Homeಕರ್ನಾಟಕಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ 'ಕೊಂದವರು ಯಾರು' ಆಂದೋಲನದಿಂದ...

ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ ‘ಕೊಂದವರು ಯಾರು’ ಆಂದೋಲನದಿಂದ ಹಕ್ಕೊತ್ತಾಯ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸಮಗ್ರ ತನಿಖೆಗಾಗಿ “ಕೊಂದವರು ಯಾರು” (“Who Killed Women in Dharmasthala”) ಜನಾಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದೆ.

ಪ್ರಮುಖ ಬೇಡಿಕೆಗಳು: ಈ ಪತ್ರದಲ್ಲಿ ಆಂದೋಲನವು ಕೆಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ:

  • ಮಹಿಳೆಯರ ನಾಪತ್ತೆ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ರಚಿಸಲಾದ ವಿಶೇಷ ತನಿಖಾ ತಂಡ (S.I.T) ಈ ಪ್ರಕರಣಗಳನ್ನು ತನಿಖೆಯ ಕೇಂದ್ರವನ್ನಾಗಿ ಇಟ್ಟುಕೊಳ್ಳಬೇಕು.
  • ತನಿಖೆಯು ಯಾವುದೇ ಅಡ್ಡಿ ಆತಂಕಗಳಿಲ್ಲದೆ ತಾರ್ಕಿಕ ಅಂತ್ಯ ಮುಟ್ಟುವವರೆಗೂ ಮುಂದುವರೆಯಬೇಕು. ಈ ಪ್ರಕ್ರಿಯೆಗೆ ಸರ್ಕಾರ ಅಥವಾ ಯಾವುದೇ ಪ್ರಭಾವಿ ಶಕ್ತಿಗಳಿಂದ ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವ ಪ್ರಯತ್ನಗಳು ನಡೆಯಬಾರದು.
  • ತನಿಖೆಗೆ ಅಡ್ಡಿಪಡಿಸುತ್ತಿರುವ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕೆಲವು ಮಾಧ್ಯಮಗಳಿಗೆ ಪರಿಸ್ಥಿತಿಯ ಗಂಭೀರತೆಯನ್ನು ಮನವರಿಕೆ ಮಾಡಿಕೊಡಬೇಕು.
  • ಮಹಿಳೆಯರ ಘನತೆ ಮತ್ತು ಸುರಕ್ಷತೆಯು ತನಿಖೆಯ ಪ್ರಮುಖ ಅಂಶವಾಗಿರಬೇಕು, ರಾಜಕೀಯ ಅಥವಾ ಧಾರ್ಮಿಕ ವಿಚಾರಗಳಲ್ಲ.

ಘಟನೆಗಳ ಉಲ್ಲೇಖ ಧರ್ಮಸ್ಥಳದಂತಹ ಪವಿತ್ರ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವಾರು ಅತ್ಯಾಚಾರ, ಕೊಲೆ ಮತ್ತು ಅಪಹರಣಗಳ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ ಕೆಲವು ಪ್ರಮುಖ ಪ್ರಕರಣಗಳನ್ನು ಆಂದೋಲನ ಉಲ್ಲೇಖಿಸಿದೆ:

  • 2012: ಸೌಜನ್ಯ ಅಪಹರಣ ಮತ್ತು ಕೊಲೆ.
  • 2012: ಸೌಜನ್ಯ ಪ್ರಕರಣಕ್ಕೆ 20 ದಿನಗಳ ಮೊದಲು ಆನೆ ಮಾವುತ ನಾರಾಯಣರೊಂದಿಗೆ ಅವರ ತಂಗಿ ಯಮುನಾ ಕೊಲೆ.
  • 1986: ಪದ್ಮಲತಾ ಅಪಹರಣ, ಅತ್ಯಾಚಾರ ಮತ್ತು ಹತ್ಯೆ.
  • 1979: ಟೀಚರ್‌ ವೇದವಲ್ಲಿ ಮೇಲಿನ ದಾಳಿ, ಅತ್ಯಾಚಾರ ಮತ್ತು ಸುಟ್ಟು ಕೊಲೆ.

ಈ ಪ್ರಕರಣಗಳ ಜೊತೆಗೆ ಇನ್ನೂ ಹಲವು ಮಹಿಳೆಯರು ನಾಪತ್ತೆಯಾಗಿರುವುದು ಅಥವಾ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆಂದೋಲನ ಹೇಳಿದೆ. ಈ ಘಟನೆಗಳನ್ನು ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಪರಿಗಣಿಸದಿರುವುದು ಆಘಾತಕಾರಿ ಎಂದು ಆಂದೋಲನ ತಿಳಿಸಿದೆ.

ಹಾಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಮೇಲೆ ಪ್ರಭಾವ ಬೀರುವಷ್ಟರ ಮಟ್ಟಿಗೆ ಕೆಲವು ಮಾಧ್ಯಮಗಳಲ್ಲಿ ʼಮೀಡಿಯಾ ಟ್ರಯಲ್‌ʼ ನಡೆಯುತ್ತಿದೆ ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆಗಳನ್ನು ಆಯೋಜಿಸುತ್ತಿವೆ. ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ತನಿಖೆ ಮಹಿಳೆಯರ ಘನತೆಸುರಕ್ಷತೆಯನ್ನು ಕೇಂದ್ರೀಕರಿಸಬೇಕು; ರಾಜಕೀಯಧಾರ್ಮಿಕ ವಿಚಾರಗಳನ್ನಲ್ಲಎಂದು ಕೊಂದವರು ಯಾರು ಆಂದೋಲನವು ಆಗ್ರಹಿಸಿದೆ.

ಈ ಹಿನ್ನೆಲೆಯಲ್ಲಿ, ಸಾಕ್ಷಿಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಪೂರ್ವ ನಿರ್ಧರಿತ ಹೇಳಿಕೆಗಳನ್ನು ನೀಡುತ್ತಿರುವ ರಾಜಕೀಯ ನಾಯಕರನ್ನು ನಿಯಂತ್ರಿಸಬೇಕು ಎಂದು ಆಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಮಾಡಿದೆ.

ಮಹಿಳಾ ಆಯೋಗದ ಸಕಾರಾತ್ಮಕ ಪ್ರತಿಕ್ರಿಯೆ ನಿರೀಕ್ಷೆ: ಈ ಗಂಭೀರ ಪ್ರಕರಣಗಳ ವಿಚಾರಣೆಗಾಗಿ ಎಸ್‌ಐಟಿ ರಚನೆಯಲ್ಲಿ ಮಹಿಳಾ ಆಯೋಗದ ಸಕಾರಾತ್ಮಕ ಪಾತ್ರವನ್ನು ಆಂದೋಲನ ಶ್ಲಾಘಿಸಿದೆ. ಪ್ರಸ್ತುತ ಮಹಿಳಾ ಆಯೋಗದ ಅಧ್ಯಕ್ಷರಾಗಿರುವ ಡಾ. ನಾಗಲಕ್ಷ್ಮಿ ಚೌಧರಿಯವರು ಈ ಪ್ರಕರಣದಲ್ಲೂ ನ್ಯಾಯದ ಪರವಾಗಿ ದನಿಯೆತ್ತುತ್ತಾರೆ ಎಂದು ಆಂದೋಲನದ ಪ್ರತಿನಿಧಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹೋರಾಟವು ಕೇವಲ ಆಯೋಗದ ಜವಾಬ್ದಾರಿಯಲ್ಲ, ಬದಲಾಗಿ ದೌರ್ಜನ್ಯಕ್ಕೆ ತುತ್ತಾದ ಮಹಿಳೆಯರಿಗೆ ನ್ಯಾಯವನ್ನು ಒದಗಿಸುವ ಚಾರಿತ್ರಿಕ ಜವಾಬ್ದಾರಿಯೂ ಹೌದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆಂದೋಲನದಲ್ಲಿ ಭಾಗವಹಿಸಿದವರು: ಈ ಆಂದೋಲನದಲ್ಲಿ “ನಾವೆದ್ದು ನಿಲ್ಲದಿದ್ದರೆ” ಸಂಘಟನೆಯ ಮಮತಾ ಯಜಮಾನ್, ಮಧುಭೂಷಣ್, ಜನವಾದಿ ಮಹಿಳಾ ಸಂಘಟನೆಯ ಲಕ್ಷ್ಮಿ ಕೆ.ಎಸ್, ಮಾನಸ ಬಳಗದ ಚಂಪಾವತಿ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಗೌರಿ, ದಲಿತ ಮಹಿಳಾ ಸಂಘಟನೆಯ ನಾಗಮಣಿ, ಮಹಿಳಾ ಮುನ್ನಡೆ ಮತ್ತು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ಸಾಧನಾ ಮಹಿಳಾ ಗುಂಪಿನ ವಿನುತಾ, ಚಂದ್ರಶಿ, ಗೀತಾ, ಆಯೆಷಾ, ಹಸಿರು ದಳದ ಮೀನಾಕ್ಷಿ ಮತ್ತು ಶಶಿಕಲಾ ಸೇರಿದಂತೆ ಅನೇಕ ಮಹಿಳಾ ಹಕ್ಕುಗಳ ಹೋರಾಟಗಾರರು ಭಾಗವಹಿಸಿದ್ದರು.

ಪೊಲೀಸ್ ಮಹಾನಿರ್ದೇಶಕರ ಭೇಟಿ ಈ ಆಂದೋಲನದ ಪ್ರತಿನಿಧಿಗಳಾದ ಮಧುಭೂಷಣ್, ಮನು ಚೌಧರಿ, ವಿನಯ್ ಶ್ರೀನಿವಾಸ್, ಮೀನಾಕ್ಷಿ ಮತ್ತು ಪದ್ಮಾವತಿ ಅವರು ಆಗಸ್ಟ್ 28ರಂದು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ, ಸಾಕ್ಷಿಗಳ ಮೇಲೆ ಮಾಧ್ಯಮ ಟ್ರಯಲ್ ನಡೆಯುತ್ತಿರುವ ಬಗ್ಗೆ ಗಮನ ಸೆಳೆದರು ಮತ್ತು ಅದನ್ನು ತಡೆಗಟ್ಟುವಂತೆ ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...