Homeಕರ್ನಾಟಕಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

ಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

- Advertisement -
- Advertisement -

ಧರ್ಮಸ್ಥಳದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೈಗೊಂಡಿರುವ ಶವ ಶೋಧ ಕಾರ್ಯಾಚರಣೆಯಲ್ಲಿ ಶನಿವಾರ (ಆ.9) ಹೊಸ ಬೆಳವಣಿಗೆಯೊಂದು ನಡೆದಿದೆ.

ಸಾಕ್ಷಿ ದೂರುದಾರ ಬಾಹುಬಲಿ ಬೆಟ್ಟದಲ್ಲಿ ಹೊಸ ಜಾಗವೊಂದನ್ನು ತೋರಿಸಿದ್ದಾರೆ. ಈ ಜಾಗವನ್ನು ಎಸ್‌ಐಟಿ ತಂಡ ಪಾಯಿಂಟ್ ನಂಬರ್ 16 ಎಂದು ಗುರುತಿಸಿದೆ. ಬಾಹುಬಲಿ ಬೆಟ್ಟದ ತುದಿಗೆ ತೆರಳುವ ರಸ್ತೆ ಬದಿಯೇ ಈ ಜಾಗವಿದ್ದು, ಅಲ್ಲಿ ಅಧಿಕಾರಿಗಳು ಶೋಧ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ವಿಶೇಷವಾಗಿ, ಎಸ್‌ಐಟಿ ತಂಡ ದೂರುದಾರನನ್ನು ಕರೆದುಕೊಂಡು ಧರ್ಮಸ್ಥಳ ದೇವಸ್ಥಾನದ ಮುಖ್ಯ ದ್ವಾರದ ಮೂಲಕವೇ ಒಳ ಪ್ರವೇಶಿಸಿ ಬೆಟ್ಟದ ತುದಿಗೆ ತೆರಳಿದೆ. ಅಲ್ಲಿ ಆತ ತೋರಿಸಿರುವ ಜಾಗವನ್ನು ಅಧಿಕಾರಿಗಳು ಟೇಪ್ ಕಟ್ಟಿ ಗುರುತು ಮಾಡಿದ್ದಾರೆ. ಅಲ್ಲದೆ, ಹಸಿರು ನೆಟ್ ಕಟ್ಟಿ ಮಣ್ಣು ಅಗೆಯಲು ಸಿದ್ದತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸಾಕ್ಷಿ ದೂರುದಾರ ಆರಂಭದಲ್ಲಿ 13 ಜಾಗಗಳನ್ನು ಪಾಯಿಂಟ್‌ಗಳನ್ನು ಗುರುತಿಸಿದ್ದರು. ಬಳಿಕ ಅದು 15ರಕ್ಕೇರಿತ್ತು. ಈ ಪೈಕಿ ಪಾಯಿಂಟ್‌ 13 ಹೊರತುಪಡಿಸಿ ಉಳಿದೆಡೆ ಶೋಧ ನಡೆಸಲಾಗಿದೆ. ಪಾಯಿಂಟ್ ನಂಬರ್ 6 ಮತ್ತು 11ರ ಸಮೀಪ ಮನುಷ್ಯರ ಅಸ್ಥಿಪಂಜರದ ಅವಶೇಷಗಳು ಸಿಕ್ಕಿದೆ ಎನ್ನಲಾಗಿದೆ.

ಈಗಾಗಲೇ ಎಲ್ಲೆಡೆ ಸುದ್ದಿಯಾಗಿರುವಂತೆ ದೂರುದಾರ ಧರ್ಮಸ್ಥಳ ಸಮೀಪದ ಕಲ್ಲೇರಿ ಮತ್ತು ಬೋಳಿಯಾರ್ ಎಂಬ ಜಾಗಗಳಲ್ಲಿ ಶವ ಹೂತಿರುವ ಬಗ್ಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಆ ಜಾಗಗಳಲ್ಲಿ ಎಸ್‌ಐಟಿ ಶನಿವಾರ ಶೋಧ ನಡೆಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಈ ನಡುವೆ ದೂರುದಾರ ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ್ದಾರೆ.

ಇಬ್ಬರು ಸಾಕ್ಷಿಗಳು ಪ್ರತ್ಯಕ್ಷ

ಎಸ್‌ಐಟಿ ಶವ ಶೋಧ ನಡೆಸುತ್ತಿರುವ ಪ್ರಕರಣದ ದೂರುದಾರ ಶವ ಹೂತಿರುವುದನ್ನು ನಾವು ನೋಡಿದ್ದೇವೆ ಎಂದು ಇಬ್ಬರು ಎಸ್‌ಐಟಿ ತಂಡ ಮುಂದೆ ಹಾಜರಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿತ್ತು. ಅವರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಸಲಹೆ ನೀಡಿದ್ದರು. ಅದರಂತೆ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಜಯಂತ ಶೆಟ್ಟಿಯಿಂದ ಎರಡೇ ದೂರು

ಮೊದಲ ಅನಾಮಿಕ ವ್ಯಕ್ತಿಯ ದೂರಿನಂತೆ ಪ್ರಸ್ತುತ ಧರ್ಮಸ್ಥಳದಲ್ಲಿ ಶವ ಶೋಧ ನಡೆಯುತ್ತಿದೆ. ಈ ನಡುವೆ ಆಗಸ್ಟ್ 2ರಂದು ಜಯಂತ ಶೆಟ್ಟಿ ಎಂಬವರು ವರ್ಷಗಳ ಬಾಲಕಿಯೊಬ್ಬಳ ಶವ ಹೂತು ಹಾಕಿರುವುದನ್ನು ನಾನು ನೋಡಿದ್ದೇನೆ. ತನ್ನ ಆರೋಪಕ್ಕೆ ಜೀವಂತ ಸಾಕ್ಷಿಗಳಿದ್ದಾರೆ. ಅಗತ್ಯ ಬಂದರೆ ಅವರನ್ನು ಕರೆತಂದು ನಿಲ್ಲಿಸುತ್ತೇನೆ ಎಂದು ಎಸ್‌ಐಟಿಗೆ ದೂರು ನೀಡಿದ್ದರು. ತಾನು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ ಪದ್ಮಲತಾ ಅವರ ಸಂಬಂಧಿ ಎಂದು ಜಯಂತ ಶೆಟ್ಟಿ ಹೇಳಿಕೊಂಡಿದ್ದಾರೆ.
ಜಯಂತ ಶೆಟ್ಟಿ ದೂರು ನೀಡಿದ ಮರುದಿನವೇ 5 ಮಂದಿ ಸಾಕ್ಷಿಗಳು ತಾವು ಶವ ಹೂತಿರುವುದನ್ನು ನೋಡಿರುವುದಾಗಿ ಎಸ್‌ಐಟಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಯೂಟ್ಯೂಬರ್‌ಗಳ ಮೇಲೆ ಹಲ್ಲೆ

ಆಗಸ್ಟ್ 6ರಂದು ಸೌಜನ್ಯ ಮನೆಗೆ ತೆರಳುವ ಪಾಂಗಳ ಕ್ರಾಸ್ ಬಳಿ ನಾಲ್ವರು ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ, ನಂತರದ ಘಟನೆಗಳಿಗೆ ಸಂಬಂಧಪಟ್ಟಂತೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಒಟ್ಟು ಎಫ್‌ಐಆರ್‌ಗಳು ದಾಖಲಾಗಿವೆ.

ಮತಗಳ್ಳತನ| ಕಾನೂನು ಇಲಾಖೆ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...