Homeಕರ್ನಾಟಕಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

ಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

- Advertisement -
- Advertisement -

ಧರ್ಮಸ್ಥಳದಲ್ಲಿ 39 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಪದ್ಮಲತಾ ಅವರ ಕಳೇಬರವನ್ನು ಹೊರತೆಗೆದು ಮರು ತನಿಖೆ ಮಾಡಿ, ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಕೋರಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪದ್ಮಲತಾ ಅವರ ಅಕ್ಕ ಇಂದ್ರಾವತಿ ದೂರು ನೀಡಿದ್ದಾರೆ.

ಸೋಮವಾರ (ಆ.11) ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ ಇಂದ್ರಾವತಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?

“ನಾನು ಪ್ರಸ್ತುತ ನೆಲ್ಯಾಡಿ ನಿವಾಸಿಯಾಗಿದ್ದು, ದಿವಂಗತ ದೇವಾನಂದ ಅವರ ಮಗಳು. ಕೊಲೆಗೀಡಾದ ಪದ್ಮಲತಾಳ ಅಕ್ಕನಾಗಿರುತ್ತೇನೆ. 38 ವರ್ಷಗಳ ಹಿಂದೆ ಎಸ್‌ಡಿಎಂ ಕಾಲೇಜು ಉಜಿರೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನನ್ನ ತಂಗಿ ಪದ್ಮಲತಾ ದಿನಾಂಕ 22.12.1986ರಂದು ಉಜಿರೆ ಕಾಲೇಜಿಗೆ ಹೋದವಳು ಸಂಜೆ ಧರ್ಮಸ್ಥಳ ತನಕ ಬಂದು ಕಾಣೆಯಾಗಿರುತ್ತಾಳೆ. ಆಕೆಯ ಮೃತದೇಹ ದಿನಾಂಕ 17.02.1987 ರಂದು ನೆರಿಯ ಹೊಳೆಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಮ್ಮ ತಂದೆ ಮನೆಯು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಇತ್ತು” ಎಂದು ವಿವರಿಸಿದ್ದಾರೆ.

ಮುಂದುವರಿದು, “ನನ್ನ ತಂಗಿ ಅಪಹರಣ, ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಕಾರಣ, ಆಕೆಯ ಅಸಹಜ ಸಾವಿಗೆ ಕಾರಣರಾದ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಆಗ್ರಹಿಸಿ ಸಿಪಿಐಎಂ ಮುಖಂಡರೂ ಆಗಿದ್ದ ನನ್ನ ತಂದೆ ದಿವಂಗತ ದೇವಾನಂದ ಅವರು ಸಿಪಿಐಎಂ ನೇತೃತ್ವದಲ್ಲಿ ಹಲವಾರು ಹೋರಾಟಗಳನ್ನು ರೂಪಿಸಿದ್ದರು. ಹೋರಾಟಕ್ಕೆ ಮಣಿದ ಸರ್ಕಾರ ಕೊನೆಗೆ ಪ್ರಕರಣದ ತನಿಖೆ ನಡೆಸಲು ಸಿಓಡಿ ತನಿಖೆಗೆ ಆದೇಶಿಸಿತು. ವಿಧಾನ ಸಭೆಯಲ್ಲಿ ಚರ್ಚೆ ಆಗಿರುವುದು ಕೂಡಾ ವಿಧಾನಸಭಾ ದಾಖಲೆಯಲ್ಲಿ ಇರಬೇಕು. ಅಂದು ಸಚಿವರಾಗಿದ್ದ ರಾಚಯ್ಯ ಅವರೂ ಧರ್ಮಸ್ಥಳ ಗ್ರಾಮದ ಬೊಳಿಯಾರಲ್ಲಿರುವ ನಮ್ಮ ಮನೆಗೆ ಬಂದು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆದರೆ ಕೊನೆಗೆ ತನಿಖೆಯು ಪತ್ತೆಯಾಗದ ಪ್ರಕರಣ ಎಂದು ವರದಿ ನೀಡಿ ನಮಗೆ ನ್ಯಾಯ ಸಿಗದಂತಾಗಿತ್ತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅದು ಒಂದು ಯೋಜಿತ ಅಪಹರಣ, ಅತ್ಯಾಚಾರ, ಕೊಲೆ ಎಂಬ ನಮ್ಮ ಅನುಮಾನದಂತೆ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ನನ್ನ ತಂಗಿಯ ಕಳೆಬರಹವನ್ನು ದಹನ ಮಾಡದೆ ಹೂತಿಟ್ಟಿದ್ದೇವೆ. ಅದನ್ನು ತೆಗೆದು ತನಿಖೆ ನಡೆಸಿದರೆ ಕೊಲೆಯಾದ ಖಚಿತತೆ ಸಿಗಲಿದೆ ಹಾಗೂ ನನಗೆ ತಿಳಿದ ಸಾಕ್ಷಿನುಡಿಯಲು ನಾನು ಸಿದ್ಧಳಿದ್ದೇನೆ. ಆದ್ದರಿಂದ ನನ್ನ ತಂಗಿಯ ಪ್ರಕರಣವನ್ನು ರೀ-ಓಪನ್ ಮಾಡಿ, ಹೂತಿಟ್ಟ ಕಳೆಬರವನ್ನು ತೆಗೆದು ತನಿಖೆ ನಡೆಸಿ ತಂಗಿಯ ಸಾವಿಗೆ ನ್ಯಾಯ ಒದಗಿಸಬೇಕಾಗಿ ಹಾಗೂ ಅಪರಾಧಿಗಳ ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ವಿನಂತಿ ಮಾಡುತ್ತೇನೆ” ಎಂದಿದ್ದಾರೆ.

39 ವರ್ಷಗಳ ಹಿಂದೆ ಕೊಲೆಯಾದ ಪದ್ಮಲತಾ

ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಾವತಿ, “ನನ್ನ ತಂಗಿ ಕೊಲೆಯಾಗಿ 39 ವರ್ಷಗಳು ಕಳೆಯಿತು. ಇದುವರೆಗೆ ನಮಗೆ ನ್ಯಾಯ ಸಿಕ್ಕಿಲ್ಲ. ಕೊಲೆಗಾರರು ಯಾರು ಅಂತ ಪತ್ತೆಯಾಗಿಲ್ಲ. ಈಗ ಎಸ್‌ಐಟಿ ತನಿಖೆ ನಡೆಯುತ್ತಿದೆ. ಅವರು ಪದ್ಮಲತಾ ಕೊಲೆಗಾರರನ್ನೂ ಪತ್ತೆ ಹಚ್ಚಬಹುದು ಎಂಬ ನಿರೀಕ್ಷೆಯಿಂದ ದೂರು ಕೊಡಲು ಬಂದಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಪದ್ಮಲತಾ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ‘ಪತ್ತೆ ಹಚ್ಚಲಾಗದ ಪ್ರಕರಣ’ ಎಂದು ವರದಿ ಕೊಟ್ಟಿತ್ತು. ಈಗ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನಮಗೆ ನ್ಯಾಯ ಸಿಗಬಹುದು ಎಂಬ ಭರವಸೆಯಲ್ಲಿ ದೂರು ಕೊಟ್ಟಿದ್ದೇವೆ ಎಂದಿದ್ದಾರೆ.

ಪದ್ಮಲತಾ ಕೊಲೆಗಾರರು ಯಾರು ಎಂದು ಗೊತ್ತಾಗಬೇಕು. ಅವರಿಗೆ ಸರಿಯಾಗಿ ಶಿಕ್ಷೆಯಾಗಬೇಕು ಎಂದು ಇಂದ್ರಾವತಿ ಆಗ್ರಹಿಸಿದ್ದಾರೆ.

ಸಿಪಿಐ(ಎಂ) ಪಕ್ಷದ ತಾಲೂಕು ಸಮಿತಿ ಸದಸ್ಯ ಮಾತನಾಡಿ, “ದೇವಾನಂದರ ಮಗಳು ಪದ್ಮಲತಾ ಡಿಸೆಂಬರ್ 22, 1986ರಂದು ಕಾಲೇಜಿಗೆ ತೆರಳಿದವಳು ವಾಪಸ್ ಧರ್ಮಸ್ಥಳಕ್ಕೆ ಬಸ್‌ನಲ್ಲಿ ಬಂದಿರುವುದನ್ನು ಆಕೆಯ ಸಹಪಾಠಿಗಳು ನೋಡಿದ್ದರು. ಆಮೇಲೆ ಪದ್ಮಲತಾ ಕಣ್ಮರೆಯಾಗಿದ್ದಳು. ಫೆಬ್ರವರಿ 17, 1987ರಂದು ಕೊಳೆತ ಸ್ಥಿತಿಯಲ್ಲಿ ನೆರಿಯ ಹೊಳೆಯ ಸಮೀಪ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯ ವಸ್ತ್ರ ಮತ್ತು ಕೈಗೆ ಕಟ್ಟಿದ್ದ ವಾಚ್‌ನಿಂದ ಅದು ಪದ್ಮಲತಾ ಮೃತದೇಹ ಎಂದು ನಾವು ಗುರುತು ಹಿಡಿದಿದ್ದೆವು ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದರೂ ಸರಿಯಾದ ತನಿಖೆ ನಡೆದಿರಲಿಲ್ಲ. ಸಿಐಡಿ ಪತ್ತೆಯಾಗದ ಪ್ರಕರಣ ಎಂದು ಹಿಂಬರಹ ಕೊಟ್ಟಿತ್ತು. ಸಿಐಡಿ ಅಪರಾಧಿಗಳನ್ನು ಪತ್ತೆ ಹಚ್ಚುವ ಕೆಲಸ ಮಾಡಿರಲಿಲ್ಲ. ನಾವು ಅವತ್ತು ಪದ್ಮಲತಾಳ ಶವ ಸುಟ್ಟಿರಲಿಲ್ಲ. ಅಗತ್ಯ ಬಂದರೆ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಬಹುದು ಎಂದು ಮುಂದಾಲೋಚನೆಯಿಂದ ಹಾಗೆ ಮಾಡಿದ್ದೆವು. ಈಗ ಮತ್ತೆ ಎಸ್‌ಐಟಿ ರಚನೆಯಾಗಿದೆ. ಹಾಗಾಗಿ ಮತ್ತೊಮ್ಮೆ ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...