Homeಕರ್ನಾಟಕಧರ್ಮಸ್ಥಳ: ನಾಪತ್ತೆಯಾಗಿದ್ದ ಮಲೆಕುಡಿಯ ಆದಿವಾಸಿ ಯುವತಿಯ ಶವ ಕಾಡಿನಲ್ಲಿ ಪತ್ತೆ

ಧರ್ಮಸ್ಥಳ: ನಾಪತ್ತೆಯಾಗಿದ್ದ ಮಲೆಕುಡಿಯ ಆದಿವಾಸಿ ಯುವತಿಯ ಶವ ಕಾಡಿನಲ್ಲಿ ಪತ್ತೆ

- Advertisement -
- Advertisement -

ನಾಪತ್ತೆಯಾಗಿದ್ದ 23 ವರ್ಷದ ಯುವತಿಯ ಶವ ಬುಧವಾರ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೋಲೋಡಿ ಅರಣ್ಯದಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಸಮೀಪದ ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮಲೆಕುಡಿಯಾ ಅವರ ಪುತ್ರಿಯಾಗಿರುವ ತೇಜಸ್ವಿನಿ ಫೆಬ್ರವರಿ 22 ರಂದು ನಾಪತ್ತೆಯಾಗಿದ್ದು, ವಿಷ ಸೇವನೆಯಿಂದ ಸಾವು ಸಂಭವಿಸಿದೆ ಎನ್ನಲಾಗಿದೆ.

ಮೃತ ಯುವತಿಯು 4 ವರ್ಷಗಳಿಂದ ಉಜಿರೆಯ ಮನೆಯೊಂದರಲ್ಲಿ ಕೆಲಸಕ್ಕಿದ್ದು, ಕಳೆದ ನಾಲ್ಕು ತಿಂಗಳಿನಿಂದ ಮಧ್ಯಾಹ್ನದ ನಂತರ ಉಜಿರೆಯ ಕಂಪ್ಯೂಟರ್‌ ಕೇಂದ್ರದಲ್ಲಿ ಕಂಪ್ಯೂಟರ್‌‌ ಶಿಕ್ಷಣ ಪಡೆಯಲು ಹೋಗಿಬರುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

ಫೆಬ್ರವರಿ 22 ರಂದು ಸಂಜೆ ಕಂಪ್ಯೂಟರ್‌ ತರಗತಿ ಮುಗಿಸಿ ನೆರಿಯದಲ್ಲಿನ ತಮ್ಮ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿಯು ನಾಪತ್ತೆಯಾಗಿದ್ದಳು. ಊರೆಲ್ಲಾ ಹುಡುಕಾಡಿರುವ ಕುಟುಂಬ ಸದಸ್ಯರು ಫೆಬ್ರವರಿ 23 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ ಎಂದು ‘ಸುದ್ದಿ ಬೆಳ್ತಂಗಡಿ ನ್ಯೂಸ್’ ವೆಬ್‌ ಪೋರ್ಟಲ್ ವರದಿ ಮಾಡಿದೆ.

ಫೆಬ್ರವರಿ 22 ರಂದು ಸಂಜೆ ಮನೆಗೆ ಹೊರಟಿದ್ದ ಯುವತಿಯನ್ನು ಅವರ ಅಕ್ಕ ಸುಮಂಗಳ ಎಂಬವರು ಕಂಡಿದ್ದು, ಅವರನ್ನು ತಾನು ಪ್ರಯಾಣಿಸುತ್ತಿದ್ದ ಜೀಪಿನಲ್ಲಿ ಹತ್ತಿಸಿ ಮನೆಯ ಬಳಿ ಇಳಿಸಿ ಹೋಗಿದ್ದರಾದರೂ, ಯುವತಿಯು ಮನೆಗೆ ಹೋಗಿಲ್ಲ ಎಂದಿದ್ದಾರೆ.

ನಾಪತ್ತೆಯಾಗಿ 9 ದಿನಗಳ ನಂತರ ಅವರ ಮನೆಯ ಸಮೀಪದ ಕೋಲೋಡಿ ಕಾಡಿನಲ್ಲಿ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯ ಬ್ಯಾಗ್‌ನಲ್ಲಿ ಅಡಿಕೆ ಮರದ ಕೊಳೆರೋಗಕ್ಕೆ ಔಷಧಿಯಾಗಿ ಹಾಕಲಾಗುವ ಮೈಲುತುತ್ತು ಪತ್ತೆಯಾಗಿದ್ದು, ಯುವತಿ ಆತ್ಮಹತ್ಯೆ ಮಾಡಕೊಂಡಿರಬೇಕು ಎಂದು ಶಂಕಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆಗೆ ನಾನುಗೌರಿ.ಕಾಂ ಧರ್ಮಸ್ಥಳ ಪೊಲೀಸ್‌ ಠಾಣೆಗೆ ಕರೆ ಮಾಡಿತ್ತಾದರೂ,  ಠಾಣಾ ಸಿಬ್ಬಂದಿಗಳು ಕರೆ ಸ್ವೀಕರಿಸಿಲ್ಲ.


ಇದನ್ನೂ ಓದಿ: ಸಂಗಮೇಶ್ ಅಗೌರವ ತೋರಿಸಿಲ್ಲ, ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...