Homeಕರ್ನಾಟಕಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ 'ಕೊಂದವರು ಯಾರು' ಆಂದೋಲನದಿಂದ...

ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ ‘ಕೊಂದವರು ಯಾರು’ ಆಂದೋಲನದಿಂದ ಹಕ್ಕೊತ್ತಾಯ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸಮಗ್ರ ತನಿಖೆಗಾಗಿ “ಕೊಂದವರು ಯಾರು” (“Who Killed Women in Dharmasthala”) ಜನಾಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದೆ.

ಪ್ರಮುಖ ಬೇಡಿಕೆಗಳು: ಈ ಪತ್ರದಲ್ಲಿ ಆಂದೋಲನವು ಕೆಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ:

  • ಮಹಿಳೆಯರ ನಾಪತ್ತೆ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ರಚಿಸಲಾದ ವಿಶೇಷ ತನಿಖಾ ತಂಡ (S.I.T) ಈ ಪ್ರಕರಣಗಳನ್ನು ತನಿಖೆಯ ಕೇಂದ್ರವನ್ನಾಗಿ ಇಟ್ಟುಕೊಳ್ಳಬೇಕು.
  • ತನಿಖೆಯು ಯಾವುದೇ ಅಡ್ಡಿ ಆತಂಕಗಳಿಲ್ಲದೆ ತಾರ್ಕಿಕ ಅಂತ್ಯ ಮುಟ್ಟುವವರೆಗೂ ಮುಂದುವರೆಯಬೇಕು. ಈ ಪ್ರಕ್ರಿಯೆಗೆ ಸರ್ಕಾರ ಅಥವಾ ಯಾವುದೇ ಪ್ರಭಾವಿ ಶಕ್ತಿಗಳಿಂದ ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವ ಪ್ರಯತ್ನಗಳು ನಡೆಯಬಾರದು.
  • ತನಿಖೆಗೆ ಅಡ್ಡಿಪಡಿಸುತ್ತಿರುವ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕೆಲವು ಮಾಧ್ಯಮಗಳಿಗೆ ಪರಿಸ್ಥಿತಿಯ ಗಂಭೀರತೆಯನ್ನು ಮನವರಿಕೆ ಮಾಡಿಕೊಡಬೇಕು.
  • ಮಹಿಳೆಯರ ಘನತೆ ಮತ್ತು ಸುರಕ್ಷತೆಯು ತನಿಖೆಯ ಪ್ರಮುಖ ಅಂಶವಾಗಿರಬೇಕು, ರಾಜಕೀಯ ಅಥವಾ ಧಾರ್ಮಿಕ ವಿಚಾರಗಳಲ್ಲ.

ಘಟನೆಗಳ ಉಲ್ಲೇಖ ಧರ್ಮಸ್ಥಳದಂತಹ ಪವಿತ್ರ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವಾರು ಅತ್ಯಾಚಾರ, ಕೊಲೆ ಮತ್ತು ಅಪಹರಣಗಳ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ ಕೆಲವು ಪ್ರಮುಖ ಪ್ರಕರಣಗಳನ್ನು ಆಂದೋಲನ ಉಲ್ಲೇಖಿಸಿದೆ:

  • 2012: ಸೌಜನ್ಯ ಅಪಹರಣ ಮತ್ತು ಕೊಲೆ.
  • 2012: ಸೌಜನ್ಯ ಪ್ರಕರಣಕ್ಕೆ 20 ದಿನಗಳ ಮೊದಲು ಆನೆ ಮಾವುತ ನಾರಾಯಣರೊಂದಿಗೆ ಅವರ ತಂಗಿ ಯಮುನಾ ಕೊಲೆ.
  • 1986: ಪದ್ಮಲತಾ ಅಪಹರಣ, ಅತ್ಯಾಚಾರ ಮತ್ತು ಹತ್ಯೆ.
  • 1979: ಟೀಚರ್‌ ವೇದವಲ್ಲಿ ಮೇಲಿನ ದಾಳಿ, ಅತ್ಯಾಚಾರ ಮತ್ತು ಸುಟ್ಟು ಕೊಲೆ.

ಈ ಪ್ರಕರಣಗಳ ಜೊತೆಗೆ ಇನ್ನೂ ಹಲವು ಮಹಿಳೆಯರು ನಾಪತ್ತೆಯಾಗಿರುವುದು ಅಥವಾ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆಂದೋಲನ ಹೇಳಿದೆ. ಈ ಘಟನೆಗಳನ್ನು ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಪರಿಗಣಿಸದಿರುವುದು ಆಘಾತಕಾರಿ ಎಂದು ಆಂದೋಲನ ತಿಳಿಸಿದೆ.

ಹಾಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಮೇಲೆ ಪ್ರಭಾವ ಬೀರುವಷ್ಟರ ಮಟ್ಟಿಗೆ ಕೆಲವು ಮಾಧ್ಯಮಗಳಲ್ಲಿ ʼಮೀಡಿಯಾ ಟ್ರಯಲ್‌ʼ ನಡೆಯುತ್ತಿದೆ ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆಗಳನ್ನು ಆಯೋಜಿಸುತ್ತಿವೆ. ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ತನಿಖೆ ಮಹಿಳೆಯರ ಘನತೆಸುರಕ್ಷತೆಯನ್ನು ಕೇಂದ್ರೀಕರಿಸಬೇಕು; ರಾಜಕೀಯಧಾರ್ಮಿಕ ವಿಚಾರಗಳನ್ನಲ್ಲಎಂದು ಕೊಂದವರು ಯಾರು ಆಂದೋಲನವು ಆಗ್ರಹಿಸಿದೆ.

ಈ ಹಿನ್ನೆಲೆಯಲ್ಲಿ, ಸಾಕ್ಷಿಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಪೂರ್ವ ನಿರ್ಧರಿತ ಹೇಳಿಕೆಗಳನ್ನು ನೀಡುತ್ತಿರುವ ರಾಜಕೀಯ ನಾಯಕರನ್ನು ನಿಯಂತ್ರಿಸಬೇಕು ಎಂದು ಆಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಮಾಡಿದೆ.

ಮಹಿಳಾ ಆಯೋಗದ ಸಕಾರಾತ್ಮಕ ಪ್ರತಿಕ್ರಿಯೆ ನಿರೀಕ್ಷೆ: ಈ ಗಂಭೀರ ಪ್ರಕರಣಗಳ ವಿಚಾರಣೆಗಾಗಿ ಎಸ್‌ಐಟಿ ರಚನೆಯಲ್ಲಿ ಮಹಿಳಾ ಆಯೋಗದ ಸಕಾರಾತ್ಮಕ ಪಾತ್ರವನ್ನು ಆಂದೋಲನ ಶ್ಲಾಘಿಸಿದೆ. ಪ್ರಸ್ತುತ ಮಹಿಳಾ ಆಯೋಗದ ಅಧ್ಯಕ್ಷರಾಗಿರುವ ಡಾ. ನಾಗಲಕ್ಷ್ಮಿ ಚೌಧರಿಯವರು ಈ ಪ್ರಕರಣದಲ್ಲೂ ನ್ಯಾಯದ ಪರವಾಗಿ ದನಿಯೆತ್ತುತ್ತಾರೆ ಎಂದು ಆಂದೋಲನದ ಪ್ರತಿನಿಧಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹೋರಾಟವು ಕೇವಲ ಆಯೋಗದ ಜವಾಬ್ದಾರಿಯಲ್ಲ, ಬದಲಾಗಿ ದೌರ್ಜನ್ಯಕ್ಕೆ ತುತ್ತಾದ ಮಹಿಳೆಯರಿಗೆ ನ್ಯಾಯವನ್ನು ಒದಗಿಸುವ ಚಾರಿತ್ರಿಕ ಜವಾಬ್ದಾರಿಯೂ ಹೌದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆಂದೋಲನದಲ್ಲಿ ಭಾಗವಹಿಸಿದವರು: ಈ ಆಂದೋಲನದಲ್ಲಿ “ನಾವೆದ್ದು ನಿಲ್ಲದಿದ್ದರೆ” ಸಂಘಟನೆಯ ಮಮತಾ ಯಜಮಾನ್, ಮಧುಭೂಷಣ್, ಜನವಾದಿ ಮಹಿಳಾ ಸಂಘಟನೆಯ ಲಕ್ಷ್ಮಿ ಕೆ.ಎಸ್, ಮಾನಸ ಬಳಗದ ಚಂಪಾವತಿ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಗೌರಿ, ದಲಿತ ಮಹಿಳಾ ಸಂಘಟನೆಯ ನಾಗಮಣಿ, ಮಹಿಳಾ ಮುನ್ನಡೆ ಮತ್ತು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ಸಾಧನಾ ಮಹಿಳಾ ಗುಂಪಿನ ವಿನುತಾ, ಚಂದ್ರಶಿ, ಗೀತಾ, ಆಯೆಷಾ, ಹಸಿರು ದಳದ ಮೀನಾಕ್ಷಿ ಮತ್ತು ಶಶಿಕಲಾ ಸೇರಿದಂತೆ ಅನೇಕ ಮಹಿಳಾ ಹಕ್ಕುಗಳ ಹೋರಾಟಗಾರರು ಭಾಗವಹಿಸಿದ್ದರು.

ಪೊಲೀಸ್ ಮಹಾನಿರ್ದೇಶಕರ ಭೇಟಿ ಈ ಆಂದೋಲನದ ಪ್ರತಿನಿಧಿಗಳಾದ ಮಧುಭೂಷಣ್, ಮನು ಚೌಧರಿ, ವಿನಯ್ ಶ್ರೀನಿವಾಸ್, ಮೀನಾಕ್ಷಿ ಮತ್ತು ಪದ್ಮಾವತಿ ಅವರು ಆಗಸ್ಟ್ 28ರಂದು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ, ಸಾಕ್ಷಿಗಳ ಮೇಲೆ ಮಾಧ್ಯಮ ಟ್ರಯಲ್ ನಡೆಯುತ್ತಿರುವ ಬಗ್ಗೆ ಗಮನ ಸೆಳೆದರು ಮತ್ತು ಅದನ್ನು ತಡೆಗಟ್ಟುವಂತೆ ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....