Homeಕರ್ನಾಟಕಧರ್ಮಸ್ಥಳದಲ್ಲಿ ಸಾಮೂಹಿಕ ಹತ್ಯೆ ಆರೋಪ: 'ಸೌಜನ್ಯಾ ನ್ಯಾಯಕ್ಕಾಗಿ ಹೋರಾಟ ಸಮಿತಿ'ಯಿಂದ ತುರ್ತು ಕರೆ!

ಧರ್ಮಸ್ಥಳದಲ್ಲಿ ಸಾಮೂಹಿಕ ಹತ್ಯೆ ಆರೋಪ: ‘ಸೌಜನ್ಯಾ ನ್ಯಾಯಕ್ಕಾಗಿ ಹೋರಾಟ ಸಮಿತಿ’ಯಿಂದ ತುರ್ತು ಕರೆ!

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆಗಳ ಆರೋಪಗಳು ಇಡೀ ದೇಶವನ್ನು ಬೆಚ್ಚಿ ಬೀಳಿಸಿವೆ. “ಸೌಜನ್ಯಾ ನ್ಯಾಯಕ್ಕಾಗಿ ಹೋರಾಟ ಸಮಿತಿ”ಯು ಮಾಧ್ಯಮ, ನಾಗರಿಕ ಸಮಾಜ, ಮಾನವ ಹಕ್ಕುಗಳ ಸಂಸ್ಥೆಗಳು ಹಾಗೂ ಪ್ರಜ್ಞಾವಂತ ನಾಗರಿಕರಿಗೆ ತುರ್ತು ಮನವಿ ಮಾಡಿದೆ. ಇದು ಕೇವಲ ಒಂದು ಹಗರಣವಲ್ಲ, ಬದಲಿಗೆ “ಪವಿತ್ರ ದೇವಾಲಯದ ಪಟ್ಟಣದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಗಳನ್ನು ವ್ಯವಸ್ಥಿತವಾಗಿ ಮುಚ್ಚಿಹಾಕಿದ ಒಂದು ಭಯಾನಕ ಮಾನವ ಹಕ್ಕುಗಳ ಕಥೆ” ಎಂದು ಸಮಿತಿ ಬಣ್ಣಿಸಿದೆ.

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಭೀಕರ ಘಟನೆಗಳು ದೇಶದ ಆತ್ಮಸಾಕ್ಷಿಯನ್ನೇ ತಟ್ಟಿವೆ. 1995ರಿಂದ 2014 ರವರೆಗೆ ದೇವಸ್ಥಾನದಲ್ಲಿ ನೈರ್ಮಲ್ಯ ಕೆಲಸಗಾರನಾಗಿ ಸೇವೆ ಸಲ್ಲಿಸಿದ ವ್ಯಕ್ತಿಯೊಬ್ಬರು ನೀಡಿರುವ ಹೇಳಿಕೆ ದೇಶವನ್ನು ಬೆಚ್ಚಿ ಬೀಳಿಸಿದೆ ಎಂದು ಸಮಿತಿ ತಿಳಿಸಿದೆ. ಪ್ರಭಾವಿ ವ್ಯಕ್ತಿಗಳ ಬೆದರಿಕೆಗೆ ಒಳಗಾಗಿ, ಲೈಂಗಿಕ ದೌರ್ಜನ್ಯಕ್ಕೊಳಗಾದ ನೂರಾರು ಮಹಿಳೆಯರು ಮತ್ತು ಹೆಣ್ಣುಮಕ್ಕಳ ಶವಗಳನ್ನು ಹೂಳಲು ಮತ್ತು ಸುಡಲು ಒತ್ತಾಯಿಸಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ನೇತ್ರಾವತಿ ನದಿಯ ಬಳಿ ಈ ಅಮಾನವೀಯ ಕೃತ್ಯಗಳು ನಡೆದಿವೆ. ಈ ಶವಗಳು ಹೆಚ್ಚಾಗಿ ಬಟ್ಟೆಯಿಲ್ಲದ, ಅತ್ಯಾಚಾರಕ್ಕೊಳಗಾದ, ಕತ್ತು ಹಿಸುಕಿರುವ, ಸುಟ್ಟಗಾಯಗಳ ಅಥವಾ ಆಸಿಡ್ ದಾಳಿಯ ಸ್ಪಷ್ಟ ಕುರುಹುಗಳನ್ನು ಹೊಂದಿದ್ದವು ಎಂದು ಪ್ರತ್ಯಕ್ಷದರ್ಶಿ ವಿವರಿಸಿದ್ದಾರೆ. ಗುರುತು ಸಿಗದಂತೆ ಮಾಡಲು ಮುಖಗಳನ್ನು ಸುಡಲಾಗುತ್ತಿತ್ತು ಮತ್ತು ವಿಧಿವಿಜ್ಞಾನ ಪುರಾವೆಗಳನ್ನು ಅಳಿಸಲು ಬಟ್ಟೆಗಳನ್ನು ನಾಶಪಡಿಸಲಾಗುತ್ತಿತ್ತು ಎಂದು ಸಾಕ್ಷಿ ಹೇಳಿರುವುದಾಗಿ ಎಂದು ಸಮಿತಿ ತಿಳಿಸಿದೆ.

ಸಮಿತಿಯು ನೀಡಿರುವ ಹೇಳಿಕೆಯ ಪ್ರಕಾರ, ನೈರ್ಮಲ್ಯ ಕೆಲಸಗಾರರಿಗೆ “ನಿನ್ನನ್ನು ತುಂಡು ತುಂಡಾಗಿ ಕತ್ತರಿಸುತ್ತೇವೆ, ನಿನ್ನ ಶವವನ್ನು ಬೇರೆಯವರಂತೆ ಹೂಳುತ್ತೇವೆ” ಎಂದು ಬೆದರಿಕೆ ಹಾಕಲಾಗಿತ್ತು. ಹಿಂದಿನ ಕೆಲಸಗಾರರಿಗೂ ಇದೇ ರೀತಿ ಘೋರ ಅಂತ್ಯ ಎದುರಾಗಿತ್ತು ಎಂದು ಅವರಿಗೆ ಎಚ್ಚರಿಸಲಾಗಿತ್ತು. ಈ ವ್ಯಕ್ತಿ ಗುರುತಿಸಿದ ಸಮಾಧಿ ಸ್ಥಳಗಳಲ್ಲಿ ಅಸ್ಥಿಪಂಜರದ ಅವಶೇಷಗಳು, ತಲೆಬುರುಡೆಗಳು ಪತ್ತೆಯಾಗಿದ್ದು, ಇವುಗಳೊಂದಿಗೆ ಆಧಾರ್, ಮತದಾರರ ಗುರುತಿನ ಚೀಟಿ, ಮತ್ತು ಹಳೆಯ ದೇವಾಲಯದ ಗುರುತಿನ ಚೀಟಿಗಳಂತಹ ಗುರುತಿನ ದಾಖಲೆಗಳನ್ನು ಅಧಿಕಾರಿಗಳಿಗೆ ಸಲ್ಲಿಸಲಾಗಿದೆ ಎಂದು ಸಮಿತಿ ತಿಳಿಸಿದೆ.

“ಈ ದೂರಿನಲ್ಲಿ ನಾನು ಆರೋಪಿಸಿರುವವರು ಧರ್ಮಸ್ಥಳ ದೇವಸ್ಥಾನದ ಆಡಳಿತ ಮತ್ತು ಅದರ ಸಿಬ್ಬಂದಿಗೆ ಸಂಬಂಧಿಸಿದ್ದಾರೆ. ಶವಗಳನ್ನು ಹೂಳಲು ನನಗೆ ಸೂಚನೆ ನೀಡಿದವರು ಅವರೇ, ಮತ್ತು ಅವರು ನನಗೆ ನಿರಂತರವಾಗಿ ಸಾವಿನ ಬೆದರಿಕೆ ಹಾಗೂ ಹಿಂಸೆಗೆ ಒಳಪಡಿಸಿದರು,” ಎಂದು ಆ ಪ್ರತ್ಯಕ್ಷದರ್ಶಿ ಸ್ಪಷ್ಟಪಡಿಸಿದ್ದಾರೆ ಎಂದು ಸಮಿತಿ ಉಲ್ಲೇಖಿಸಿದೆ. ಸಾಕ್ಷಿ ಸಂರಕ್ಷಣಾ ಕಾಯ್ದೆ 2018ರ ಅಡಿಯಲ್ಲಿ ಕಾನೂನು ರಕ್ಷಣೆ ಸಿಕ್ಕರೆ, ಅಪರಾಧಿಗಳನ್ನು ಹೆಸರಿಸಲು ಮತ್ತು ಸಮಾಧಿ ಸ್ಥಳಗಳಿಗೆ ತನಿಖಾಧಿಕಾರಿಗಳನ್ನು ಕರೆದೊಯ್ಯಲು ಅವರು ಸಿದ್ಧರಿರುವುದಾಗಿ ಸಮಿತಿ ತಿಳಿಸಿದೆ.

2025ರ ಜುಲೈ 3ರಂದು ಔಪಚಾರಿಕ ಕ್ರಿಮಿನಲ್ ದೂರು ದಾಖಲಾಗಿದ್ದು, ಜುಲೈ 4ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಅಸ್ಥಿಪಂಜರದ ಅವಶೇಷಗಳು ಮತ್ತು ಛಾಯಾಚಿತ್ರಗಳನ್ನು ವಶಪಡಿಸಿಕೊಂಡು, ವಿಧಿವಿಜ್ಞಾನ ತಂಡಗಳೊಂದಿಗೆ ಸಮಾಲೋಚಿಸಿದ್ದಾರೆ. ಜುಲೈ 11ರಂದು ಮಾಹಿತಿ ನೀಡಿದ ವ್ಯಕ್ತಿ ತನ್ನ ಹೇಳಿಕೆಯನ್ನು ದಾಖಲಿಸಲು ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ/ಜೆಎಂಎಫ್‌ಸಿ ಮುಂದೆ ಹಾಜರಾಗಿದ್ದರು. ಅವರಿಗೆ ರಾಜ್ಯ ಯೋಜನೆಯ ಮೂಲಕ ಸಾಕ್ಷಿ ರಕ್ಷಣೆ ನೀಡಲಾಗಿದ್ದರೂ, ಜುಲೈ 16, 2025 ರಂದು ಆ ವ್ಯಕ್ತಿ ತಮ್ಮ ವಕೀಲರು ಮತ್ತು ಮಾಧ್ಯಮದವರೊಂದಿಗೆ ಆರೋಪಿತ ಸಮಾಧಿ ಸ್ಥಳಕ್ಕೆ ಹೋದಾಗ, ಪೊಲೀಸರು ಸ್ಥಳದಲ್ಲಿ ಇರಲಿಲ್ಲ. ಸ್ಥಳವನ್ನು ಸುತ್ತುವರಿಯದೆ ಬಹಿರಂಗವಾಗಿ ಬಿಡಲಾಗಿದ್ದು, ಯಾವುದೇ ರಕ್ಷಣೆ ನೀಡಲಾಗಿರಲಿಲ್ಲ. ಅಚ್ಚರಿ ಎಂದರೆ, ಪೊಲೀಸರು ನಂತರ ಸಾಕ್ಷಿ “ಕಾಣೆಯಾಗಿದ್ದಾನೆ” ಎಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಇದನ್ನು ಸಾಕ್ಷಿಯ ವಕೀಲರು ತಕ್ಷಣವೇ ನಿರಾಕರಿಸಿದ್ದಾರೆ. ಈ ನಿರ್ಲಕ್ಷ್ಯ ಸಾಕ್ಷಿಯ ಜೀವಕ್ಕೆ ಅಪಾಯ ತಂದೊಡ್ಡಬಹುದು ಎಂದು ಸಮಿತಿ ಆತಂಕ ವ್ಯಕ್ತಪಡಿಸಿದೆ.

ಈ ಬೆಳವಣಿಗೆಯನ್ನು “ನಿರ್ಲಕ್ಷ್ಯವಲ್ಲ – ಇದು ಉದ್ದೇಶಪೂರ್ವಕ ಬೇಜವಾಬ್ದಾರಿತನ” ಎಂದು ಬಲವಾಗಿ ಹೇಳಲಾಗಿದೆ. ಈ ವ್ಯವಸ್ಥಿತ ನಿರ್ಲಕ್ಷ್ಯವು ಮಾಹಿತಿ ನೀಡಿದ ವ್ಯಕ್ತಿ, ಅವರ ಕುಟುಂಬ, ವಕೀಲರು ಮತ್ತು ಇತ್ತೀಚೆಗೆ ಮುಂದೆ ಬಂದ ಇತರ ಸಂತ್ರಸ್ತರ ಕುಟುಂಬ ಸದಸ್ಯರ ಜೀವಕ್ಕೆ ದೊಡ್ಡ ಅಪಾಯವನ್ನುಂಟುಮಾಡಿದೆ. ಇದು ಕೇವಲ ಒಂದು ಆಕಸ್ಮಿಕ ಘಟನೆಯಲ್ಲ, ಬದಲಿಗೆ ಬೇಕು ಬೇಕೆಂದೇ ನ್ಯಾಯವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.

ಈ ಪ್ರಕರಣದಲ್ಲಿ ರಾಜ್ಯ ಆಡಳಿತ ಮತ್ತು ಪೊಲೀಸರ ಸಂಪೂರ್ಣ ವೈಫಲ್ಯವನ್ನು ಸಮಿತಿ ತೀವ್ರವಾಗಿ ಖಂಡಿಸಿದೆ. ತಕ್ಷಣದ ಕ್ರಮಕ್ಕಾಗಿ ಸಮಿತಿಯು ಈ ಕೆಳಗಿನ ಬೇಡಿಕೆಗಳನ್ನು ಮುಂದಿಟ್ಟಿದೆ: ಅಲ್ಲದೆ, ಮಾಹಿತಿ ನೀಡಿದ ವ್ಯಕ್ತಿ, ಅವರ ಕುಟುಂಬ ಮತ್ತು ವಕೀಲರಿಗೆ ಸಾಕ್ಷಿ ಸಂರಕ್ಷಣಾ ಸುರಕ್ಷತೆಗಳ ಪ್ರಕಾರ ಪೂರ್ಣ 24×7 ರಕ್ಷಣೆ ನೀಡಬೇಕು. ಇದರ ಜೊತೆಗೆ, ವೇಗದ ವಿಧಿವಿಜ್ಞಾನ ಸ್ಥಳ ಸಂರಕ್ಷಣೆ ಮತ್ತು ಅಗೆದು ತೆಗೆಯುವಿಕೆಗೆ ಅನುಮೋದನೆಗಳನ್ನು ನೀಡಬೇಕು. ಹಾಗೆಯೇ, ಕಳೆದ 40 ವರ್ಷಗಳಲ್ಲಿ ಧರ್ಮಸ್ಥಳ/ಬೆಳ್ತಂಗಡಿ ಪ್ರದೇಶದಲ್ಲಿನ ಅಸ್ವಾಭಾವಿಕ ಸಾವುಗಳು ಮತ್ತು ಕಾಣೆಯಾದ ಮಹಿಳೆಯರ ಡೇಟಾವನ್ನು ತಕ್ಷಣ ಬಿಡುಗಡೆ ಮಾಡಬೇಕು. ಈ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ಸಮಿತಿ ಆಗ್ರಹಿಸಿದೆ. ಇಷ್ಟು ಮಾತ್ರವಲ್ಲದೆ ಸ್ಥಳೀಯ ಪ್ರಭಾವದಿಂದ ಮುಕ್ತವಾದ ಹಿರಿಯ ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ಉನ್ನತ-ಸಮಗ್ರತೆಯ ವಿಶೇಷ ತನಿಖಾ ತಂಡ (SIT)  ರಚನೆಯಾಗಿದ್ದನ್ನು ಸಮಿತಿ ಸ್ವಾಗತಿಸಿದೆ.

ಈ ಪ್ರಕರಣದ ಹಿನ್ನೆಲೆಯಾಗಿ 800 ವರ್ಷಗಳ ಇತಿಹಾಸವಿರುವ ಶ್ರೀ ಧರ್ಮಸ್ಥಳ ಮಂಜುನಾಥ ದೇವಾಲಯ ಮತ್ತು ಅದನ್ನು ನಿರ್ವಹಿಸುವ ಹೆಗ್ಗಡೆ ಕುಟುಂಬದ ಅಪಾರ ಪ್ರಭಾವವನ್ನು ಸಮಿತಿ ಎತ್ತಿ ತೋರಿಸಿದೆ. ಪದ್ಮಭೂಷಣ ಮತ್ತು ಪದ್ಮವಿಭೂಷಣ ಪುರಸ್ಕೃತರಾದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪ್ರಸ್ತುತ ಬಿಜೆಪಿ ನಾಮನಿರ್ದೇಶಿತ ರಾಜ್ಯಸಭಾ ಸಂಸದರಾಗಿದ್ದಾರೆ. ಅವರ ಕುಟುಂಬವು ವಾಣಿಜ್ಯ, ಶೈಕ್ಷಣಿಕ ಸಂಸ್ಥೆಗಳ ಬೃಹತ್ ಜಾಲವನ್ನು ನಿಯಂತ್ರಿಸುತ್ತದೆ. ಈ ಪ್ರಭಾವವು ಪ್ರಕರಣದ ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂಬುದು ಸಮಿತಿಯ ಕಳವಳ ವ್ಯಕ್ತಪಡಿಸಿದೆ.

2012ರಲ್ಲಿ ಧರ್ಮಸ್ಥಳದಲ್ಲಿ ನಡೆದ 17 ವರ್ಷದ ಸೌಜನ್ಯಾಳ ಕೊಲೆ ಪ್ರಕರಣದಲ್ಲಿ ಹೆಗ್ಗಡೆ ಕುಟುಂಬ ಸದಸ್ಯರ ಹೆಸರು ಕೇಳಿಬಂದಿತ್ತು. ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದ್ದರೂ, 2023ರಲ್ಲಿ ಆರೋಪಿಯನ್ನು ಖುಲಾಸೆಗೊಳಿಸಲಾಯಿತು. ನಿಜವಾದ ಅಪರಾಧಿಗಳು ದೇವಾಲಯದ ಆಡಳಿತಕ್ಕೆ ಸಂಬಂಧಿಸಿದವರೇ ಎಂದು ಸೌಜನ್ಯಾ ಕುಟುಂಬದವರು ಗಂಭೀರವಾಗಿ ಆರೋಪಿಸಿದ್ದರು, ಆದರೆ ಅವರ ಮಾತುಗಳಿಗೆ ಕಿವಿಗೊಡಲಾಗಿಲ್ಲ. ಈ ಪ್ರಕರಣ ನ್ಯಾಯ ಸಿಗದೆ ಅಂತ್ಯಗೊಂಡಿದ್ದು, ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

2025ರ ಆರಂಭದಲ್ಲಿ ಕನ್ನಡ ಯೂಟ್ಯೂಬರ್ ಸಮೀರ್ ಎಂ.ಡಿ. ಅವರು ಈ ಪ್ರಕರಣದ ಕುರಿತು ಬಿಡುಗಡೆ ಮಾಡಿದ ವಿಡಿಯೋಗಳು ಜನರ ಗಮನ ಸೆಳೆದವು. ಆದರೆ, “ತಪ್ಪು ಮಾಹಿತಿ ನೀಡಿದೆ” ಎಂಬ ಆರೋಪದಡಿ ಈ ವಿಡಿಯೋಗಳನ್ನು ಅಳಿಸಿಹಾಕಲಾಯಿತು ಮತ್ತು ಸಮೀರ್ ವಿರುದ್ಧ ಪ್ರಕರಣ ದಾಖಲಿಸಲಾಯಿತು. ನ್ಯಾಯಾಲಯದ ಆದೇಶದ ನೆಪದಲ್ಲಿ 2000ಕ್ಕೂ ಹೆಚ್ಚು ವಿಡಿಯೋಗಳನ್ನು ತೆಗೆದುಹಾಕಿರುವುದು “ವ್ಯವಸ್ಥಿತ ಸೆನ್ಸಾರ್‌ಶಿಪ್ ಅಭಿಯಾನ” ಎಂದು ಸಮಿತಿ ಬಲವಾಗಿ ಆಕ್ಷೇಪಿಸಿದೆ. ಸ್ಥಳೀಯ ಅಧಿಕಾರಿಗಳು ಮತ್ತು ಮಾಜಿ ಬಿಜೆಪಿ ನಾಯಕರು ಆರೋಪಗಳನ್ನು ನಿರಾಕರಿಸಿದರೂ, ಈ ಪ್ರದೇಶದಲ್ಲಿ ನೂರಾರು ಅಸ್ವಾಭಾವಿಕ ಸಾವುಗಳು ನಡೆದಿರುವುದನ್ನು ಅವರು ಅಲ್ಲಗಳೆಯುತ್ತಿಲ್ಲ. ಆದರೂ, ಯಾವುದೇ ಸಾಂಸ್ಥಿಕ ಸಂಪರ್ಕವನ್ನು ನಿರಾಕರಿಸುತ್ತಿರುವುದು ಗಂಭೀರವಾದ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಸಮಿತಿ ಗಮನಸೆಳೆದಿದೆ.

ಮಾಜಿ ಸಿಬಿಐ ಉದ್ಯೋಗಿ ಸುಜಾತಾ ಭಟ್ ಅವರು ತಮ್ಮ ಮಗಳು ಅನನ್ಯಾ ಭಟ್ ಅವರ ಅಸ್ಥಿಪಂಜರದ ಅವಶೇಷಗಳನ್ನು ಮರಳಿ ಪಡೆಯಲು ಪೊಲೀಸ್ ದೂರು ದಾಖಲಿಸಿದ್ದಾರೆ. ಮಣಿಪಾಲದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ಅನನ್ಯಾ, ಎರಡು ದಶಕಗಳ ಹಿಂದೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಳು. ಈ ಬೆಳವಣಿಗೆಗಳು ಪ್ರಕರಣಕ್ಕೆ ಹೊಸ ತಿರುವು ನೀಡಿವೆ ಎಂದು ಸಮಿತಿ ಹೇಳಿದೆ.

“ನಮ್ಮೊಂದಿಗೆ ಕೈಜೋಡಿಸಿರಿ. ಈಗಲೇ ಸಾಕ್ಷಿಯಾಗಿರಿ. ಸತ್ಯದೊಂದಿಗೆ ಸಮಾಧಿಗಳು ಹೂಳುವುದನ್ನು ತಡೆಯಿರಿ,” ಎಂದು ಸಮಿತಿಯು ಹೃದಯಪೂರ್ವಕವಾಗಿ ಮನವಿ ಮಾಡಿದೆ. ಈ ಘೋರ ಅಪರಾಧಗಳನ್ನು ಮುಚ್ಚಿಹಾಕಲು ಧರ್ಮ, ಜಾತಿ ಮತ್ತು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಸಮಿತಿ ಬಲವಾಗಿ ನಂಬಿದೆ. ಒಬ್ಬಂಟಿ ದಲಿತ ನೈರ್ಮಲ್ಯ ಕೆಲಸಗಾರನ ಧೈರ್ಯವು ನಮ್ಮೆಲ್ಲರ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತದೆ. ಈ ಪ್ರಕರಣದಲ್ಲಿ ನ್ಯಾಯ ಸಿಗದಿದ್ದರೆ, ಅಪರಾಧಿಗಳು ನಿರಂಕುಶವಾಗಿ ಮುಂದುವರೆಯಲು ನಾವು ಅವಕಾಶ ನೀಡಿದಂತೆ. ಮುಂದಿನ ಬಲಿಪಶುಗಳ ರಕ್ತಪಾತಕ್ಕೆ ನಾವೇ ಕಾರಣರಾಗುತ್ತೇವೆ ಎಂದು ಸಮಿತಿ ಸ್ಪಷ್ಟಪಡಿಸಿದೆ.

ಧರ್ಮಸ್ಥಳದಲ್ಲಿ ಬಯಲಿಗೆ ಬಂದಿರುವ ಅತ್ಯಾಚಾರ ಮತ್ತು ಕೊಲೆಗಳ ಸಮಗ್ರ ತನಿಖೆಗಾಗಿ ಸಿಟ್‌ ರಚನೆಗೆ ಆಗ್ರಹಿಸಿ ಜು.21 ರಾಜ್ಯಾದ್ಯಂತ ಪ್ರತಿಭಟನೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...