Homeಕರ್ನಾಟಕಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

ಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

- Advertisement -
- Advertisement -

ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಶವಗಳನ್ನು ಹೂತು ಹಾಕಿರುವ 13 ಜಾಗಗಳನ್ನು ಸಾಕ್ಷಿ ದೂರುದಾರ ಸೋಮವಾರ (ಜು.28) ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ತೋರಿಸಿದ್ದಾರೆ.

ಮುಖಕ್ಕೆ ಮುಸುಕು ಹಾಕಿ, ಬಿಗಿ ಭದ್ರತೆಯಲ್ಲಿ ಸಾಕ್ಷಿ ದೂರುದಾರನ್ನು ಸೋಮವಾರ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಎಸ್ಐಟಿ ಅಧಿಕಾರಿಗಳು ಕರೆ ತಂದಿದ್ದರು. ಸ್ನಾನಘಟ್ಟದ ಆಸುಪಾಸು ಮತ್ತು ಇತರ ಕೆಲ ಪ್ರದೇಶಗಳಲ್ಲಿ ಶವಗಳನ್ನು ಹೂತು ಹಾಕಿರುವ ಜಾಗಗಳನ್ನು ದೂರುದಾರ ತೋರಿಸಿದ್ದಾರೆ. ಆ ಜಾಗದ ಜಿಪಿಎಸ್ ಗುರುತುಗಳನ್ನು ದಾಖಲಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಕೆಂಪು ರಿಬ್ಬನ್ ಕಟ್ಟಿದ್ದಾರೆ. ಅಲ್ಲದೆ, ದೂರುದಾರ ತೋರಿಸಿದ ಪ್ರತಿ ಜಾಗಕ್ಕೂ ನಿರ್ದಿಷ್ಟ ಸಂಖ್ಯೆಯ ಗುರುತು ಮಾಡಿದ್ದಾರೆ.

ದೂರುದಾರ ತೋರಿಸುವ 13 ಜಾಗಗಳೂ ಧರ್ಮಸ್ಥಳ ಪೊಲೀಸ್ ಠಾಣೆಯ 1 ಕಿ.ಮೀ ವ್ಯಾಪ್ತಿಯ ಕಾಡಿನಲ್ಲಿವೆ. ಮೊದಲು ತೋರಿಸಿದ ಎಂಟು ಜಾಗಗಳು ನೇತ್ರಾವದಿ ನದಿ ದಂಡೆಯಲ್ಲಿದ್ದರೆ, ಉಳಿದ ನಾಲ್ಕು ಜಾಗಗಳು ನೇತ್ರಾವತಿ ಸೇತುವೆಯಿಂದ ಸ್ನಾನಘಟ್ಟದ ಕಡೆಗೆ ಹೋಗುವ ರಾಜ್ಯ ಹೆದ್ದಾರಿ 37ರ ಪಕ್ಕದಲ್ಲಿವೆ. ಒಂದು ಜಾಗ ಮಾತ್ರ ಸ್ನಾನಘಟ್ಟ ಸಮೀಪದ ಕಿರು ಆಣೆಕಟ್ಟೆಯ ಪಕ್ಕದ ಬಯಲು ಜಾಗದಲ್ಲಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಸಾಕ್ಷಿ ದೂರುದಾರ ವಕೀಲರ ತಂಡದ ಜೊತೆಗೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹಾಜರಾಗಿದ್ದರು. ಅಲ್ಲಿಂದ 11.50ರ ಸುಮಾರಿಗೆ ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಅವರನ್ನು ಧರ್ಮಸ್ಥಳ ಸ್ನಾನಘಟ್ಟದ ಬಳಿಗೆ ಕರೆದೊಯ್ದಿದ್ದರು. ಅಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ  ದೂರುದಾರ ನೇತ್ರಾವತಿ ನದಿ ಪಕ್ಕದ ಎಂಟು ಜಾಗಗಳನ್ನು ತೋರಿಸಿದರು. ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡಿದರು. ಊಟ ಮುಗಿಸಿದ ಬಳಿಕ ಮತ್ತೆ ಅವರನ್ನು ಕಾಡಿನೊಳಗೆ ಕರೆದೊಯ್ದು ಜಾಗದ ಗುರುತಿಸುವಿವೆ ನಡೆಯಿತು.

ಮಧ್ಯಾಹ್ನ ಊಟದ ಬಳಿಕ ದೂರುದಾರ ರಾಜ್ಯ ಹೆದ್ದಾರಿಯ ಪಕ್ಕದ ಕಾಡಿನಲ್ಲಿ ನಾಲ್ಕು ಜಾಗಗಳನ್ನು ತೋರಿಸಿದ್ದಾರೆ. ಬಳಿಕ ಸ್ನಾನಘಟ್ಟ ಸಮೀಪದ ಕಿರು ಅಣೆಕಟ್ಟೆಯ ಪಕ್ಕದ ಜಾಗ ತೋರಿಸಿದ್ದಾರೆ. ಒಟ್ಟು 13 ಜಾಗಗಳನ್ನು ತೋರಿಸುವಷ್ಟರಲ್ಲಿ ಸಂಜೆಯಾಗಿತ್ತು. ನೇತ್ರಾವದಿ ನದಿಯ ಆಚೆ ಬದಿಯಲ್ಲೂ ಜಾಗಗಳನ್ನು ಗುರುತಿಸಬೇಕಿತ್ತು. ಕನ್ಯಾಡಿ ಗ್ರಾಮದ ರಸ್ತೆಯ ಮೂಲಕ ಅಲ್ಲಿಗೆ ತೆರಳುವಾಗ ಸಂಜೆ 6 ಗಂಟೆ ಕಳೆದಿತ್ತು. ಜೋರಾಗಿ ಮಳೆಯೂ ಬರುತ್ತಿತ್ತು. ಹಾಗಾಗಿ, ಅಧಿಕಾರಿಗಳು ಜಾಗಗಳ ಹುಡುಕಾಟ ಸ್ಥಗಿತಗೊಳಿಸಿದರು ಎಂದು ವರದಿ ವಿವರಿಸಿದೆ.

ಇಂದು (ಬುಧವಾರ) ಕೂಡ ಜಾಗಗಳ ಗುರುತಿಸುವಿಕೆ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ. ಇಂದು ಈಗಾಗಲೇ ಗುರುತಿಸಿರುವ ಜಾಗಗಳಲ್ಲಿ ಮಣ್ಣು ಅಗೆದು ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಅಥವಾ ಅಸ್ತಿ ಪಂಜರಗಳಿದ್ದರೆ ಮೇಲೆತ್ತಲಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಈ ಬಗ್ಗೆ ಖಚಿತತೆ ಇಲ್ಲ.

ಕಳ್ಳತನ ಶಂಕೆ; ಸಂಭಾಲ್‌ನಲ್ಲಿ ದಲಿತ ಯುವಕರರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...