Homeಕರ್ನಾಟಕಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

ಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

- Advertisement -
- Advertisement -

ಧರ್ಮಸ್ಥಳದಲ್ಲಿ 39 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಪದ್ಮಲತಾ ಅವರ ಕಳೇಬರವನ್ನು ಹೊರತೆಗೆದು ಮರು ತನಿಖೆ ಮಾಡಿ, ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಕೋರಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪದ್ಮಲತಾ ಅವರ ಅಕ್ಕ ಇಂದ್ರಾವತಿ ದೂರು ನೀಡಿದ್ದಾರೆ.

ಸೋಮವಾರ (ಆ.11) ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ ಇಂದ್ರಾವತಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?

“ನಾನು ಪ್ರಸ್ತುತ ನೆಲ್ಯಾಡಿ ನಿವಾಸಿಯಾಗಿದ್ದು, ದಿವಂಗತ ದೇವಾನಂದ ಅವರ ಮಗಳು. ಕೊಲೆಗೀಡಾದ ಪದ್ಮಲತಾಳ ಅಕ್ಕನಾಗಿರುತ್ತೇನೆ. 38 ವರ್ಷಗಳ ಹಿಂದೆ ಎಸ್‌ಡಿಎಂ ಕಾಲೇಜು ಉಜಿರೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನನ್ನ ತಂಗಿ ಪದ್ಮಲತಾ ದಿನಾಂಕ 22.12.1986ರಂದು ಉಜಿರೆ ಕಾಲೇಜಿಗೆ ಹೋದವಳು ಸಂಜೆ ಧರ್ಮಸ್ಥಳ ತನಕ ಬಂದು ಕಾಣೆಯಾಗಿರುತ್ತಾಳೆ. ಆಕೆಯ ಮೃತದೇಹ ದಿನಾಂಕ 17.02.1987 ರಂದು ನೆರಿಯ ಹೊಳೆಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಮ್ಮ ತಂದೆ ಮನೆಯು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಇತ್ತು” ಎಂದು ವಿವರಿಸಿದ್ದಾರೆ.

ಮುಂದುವರಿದು, “ನನ್ನ ತಂಗಿ ಅಪಹರಣ, ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಕಾರಣ, ಆಕೆಯ ಅಸಹಜ ಸಾವಿಗೆ ಕಾರಣರಾದ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಆಗ್ರಹಿಸಿ ಸಿಪಿಐಎಂ ಮುಖಂಡರೂ ಆಗಿದ್ದ ನನ್ನ ತಂದೆ ದಿವಂಗತ ದೇವಾನಂದ ಅವರು ಸಿಪಿಐಎಂ ನೇತೃತ್ವದಲ್ಲಿ ಹಲವಾರು ಹೋರಾಟಗಳನ್ನು ರೂಪಿಸಿದ್ದರು. ಹೋರಾಟಕ್ಕೆ ಮಣಿದ ಸರ್ಕಾರ ಕೊನೆಗೆ ಪ್ರಕರಣದ ತನಿಖೆ ನಡೆಸಲು ಸಿಓಡಿ ತನಿಖೆಗೆ ಆದೇಶಿಸಿತು. ವಿಧಾನ ಸಭೆಯಲ್ಲಿ ಚರ್ಚೆ ಆಗಿರುವುದು ಕೂಡಾ ವಿಧಾನಸಭಾ ದಾಖಲೆಯಲ್ಲಿ ಇರಬೇಕು. ಅಂದು ಸಚಿವರಾಗಿದ್ದ ರಾಚಯ್ಯ ಅವರೂ ಧರ್ಮಸ್ಥಳ ಗ್ರಾಮದ ಬೊಳಿಯಾರಲ್ಲಿರುವ ನಮ್ಮ ಮನೆಗೆ ಬಂದು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆದರೆ ಕೊನೆಗೆ ತನಿಖೆಯು ಪತ್ತೆಯಾಗದ ಪ್ರಕರಣ ಎಂದು ವರದಿ ನೀಡಿ ನಮಗೆ ನ್ಯಾಯ ಸಿಗದಂತಾಗಿತ್ತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅದು ಒಂದು ಯೋಜಿತ ಅಪಹರಣ, ಅತ್ಯಾಚಾರ, ಕೊಲೆ ಎಂಬ ನಮ್ಮ ಅನುಮಾನದಂತೆ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ನನ್ನ ತಂಗಿಯ ಕಳೆಬರಹವನ್ನು ದಹನ ಮಾಡದೆ ಹೂತಿಟ್ಟಿದ್ದೇವೆ. ಅದನ್ನು ತೆಗೆದು ತನಿಖೆ ನಡೆಸಿದರೆ ಕೊಲೆಯಾದ ಖಚಿತತೆ ಸಿಗಲಿದೆ ಹಾಗೂ ನನಗೆ ತಿಳಿದ ಸಾಕ್ಷಿನುಡಿಯಲು ನಾನು ಸಿದ್ಧಳಿದ್ದೇನೆ. ಆದ್ದರಿಂದ ನನ್ನ ತಂಗಿಯ ಪ್ರಕರಣವನ್ನು ರೀ-ಓಪನ್ ಮಾಡಿ, ಹೂತಿಟ್ಟ ಕಳೆಬರವನ್ನು ತೆಗೆದು ತನಿಖೆ ನಡೆಸಿ ತಂಗಿಯ ಸಾವಿಗೆ ನ್ಯಾಯ ಒದಗಿಸಬೇಕಾಗಿ ಹಾಗೂ ಅಪರಾಧಿಗಳ ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ವಿನಂತಿ ಮಾಡುತ್ತೇನೆ” ಎಂದಿದ್ದಾರೆ.

39 ವರ್ಷಗಳ ಹಿಂದೆ ಕೊಲೆಯಾದ ಪದ್ಮಲತಾ

ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಾವತಿ, “ನನ್ನ ತಂಗಿ ಕೊಲೆಯಾಗಿ 39 ವರ್ಷಗಳು ಕಳೆಯಿತು. ಇದುವರೆಗೆ ನಮಗೆ ನ್ಯಾಯ ಸಿಕ್ಕಿಲ್ಲ. ಕೊಲೆಗಾರರು ಯಾರು ಅಂತ ಪತ್ತೆಯಾಗಿಲ್ಲ. ಈಗ ಎಸ್‌ಐಟಿ ತನಿಖೆ ನಡೆಯುತ್ತಿದೆ. ಅವರು ಪದ್ಮಲತಾ ಕೊಲೆಗಾರರನ್ನೂ ಪತ್ತೆ ಹಚ್ಚಬಹುದು ಎಂಬ ನಿರೀಕ್ಷೆಯಿಂದ ದೂರು ಕೊಡಲು ಬಂದಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಪದ್ಮಲತಾ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ‘ಪತ್ತೆ ಹಚ್ಚಲಾಗದ ಪ್ರಕರಣ’ ಎಂದು ವರದಿ ಕೊಟ್ಟಿತ್ತು. ಈಗ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನಮಗೆ ನ್ಯಾಯ ಸಿಗಬಹುದು ಎಂಬ ಭರವಸೆಯಲ್ಲಿ ದೂರು ಕೊಟ್ಟಿದ್ದೇವೆ ಎಂದಿದ್ದಾರೆ.

ಪದ್ಮಲತಾ ಕೊಲೆಗಾರರು ಯಾರು ಎಂದು ಗೊತ್ತಾಗಬೇಕು. ಅವರಿಗೆ ಸರಿಯಾಗಿ ಶಿಕ್ಷೆಯಾಗಬೇಕು ಎಂದು ಇಂದ್ರಾವತಿ ಆಗ್ರಹಿಸಿದ್ದಾರೆ.

ಸಿಪಿಐ(ಎಂ) ಪಕ್ಷದ ತಾಲೂಕು ಸಮಿತಿ ಸದಸ್ಯ ಮಾತನಾಡಿ, “ದೇವಾನಂದರ ಮಗಳು ಪದ್ಮಲತಾ ಡಿಸೆಂಬರ್ 22, 1986ರಂದು ಕಾಲೇಜಿಗೆ ತೆರಳಿದವಳು ವಾಪಸ್ ಧರ್ಮಸ್ಥಳಕ್ಕೆ ಬಸ್‌ನಲ್ಲಿ ಬಂದಿರುವುದನ್ನು ಆಕೆಯ ಸಹಪಾಠಿಗಳು ನೋಡಿದ್ದರು. ಆಮೇಲೆ ಪದ್ಮಲತಾ ಕಣ್ಮರೆಯಾಗಿದ್ದಳು. ಫೆಬ್ರವರಿ 17, 1987ರಂದು ಕೊಳೆತ ಸ್ಥಿತಿಯಲ್ಲಿ ನೆರಿಯ ಹೊಳೆಯ ಸಮೀಪ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯ ವಸ್ತ್ರ ಮತ್ತು ಕೈಗೆ ಕಟ್ಟಿದ್ದ ವಾಚ್‌ನಿಂದ ಅದು ಪದ್ಮಲತಾ ಮೃತದೇಹ ಎಂದು ನಾವು ಗುರುತು ಹಿಡಿದಿದ್ದೆವು ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದರೂ ಸರಿಯಾದ ತನಿಖೆ ನಡೆದಿರಲಿಲ್ಲ. ಸಿಐಡಿ ಪತ್ತೆಯಾಗದ ಪ್ರಕರಣ ಎಂದು ಹಿಂಬರಹ ಕೊಟ್ಟಿತ್ತು. ಸಿಐಡಿ ಅಪರಾಧಿಗಳನ್ನು ಪತ್ತೆ ಹಚ್ಚುವ ಕೆಲಸ ಮಾಡಿರಲಿಲ್ಲ. ನಾವು ಅವತ್ತು ಪದ್ಮಲತಾಳ ಶವ ಸುಟ್ಟಿರಲಿಲ್ಲ. ಅಗತ್ಯ ಬಂದರೆ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಬಹುದು ಎಂದು ಮುಂದಾಲೋಚನೆಯಿಂದ ಹಾಗೆ ಮಾಡಿದ್ದೆವು. ಈಗ ಮತ್ತೆ ಎಸ್‌ಐಟಿ ರಚನೆಯಾಗಿದೆ. ಹಾಗಾಗಿ ಮತ್ತೊಮ್ಮೆ ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...