Homeಕರ್ನಾಟಕಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

ಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

- Advertisement -
- Advertisement -

ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಶವಗಳನ್ನು ಹೂತು ಹಾಕಿರುವ 13 ಜಾಗಗಳನ್ನು ಸಾಕ್ಷಿ ದೂರುದಾರ ಸೋಮವಾರ (ಜು.28) ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ತೋರಿಸಿದ್ದಾರೆ.

ಮುಖಕ್ಕೆ ಮುಸುಕು ಹಾಕಿ, ಬಿಗಿ ಭದ್ರತೆಯಲ್ಲಿ ಸಾಕ್ಷಿ ದೂರುದಾರನ್ನು ಸೋಮವಾರ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಎಸ್ಐಟಿ ಅಧಿಕಾರಿಗಳು ಕರೆ ತಂದಿದ್ದರು. ಸ್ನಾನಘಟ್ಟದ ಆಸುಪಾಸು ಮತ್ತು ಇತರ ಕೆಲ ಪ್ರದೇಶಗಳಲ್ಲಿ ಶವಗಳನ್ನು ಹೂತು ಹಾಕಿರುವ ಜಾಗಗಳನ್ನು ದೂರುದಾರ ತೋರಿಸಿದ್ದಾರೆ. ಆ ಜಾಗದ ಜಿಪಿಎಸ್ ಗುರುತುಗಳನ್ನು ದಾಖಲಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಕೆಂಪು ರಿಬ್ಬನ್ ಕಟ್ಟಿದ್ದಾರೆ. ಅಲ್ಲದೆ, ದೂರುದಾರ ತೋರಿಸಿದ ಪ್ರತಿ ಜಾಗಕ್ಕೂ ನಿರ್ದಿಷ್ಟ ಸಂಖ್ಯೆಯ ಗುರುತು ಮಾಡಿದ್ದಾರೆ.

ದೂರುದಾರ ತೋರಿಸುವ 13 ಜಾಗಗಳೂ ಧರ್ಮಸ್ಥಳ ಪೊಲೀಸ್ ಠಾಣೆಯ 1 ಕಿ.ಮೀ ವ್ಯಾಪ್ತಿಯ ಕಾಡಿನಲ್ಲಿವೆ. ಮೊದಲು ತೋರಿಸಿದ ಎಂಟು ಜಾಗಗಳು ನೇತ್ರಾವದಿ ನದಿ ದಂಡೆಯಲ್ಲಿದ್ದರೆ, ಉಳಿದ ನಾಲ್ಕು ಜಾಗಗಳು ನೇತ್ರಾವತಿ ಸೇತುವೆಯಿಂದ ಸ್ನಾನಘಟ್ಟದ ಕಡೆಗೆ ಹೋಗುವ ರಾಜ್ಯ ಹೆದ್ದಾರಿ 37ರ ಪಕ್ಕದಲ್ಲಿವೆ. ಒಂದು ಜಾಗ ಮಾತ್ರ ಸ್ನಾನಘಟ್ಟ ಸಮೀಪದ ಕಿರು ಆಣೆಕಟ್ಟೆಯ ಪಕ್ಕದ ಬಯಲು ಜಾಗದಲ್ಲಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಸಾಕ್ಷಿ ದೂರುದಾರ ವಕೀಲರ ತಂಡದ ಜೊತೆಗೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹಾಜರಾಗಿದ್ದರು. ಅಲ್ಲಿಂದ 11.50ರ ಸುಮಾರಿಗೆ ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಅವರನ್ನು ಧರ್ಮಸ್ಥಳ ಸ್ನಾನಘಟ್ಟದ ಬಳಿಗೆ ಕರೆದೊಯ್ದಿದ್ದರು. ಅಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ  ದೂರುದಾರ ನೇತ್ರಾವತಿ ನದಿ ಪಕ್ಕದ ಎಂಟು ಜಾಗಗಳನ್ನು ತೋರಿಸಿದರು. ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡಿದರು. ಊಟ ಮುಗಿಸಿದ ಬಳಿಕ ಮತ್ತೆ ಅವರನ್ನು ಕಾಡಿನೊಳಗೆ ಕರೆದೊಯ್ದು ಜಾಗದ ಗುರುತಿಸುವಿವೆ ನಡೆಯಿತು.

ಮಧ್ಯಾಹ್ನ ಊಟದ ಬಳಿಕ ದೂರುದಾರ ರಾಜ್ಯ ಹೆದ್ದಾರಿಯ ಪಕ್ಕದ ಕಾಡಿನಲ್ಲಿ ನಾಲ್ಕು ಜಾಗಗಳನ್ನು ತೋರಿಸಿದ್ದಾರೆ. ಬಳಿಕ ಸ್ನಾನಘಟ್ಟ ಸಮೀಪದ ಕಿರು ಅಣೆಕಟ್ಟೆಯ ಪಕ್ಕದ ಜಾಗ ತೋರಿಸಿದ್ದಾರೆ. ಒಟ್ಟು 13 ಜಾಗಗಳನ್ನು ತೋರಿಸುವಷ್ಟರಲ್ಲಿ ಸಂಜೆಯಾಗಿತ್ತು. ನೇತ್ರಾವದಿ ನದಿಯ ಆಚೆ ಬದಿಯಲ್ಲೂ ಜಾಗಗಳನ್ನು ಗುರುತಿಸಬೇಕಿತ್ತು. ಕನ್ಯಾಡಿ ಗ್ರಾಮದ ರಸ್ತೆಯ ಮೂಲಕ ಅಲ್ಲಿಗೆ ತೆರಳುವಾಗ ಸಂಜೆ 6 ಗಂಟೆ ಕಳೆದಿತ್ತು. ಜೋರಾಗಿ ಮಳೆಯೂ ಬರುತ್ತಿತ್ತು. ಹಾಗಾಗಿ, ಅಧಿಕಾರಿಗಳು ಜಾಗಗಳ ಹುಡುಕಾಟ ಸ್ಥಗಿತಗೊಳಿಸಿದರು ಎಂದು ವರದಿ ವಿವರಿಸಿದೆ.

ಇಂದು (ಬುಧವಾರ) ಕೂಡ ಜಾಗಗಳ ಗುರುತಿಸುವಿಕೆ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ. ಇಂದು ಈಗಾಗಲೇ ಗುರುತಿಸಿರುವ ಜಾಗಗಳಲ್ಲಿ ಮಣ್ಣು ಅಗೆದು ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಅಥವಾ ಅಸ್ತಿ ಪಂಜರಗಳಿದ್ದರೆ ಮೇಲೆತ್ತಲಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಈ ಬಗ್ಗೆ ಖಚಿತತೆ ಇಲ್ಲ.

ಕಳ್ಳತನ ಶಂಕೆ; ಸಂಭಾಲ್‌ನಲ್ಲಿ ದಲಿತ ಯುವಕರರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...