆ ವೇಳೆ ತಮ್ಮ ಮೇಲೂ ಆಗಾಗ ಇಂತಹ ಆರೋಪಗಳು ಸ್ಥಳೀಯರಿಂದ ಕೇಳಿಬಂದಿವೆ ಎನ್ನುವ ಕಾರಣ ಮುಂದಿಟ್ಟುಕೊಂಡು ಎಸ್‌ಐಟಿ ತಂಡದಿಂದ ತಮ್ಮನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆಯಲು ಅನುಚೇತ್ ಸಿದ್ಧತೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ಖಚಿತ ಪಡಿಸಿವೆ.

ಈ ಹಿಂದೆ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ತನಿಖೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡದಲ್ಲಿ ಕಾರ್ಯನಿರ್ವಹಿಸಿದ್ದ ಅನುಚೇತ್‌ ಅವರು, ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇನ್ನೊಬ್ಬರು ಅಧಿಕಾರಿ ಸೌಮ್ಯಲತಾ ಅವರೂ ಎಸ್‌ಐಟಿಯಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ. ಆದರೆ, ಅವರು ಯಾವ ಕಾರಣದಿಂದ ತನಿಖೆಯಿಂದ ದೂರ ಉಳಿಯುತ್ತಿದ್ದಾರೆ ಎಂಬ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಧರ್ಮಸ್ಥಳ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...