Homeಕರ್ನಾಟಕಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

ಧರ್ಮಸ್ಥಳ| ಶವಗಳನ್ನು ಹೂತಿಟ್ಟ 13 ಜಾಗ ತೋರಿಸಿದ ದೂರುದಾರ; ಇಂದು ಮಹಜರು ಮುಂದುವರಿಯುವ ಸಾಧ್ಯತೆ

- Advertisement -
- Advertisement -

ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಶವಗಳನ್ನು ಹೂತು ಹಾಕಿರುವ 13 ಜಾಗಗಳನ್ನು ಸಾಕ್ಷಿ ದೂರುದಾರ ಸೋಮವಾರ (ಜು.28) ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ತೋರಿಸಿದ್ದಾರೆ.

ಮುಖಕ್ಕೆ ಮುಸುಕು ಹಾಕಿ, ಬಿಗಿ ಭದ್ರತೆಯಲ್ಲಿ ಸಾಕ್ಷಿ ದೂರುದಾರನ್ನು ಸೋಮವಾರ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಎಸ್ಐಟಿ ಅಧಿಕಾರಿಗಳು ಕರೆ ತಂದಿದ್ದರು. ಸ್ನಾನಘಟ್ಟದ ಆಸುಪಾಸು ಮತ್ತು ಇತರ ಕೆಲ ಪ್ರದೇಶಗಳಲ್ಲಿ ಶವಗಳನ್ನು ಹೂತು ಹಾಕಿರುವ ಜಾಗಗಳನ್ನು ದೂರುದಾರ ತೋರಿಸಿದ್ದಾರೆ. ಆ ಜಾಗದ ಜಿಪಿಎಸ್ ಗುರುತುಗಳನ್ನು ದಾಖಲಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಕೆಂಪು ರಿಬ್ಬನ್ ಕಟ್ಟಿದ್ದಾರೆ. ಅಲ್ಲದೆ, ದೂರುದಾರ ತೋರಿಸಿದ ಪ್ರತಿ ಜಾಗಕ್ಕೂ ನಿರ್ದಿಷ್ಟ ಸಂಖ್ಯೆಯ ಗುರುತು ಮಾಡಿದ್ದಾರೆ.

ದೂರುದಾರ ತೋರಿಸುವ 13 ಜಾಗಗಳೂ ಧರ್ಮಸ್ಥಳ ಪೊಲೀಸ್ ಠಾಣೆಯ 1 ಕಿ.ಮೀ ವ್ಯಾಪ್ತಿಯ ಕಾಡಿನಲ್ಲಿವೆ. ಮೊದಲು ತೋರಿಸಿದ ಎಂಟು ಜಾಗಗಳು ನೇತ್ರಾವದಿ ನದಿ ದಂಡೆಯಲ್ಲಿದ್ದರೆ, ಉಳಿದ ನಾಲ್ಕು ಜಾಗಗಳು ನೇತ್ರಾವತಿ ಸೇತುವೆಯಿಂದ ಸ್ನಾನಘಟ್ಟದ ಕಡೆಗೆ ಹೋಗುವ ರಾಜ್ಯ ಹೆದ್ದಾರಿ 37ರ ಪಕ್ಕದಲ್ಲಿವೆ. ಒಂದು ಜಾಗ ಮಾತ್ರ ಸ್ನಾನಘಟ್ಟ ಸಮೀಪದ ಕಿರು ಆಣೆಕಟ್ಟೆಯ ಪಕ್ಕದ ಬಯಲು ಜಾಗದಲ್ಲಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಸಾಕ್ಷಿ ದೂರುದಾರ ವಕೀಲರ ತಂಡದ ಜೊತೆಗೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹಾಜರಾಗಿದ್ದರು. ಅಲ್ಲಿಂದ 11.50ರ ಸುಮಾರಿಗೆ ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಅವರನ್ನು ಧರ್ಮಸ್ಥಳ ಸ್ನಾನಘಟ್ಟದ ಬಳಿಗೆ ಕರೆದೊಯ್ದಿದ್ದರು. ಅಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ  ದೂರುದಾರ ನೇತ್ರಾವತಿ ನದಿ ಪಕ್ಕದ ಎಂಟು ಜಾಗಗಳನ್ನು ತೋರಿಸಿದರು. ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು, ಅಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡಿದರು. ಊಟ ಮುಗಿಸಿದ ಬಳಿಕ ಮತ್ತೆ ಅವರನ್ನು ಕಾಡಿನೊಳಗೆ ಕರೆದೊಯ್ದು ಜಾಗದ ಗುರುತಿಸುವಿವೆ ನಡೆಯಿತು.

ಮಧ್ಯಾಹ್ನ ಊಟದ ಬಳಿಕ ದೂರುದಾರ ರಾಜ್ಯ ಹೆದ್ದಾರಿಯ ಪಕ್ಕದ ಕಾಡಿನಲ್ಲಿ ನಾಲ್ಕು ಜಾಗಗಳನ್ನು ತೋರಿಸಿದ್ದಾರೆ. ಬಳಿಕ ಸ್ನಾನಘಟ್ಟ ಸಮೀಪದ ಕಿರು ಅಣೆಕಟ್ಟೆಯ ಪಕ್ಕದ ಜಾಗ ತೋರಿಸಿದ್ದಾರೆ. ಒಟ್ಟು 13 ಜಾಗಗಳನ್ನು ತೋರಿಸುವಷ್ಟರಲ್ಲಿ ಸಂಜೆಯಾಗಿತ್ತು. ನೇತ್ರಾವದಿ ನದಿಯ ಆಚೆ ಬದಿಯಲ್ಲೂ ಜಾಗಗಳನ್ನು ಗುರುತಿಸಬೇಕಿತ್ತು. ಕನ್ಯಾಡಿ ಗ್ರಾಮದ ರಸ್ತೆಯ ಮೂಲಕ ಅಲ್ಲಿಗೆ ತೆರಳುವಾಗ ಸಂಜೆ 6 ಗಂಟೆ ಕಳೆದಿತ್ತು. ಜೋರಾಗಿ ಮಳೆಯೂ ಬರುತ್ತಿತ್ತು. ಹಾಗಾಗಿ, ಅಧಿಕಾರಿಗಳು ಜಾಗಗಳ ಹುಡುಕಾಟ ಸ್ಥಗಿತಗೊಳಿಸಿದರು ಎಂದು ವರದಿ ವಿವರಿಸಿದೆ.

ಇಂದು (ಬುಧವಾರ) ಕೂಡ ಜಾಗಗಳ ಗುರುತಿಸುವಿಕೆ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ. ಇಂದು ಈಗಾಗಲೇ ಗುರುತಿಸಿರುವ ಜಾಗಗಳಲ್ಲಿ ಮಣ್ಣು ಅಗೆದು ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಅಥವಾ ಅಸ್ತಿ ಪಂಜರಗಳಿದ್ದರೆ ಮೇಲೆತ್ತಲಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಈ ಬಗ್ಗೆ ಖಚಿತತೆ ಇಲ್ಲ.

ಕಳ್ಳತನ ಶಂಕೆ; ಸಂಭಾಲ್‌ನಲ್ಲಿ ದಲಿತ ಯುವಕರರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...