Homeಕರ್ನಾಟಕಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

ಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

- Advertisement -
- Advertisement -

ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಶವಗಳನ್ನು ಹೂತು ಹಾಕಿರುವ 13 ಜಾಗಗಳನ್ನು ಸಾಕ್ಷಿ ದೂರುದಾರ ಸೋಮವಾರ (ಜು.28) ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ತೋರಿಸಿದ್ದಾರೆ.

ಮುಖಕ್ಕೆ ಮುಸುಕು ಹಾಕಿ, ಬಿಗಿ ಭದ್ರತೆಯಲ್ಲಿ ಸಾಕ್ಷಿ ದೂರುದಾರನ್ನು ಸೋಮವಾರ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಎಸ್ಐಟಿ ಅಧಿಕಾರಿಗಳು ಕರೆ ತಂದಿದ್ದರು. ಸ್ನಾನಘಟ್ಟದ ಆಸುಪಾಸು ಮತ್ತು ಇತರ ಕೆಲ ಪ್ರದೇಶಗಳಲ್ಲಿ ಶವಗಳನ್ನು ಹೂತು ಹಾಕಿರುವ ಜಾಗಗಳನ್ನು ದೂರುದಾರ ತೋರಿಸಿದ್ದಾರೆ. ಆ ಜಾಗದ ಜಿಪಿಎಸ್ ಗುರುತುಗಳನ್ನು ದಾಖಲಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಕೆಂಪು ರಿಬ್ಬನ್ ಕಟ್ಟಿದ್ದಾರೆ. ಅಲ್ಲದೆ, ದೂರುದಾರ ತೋರಿಸಿದ ಪ್ರತಿ ಜಾಗಕ್ಕೂ ನಿರ್ದಿಷ್ಟ ಸಂಖ್ಯೆಯ ಗುರುತು ಮಾಡಿದ್ದಾರೆ.

ದೂರುದಾರ ತೋರಿಸುವ 13 ಜಾಗಗಳೂ ಧರ್ಮಸ್ಥಳ ಪೊಲೀಸ್ ಠಾಣೆಯ 1 ಕಿ.ಮೀ ವ್ಯಾಪ್ತಿಯ ಕಾಡಿನಲ್ಲಿವೆ. ಮೊದಲು ತೋರಿಸಿದ ಎಂಟು ಜಾಗಗಳು ನೇತ್ರಾವದಿ ನದಿ ದಂಡೆಯಲ್ಲಿದ್ದರೆ, ಉಳಿದ ನಾಲ್ಕು ಜಾಗಗಳು ನೇತ್ರಾವತಿ ಸೇತುವೆಯಿಂದ ಸ್ನಾನಘಟ್ಟದ ಕಡೆಗೆ ಹೋಗುವ ರಾಜ್ಯ ಹೆದ್ದಾರಿ 37ರ ಪಕ್ಕದಲ್ಲಿವೆ. ಒಂದು ಜಾಗ ಮಾತ್ರ ಸ್ನಾನಘಟ್ಟ ಸಮೀಪದ ಕಿರು ಆಣೆಕಟ್ಟೆಯ ಪಕ್ಕದ ಬಯಲು ಜಾಗದಲ್ಲಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಸಾಕ್ಷಿ ದೂರುದಾರ ವಕೀಲರ ತಂಡದ ಜೊತೆಗೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹಾಜರಾಗಿದ್ದರು. ಅಲ್ಲಿಂದ 11.50ರ ಸುಮಾರಿಗೆ ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಅವರನ್ನು ಧರ್ಮಸ್ಥಳ ಸ್ನಾನಘಟ್ಟದ ಬಳಿಗೆ ಕರೆದೊಯ್ದಿದ್ದರು. ಅಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ  ದೂರುದಾರ ನೇತ್ರಾವತಿ ನದಿ ಪಕ್ಕದ ಎಂಟು ಜಾಗಗಳನ್ನು ತೋರಿಸಿದರು. ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡಿದರು. ಊಟ ಮುಗಿಸಿದ ಬಳಿಕ ಮತ್ತೆ ಅವರನ್ನು ಕಾಡಿನೊಳಗೆ ಕರೆದೊಯ್ದು ಜಾಗದ ಗುರುತಿಸುವಿವೆ ನಡೆಯಿತು.

ಮಧ್ಯಾಹ್ನ ಊಟದ ಬಳಿಕ ದೂರುದಾರ ರಾಜ್ಯ ಹೆದ್ದಾರಿಯ ಪಕ್ಕದ ಕಾಡಿನಲ್ಲಿ ನಾಲ್ಕು ಜಾಗಗಳನ್ನು ತೋರಿಸಿದ್ದಾರೆ. ಬಳಿಕ ಸ್ನಾನಘಟ್ಟ ಸಮೀಪದ ಕಿರು ಅಣೆಕಟ್ಟೆಯ ಪಕ್ಕದ ಜಾಗ ತೋರಿಸಿದ್ದಾರೆ. ಒಟ್ಟು 13 ಜಾಗಗಳನ್ನು ತೋರಿಸುವಷ್ಟರಲ್ಲಿ ಸಂಜೆಯಾಗಿತ್ತು. ನೇತ್ರಾವದಿ ನದಿಯ ಆಚೆ ಬದಿಯಲ್ಲೂ ಜಾಗಗಳನ್ನು ಗುರುತಿಸಬೇಕಿತ್ತು. ಕನ್ಯಾಡಿ ಗ್ರಾಮದ ರಸ್ತೆಯ ಮೂಲಕ ಅಲ್ಲಿಗೆ ತೆರಳುವಾಗ ಸಂಜೆ 6 ಗಂಟೆ ಕಳೆದಿತ್ತು. ಜೋರಾಗಿ ಮಳೆಯೂ ಬರುತ್ತಿತ್ತು. ಹಾಗಾಗಿ, ಅಧಿಕಾರಿಗಳು ಜಾಗಗಳ ಹುಡುಕಾಟ ಸ್ಥಗಿತಗೊಳಿಸಿದರು ಎಂದು ವರದಿ ವಿವರಿಸಿದೆ.

ಇಂದು (ಬುಧವಾರ) ಕೂಡ ಜಾಗಗಳ ಗುರುತಿಸುವಿಕೆ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ. ಇಂದು ಈಗಾಗಲೇ ಗುರುತಿಸಿರುವ ಜಾಗಗಳಲ್ಲಿ ಮಣ್ಣು ಅಗೆದು ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಅಥವಾ ಅಸ್ತಿ ಪಂಜರಗಳಿದ್ದರೆ ಮೇಲೆತ್ತಲಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಈ ಬಗ್ಗೆ ಖಚಿತತೆ ಇಲ್ಲ.

ಕಳ್ಳತನ ಶಂಕೆ; ಸಂಭಾಲ್‌ನಲ್ಲಿ ದಲಿತ ಯುವಕರರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...