Homeಕರ್ನಾಟಕಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

ಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

- Advertisement -
- Advertisement -

ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಶವಗಳನ್ನು ಹೂತು ಹಾಕಿರುವ 13 ಜಾಗಗಳನ್ನು ಸಾಕ್ಷಿ ದೂರುದಾರ ಸೋಮವಾರ (ಜು.28) ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ತೋರಿಸಿದ್ದಾರೆ.

ಮುಖಕ್ಕೆ ಮುಸುಕು ಹಾಕಿ, ಬಿಗಿ ಭದ್ರತೆಯಲ್ಲಿ ಸಾಕ್ಷಿ ದೂರುದಾರನ್ನು ಸೋಮವಾರ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಎಸ್ಐಟಿ ಅಧಿಕಾರಿಗಳು ಕರೆ ತಂದಿದ್ದರು. ಸ್ನಾನಘಟ್ಟದ ಆಸುಪಾಸು ಮತ್ತು ಇತರ ಕೆಲ ಪ್ರದೇಶಗಳಲ್ಲಿ ಶವಗಳನ್ನು ಹೂತು ಹಾಕಿರುವ ಜಾಗಗಳನ್ನು ದೂರುದಾರ ತೋರಿಸಿದ್ದಾರೆ. ಆ ಜಾಗದ ಜಿಪಿಎಸ್ ಗುರುತುಗಳನ್ನು ದಾಖಲಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಕೆಂಪು ರಿಬ್ಬನ್ ಕಟ್ಟಿದ್ದಾರೆ. ಅಲ್ಲದೆ, ದೂರುದಾರ ತೋರಿಸಿದ ಪ್ರತಿ ಜಾಗಕ್ಕೂ ನಿರ್ದಿಷ್ಟ ಸಂಖ್ಯೆಯ ಗುರುತು ಮಾಡಿದ್ದಾರೆ.

ದೂರುದಾರ ತೋರಿಸುವ 13 ಜಾಗಗಳೂ ಧರ್ಮಸ್ಥಳ ಪೊಲೀಸ್ ಠಾಣೆಯ 1 ಕಿ.ಮೀ ವ್ಯಾಪ್ತಿಯ ಕಾಡಿನಲ್ಲಿವೆ. ಮೊದಲು ತೋರಿಸಿದ ಎಂಟು ಜಾಗಗಳು ನೇತ್ರಾವದಿ ನದಿ ದಂಡೆಯಲ್ಲಿದ್ದರೆ, ಉಳಿದ ನಾಲ್ಕು ಜಾಗಗಳು ನೇತ್ರಾವತಿ ಸೇತುವೆಯಿಂದ ಸ್ನಾನಘಟ್ಟದ ಕಡೆಗೆ ಹೋಗುವ ರಾಜ್ಯ ಹೆದ್ದಾರಿ 37ರ ಪಕ್ಕದಲ್ಲಿವೆ. ಒಂದು ಜಾಗ ಮಾತ್ರ ಸ್ನಾನಘಟ್ಟ ಸಮೀಪದ ಕಿರು ಆಣೆಕಟ್ಟೆಯ ಪಕ್ಕದ ಬಯಲು ಜಾಗದಲ್ಲಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಸಾಕ್ಷಿ ದೂರುದಾರ ವಕೀಲರ ತಂಡದ ಜೊತೆಗೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹಾಜರಾಗಿದ್ದರು. ಅಲ್ಲಿಂದ 11.50ರ ಸುಮಾರಿಗೆ ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಅವರನ್ನು ಧರ್ಮಸ್ಥಳ ಸ್ನಾನಘಟ್ಟದ ಬಳಿಗೆ ಕರೆದೊಯ್ದಿದ್ದರು. ಅಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ  ದೂರುದಾರ ನೇತ್ರಾವತಿ ನದಿ ಪಕ್ಕದ ಎಂಟು ಜಾಗಗಳನ್ನು ತೋರಿಸಿದರು. ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡಿದರು. ಊಟ ಮುಗಿಸಿದ ಬಳಿಕ ಮತ್ತೆ ಅವರನ್ನು ಕಾಡಿನೊಳಗೆ ಕರೆದೊಯ್ದು ಜಾಗದ ಗುರುತಿಸುವಿವೆ ನಡೆಯಿತು.

ಮಧ್ಯಾಹ್ನ ಊಟದ ಬಳಿಕ ದೂರುದಾರ ರಾಜ್ಯ ಹೆದ್ದಾರಿಯ ಪಕ್ಕದ ಕಾಡಿನಲ್ಲಿ ನಾಲ್ಕು ಜಾಗಗಳನ್ನು ತೋರಿಸಿದ್ದಾರೆ. ಬಳಿಕ ಸ್ನಾನಘಟ್ಟ ಸಮೀಪದ ಕಿರು ಅಣೆಕಟ್ಟೆಯ ಪಕ್ಕದ ಜಾಗ ತೋರಿಸಿದ್ದಾರೆ. ಒಟ್ಟು 13 ಜಾಗಗಳನ್ನು ತೋರಿಸುವಷ್ಟರಲ್ಲಿ ಸಂಜೆಯಾಗಿತ್ತು. ನೇತ್ರಾವದಿ ನದಿಯ ಆಚೆ ಬದಿಯಲ್ಲೂ ಜಾಗಗಳನ್ನು ಗುರುತಿಸಬೇಕಿತ್ತು. ಕನ್ಯಾಡಿ ಗ್ರಾಮದ ರಸ್ತೆಯ ಮೂಲಕ ಅಲ್ಲಿಗೆ ತೆರಳುವಾಗ ಸಂಜೆ 6 ಗಂಟೆ ಕಳೆದಿತ್ತು. ಜೋರಾಗಿ ಮಳೆಯೂ ಬರುತ್ತಿತ್ತು. ಹಾಗಾಗಿ, ಅಧಿಕಾರಿಗಳು ಜಾಗಗಳ ಹುಡುಕಾಟ ಸ್ಥಗಿತಗೊಳಿಸಿದರು ಎಂದು ವರದಿ ವಿವರಿಸಿದೆ.

ಇಂದು (ಬುಧವಾರ) ಕೂಡ ಜಾಗಗಳ ಗುರುತಿಸುವಿಕೆ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ. ಇಂದು ಈಗಾಗಲೇ ಗುರುತಿಸಿರುವ ಜಾಗಗಳಲ್ಲಿ ಮಣ್ಣು ಅಗೆದು ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಅಥವಾ ಅಸ್ತಿ ಪಂಜರಗಳಿದ್ದರೆ ಮೇಲೆತ್ತಲಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಈ ಬಗ್ಗೆ ಖಚಿತತೆ ಇಲ್ಲ.

ಕಳ್ಳತನ ಶಂಕೆ; ಸಂಭಾಲ್‌ನಲ್ಲಿ ದಲಿತ ಯುವಕರರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...