Homeಕರ್ನಾಟಕಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

ಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

- Advertisement -
- Advertisement -

ಧರ್ಮಸ್ಥಳದಲ್ಲಿ 39 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಪದ್ಮಲತಾ ಅವರ ಕಳೇಬರವನ್ನು ಹೊರತೆಗೆದು ಮರು ತನಿಖೆ ಮಾಡಿ, ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಕೋರಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪದ್ಮಲತಾ ಅವರ ಅಕ್ಕ ಇಂದ್ರಾವತಿ ದೂರು ನೀಡಿದ್ದಾರೆ.

ಸೋಮವಾರ (ಆ.11) ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ ಇಂದ್ರಾವತಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?

“ನಾನು ಪ್ರಸ್ತುತ ನೆಲ್ಯಾಡಿ ನಿವಾಸಿಯಾಗಿದ್ದು, ದಿವಂಗತ ದೇವಾನಂದ ಅವರ ಮಗಳು. ಕೊಲೆಗೀಡಾದ ಪದ್ಮಲತಾಳ ಅಕ್ಕನಾಗಿರುತ್ತೇನೆ. 38 ವರ್ಷಗಳ ಹಿಂದೆ ಎಸ್‌ಡಿಎಂ ಕಾಲೇಜು ಉಜಿರೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನನ್ನ ತಂಗಿ ಪದ್ಮಲತಾ ದಿನಾಂಕ 22.12.1986ರಂದು ಉಜಿರೆ ಕಾಲೇಜಿಗೆ ಹೋದವಳು ಸಂಜೆ ಧರ್ಮಸ್ಥಳ ತನಕ ಬಂದು ಕಾಣೆಯಾಗಿರುತ್ತಾಳೆ. ಆಕೆಯ ಮೃತದೇಹ ದಿನಾಂಕ 17.02.1987 ರಂದು ನೆರಿಯ ಹೊಳೆಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಮ್ಮ ತಂದೆ ಮನೆಯು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಇತ್ತು” ಎಂದು ವಿವರಿಸಿದ್ದಾರೆ.

ಮುಂದುವರಿದು, “ನನ್ನ ತಂಗಿ ಅಪಹರಣ, ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಕಾರಣ, ಆಕೆಯ ಅಸಹಜ ಸಾವಿಗೆ ಕಾರಣರಾದ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಆಗ್ರಹಿಸಿ ಸಿಪಿಐಎಂ ಮುಖಂಡರೂ ಆಗಿದ್ದ ನನ್ನ ತಂದೆ ದಿವಂಗತ ದೇವಾನಂದ ಅವರು ಸಿಪಿಐಎಂ ನೇತೃತ್ವದಲ್ಲಿ ಹಲವಾರು ಹೋರಾಟಗಳನ್ನು ರೂಪಿಸಿದ್ದರು. ಹೋರಾಟಕ್ಕೆ ಮಣಿದ ಸರ್ಕಾರ ಕೊನೆಗೆ ಪ್ರಕರಣದ ತನಿಖೆ ನಡೆಸಲು ಸಿಓಡಿ ತನಿಖೆಗೆ ಆದೇಶಿಸಿತು. ವಿಧಾನ ಸಭೆಯಲ್ಲಿ ಚರ್ಚೆ ಆಗಿರುವುದು ಕೂಡಾ ವಿಧಾನಸಭಾ ದಾಖಲೆಯಲ್ಲಿ ಇರಬೇಕು. ಅಂದು ಸಚಿವರಾಗಿದ್ದ ರಾಚಯ್ಯ ಅವರೂ ಧರ್ಮಸ್ಥಳ ಗ್ರಾಮದ ಬೊಳಿಯಾರಲ್ಲಿರುವ ನಮ್ಮ ಮನೆಗೆ ಬಂದು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆದರೆ ಕೊನೆಗೆ ತನಿಖೆಯು ಪತ್ತೆಯಾಗದ ಪ್ರಕರಣ ಎಂದು ವರದಿ ನೀಡಿ ನಮಗೆ ನ್ಯಾಯ ಸಿಗದಂತಾಗಿತ್ತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅದು ಒಂದು ಯೋಜಿತ ಅಪಹರಣ, ಅತ್ಯಾಚಾರ, ಕೊಲೆ ಎಂಬ ನಮ್ಮ ಅನುಮಾನದಂತೆ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ನನ್ನ ತಂಗಿಯ ಕಳೆಬರಹವನ್ನು ದಹನ ಮಾಡದೆ ಹೂತಿಟ್ಟಿದ್ದೇವೆ. ಅದನ್ನು ತೆಗೆದು ತನಿಖೆ ನಡೆಸಿದರೆ ಕೊಲೆಯಾದ ಖಚಿತತೆ ಸಿಗಲಿದೆ ಹಾಗೂ ನನಗೆ ತಿಳಿದ ಸಾಕ್ಷಿನುಡಿಯಲು ನಾನು ಸಿದ್ಧಳಿದ್ದೇನೆ. ಆದ್ದರಿಂದ ನನ್ನ ತಂಗಿಯ ಪ್ರಕರಣವನ್ನು ರೀ-ಓಪನ್ ಮಾಡಿ, ಹೂತಿಟ್ಟ ಕಳೆಬರವನ್ನು ತೆಗೆದು ತನಿಖೆ ನಡೆಸಿ ತಂಗಿಯ ಸಾವಿಗೆ ನ್ಯಾಯ ಒದಗಿಸಬೇಕಾಗಿ ಹಾಗೂ ಅಪರಾಧಿಗಳ ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ವಿನಂತಿ ಮಾಡುತ್ತೇನೆ” ಎಂದಿದ್ದಾರೆ.

39 ವರ್ಷಗಳ ಹಿಂದೆ ಕೊಲೆಯಾದ ಪದ್ಮಲತಾ

ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಾವತಿ, “ನನ್ನ ತಂಗಿ ಕೊಲೆಯಾಗಿ 39 ವರ್ಷಗಳು ಕಳೆಯಿತು. ಇದುವರೆಗೆ ನಮಗೆ ನ್ಯಾಯ ಸಿಕ್ಕಿಲ್ಲ. ಕೊಲೆಗಾರರು ಯಾರು ಅಂತ ಪತ್ತೆಯಾಗಿಲ್ಲ. ಈಗ ಎಸ್‌ಐಟಿ ತನಿಖೆ ನಡೆಯುತ್ತಿದೆ. ಅವರು ಪದ್ಮಲತಾ ಕೊಲೆಗಾರರನ್ನೂ ಪತ್ತೆ ಹಚ್ಚಬಹುದು ಎಂಬ ನಿರೀಕ್ಷೆಯಿಂದ ದೂರು ಕೊಡಲು ಬಂದಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಪದ್ಮಲತಾ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ‘ಪತ್ತೆ ಹಚ್ಚಲಾಗದ ಪ್ರಕರಣ’ ಎಂದು ವರದಿ ಕೊಟ್ಟಿತ್ತು. ಈಗ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನಮಗೆ ನ್ಯಾಯ ಸಿಗಬಹುದು ಎಂಬ ಭರವಸೆಯಲ್ಲಿ ದೂರು ಕೊಟ್ಟಿದ್ದೇವೆ ಎಂದಿದ್ದಾರೆ.

ಪದ್ಮಲತಾ ಕೊಲೆಗಾರರು ಯಾರು ಎಂದು ಗೊತ್ತಾಗಬೇಕು. ಅವರಿಗೆ ಸರಿಯಾಗಿ ಶಿಕ್ಷೆಯಾಗಬೇಕು ಎಂದು ಇಂದ್ರಾವತಿ ಆಗ್ರಹಿಸಿದ್ದಾರೆ.

ಸಿಪಿಐ(ಎಂ) ಪಕ್ಷದ ತಾಲೂಕು ಸಮಿತಿ ಸದಸ್ಯ ಮಾತನಾಡಿ, “ದೇವಾನಂದರ ಮಗಳು ಪದ್ಮಲತಾ ಡಿಸೆಂಬರ್ 22, 1986ರಂದು ಕಾಲೇಜಿಗೆ ತೆರಳಿದವಳು ವಾಪಸ್ ಧರ್ಮಸ್ಥಳಕ್ಕೆ ಬಸ್‌ನಲ್ಲಿ ಬಂದಿರುವುದನ್ನು ಆಕೆಯ ಸಹಪಾಠಿಗಳು ನೋಡಿದ್ದರು. ಆಮೇಲೆ ಪದ್ಮಲತಾ ಕಣ್ಮರೆಯಾಗಿದ್ದಳು. ಫೆಬ್ರವರಿ 17, 1987ರಂದು ಕೊಳೆತ ಸ್ಥಿತಿಯಲ್ಲಿ ನೆರಿಯ ಹೊಳೆಯ ಸಮೀಪ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯ ವಸ್ತ್ರ ಮತ್ತು ಕೈಗೆ ಕಟ್ಟಿದ್ದ ವಾಚ್‌ನಿಂದ ಅದು ಪದ್ಮಲತಾ ಮೃತದೇಹ ಎಂದು ನಾವು ಗುರುತು ಹಿಡಿದಿದ್ದೆವು ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದರೂ ಸರಿಯಾದ ತನಿಖೆ ನಡೆದಿರಲಿಲ್ಲ. ಸಿಐಡಿ ಪತ್ತೆಯಾಗದ ಪ್ರಕರಣ ಎಂದು ಹಿಂಬರಹ ಕೊಟ್ಟಿತ್ತು. ಸಿಐಡಿ ಅಪರಾಧಿಗಳನ್ನು ಪತ್ತೆ ಹಚ್ಚುವ ಕೆಲಸ ಮಾಡಿರಲಿಲ್ಲ. ನಾವು ಅವತ್ತು ಪದ್ಮಲತಾಳ ಶವ ಸುಟ್ಟಿರಲಿಲ್ಲ. ಅಗತ್ಯ ಬಂದರೆ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಬಹುದು ಎಂದು ಮುಂದಾಲೋಚನೆಯಿಂದ ಹಾಗೆ ಮಾಡಿದ್ದೆವು. ಈಗ ಮತ್ತೆ ಎಸ್‌ಐಟಿ ರಚನೆಯಾಗಿದೆ. ಹಾಗಾಗಿ ಮತ್ತೊಮ್ಮೆ ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...