Homeಕರ್ನಾಟಕಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

ಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

- Advertisement -
- Advertisement -

ಧರ್ಮಸ್ಥಳದಲ್ಲಿ 39 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಪದ್ಮಲತಾ ಅವರ ಕಳೇಬರವನ್ನು ಹೊರತೆಗೆದು ಮರು ತನಿಖೆ ಮಾಡಿ, ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಕೋರಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪದ್ಮಲತಾ ಅವರ ಅಕ್ಕ ಇಂದ್ರಾವತಿ ದೂರು ನೀಡಿದ್ದಾರೆ.

ಸೋಮವಾರ (ಆ.11) ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ ಇಂದ್ರಾವತಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?

“ನಾನು ಪ್ರಸ್ತುತ ನೆಲ್ಯಾಡಿ ನಿವಾಸಿಯಾಗಿದ್ದು, ದಿವಂಗತ ದೇವಾನಂದ ಅವರ ಮಗಳು. ಕೊಲೆಗೀಡಾದ ಪದ್ಮಲತಾಳ ಅಕ್ಕನಾಗಿರುತ್ತೇನೆ. 38 ವರ್ಷಗಳ ಹಿಂದೆ ಎಸ್‌ಡಿಎಂ ಕಾಲೇಜು ಉಜಿರೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನನ್ನ ತಂಗಿ ಪದ್ಮಲತಾ ದಿನಾಂಕ 22.12.1986ರಂದು ಉಜಿರೆ ಕಾಲೇಜಿಗೆ ಹೋದವಳು ಸಂಜೆ ಧರ್ಮಸ್ಥಳ ತನಕ ಬಂದು ಕಾಣೆಯಾಗಿರುತ್ತಾಳೆ. ಆಕೆಯ ಮೃತದೇಹ ದಿನಾಂಕ 17.02.1987 ರಂದು ನೆರಿಯ ಹೊಳೆಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಮ್ಮ ತಂದೆ ಮನೆಯು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಇತ್ತು” ಎಂದು ವಿವರಿಸಿದ್ದಾರೆ.

ಮುಂದುವರಿದು, “ನನ್ನ ತಂಗಿ ಅಪಹರಣ, ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಕಾರಣ, ಆಕೆಯ ಅಸಹಜ ಸಾವಿಗೆ ಕಾರಣರಾದ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಆಗ್ರಹಿಸಿ ಸಿಪಿಐಎಂ ಮುಖಂಡರೂ ಆಗಿದ್ದ ನನ್ನ ತಂದೆ ದಿವಂಗತ ದೇವಾನಂದ ಅವರು ಸಿಪಿಐಎಂ ನೇತೃತ್ವದಲ್ಲಿ ಹಲವಾರು ಹೋರಾಟಗಳನ್ನು ರೂಪಿಸಿದ್ದರು. ಹೋರಾಟಕ್ಕೆ ಮಣಿದ ಸರ್ಕಾರ ಕೊನೆಗೆ ಪ್ರಕರಣದ ತನಿಖೆ ನಡೆಸಲು ಸಿಓಡಿ ತನಿಖೆಗೆ ಆದೇಶಿಸಿತು. ವಿಧಾನ ಸಭೆಯಲ್ಲಿ ಚರ್ಚೆ ಆಗಿರುವುದು ಕೂಡಾ ವಿಧಾನಸಭಾ ದಾಖಲೆಯಲ್ಲಿ ಇರಬೇಕು. ಅಂದು ಸಚಿವರಾಗಿದ್ದ ರಾಚಯ್ಯ ಅವರೂ ಧರ್ಮಸ್ಥಳ ಗ್ರಾಮದ ಬೊಳಿಯಾರಲ್ಲಿರುವ ನಮ್ಮ ಮನೆಗೆ ಬಂದು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆದರೆ ಕೊನೆಗೆ ತನಿಖೆಯು ಪತ್ತೆಯಾಗದ ಪ್ರಕರಣ ಎಂದು ವರದಿ ನೀಡಿ ನಮಗೆ ನ್ಯಾಯ ಸಿಗದಂತಾಗಿತ್ತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅದು ಒಂದು ಯೋಜಿತ ಅಪಹರಣ, ಅತ್ಯಾಚಾರ, ಕೊಲೆ ಎಂಬ ನಮ್ಮ ಅನುಮಾನದಂತೆ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ನನ್ನ ತಂಗಿಯ ಕಳೆಬರಹವನ್ನು ದಹನ ಮಾಡದೆ ಹೂತಿಟ್ಟಿದ್ದೇವೆ. ಅದನ್ನು ತೆಗೆದು ತನಿಖೆ ನಡೆಸಿದರೆ ಕೊಲೆಯಾದ ಖಚಿತತೆ ಸಿಗಲಿದೆ ಹಾಗೂ ನನಗೆ ತಿಳಿದ ಸಾಕ್ಷಿನುಡಿಯಲು ನಾನು ಸಿದ್ಧಳಿದ್ದೇನೆ. ಆದ್ದರಿಂದ ನನ್ನ ತಂಗಿಯ ಪ್ರಕರಣವನ್ನು ರೀ-ಓಪನ್ ಮಾಡಿ, ಹೂತಿಟ್ಟ ಕಳೆಬರವನ್ನು ತೆಗೆದು ತನಿಖೆ ನಡೆಸಿ ತಂಗಿಯ ಸಾವಿಗೆ ನ್ಯಾಯ ಒದಗಿಸಬೇಕಾಗಿ ಹಾಗೂ ಅಪರಾಧಿಗಳ ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ವಿನಂತಿ ಮಾಡುತ್ತೇನೆ” ಎಂದಿದ್ದಾರೆ.

39 ವರ್ಷಗಳ ಹಿಂದೆ ಕೊಲೆಯಾದ ಪದ್ಮಲತಾ

ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಾವತಿ, “ನನ್ನ ತಂಗಿ ಕೊಲೆಯಾಗಿ 39 ವರ್ಷಗಳು ಕಳೆಯಿತು. ಇದುವರೆಗೆ ನಮಗೆ ನ್ಯಾಯ ಸಿಕ್ಕಿಲ್ಲ. ಕೊಲೆಗಾರರು ಯಾರು ಅಂತ ಪತ್ತೆಯಾಗಿಲ್ಲ. ಈಗ ಎಸ್‌ಐಟಿ ತನಿಖೆ ನಡೆಯುತ್ತಿದೆ. ಅವರು ಪದ್ಮಲತಾ ಕೊಲೆಗಾರರನ್ನೂ ಪತ್ತೆ ಹಚ್ಚಬಹುದು ಎಂಬ ನಿರೀಕ್ಷೆಯಿಂದ ದೂರು ಕೊಡಲು ಬಂದಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಪದ್ಮಲತಾ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ‘ಪತ್ತೆ ಹಚ್ಚಲಾಗದ ಪ್ರಕರಣ’ ಎಂದು ವರದಿ ಕೊಟ್ಟಿತ್ತು. ಈಗ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನಮಗೆ ನ್ಯಾಯ ಸಿಗಬಹುದು ಎಂಬ ಭರವಸೆಯಲ್ಲಿ ದೂರು ಕೊಟ್ಟಿದ್ದೇವೆ ಎಂದಿದ್ದಾರೆ.

ಪದ್ಮಲತಾ ಕೊಲೆಗಾರರು ಯಾರು ಎಂದು ಗೊತ್ತಾಗಬೇಕು. ಅವರಿಗೆ ಸರಿಯಾಗಿ ಶಿಕ್ಷೆಯಾಗಬೇಕು ಎಂದು ಇಂದ್ರಾವತಿ ಆಗ್ರಹಿಸಿದ್ದಾರೆ.

ಸಿಪಿಐ(ಎಂ) ಪಕ್ಷದ ತಾಲೂಕು ಸಮಿತಿ ಸದಸ್ಯ ಮಾತನಾಡಿ, “ದೇವಾನಂದರ ಮಗಳು ಪದ್ಮಲತಾ ಡಿಸೆಂಬರ್ 22, 1986ರಂದು ಕಾಲೇಜಿಗೆ ತೆರಳಿದವಳು ವಾಪಸ್ ಧರ್ಮಸ್ಥಳಕ್ಕೆ ಬಸ್‌ನಲ್ಲಿ ಬಂದಿರುವುದನ್ನು ಆಕೆಯ ಸಹಪಾಠಿಗಳು ನೋಡಿದ್ದರು. ಆಮೇಲೆ ಪದ್ಮಲತಾ ಕಣ್ಮರೆಯಾಗಿದ್ದಳು. ಫೆಬ್ರವರಿ 17, 1987ರಂದು ಕೊಳೆತ ಸ್ಥಿತಿಯಲ್ಲಿ ನೆರಿಯ ಹೊಳೆಯ ಸಮೀಪ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯ ವಸ್ತ್ರ ಮತ್ತು ಕೈಗೆ ಕಟ್ಟಿದ್ದ ವಾಚ್‌ನಿಂದ ಅದು ಪದ್ಮಲತಾ ಮೃತದೇಹ ಎಂದು ನಾವು ಗುರುತು ಹಿಡಿದಿದ್ದೆವು ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದರೂ ಸರಿಯಾದ ತನಿಖೆ ನಡೆದಿರಲಿಲ್ಲ. ಸಿಐಡಿ ಪತ್ತೆಯಾಗದ ಪ್ರಕರಣ ಎಂದು ಹಿಂಬರಹ ಕೊಟ್ಟಿತ್ತು. ಸಿಐಡಿ ಅಪರಾಧಿಗಳನ್ನು ಪತ್ತೆ ಹಚ್ಚುವ ಕೆಲಸ ಮಾಡಿರಲಿಲ್ಲ. ನಾವು ಅವತ್ತು ಪದ್ಮಲತಾಳ ಶವ ಸುಟ್ಟಿರಲಿಲ್ಲ. ಅಗತ್ಯ ಬಂದರೆ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಬಹುದು ಎಂದು ಮುಂದಾಲೋಚನೆಯಿಂದ ಹಾಗೆ ಮಾಡಿದ್ದೆವು. ಈಗ ಮತ್ತೆ ಎಸ್‌ಐಟಿ ರಚನೆಯಾಗಿದೆ. ಹಾಗಾಗಿ ಮತ್ತೊಮ್ಮೆ ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...