Homeಕರ್ನಾಟಕಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

ಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

- Advertisement -
- Advertisement -

ಧರ್ಮಸ್ಥಳದಲ್ಲಿ 39 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಪದ್ಮಲತಾ ಅವರ ಕಳೇಬರವನ್ನು ಹೊರತೆಗೆದು ಮರು ತನಿಖೆ ಮಾಡಿ, ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಕೋರಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪದ್ಮಲತಾ ಅವರ ಅಕ್ಕ ಇಂದ್ರಾವತಿ ದೂರು ನೀಡಿದ್ದಾರೆ.

ಸೋಮವಾರ (ಆ.11) ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ ಇಂದ್ರಾವತಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?

“ನಾನು ಪ್ರಸ್ತುತ ನೆಲ್ಯಾಡಿ ನಿವಾಸಿಯಾಗಿದ್ದು, ದಿವಂಗತ ದೇವಾನಂದ ಅವರ ಮಗಳು. ಕೊಲೆಗೀಡಾದ ಪದ್ಮಲತಾಳ ಅಕ್ಕನಾಗಿರುತ್ತೇನೆ. 38 ವರ್ಷಗಳ ಹಿಂದೆ ಎಸ್‌ಡಿಎಂ ಕಾಲೇಜು ಉಜಿರೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನನ್ನ ತಂಗಿ ಪದ್ಮಲತಾ ದಿನಾಂಕ 22.12.1986ರಂದು ಉಜಿರೆ ಕಾಲೇಜಿಗೆ ಹೋದವಳು ಸಂಜೆ ಧರ್ಮಸ್ಥಳ ತನಕ ಬಂದು ಕಾಣೆಯಾಗಿರುತ್ತಾಳೆ. ಆಕೆಯ ಮೃತದೇಹ ದಿನಾಂಕ 17.02.1987 ರಂದು ನೆರಿಯ ಹೊಳೆಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಮ್ಮ ತಂದೆ ಮನೆಯು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಇತ್ತು” ಎಂದು ವಿವರಿಸಿದ್ದಾರೆ.

ಮುಂದುವರಿದು, “ನನ್ನ ತಂಗಿ ಅಪಹರಣ, ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಕಾರಣ, ಆಕೆಯ ಅಸಹಜ ಸಾವಿಗೆ ಕಾರಣರಾದ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಆಗ್ರಹಿಸಿ ಸಿಪಿಐಎಂ ಮುಖಂಡರೂ ಆಗಿದ್ದ ನನ್ನ ತಂದೆ ದಿವಂಗತ ದೇವಾನಂದ ಅವರು ಸಿಪಿಐಎಂ ನೇತೃತ್ವದಲ್ಲಿ ಹಲವಾರು ಹೋರಾಟಗಳನ್ನು ರೂಪಿಸಿದ್ದರು. ಹೋರಾಟಕ್ಕೆ ಮಣಿದ ಸರ್ಕಾರ ಕೊನೆಗೆ ಪ್ರಕರಣದ ತನಿಖೆ ನಡೆಸಲು ಸಿಓಡಿ ತನಿಖೆಗೆ ಆದೇಶಿಸಿತು. ವಿಧಾನ ಸಭೆಯಲ್ಲಿ ಚರ್ಚೆ ಆಗಿರುವುದು ಕೂಡಾ ವಿಧಾನಸಭಾ ದಾಖಲೆಯಲ್ಲಿ ಇರಬೇಕು. ಅಂದು ಸಚಿವರಾಗಿದ್ದ ರಾಚಯ್ಯ ಅವರೂ ಧರ್ಮಸ್ಥಳ ಗ್ರಾಮದ ಬೊಳಿಯಾರಲ್ಲಿರುವ ನಮ್ಮ ಮನೆಗೆ ಬಂದು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆದರೆ ಕೊನೆಗೆ ತನಿಖೆಯು ಪತ್ತೆಯಾಗದ ಪ್ರಕರಣ ಎಂದು ವರದಿ ನೀಡಿ ನಮಗೆ ನ್ಯಾಯ ಸಿಗದಂತಾಗಿತ್ತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅದು ಒಂದು ಯೋಜಿತ ಅಪಹರಣ, ಅತ್ಯಾಚಾರ, ಕೊಲೆ ಎಂಬ ನಮ್ಮ ಅನುಮಾನದಂತೆ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ನನ್ನ ತಂಗಿಯ ಕಳೆಬರಹವನ್ನು ದಹನ ಮಾಡದೆ ಹೂತಿಟ್ಟಿದ್ದೇವೆ. ಅದನ್ನು ತೆಗೆದು ತನಿಖೆ ನಡೆಸಿದರೆ ಕೊಲೆಯಾದ ಖಚಿತತೆ ಸಿಗಲಿದೆ ಹಾಗೂ ನನಗೆ ತಿಳಿದ ಸಾಕ್ಷಿನುಡಿಯಲು ನಾನು ಸಿದ್ಧಳಿದ್ದೇನೆ. ಆದ್ದರಿಂದ ನನ್ನ ತಂಗಿಯ ಪ್ರಕರಣವನ್ನು ರೀ-ಓಪನ್ ಮಾಡಿ, ಹೂತಿಟ್ಟ ಕಳೆಬರವನ್ನು ತೆಗೆದು ತನಿಖೆ ನಡೆಸಿ ತಂಗಿಯ ಸಾವಿಗೆ ನ್ಯಾಯ ಒದಗಿಸಬೇಕಾಗಿ ಹಾಗೂ ಅಪರಾಧಿಗಳ ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ವಿನಂತಿ ಮಾಡುತ್ತೇನೆ” ಎಂದಿದ್ದಾರೆ.

39 ವರ್ಷಗಳ ಹಿಂದೆ ಕೊಲೆಯಾದ ಪದ್ಮಲತಾ

ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಾವತಿ, “ನನ್ನ ತಂಗಿ ಕೊಲೆಯಾಗಿ 39 ವರ್ಷಗಳು ಕಳೆಯಿತು. ಇದುವರೆಗೆ ನಮಗೆ ನ್ಯಾಯ ಸಿಕ್ಕಿಲ್ಲ. ಕೊಲೆಗಾರರು ಯಾರು ಅಂತ ಪತ್ತೆಯಾಗಿಲ್ಲ. ಈಗ ಎಸ್‌ಐಟಿ ತನಿಖೆ ನಡೆಯುತ್ತಿದೆ. ಅವರು ಪದ್ಮಲತಾ ಕೊಲೆಗಾರರನ್ನೂ ಪತ್ತೆ ಹಚ್ಚಬಹುದು ಎಂಬ ನಿರೀಕ್ಷೆಯಿಂದ ದೂರು ಕೊಡಲು ಬಂದಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಪದ್ಮಲತಾ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ‘ಪತ್ತೆ ಹಚ್ಚಲಾಗದ ಪ್ರಕರಣ’ ಎಂದು ವರದಿ ಕೊಟ್ಟಿತ್ತು. ಈಗ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನಮಗೆ ನ್ಯಾಯ ಸಿಗಬಹುದು ಎಂಬ ಭರವಸೆಯಲ್ಲಿ ದೂರು ಕೊಟ್ಟಿದ್ದೇವೆ ಎಂದಿದ್ದಾರೆ.

ಪದ್ಮಲತಾ ಕೊಲೆಗಾರರು ಯಾರು ಎಂದು ಗೊತ್ತಾಗಬೇಕು. ಅವರಿಗೆ ಸರಿಯಾಗಿ ಶಿಕ್ಷೆಯಾಗಬೇಕು ಎಂದು ಇಂದ್ರಾವತಿ ಆಗ್ರಹಿಸಿದ್ದಾರೆ.

ಸಿಪಿಐ(ಎಂ) ಪಕ್ಷದ ತಾಲೂಕು ಸಮಿತಿ ಸದಸ್ಯ ಮಾತನಾಡಿ, “ದೇವಾನಂದರ ಮಗಳು ಪದ್ಮಲತಾ ಡಿಸೆಂಬರ್ 22, 1986ರಂದು ಕಾಲೇಜಿಗೆ ತೆರಳಿದವಳು ವಾಪಸ್ ಧರ್ಮಸ್ಥಳಕ್ಕೆ ಬಸ್‌ನಲ್ಲಿ ಬಂದಿರುವುದನ್ನು ಆಕೆಯ ಸಹಪಾಠಿಗಳು ನೋಡಿದ್ದರು. ಆಮೇಲೆ ಪದ್ಮಲತಾ ಕಣ್ಮರೆಯಾಗಿದ್ದಳು. ಫೆಬ್ರವರಿ 17, 1987ರಂದು ಕೊಳೆತ ಸ್ಥಿತಿಯಲ್ಲಿ ನೆರಿಯ ಹೊಳೆಯ ಸಮೀಪ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯ ವಸ್ತ್ರ ಮತ್ತು ಕೈಗೆ ಕಟ್ಟಿದ್ದ ವಾಚ್‌ನಿಂದ ಅದು ಪದ್ಮಲತಾ ಮೃತದೇಹ ಎಂದು ನಾವು ಗುರುತು ಹಿಡಿದಿದ್ದೆವು ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದರೂ ಸರಿಯಾದ ತನಿಖೆ ನಡೆದಿರಲಿಲ್ಲ. ಸಿಐಡಿ ಪತ್ತೆಯಾಗದ ಪ್ರಕರಣ ಎಂದು ಹಿಂಬರಹ ಕೊಟ್ಟಿತ್ತು. ಸಿಐಡಿ ಅಪರಾಧಿಗಳನ್ನು ಪತ್ತೆ ಹಚ್ಚುವ ಕೆಲಸ ಮಾಡಿರಲಿಲ್ಲ. ನಾವು ಅವತ್ತು ಪದ್ಮಲತಾಳ ಶವ ಸುಟ್ಟಿರಲಿಲ್ಲ. ಅಗತ್ಯ ಬಂದರೆ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಬಹುದು ಎಂದು ಮುಂದಾಲೋಚನೆಯಿಂದ ಹಾಗೆ ಮಾಡಿದ್ದೆವು. ಈಗ ಮತ್ತೆ ಎಸ್‌ಐಟಿ ರಚನೆಯಾಗಿದೆ. ಹಾಗಾಗಿ ಮತ್ತೊಮ್ಮೆ ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...