Homeಕರ್ನಾಟಕಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

ಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

- Advertisement -
- Advertisement -

ಧರ್ಮಸ್ಥಳದಲ್ಲಿ 39 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಪದ್ಮಲತಾ ಅವರ ಕಳೇಬರವನ್ನು ಹೊರತೆಗೆದು ಮರು ತನಿಖೆ ಮಾಡಿ, ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಕೋರಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪದ್ಮಲತಾ ಅವರ ಅಕ್ಕ ಇಂದ್ರಾವತಿ ದೂರು ನೀಡಿದ್ದಾರೆ.

ಸೋಮವಾರ (ಆ.11) ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ ಇಂದ್ರಾವತಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?

“ನಾನು ಪ್ರಸ್ತುತ ನೆಲ್ಯಾಡಿ ನಿವಾಸಿಯಾಗಿದ್ದು, ದಿವಂಗತ ದೇವಾನಂದ ಅವರ ಮಗಳು. ಕೊಲೆಗೀಡಾದ ಪದ್ಮಲತಾಳ ಅಕ್ಕನಾಗಿರುತ್ತೇನೆ. 38 ವರ್ಷಗಳ ಹಿಂದೆ ಎಸ್‌ಡಿಎಂ ಕಾಲೇಜು ಉಜಿರೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನನ್ನ ತಂಗಿ ಪದ್ಮಲತಾ ದಿನಾಂಕ 22.12.1986ರಂದು ಉಜಿರೆ ಕಾಲೇಜಿಗೆ ಹೋದವಳು ಸಂಜೆ ಧರ್ಮಸ್ಥಳ ತನಕ ಬಂದು ಕಾಣೆಯಾಗಿರುತ್ತಾಳೆ. ಆಕೆಯ ಮೃತದೇಹ ದಿನಾಂಕ 17.02.1987 ರಂದು ನೆರಿಯ ಹೊಳೆಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಮ್ಮ ತಂದೆ ಮನೆಯು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಇತ್ತು” ಎಂದು ವಿವರಿಸಿದ್ದಾರೆ.

ಮುಂದುವರಿದು, “ನನ್ನ ತಂಗಿ ಅಪಹರಣ, ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಕಾರಣ, ಆಕೆಯ ಅಸಹಜ ಸಾವಿಗೆ ಕಾರಣರಾದ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಆಗ್ರಹಿಸಿ ಸಿಪಿಐಎಂ ಮುಖಂಡರೂ ಆಗಿದ್ದ ನನ್ನ ತಂದೆ ದಿವಂಗತ ದೇವಾನಂದ ಅವರು ಸಿಪಿಐಎಂ ನೇತೃತ್ವದಲ್ಲಿ ಹಲವಾರು ಹೋರಾಟಗಳನ್ನು ರೂಪಿಸಿದ್ದರು. ಹೋರಾಟಕ್ಕೆ ಮಣಿದ ಸರ್ಕಾರ ಕೊನೆಗೆ ಪ್ರಕರಣದ ತನಿಖೆ ನಡೆಸಲು ಸಿಓಡಿ ತನಿಖೆಗೆ ಆದೇಶಿಸಿತು. ವಿಧಾನ ಸಭೆಯಲ್ಲಿ ಚರ್ಚೆ ಆಗಿರುವುದು ಕೂಡಾ ವಿಧಾನಸಭಾ ದಾಖಲೆಯಲ್ಲಿ ಇರಬೇಕು. ಅಂದು ಸಚಿವರಾಗಿದ್ದ ರಾಚಯ್ಯ ಅವರೂ ಧರ್ಮಸ್ಥಳ ಗ್ರಾಮದ ಬೊಳಿಯಾರಲ್ಲಿರುವ ನಮ್ಮ ಮನೆಗೆ ಬಂದು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆದರೆ ಕೊನೆಗೆ ತನಿಖೆಯು ಪತ್ತೆಯಾಗದ ಪ್ರಕರಣ ಎಂದು ವರದಿ ನೀಡಿ ನಮಗೆ ನ್ಯಾಯ ಸಿಗದಂತಾಗಿತ್ತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅದು ಒಂದು ಯೋಜಿತ ಅಪಹರಣ, ಅತ್ಯಾಚಾರ, ಕೊಲೆ ಎಂಬ ನಮ್ಮ ಅನುಮಾನದಂತೆ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ನನ್ನ ತಂಗಿಯ ಕಳೆಬರಹವನ್ನು ದಹನ ಮಾಡದೆ ಹೂತಿಟ್ಟಿದ್ದೇವೆ. ಅದನ್ನು ತೆಗೆದು ತನಿಖೆ ನಡೆಸಿದರೆ ಕೊಲೆಯಾದ ಖಚಿತತೆ ಸಿಗಲಿದೆ ಹಾಗೂ ನನಗೆ ತಿಳಿದ ಸಾಕ್ಷಿನುಡಿಯಲು ನಾನು ಸಿದ್ಧಳಿದ್ದೇನೆ. ಆದ್ದರಿಂದ ನನ್ನ ತಂಗಿಯ ಪ್ರಕರಣವನ್ನು ರೀ-ಓಪನ್ ಮಾಡಿ, ಹೂತಿಟ್ಟ ಕಳೆಬರವನ್ನು ತೆಗೆದು ತನಿಖೆ ನಡೆಸಿ ತಂಗಿಯ ಸಾವಿಗೆ ನ್ಯಾಯ ಒದಗಿಸಬೇಕಾಗಿ ಹಾಗೂ ಅಪರಾಧಿಗಳ ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ವಿನಂತಿ ಮಾಡುತ್ತೇನೆ” ಎಂದಿದ್ದಾರೆ.

39 ವರ್ಷಗಳ ಹಿಂದೆ ಕೊಲೆಯಾದ ಪದ್ಮಲತಾ

ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಾವತಿ, “ನನ್ನ ತಂಗಿ ಕೊಲೆಯಾಗಿ 39 ವರ್ಷಗಳು ಕಳೆಯಿತು. ಇದುವರೆಗೆ ನಮಗೆ ನ್ಯಾಯ ಸಿಕ್ಕಿಲ್ಲ. ಕೊಲೆಗಾರರು ಯಾರು ಅಂತ ಪತ್ತೆಯಾಗಿಲ್ಲ. ಈಗ ಎಸ್‌ಐಟಿ ತನಿಖೆ ನಡೆಯುತ್ತಿದೆ. ಅವರು ಪದ್ಮಲತಾ ಕೊಲೆಗಾರರನ್ನೂ ಪತ್ತೆ ಹಚ್ಚಬಹುದು ಎಂಬ ನಿರೀಕ್ಷೆಯಿಂದ ದೂರು ಕೊಡಲು ಬಂದಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಪದ್ಮಲತಾ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ‘ಪತ್ತೆ ಹಚ್ಚಲಾಗದ ಪ್ರಕರಣ’ ಎಂದು ವರದಿ ಕೊಟ್ಟಿತ್ತು. ಈಗ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನಮಗೆ ನ್ಯಾಯ ಸಿಗಬಹುದು ಎಂಬ ಭರವಸೆಯಲ್ಲಿ ದೂರು ಕೊಟ್ಟಿದ್ದೇವೆ ಎಂದಿದ್ದಾರೆ.

ಪದ್ಮಲತಾ ಕೊಲೆಗಾರರು ಯಾರು ಎಂದು ಗೊತ್ತಾಗಬೇಕು. ಅವರಿಗೆ ಸರಿಯಾಗಿ ಶಿಕ್ಷೆಯಾಗಬೇಕು ಎಂದು ಇಂದ್ರಾವತಿ ಆಗ್ರಹಿಸಿದ್ದಾರೆ.

ಸಿಪಿಐ(ಎಂ) ಪಕ್ಷದ ತಾಲೂಕು ಸಮಿತಿ ಸದಸ್ಯ ಮಾತನಾಡಿ, “ದೇವಾನಂದರ ಮಗಳು ಪದ್ಮಲತಾ ಡಿಸೆಂಬರ್ 22, 1986ರಂದು ಕಾಲೇಜಿಗೆ ತೆರಳಿದವಳು ವಾಪಸ್ ಧರ್ಮಸ್ಥಳಕ್ಕೆ ಬಸ್‌ನಲ್ಲಿ ಬಂದಿರುವುದನ್ನು ಆಕೆಯ ಸಹಪಾಠಿಗಳು ನೋಡಿದ್ದರು. ಆಮೇಲೆ ಪದ್ಮಲತಾ ಕಣ್ಮರೆಯಾಗಿದ್ದಳು. ಫೆಬ್ರವರಿ 17, 1987ರಂದು ಕೊಳೆತ ಸ್ಥಿತಿಯಲ್ಲಿ ನೆರಿಯ ಹೊಳೆಯ ಸಮೀಪ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯ ವಸ್ತ್ರ ಮತ್ತು ಕೈಗೆ ಕಟ್ಟಿದ್ದ ವಾಚ್‌ನಿಂದ ಅದು ಪದ್ಮಲತಾ ಮೃತದೇಹ ಎಂದು ನಾವು ಗುರುತು ಹಿಡಿದಿದ್ದೆವು ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದರೂ ಸರಿಯಾದ ತನಿಖೆ ನಡೆದಿರಲಿಲ್ಲ. ಸಿಐಡಿ ಪತ್ತೆಯಾಗದ ಪ್ರಕರಣ ಎಂದು ಹಿಂಬರಹ ಕೊಟ್ಟಿತ್ತು. ಸಿಐಡಿ ಅಪರಾಧಿಗಳನ್ನು ಪತ್ತೆ ಹಚ್ಚುವ ಕೆಲಸ ಮಾಡಿರಲಿಲ್ಲ. ನಾವು ಅವತ್ತು ಪದ್ಮಲತಾಳ ಶವ ಸುಟ್ಟಿರಲಿಲ್ಲ. ಅಗತ್ಯ ಬಂದರೆ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಬಹುದು ಎಂದು ಮುಂದಾಲೋಚನೆಯಿಂದ ಹಾಗೆ ಮಾಡಿದ್ದೆವು. ಈಗ ಮತ್ತೆ ಎಸ್‌ಐಟಿ ರಚನೆಯಾಗಿದೆ. ಹಾಗಾಗಿ ಮತ್ತೊಮ್ಮೆ ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...