Homeಕರ್ನಾಟಕಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ 'ಕೊಂದವರು ಯಾರು' ಆಂದೋಲನದಿಂದ...

ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ ‘ಕೊಂದವರು ಯಾರು’ ಆಂದೋಲನದಿಂದ ಹಕ್ಕೊತ್ತಾಯ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸಮಗ್ರ ತನಿಖೆಗಾಗಿ “ಕೊಂದವರು ಯಾರು” (“Who Killed Women in Dharmasthala”) ಜನಾಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದೆ.

ಪ್ರಮುಖ ಬೇಡಿಕೆಗಳು: ಈ ಪತ್ರದಲ್ಲಿ ಆಂದೋಲನವು ಕೆಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ:

  • ಮಹಿಳೆಯರ ನಾಪತ್ತೆ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ರಚಿಸಲಾದ ವಿಶೇಷ ತನಿಖಾ ತಂಡ (S.I.T) ಈ ಪ್ರಕರಣಗಳನ್ನು ತನಿಖೆಯ ಕೇಂದ್ರವನ್ನಾಗಿ ಇಟ್ಟುಕೊಳ್ಳಬೇಕು.
  • ತನಿಖೆಯು ಯಾವುದೇ ಅಡ್ಡಿ ಆತಂಕಗಳಿಲ್ಲದೆ ತಾರ್ಕಿಕ ಅಂತ್ಯ ಮುಟ್ಟುವವರೆಗೂ ಮುಂದುವರೆಯಬೇಕು. ಈ ಪ್ರಕ್ರಿಯೆಗೆ ಸರ್ಕಾರ ಅಥವಾ ಯಾವುದೇ ಪ್ರಭಾವಿ ಶಕ್ತಿಗಳಿಂದ ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವ ಪ್ರಯತ್ನಗಳು ನಡೆಯಬಾರದು.
  • ತನಿಖೆಗೆ ಅಡ್ಡಿಪಡಿಸುತ್ತಿರುವ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕೆಲವು ಮಾಧ್ಯಮಗಳಿಗೆ ಪರಿಸ್ಥಿತಿಯ ಗಂಭೀರತೆಯನ್ನು ಮನವರಿಕೆ ಮಾಡಿಕೊಡಬೇಕು.
  • ಮಹಿಳೆಯರ ಘನತೆ ಮತ್ತು ಸುರಕ್ಷತೆಯು ತನಿಖೆಯ ಪ್ರಮುಖ ಅಂಶವಾಗಿರಬೇಕು, ರಾಜಕೀಯ ಅಥವಾ ಧಾರ್ಮಿಕ ವಿಚಾರಗಳಲ್ಲ.

ಘಟನೆಗಳ ಉಲ್ಲೇಖ ಧರ್ಮಸ್ಥಳದಂತಹ ಪವಿತ್ರ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವಾರು ಅತ್ಯಾಚಾರ, ಕೊಲೆ ಮತ್ತು ಅಪಹರಣಗಳ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ ಕೆಲವು ಪ್ರಮುಖ ಪ್ರಕರಣಗಳನ್ನು ಆಂದೋಲನ ಉಲ್ಲೇಖಿಸಿದೆ:

  • 2012: ಸೌಜನ್ಯ ಅಪಹರಣ ಮತ್ತು ಕೊಲೆ.
  • 2012: ಸೌಜನ್ಯ ಪ್ರಕರಣಕ್ಕೆ 20 ದಿನಗಳ ಮೊದಲು ಆನೆ ಮಾವುತ ನಾರಾಯಣರೊಂದಿಗೆ ಅವರ ತಂಗಿ ಯಮುನಾ ಕೊಲೆ.
  • 1986: ಪದ್ಮಲತಾ ಅಪಹರಣ, ಅತ್ಯಾಚಾರ ಮತ್ತು ಹತ್ಯೆ.
  • 1979: ಟೀಚರ್‌ ವೇದವಲ್ಲಿ ಮೇಲಿನ ದಾಳಿ, ಅತ್ಯಾಚಾರ ಮತ್ತು ಸುಟ್ಟು ಕೊಲೆ.

ಈ ಪ್ರಕರಣಗಳ ಜೊತೆಗೆ ಇನ್ನೂ ಹಲವು ಮಹಿಳೆಯರು ನಾಪತ್ತೆಯಾಗಿರುವುದು ಅಥವಾ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆಂದೋಲನ ಹೇಳಿದೆ. ಈ ಘಟನೆಗಳನ್ನು ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಪರಿಗಣಿಸದಿರುವುದು ಆಘಾತಕಾರಿ ಎಂದು ಆಂದೋಲನ ತಿಳಿಸಿದೆ.

ಹಾಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಮೇಲೆ ಪ್ರಭಾವ ಬೀರುವಷ್ಟರ ಮಟ್ಟಿಗೆ ಕೆಲವು ಮಾಧ್ಯಮಗಳಲ್ಲಿ ʼಮೀಡಿಯಾ ಟ್ರಯಲ್‌ʼ ನಡೆಯುತ್ತಿದೆ ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆಗಳನ್ನು ಆಯೋಜಿಸುತ್ತಿವೆ. ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ತನಿಖೆ ಮಹಿಳೆಯರ ಘನತೆಸುರಕ್ಷತೆಯನ್ನು ಕೇಂದ್ರೀಕರಿಸಬೇಕು; ರಾಜಕೀಯಧಾರ್ಮಿಕ ವಿಚಾರಗಳನ್ನಲ್ಲಎಂದು ಕೊಂದವರು ಯಾರು ಆಂದೋಲನವು ಆಗ್ರಹಿಸಿದೆ.

ಈ ಹಿನ್ನೆಲೆಯಲ್ಲಿ, ಸಾಕ್ಷಿಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಪೂರ್ವ ನಿರ್ಧರಿತ ಹೇಳಿಕೆಗಳನ್ನು ನೀಡುತ್ತಿರುವ ರಾಜಕೀಯ ನಾಯಕರನ್ನು ನಿಯಂತ್ರಿಸಬೇಕು ಎಂದು ಆಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಮಾಡಿದೆ.

ಮಹಿಳಾ ಆಯೋಗದ ಸಕಾರಾತ್ಮಕ ಪ್ರತಿಕ್ರಿಯೆ ನಿರೀಕ್ಷೆ: ಈ ಗಂಭೀರ ಪ್ರಕರಣಗಳ ವಿಚಾರಣೆಗಾಗಿ ಎಸ್‌ಐಟಿ ರಚನೆಯಲ್ಲಿ ಮಹಿಳಾ ಆಯೋಗದ ಸಕಾರಾತ್ಮಕ ಪಾತ್ರವನ್ನು ಆಂದೋಲನ ಶ್ಲಾಘಿಸಿದೆ. ಪ್ರಸ್ತುತ ಮಹಿಳಾ ಆಯೋಗದ ಅಧ್ಯಕ್ಷರಾಗಿರುವ ಡಾ. ನಾಗಲಕ್ಷ್ಮಿ ಚೌಧರಿಯವರು ಈ ಪ್ರಕರಣದಲ್ಲೂ ನ್ಯಾಯದ ಪರವಾಗಿ ದನಿಯೆತ್ತುತ್ತಾರೆ ಎಂದು ಆಂದೋಲನದ ಪ್ರತಿನಿಧಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹೋರಾಟವು ಕೇವಲ ಆಯೋಗದ ಜವಾಬ್ದಾರಿಯಲ್ಲ, ಬದಲಾಗಿ ದೌರ್ಜನ್ಯಕ್ಕೆ ತುತ್ತಾದ ಮಹಿಳೆಯರಿಗೆ ನ್ಯಾಯವನ್ನು ಒದಗಿಸುವ ಚಾರಿತ್ರಿಕ ಜವಾಬ್ದಾರಿಯೂ ಹೌದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆಂದೋಲನದಲ್ಲಿ ಭಾಗವಹಿಸಿದವರು: ಈ ಆಂದೋಲನದಲ್ಲಿ “ನಾವೆದ್ದು ನಿಲ್ಲದಿದ್ದರೆ” ಸಂಘಟನೆಯ ಮಮತಾ ಯಜಮಾನ್, ಮಧುಭೂಷಣ್, ಜನವಾದಿ ಮಹಿಳಾ ಸಂಘಟನೆಯ ಲಕ್ಷ್ಮಿ ಕೆ.ಎಸ್, ಮಾನಸ ಬಳಗದ ಚಂಪಾವತಿ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಗೌರಿ, ದಲಿತ ಮಹಿಳಾ ಸಂಘಟನೆಯ ನಾಗಮಣಿ, ಮಹಿಳಾ ಮುನ್ನಡೆ ಮತ್ತು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ಸಾಧನಾ ಮಹಿಳಾ ಗುಂಪಿನ ವಿನುತಾ, ಚಂದ್ರಶಿ, ಗೀತಾ, ಆಯೆಷಾ, ಹಸಿರು ದಳದ ಮೀನಾಕ್ಷಿ ಮತ್ತು ಶಶಿಕಲಾ ಸೇರಿದಂತೆ ಅನೇಕ ಮಹಿಳಾ ಹಕ್ಕುಗಳ ಹೋರಾಟಗಾರರು ಭಾಗವಹಿಸಿದ್ದರು.

ಪೊಲೀಸ್ ಮಹಾನಿರ್ದೇಶಕರ ಭೇಟಿ ಈ ಆಂದೋಲನದ ಪ್ರತಿನಿಧಿಗಳಾದ ಮಧುಭೂಷಣ್, ಮನು ಚೌಧರಿ, ವಿನಯ್ ಶ್ರೀನಿವಾಸ್, ಮೀನಾಕ್ಷಿ ಮತ್ತು ಪದ್ಮಾವತಿ ಅವರು ಆಗಸ್ಟ್ 28ರಂದು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ, ಸಾಕ್ಷಿಗಳ ಮೇಲೆ ಮಾಧ್ಯಮ ಟ್ರಯಲ್ ನಡೆಯುತ್ತಿರುವ ಬಗ್ಗೆ ಗಮನ ಸೆಳೆದರು ಮತ್ತು ಅದನ್ನು ತಡೆಗಟ್ಟುವಂತೆ ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...