Homeಕರ್ನಾಟಕಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

ಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

- Advertisement -
- Advertisement -

ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಶವಗಳನ್ನು ಹೂತು ಹಾಕಿರುವ 13 ಜಾಗಗಳನ್ನು ಸಾಕ್ಷಿ ದೂರುದಾರ ಸೋಮವಾರ (ಜು.28) ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ತೋರಿಸಿದ್ದಾರೆ.

ಮುಖಕ್ಕೆ ಮುಸುಕು ಹಾಕಿ, ಬಿಗಿ ಭದ್ರತೆಯಲ್ಲಿ ಸಾಕ್ಷಿ ದೂರುದಾರನ್ನು ಸೋಮವಾರ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಎಸ್ಐಟಿ ಅಧಿಕಾರಿಗಳು ಕರೆ ತಂದಿದ್ದರು. ಸ್ನಾನಘಟ್ಟದ ಆಸುಪಾಸು ಮತ್ತು ಇತರ ಕೆಲ ಪ್ರದೇಶಗಳಲ್ಲಿ ಶವಗಳನ್ನು ಹೂತು ಹಾಕಿರುವ ಜಾಗಗಳನ್ನು ದೂರುದಾರ ತೋರಿಸಿದ್ದಾರೆ. ಆ ಜಾಗದ ಜಿಪಿಎಸ್ ಗುರುತುಗಳನ್ನು ದಾಖಲಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಕೆಂಪು ರಿಬ್ಬನ್ ಕಟ್ಟಿದ್ದಾರೆ. ಅಲ್ಲದೆ, ದೂರುದಾರ ತೋರಿಸಿದ ಪ್ರತಿ ಜಾಗಕ್ಕೂ ನಿರ್ದಿಷ್ಟ ಸಂಖ್ಯೆಯ ಗುರುತು ಮಾಡಿದ್ದಾರೆ.

ದೂರುದಾರ ತೋರಿಸುವ 13 ಜಾಗಗಳೂ ಧರ್ಮಸ್ಥಳ ಪೊಲೀಸ್ ಠಾಣೆಯ 1 ಕಿ.ಮೀ ವ್ಯಾಪ್ತಿಯ ಕಾಡಿನಲ್ಲಿವೆ. ಮೊದಲು ತೋರಿಸಿದ ಎಂಟು ಜಾಗಗಳು ನೇತ್ರಾವದಿ ನದಿ ದಂಡೆಯಲ್ಲಿದ್ದರೆ, ಉಳಿದ ನಾಲ್ಕು ಜಾಗಗಳು ನೇತ್ರಾವತಿ ಸೇತುವೆಯಿಂದ ಸ್ನಾನಘಟ್ಟದ ಕಡೆಗೆ ಹೋಗುವ ರಾಜ್ಯ ಹೆದ್ದಾರಿ 37ರ ಪಕ್ಕದಲ್ಲಿವೆ. ಒಂದು ಜಾಗ ಮಾತ್ರ ಸ್ನಾನಘಟ್ಟ ಸಮೀಪದ ಕಿರು ಆಣೆಕಟ್ಟೆಯ ಪಕ್ಕದ ಬಯಲು ಜಾಗದಲ್ಲಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಸಾಕ್ಷಿ ದೂರುದಾರ ವಕೀಲರ ತಂಡದ ಜೊತೆಗೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹಾಜರಾಗಿದ್ದರು. ಅಲ್ಲಿಂದ 11.50ರ ಸುಮಾರಿಗೆ ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಅವರನ್ನು ಧರ್ಮಸ್ಥಳ ಸ್ನಾನಘಟ್ಟದ ಬಳಿಗೆ ಕರೆದೊಯ್ದಿದ್ದರು. ಅಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ  ದೂರುದಾರ ನೇತ್ರಾವತಿ ನದಿ ಪಕ್ಕದ ಎಂಟು ಜಾಗಗಳನ್ನು ತೋರಿಸಿದರು. ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡಿದರು. ಊಟ ಮುಗಿಸಿದ ಬಳಿಕ ಮತ್ತೆ ಅವರನ್ನು ಕಾಡಿನೊಳಗೆ ಕರೆದೊಯ್ದು ಜಾಗದ ಗುರುತಿಸುವಿವೆ ನಡೆಯಿತು.

ಮಧ್ಯಾಹ್ನ ಊಟದ ಬಳಿಕ ದೂರುದಾರ ರಾಜ್ಯ ಹೆದ್ದಾರಿಯ ಪಕ್ಕದ ಕಾಡಿನಲ್ಲಿ ನಾಲ್ಕು ಜಾಗಗಳನ್ನು ತೋರಿಸಿದ್ದಾರೆ. ಬಳಿಕ ಸ್ನಾನಘಟ್ಟ ಸಮೀಪದ ಕಿರು ಅಣೆಕಟ್ಟೆಯ ಪಕ್ಕದ ಜಾಗ ತೋರಿಸಿದ್ದಾರೆ. ಒಟ್ಟು 13 ಜಾಗಗಳನ್ನು ತೋರಿಸುವಷ್ಟರಲ್ಲಿ ಸಂಜೆಯಾಗಿತ್ತು. ನೇತ್ರಾವದಿ ನದಿಯ ಆಚೆ ಬದಿಯಲ್ಲೂ ಜಾಗಗಳನ್ನು ಗುರುತಿಸಬೇಕಿತ್ತು. ಕನ್ಯಾಡಿ ಗ್ರಾಮದ ರಸ್ತೆಯ ಮೂಲಕ ಅಲ್ಲಿಗೆ ತೆರಳುವಾಗ ಸಂಜೆ 6 ಗಂಟೆ ಕಳೆದಿತ್ತು. ಜೋರಾಗಿ ಮಳೆಯೂ ಬರುತ್ತಿತ್ತು. ಹಾಗಾಗಿ, ಅಧಿಕಾರಿಗಳು ಜಾಗಗಳ ಹುಡುಕಾಟ ಸ್ಥಗಿತಗೊಳಿಸಿದರು ಎಂದು ವರದಿ ವಿವರಿಸಿದೆ.

ಇಂದು (ಬುಧವಾರ) ಕೂಡ ಜಾಗಗಳ ಗುರುತಿಸುವಿಕೆ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ. ಇಂದು ಈಗಾಗಲೇ ಗುರುತಿಸಿರುವ ಜಾಗಗಳಲ್ಲಿ ಮಣ್ಣು ಅಗೆದು ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಅಥವಾ ಅಸ್ತಿ ಪಂಜರಗಳಿದ್ದರೆ ಮೇಲೆತ್ತಲಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಈ ಬಗ್ಗೆ ಖಚಿತತೆ ಇಲ್ಲ.

ಕಳ್ಳತನ ಶಂಕೆ; ಸಂಭಾಲ್‌ನಲ್ಲಿ ದಲಿತ ಯುವಕರರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...