Homeಕರ್ನಾಟಕಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ 'ಕೊಂದವರು ಯಾರು' ಆಂದೋಲನದಿಂದ...

ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ ‘ಕೊಂದವರು ಯಾರು’ ಆಂದೋಲನದಿಂದ ಹಕ್ಕೊತ್ತಾಯ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸಮಗ್ರ ತನಿಖೆಗಾಗಿ “ಕೊಂದವರು ಯಾರು” (“Who Killed Women in Dharmasthala”) ಜನಾಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದೆ.

ಪ್ರಮುಖ ಬೇಡಿಕೆಗಳು: ಈ ಪತ್ರದಲ್ಲಿ ಆಂದೋಲನವು ಕೆಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ:

  • ಮಹಿಳೆಯರ ನಾಪತ್ತೆ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ರಚಿಸಲಾದ ವಿಶೇಷ ತನಿಖಾ ತಂಡ (S.I.T) ಈ ಪ್ರಕರಣಗಳನ್ನು ತನಿಖೆಯ ಕೇಂದ್ರವನ್ನಾಗಿ ಇಟ್ಟುಕೊಳ್ಳಬೇಕು.
  • ತನಿಖೆಯು ಯಾವುದೇ ಅಡ್ಡಿ ಆತಂಕಗಳಿಲ್ಲದೆ ತಾರ್ಕಿಕ ಅಂತ್ಯ ಮುಟ್ಟುವವರೆಗೂ ಮುಂದುವರೆಯಬೇಕು. ಈ ಪ್ರಕ್ರಿಯೆಗೆ ಸರ್ಕಾರ ಅಥವಾ ಯಾವುದೇ ಪ್ರಭಾವಿ ಶಕ್ತಿಗಳಿಂದ ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವ ಪ್ರಯತ್ನಗಳು ನಡೆಯಬಾರದು.
  • ತನಿಖೆಗೆ ಅಡ್ಡಿಪಡಿಸುತ್ತಿರುವ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕೆಲವು ಮಾಧ್ಯಮಗಳಿಗೆ ಪರಿಸ್ಥಿತಿಯ ಗಂಭೀರತೆಯನ್ನು ಮನವರಿಕೆ ಮಾಡಿಕೊಡಬೇಕು.
  • ಮಹಿಳೆಯರ ಘನತೆ ಮತ್ತು ಸುರಕ್ಷತೆಯು ತನಿಖೆಯ ಪ್ರಮುಖ ಅಂಶವಾಗಿರಬೇಕು, ರಾಜಕೀಯ ಅಥವಾ ಧಾರ್ಮಿಕ ವಿಚಾರಗಳಲ್ಲ.

ಘಟನೆಗಳ ಉಲ್ಲೇಖ ಧರ್ಮಸ್ಥಳದಂತಹ ಪವಿತ್ರ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವಾರು ಅತ್ಯಾಚಾರ, ಕೊಲೆ ಮತ್ತು ಅಪಹರಣಗಳ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ ಕೆಲವು ಪ್ರಮುಖ ಪ್ರಕರಣಗಳನ್ನು ಆಂದೋಲನ ಉಲ್ಲೇಖಿಸಿದೆ:

  • 2012: ಸೌಜನ್ಯ ಅಪಹರಣ ಮತ್ತು ಕೊಲೆ.
  • 2012: ಸೌಜನ್ಯ ಪ್ರಕರಣಕ್ಕೆ 20 ದಿನಗಳ ಮೊದಲು ಆನೆ ಮಾವುತ ನಾರಾಯಣರೊಂದಿಗೆ ಅವರ ತಂಗಿ ಯಮುನಾ ಕೊಲೆ.
  • 1986: ಪದ್ಮಲತಾ ಅಪಹರಣ, ಅತ್ಯಾಚಾರ ಮತ್ತು ಹತ್ಯೆ.
  • 1979: ಟೀಚರ್‌ ವೇದವಲ್ಲಿ ಮೇಲಿನ ದಾಳಿ, ಅತ್ಯಾಚಾರ ಮತ್ತು ಸುಟ್ಟು ಕೊಲೆ.

ಈ ಪ್ರಕರಣಗಳ ಜೊತೆಗೆ ಇನ್ನೂ ಹಲವು ಮಹಿಳೆಯರು ನಾಪತ್ತೆಯಾಗಿರುವುದು ಅಥವಾ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆಂದೋಲನ ಹೇಳಿದೆ. ಈ ಘಟನೆಗಳನ್ನು ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಪರಿಗಣಿಸದಿರುವುದು ಆಘಾತಕಾರಿ ಎಂದು ಆಂದೋಲನ ತಿಳಿಸಿದೆ.

ಹಾಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಮೇಲೆ ಪ್ರಭಾವ ಬೀರುವಷ್ಟರ ಮಟ್ಟಿಗೆ ಕೆಲವು ಮಾಧ್ಯಮಗಳಲ್ಲಿ ʼಮೀಡಿಯಾ ಟ್ರಯಲ್‌ʼ ನಡೆಯುತ್ತಿದೆ ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆಗಳನ್ನು ಆಯೋಜಿಸುತ್ತಿವೆ. ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ತನಿಖೆ ಮಹಿಳೆಯರ ಘನತೆಸುರಕ್ಷತೆಯನ್ನು ಕೇಂದ್ರೀಕರಿಸಬೇಕು; ರಾಜಕೀಯಧಾರ್ಮಿಕ ವಿಚಾರಗಳನ್ನಲ್ಲಎಂದು ಕೊಂದವರು ಯಾರು ಆಂದೋಲನವು ಆಗ್ರಹಿಸಿದೆ.

ಈ ಹಿನ್ನೆಲೆಯಲ್ಲಿ, ಸಾಕ್ಷಿಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಪೂರ್ವ ನಿರ್ಧರಿತ ಹೇಳಿಕೆಗಳನ್ನು ನೀಡುತ್ತಿರುವ ರಾಜಕೀಯ ನಾಯಕರನ್ನು ನಿಯಂತ್ರಿಸಬೇಕು ಎಂದು ಆಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಮಾಡಿದೆ.

ಮಹಿಳಾ ಆಯೋಗದ ಸಕಾರಾತ್ಮಕ ಪ್ರತಿಕ್ರಿಯೆ ನಿರೀಕ್ಷೆ: ಈ ಗಂಭೀರ ಪ್ರಕರಣಗಳ ವಿಚಾರಣೆಗಾಗಿ ಎಸ್‌ಐಟಿ ರಚನೆಯಲ್ಲಿ ಮಹಿಳಾ ಆಯೋಗದ ಸಕಾರಾತ್ಮಕ ಪಾತ್ರವನ್ನು ಆಂದೋಲನ ಶ್ಲಾಘಿಸಿದೆ. ಪ್ರಸ್ತುತ ಮಹಿಳಾ ಆಯೋಗದ ಅಧ್ಯಕ್ಷರಾಗಿರುವ ಡಾ. ನಾಗಲಕ್ಷ್ಮಿ ಚೌಧರಿಯವರು ಈ ಪ್ರಕರಣದಲ್ಲೂ ನ್ಯಾಯದ ಪರವಾಗಿ ದನಿಯೆತ್ತುತ್ತಾರೆ ಎಂದು ಆಂದೋಲನದ ಪ್ರತಿನಿಧಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹೋರಾಟವು ಕೇವಲ ಆಯೋಗದ ಜವಾಬ್ದಾರಿಯಲ್ಲ, ಬದಲಾಗಿ ದೌರ್ಜನ್ಯಕ್ಕೆ ತುತ್ತಾದ ಮಹಿಳೆಯರಿಗೆ ನ್ಯಾಯವನ್ನು ಒದಗಿಸುವ ಚಾರಿತ್ರಿಕ ಜವಾಬ್ದಾರಿಯೂ ಹೌದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆಂದೋಲನದಲ್ಲಿ ಭಾಗವಹಿಸಿದವರು: ಈ ಆಂದೋಲನದಲ್ಲಿ “ನಾವೆದ್ದು ನಿಲ್ಲದಿದ್ದರೆ” ಸಂಘಟನೆಯ ಮಮತಾ ಯಜಮಾನ್, ಮಧುಭೂಷಣ್, ಜನವಾದಿ ಮಹಿಳಾ ಸಂಘಟನೆಯ ಲಕ್ಷ್ಮಿ ಕೆ.ಎಸ್, ಮಾನಸ ಬಳಗದ ಚಂಪಾವತಿ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಗೌರಿ, ದಲಿತ ಮಹಿಳಾ ಸಂಘಟನೆಯ ನಾಗಮಣಿ, ಮಹಿಳಾ ಮುನ್ನಡೆ ಮತ್ತು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ಸಾಧನಾ ಮಹಿಳಾ ಗುಂಪಿನ ವಿನುತಾ, ಚಂದ್ರಶಿ, ಗೀತಾ, ಆಯೆಷಾ, ಹಸಿರು ದಳದ ಮೀನಾಕ್ಷಿ ಮತ್ತು ಶಶಿಕಲಾ ಸೇರಿದಂತೆ ಅನೇಕ ಮಹಿಳಾ ಹಕ್ಕುಗಳ ಹೋರಾಟಗಾರರು ಭಾಗವಹಿಸಿದ್ದರು.

ಪೊಲೀಸ್ ಮಹಾನಿರ್ದೇಶಕರ ಭೇಟಿ ಈ ಆಂದೋಲನದ ಪ್ರತಿನಿಧಿಗಳಾದ ಮಧುಭೂಷಣ್, ಮನು ಚೌಧರಿ, ವಿನಯ್ ಶ್ರೀನಿವಾಸ್, ಮೀನಾಕ್ಷಿ ಮತ್ತು ಪದ್ಮಾವತಿ ಅವರು ಆಗಸ್ಟ್ 28ರಂದು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ, ಸಾಕ್ಷಿಗಳ ಮೇಲೆ ಮಾಧ್ಯಮ ಟ್ರಯಲ್ ನಡೆಯುತ್ತಿರುವ ಬಗ್ಗೆ ಗಮನ ಸೆಳೆದರು ಮತ್ತು ಅದನ್ನು ತಡೆಗಟ್ಟುವಂತೆ ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...