Homeಕರ್ನಾಟಕಧರ್ಮಸ್ಥಳ ಸೌಜನ್ಯ ಪರ ಧ್ವನಿಯೆತ್ತಿದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಎಫ್‌ಐಆರ್‌!

ಧರ್ಮಸ್ಥಳ ಸೌಜನ್ಯ ಪರ ಧ್ವನಿಯೆತ್ತಿದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಎಫ್‌ಐಆರ್‌!

ಧಾರ್ಮಿಕ ಭಾವನೆಗೆ ಧಕ್ಕೆ ಎಂದು ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ ಪೊಲೀಸರು

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣದ ಕುರಿತು ಯುಟ್ಯೂಬ್ ವಿಡಿಯೊ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ಅವರು ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಸಮೀರ್ ಅವರ ವೀಡಿಯೋದಿಂದ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ಮೇಲೆ ಧಾರ್ಮಿಕ ಭಾವನೆ ಹೊಂದಿದ ಸಾರ್ವಜನಿಕರ ಧಾರ್ಮಿಕ ಭಾವನೆಗೆ ದಕ್ಕೆಯಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಮೀರ್ ಅವರು ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಎ ಮಾಡಿದ್ದ ವೀಡಿಯೊವೊಂದು ವ್ಯಾಪಕ ಗಮನ ಸೆಳೆದಿದ್ದು, ರಾಜ್ಯದಾದ್ಯಂತ ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ. ಈ ನಡುವೆ ಅವರ ಧರ್ಮವನ್ನು ಮುನ್ನಲೆಗೆ ತಂದು ಅವರನ್ನು ಅವಮಾನಿಸುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ಜಾತಿ ಮತ್ತು ಧರ್ಮವನ್ನು ಈ ವಿಷಯಕ್ಕೆ ಏಕೆ ಎಳೆದು ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಸಮೀರ್ ವಿರುದ್ಧ ಪೊಲೀಸರು ಬುಧವಾರ ಎಫ್‌ಐಆರ್‌ ದಾಖಲಿಸಿದ್ದು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ -299 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಧರ್ಮಸ್ಥಳ ಸೌಜನ್ಯ

ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ನಂತರ ಸಮೀರ್ ಅವರ ಮನೆಗೆ ಬುಧವಾರ ತಡ ರಾತ್ರಿ ಪೊಲೀಸರು ಪ್ರವೇಶಿಸಿದ್ದು, ಅವರನ್ನು ಬಂಧಿಸಲು ಪ್ರಯತ್ನಿಸಿದ್ದಾಗಿ ಅವರು ಆರೋಪಿಸಿದ್ದಾರೆ. ಈ ಕುರಿತು ಸಮೀರ್ ರಾತ್ರಿ 1 ಗಂಟೆಗೆ ಫೇಸ್‌ಬುಕ್ ಲೈವ್‌ನಲ್ಲಿ ಖಚಿತಪಡಿಸಿದ್ದಾರೆ.

ಈ ನಡುವೆ ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅವರು ಹೊರಡಿಸಿದ್ದಾರೆ ಎನ್ನಲಾದ ಆದೇಶದ ಪ್ರತಿಯೊಂದು ಬುಧವಾರ ಸಂಜೆಯಿಂದ ವೈರಲ್ ಆಗಿದೆ. ಈ ಆದೇಶದಲ್ಲಿ “ಸಮೀರ್ ವೀಡಿಯೊದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಸೆಲ್ ಚುರುಕುಗೊಳಿಸಿ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದು, ಈ ಆದೇಶವು ಸಾಕಷ್ಟು ಆಕ್ರೋಶಕ್ಕೆ ಗುರಿಯಾಗಿದೆ.

ಎಡಿಜಿಪಿ ಹೊರಡಿಸಿದ್ದಾರೆ ಎನ್ನಲಾದ ಈ ಆದೇಶದಲ್ಲಿ, “ಇತ್ತೀಚಿಗೆ ಸಮೀರ್ ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಹರಿಬಿಟ್ಟದ್ದು, ಘಟಕಾಧಿಕಾರಿಗಳು ಈ ವಿಷಯವನ್ನು ತಮ್ಮ ಘಟಕಗಳಲ್ಲಿರುವ Social Media Monitoring Cell ಮುಖೇನ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ವಿಫಲರಾಗಿರುತ್ತೀರಿ. ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ/ವಿರೋಧ ಅನಿಸಿಕೆಗಳು ಉದ್ಭವಿಸಿ ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುತ್ತದೆ. ಆದ್ದರಿಂದ, Social Media Monitoring Cell ಚುರುಕುಗೊಳಿಸುವುದು ಹಾಗೂ ಈ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಮಾನ್ಯ ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ ರವರಿಗೆ ಮಾಹಿತಿ ನೀಡುವುದು” ಎಂದು ಹೇಳಿದೆ.

ಮಾಜಿ ಪೊಲೀಸ್ ಅಧಿಕಾರಿ, ಸೌಜನ್ಯ ಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಗಿರೀಶ್ ಮಟ್ಟಣ್ಣನವರ್ ಅವರ ಜೊತೆಗೆ ಸಮೀರ್ ಅವರು ಬುಧವಾರ ತಡರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿ ತನಗೆ ವ್ಯಾಪಕ ಜೀವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಹೇಳಿದ್ದಾರೆ.

ಲೈವ್‌ನಲ್ಲಿ ಮಾತನಾಡಿದ ಸಮೀರ್, “ಪ್ರಸ್ತುತ ನನ್ನ ಪರಿಸ್ಥತಿ ತುಂಬಾ ಕೆಟ್ಟದಾಗಿದ್ದು, ಈಗಾಗಲೆ ಪೊಲೀಸ್ ನೋಟಿಸ್ ಬಂದಿದೆ. ಸುಮಾರು ರಾತ್ರಿ 10;45ರ ಹೊತ್ತಿಗೆ ಪೊಲೀಸರು ಬಂದು ನೋಟಿಸ್ ಕೊಟ್ಟು ಹೋಗಿದ್ದಾರೆ. ಅದಾಗ್ಯೂ ನನಗೆ ಯಾವುದೇ ಭಯವಿಲ್ಲ. ನಾನು ವಿಡಿಯೊದಲ್ಲಿ ಹೇಳಿರುವ ಎಲ್ಲಾ ವಿಚಾರಗಳಿಗೂ ಸಾಕ್ಷಿಯಿದೆ. ನನಗೆ ಕಾನೂನಿನ ಮೇಲೆ ನಂಬಿಕೆಯಿದ್ದು, ಕೋರ್ಟ್‌ನ ಮುಂದೆ ಮತ್ತಷ್ಟು ವಿಸೃತವಾಗಿ ಮಂಡಿಸುತ್ತೇನೆ. ಈ ಬಗ್ಗೆ ಯಾವುದೇ ತೊಂದರೆಯಿಲ್ಲ” ಎಂದು ಹೇಳಿದ್ದಾರೆ.

ಪ್ರಸ್ತತ ತನಗೆ ತೊಂದರೆ ಆಗುತ್ತಿರುವುದು, ಮುಸ್ಲಿಮನೊಬ್ಬ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ್ದೆ ತಪ್ಪು ಹಾಗೂ ಹಿಂದೂ ವಿರೋಧಿ ಎಂದು ಬಿಂಬಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ತಾನು ಅನ್ಯಾಯದ ವಿರುದ್ಧ ಧ್ವನಿಯೆತ್ತಿದ್ದು, ಅದು ನನ್ನ ಧರ್ಮ, ಅದನ್ನು ನಾನು ಪಾಲಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

“ಒಂದು ವೇಳೆ ನಾನು ಹಿಂದೂ ವಿರೋಧಿ ಆಗಿದ್ದರೆ, ಒಬ್ಬ ಹಿಂದೂ ಹುಡುಗಿಗೆ ಆಗಿರುವ ಅನ್ಯಾಯದ ಬಗ್ಗೆ ನಾನು ಯಾಕೆ ಧ್ವನಿ ಎತ್ತಬೇಕು? ನ್ಯಾಯದ ಬಗ್ಗೆ ಮಾತನಾಡೋಣ. ಅದುವೇ ಧರ್ಮ” ಎಂದು ಸಮೀರ್ ಅವರು ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್‌ಗೆ ಕೊನೆಯ ಎಚ್ಚರಿಕೆ ನೀಡಿದ ಟ್ರಂಪ್

ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್‌ಗೆ ಕೊನೆಯ ಎಚ್ಚರಿಕೆ ನೀಡಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...