Homeಕರ್ನಾಟಕಧರ್ಮಸ್ಥಳದ ಸರಣಿ ಕೊಲೆ-ಅತ್ಯಾಚಾರ ಆರೋಪ; ಎಸ್‌ಐಟಿ ತನಿಖೆಗೆ ಜಸ್ಟೀಸ್ ಗೋಪಾಲಗೌಡ ಆಗ್ರಹ

ಧರ್ಮಸ್ಥಳದ ಸರಣಿ ಕೊಲೆ-ಅತ್ಯಾಚಾರ ಆರೋಪ; ಎಸ್‌ಐಟಿ ತನಿಖೆಗೆ ಜಸ್ಟೀಸ್ ಗೋಪಾಲಗೌಡ ಆಗ್ರಹ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ಸರಣಿ ಅತ್ಯಾಚಾರ, ಕೊಲೆ ಹಾಗೂ ಗೌಪ್ಯವಾಗಿ ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಆಗ್ರಹಿಸಿದ್ದಾರೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅನಾಮಧೇಯ ಪ್ರಮುಖ ಸಾಕ್ಷಿಯು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ತನ್ನ ಹೇಳಿಕೆ ದಾಖಲಿಸಿದ್ದಾರೆ. ಆದರೂ, ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಮೃತದೇಹಗಳನ್ನು ಎಲ್ಲಿ ಹೂಳಲಾಗಿದೆ ಎಂಬುದನ್ನು ಖಾಲಿ ಪೇಪರ್ ಮೇಲೆ ಗುರುತು ಮಾಡಿಕೊಡುವಂತೆ ಸಾಕ್ಷಿ ಫಿರ್ಯಾದಿ ಮೇಲೆ ಪೊಲೀಸರು ಒತ್ತಡ ಹೇರುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಆತನ ಹೇಳಿಕೆಗಳನ್ನು ಸೋರಿಕೆ ಮಾಡಲಾಗುತ್ತಿದೆ. ಇದೆಲ್ಲವನ್ನೂ ಸರ್ಕಾರ ತಡೆಯಬೇಕು. ಪ್ರಕರಣದ ಪ್ರಮುಖ ಸಾಕ್ಷಿ-ಫಿರ್ಯಾದಿಗೆ ಭದ್ರತೆ ಮತ್ತು ರಕ್ಷಣೆ ಒದಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಆತನ ಹೇಳಿಕೆ ದಾಖಲಿಸಿಕೊಂಡಿರುವ ತನಿಖಾಧಿಕಾರಿಯು ಯಾರಿಗೋ ಕರೆ ಮಾಡಿ, ಅವರು ಸೂಚಿಸಿದ್ದಂತೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂಬ ಗಂಭೀರ ಆರೋಪಗಳಿವೆ. ಆದ್ದರಿಂದ, ತಕ್ಷಣವೇ ತನಿಖಾ ತಂಡವನ್ನು ಬದಲಿಸಬೇಕು. ಹೈಕೋರ್ಟ್‌ ಅಥವಾ ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ರಚಿಸಬೇಕು. ಸಾಕ್ಷಿ ಫಿರ್ಯಾದುದಾರ ಮತ್ತು ಆತನ ವಕೀಲರಿಗೆ ಬೆದರಿಕೆ ಇದ್ದು, ಇಬ್ಬರೂ ತಕ್ಷಣವೇ ಭದ್ರತೆ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಮಾತನಾಡಿ, “ಬಿಎನ್ಎಸ್ 183ನೇ ಸೆಕ್ಷನ್ ಅಡಿಯಲ್ಲಿ ಸಾಕ್ಷಿ ಫಿರ್ಯಾದಿ ನೀಡಿದ ಹೇಳಿಕೆ ಸಾಕ್ಷ್ಯವಾಗುತ್ತದೆ. ಈ ಹೇಳಿಕೆಗಳು ಖಾಸಗಿ ವ್ಯಕ್ತಿಗಳಿಗೆ ಸೋರಿಕೆಯಾಗುತ್ತಿದೆ. ಇದನ್ನು ತಪ್ಪಿಸಿ ಎಂದು ವಕೀಲರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಆಪಾದಿತ ಅಪರಾಧಗಳ ಗಂಭೀರತೆ ಮತ್ತು ಈ ಅಪರಾಧಗಳನ್ನು ಗಮನಾರ್ಹ ರಾಜಕೀಯ ಪ್ರಭಾವ ಹೊಂದಿರುವ ಅತ್ಯಂತ ಪ್ರಭಾವಿ ಮತ್ತು ಪ್ರಭಾವಿ ವ್ಯಕ್ತಿಗಳು ಮಾಡಿರಬಹುದು ಎಂದು ಸೂಚಿಸುವ ದುಃಖಕರ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು, ನಾವು ಈ ಕೆಳಗಿನ ತಕ್ಷಣದ ಕ್ರಮಗಳನ್ನು ಬಲವಾಗಿ ಶಿಫಾರಸು ಮಾಡುತ್ತೇವೆ ಎಂದು ಹೆಳಿದ್ದಾರೆ.

1) ವಿಶೇಷ ತನಿಖಾ ತಂಡದ (ಎಸ್‌ಐಟಿ) ರಚನೆ: ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (ಎಡಿಜಿಪಿ) ಮಟ್ಟದ ಪೊಲೀಸ್ ಅಧಿಕಾರಿ, ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರ ಜೊತೆಯಲ್ಲಿ ಮೇಲ್ವಿಚಾರಣೆ ಮಾಡಲು ವಿಶೇಷ ತನಿಖಾ ತಂಡದ (ಎಸ್‌ಐಟಿ) ರಚನೆಯನ್ನು ನಾವು ಒತ್ತಾಯಿಸುತ್ತೇವೆ.

2) ಸುಪ್ರೀಂ ಕೋರ್ಟ್/ಕರ್ನಾಟಕದ ಗೌರವಾನ್ವಿತ ಹೈಕೋರ್ಟ್. ಇದು ತನಿಖೆಯಲ್ಲಿ ನಿಷ್ಪಕ್ಷಪಾತ, ಸಂಪೂರ್ಣತೆ ಮತ್ತು ಸಾರ್ವಜನಿಕ ವಿಶ್ವಾಸವನ್ನು ಖಚಿತಪಡಿಸುತ್ತದೆ.

3) ಸಮಗ್ರ ವಿಧಿವಿಜ್ಞಾನ ಬೆಂಬಲ: ತನಿಖೆಯು ಕಡ್ಡಾಯವಾಗಿ ಡಿಎನ್‌ಎ ವಿಶ್ಲೇಷಣೆ ಸೇರಿದಂತೆ ಮೀಸಲಾದ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡದ ಸಂಪೂರ್ಣ ನೆರವಿನೊಂದಿಗೆ ಇದನ್ನು ಕೈಗೊಳ್ಳಬೇಕು. ಡಿಜಿಟಲ್ ವಿಧಿವಿಜ್ಞಾನ ಮತ್ತು ಇತರ ಅಗತ್ಯ ವಿಶೇಷ ಘಟಕಗಳು. ನಿರಾಕರಿಸಲಾಗದ ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲು ಇದು ನಿರ್ಣಾಯಕವಾಗಿದೆ.

4) ತನಿಖೆಯ ವೀಡಿಯೊ ರೆಕಾರ್ಡಿಂಗ್ ಮಾಡಬೇಕು: ಸಂಪೂರ್ಣ ತನಿಖಾ ಪ್ರಕ್ರಿಯೆಯನ್ನು ವೀಡಿಯೊ ರೆಕಾರ್ಡಿಂಗ್ ಮಾಡಬೇಕು. ಇದು ಪ್ರತಿ ಹಂತದಲ್ಲೂ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸುತ್ತದೆ.

5) ಅಪರಾಧದ ದೃಶ್ಯ ವಿಶ್ಲೇಷಣೆ: ಎಲ್ಲ ಸಂಭಾವ್ಯ ಪುರಾವೆಗಳನ್ನು ಸಂಗ್ರಹಿಸಲು ಅಪರಾಧದ ಸ್ಥಳವನ್ನು ಸಂಪೂರ್ಣವಾಗಿ ವಿಶ್ಲೇಷಿಸಬೇಕು.

6) ತಕ್ಷಣದ ಬಂಧನ ಮತ್ತು ಕಸ್ಟಡಿ ವಿಚಾರಣೆ: ಈ ಅಪರಾಧಗಳಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳನ್ನು, ಅವರ ಪ್ರಭಾವವನ್ನು ಲೆಕ್ಕಿಸದೆ, ತಕ್ಷಣವೇ ಬಂಧಿಸಿ ಕಸ್ಟಡಿ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

‘ಪೊಲೀಸ್ ಅಧಿಕಾರಿಗಳು ಆರ್‌ಸಿಬಿ ಸೇವಕರಂತೆ ವರ್ತಿಸಿದ್ದಾರೆ..’; ಅಮಾನತು ಆದೇಶ ಸಮರ್ಥಿಸಿಕೊಂಡ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...