ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ 10 ದಿನ ಎಸ್ಐಟಿ ವಶಕ್ಕೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ದೂರು ನೀಡಿದ್ದ ವ್ಯಕ್ತಿಯನ್ನು ಬೆಳ್ತಂಗಡಿ ನ್ಯಾಯಾಲಯ ಶನಿವಾರ (ಆ.23) 10 ದಿನಗಳ ಅವಧಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿದೆ ಎಂದು ವರದಿಯಾಗಿದೆ. ಸುದೀರ್ಘ ವಿಚಾರಣೆಯ ಬಳಿಕ ಶನಿವಾರ ಎಸ್‌ಐಟಿ ಅಧಿಕಾರಿಗಳು ದೂರುದಾರನನ್ನು ಬಂಧಿಸಿದ್ದರು. ಬಳಿಕ ಆತನನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ದೂರುದಾರನಿಗೆ ಸಾಕ್ಷ್ಯ ರಕ್ಷಣೆ ಕಾಯ್ದೆಯಡಿ ನ್ಯಾಯಾಲಯ ರಕ್ಷಣೆ ಒದಗಿಸಿದೆ. ಹಾಗಾಗಿ, ಆತನನ್ನು ಬಂಧಿಸಲು ಅಥವಾ … Continue reading ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ 10 ದಿನ ಎಸ್ಐಟಿ ವಶಕ್ಕೆ