Homeಕರ್ನಾಟಕಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ 'ಕೊಂದವರು ಯಾರು' ಆಂದೋಲನದಿಂದ...

ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ ‘ಕೊಂದವರು ಯಾರು’ ಆಂದೋಲನದಿಂದ ಹಕ್ಕೊತ್ತಾಯ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸಮಗ್ರ ತನಿಖೆಗಾಗಿ “ಕೊಂದವರು ಯಾರು” (“Who Killed Women in Dharmasthala”) ಜನಾಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದೆ.

ಪ್ರಮುಖ ಬೇಡಿಕೆಗಳು: ಈ ಪತ್ರದಲ್ಲಿ ಆಂದೋಲನವು ಕೆಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ:

  • ಮಹಿಳೆಯರ ನಾಪತ್ತೆ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ರಚಿಸಲಾದ ವಿಶೇಷ ತನಿಖಾ ತಂಡ (S.I.T) ಈ ಪ್ರಕರಣಗಳನ್ನು ತನಿಖೆಯ ಕೇಂದ್ರವನ್ನಾಗಿ ಇಟ್ಟುಕೊಳ್ಳಬೇಕು.
  • ತನಿಖೆಯು ಯಾವುದೇ ಅಡ್ಡಿ ಆತಂಕಗಳಿಲ್ಲದೆ ತಾರ್ಕಿಕ ಅಂತ್ಯ ಮುಟ್ಟುವವರೆಗೂ ಮುಂದುವರೆಯಬೇಕು. ಈ ಪ್ರಕ್ರಿಯೆಗೆ ಸರ್ಕಾರ ಅಥವಾ ಯಾವುದೇ ಪ್ರಭಾವಿ ಶಕ್ತಿಗಳಿಂದ ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವ ಪ್ರಯತ್ನಗಳು ನಡೆಯಬಾರದು.
  • ತನಿಖೆಗೆ ಅಡ್ಡಿಪಡಿಸುತ್ತಿರುವ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕೆಲವು ಮಾಧ್ಯಮಗಳಿಗೆ ಪರಿಸ್ಥಿತಿಯ ಗಂಭೀರತೆಯನ್ನು ಮನವರಿಕೆ ಮಾಡಿಕೊಡಬೇಕು.
  • ಮಹಿಳೆಯರ ಘನತೆ ಮತ್ತು ಸುರಕ್ಷತೆಯು ತನಿಖೆಯ ಪ್ರಮುಖ ಅಂಶವಾಗಿರಬೇಕು, ರಾಜಕೀಯ ಅಥವಾ ಧಾರ್ಮಿಕ ವಿಚಾರಗಳಲ್ಲ.

ಘಟನೆಗಳ ಉಲ್ಲೇಖ ಧರ್ಮಸ್ಥಳದಂತಹ ಪವಿತ್ರ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವಾರು ಅತ್ಯಾಚಾರ, ಕೊಲೆ ಮತ್ತು ಅಪಹರಣಗಳ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ ಕೆಲವು ಪ್ರಮುಖ ಪ್ರಕರಣಗಳನ್ನು ಆಂದೋಲನ ಉಲ್ಲೇಖಿಸಿದೆ:

  • 2012: ಸೌಜನ್ಯ ಅಪಹರಣ ಮತ್ತು ಕೊಲೆ.
  • 2012: ಸೌಜನ್ಯ ಪ್ರಕರಣಕ್ಕೆ 20 ದಿನಗಳ ಮೊದಲು ಆನೆ ಮಾವುತ ನಾರಾಯಣರೊಂದಿಗೆ ಅವರ ತಂಗಿ ಯಮುನಾ ಕೊಲೆ.
  • 1986: ಪದ್ಮಲತಾ ಅಪಹರಣ, ಅತ್ಯಾಚಾರ ಮತ್ತು ಹತ್ಯೆ.
  • 1979: ಟೀಚರ್‌ ವೇದವಲ್ಲಿ ಮೇಲಿನ ದಾಳಿ, ಅತ್ಯಾಚಾರ ಮತ್ತು ಸುಟ್ಟು ಕೊಲೆ.

ಈ ಪ್ರಕರಣಗಳ ಜೊತೆಗೆ ಇನ್ನೂ ಹಲವು ಮಹಿಳೆಯರು ನಾಪತ್ತೆಯಾಗಿರುವುದು ಅಥವಾ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆಂದೋಲನ ಹೇಳಿದೆ. ಈ ಘಟನೆಗಳನ್ನು ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಪರಿಗಣಿಸದಿರುವುದು ಆಘಾತಕಾರಿ ಎಂದು ಆಂದೋಲನ ತಿಳಿಸಿದೆ.

ಹಾಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಮೇಲೆ ಪ್ರಭಾವ ಬೀರುವಷ್ಟರ ಮಟ್ಟಿಗೆ ಕೆಲವು ಮಾಧ್ಯಮಗಳಲ್ಲಿ ʼಮೀಡಿಯಾ ಟ್ರಯಲ್‌ʼ ನಡೆಯುತ್ತಿದೆ ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆಗಳನ್ನು ಆಯೋಜಿಸುತ್ತಿವೆ. ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ತನಿಖೆ ಮಹಿಳೆಯರ ಘನತೆಸುರಕ್ಷತೆಯನ್ನು ಕೇಂದ್ರೀಕರಿಸಬೇಕು; ರಾಜಕೀಯಧಾರ್ಮಿಕ ವಿಚಾರಗಳನ್ನಲ್ಲಎಂದು ಕೊಂದವರು ಯಾರು ಆಂದೋಲನವು ಆಗ್ರಹಿಸಿದೆ.

ಈ ಹಿನ್ನೆಲೆಯಲ್ಲಿ, ಸಾಕ್ಷಿಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಪೂರ್ವ ನಿರ್ಧರಿತ ಹೇಳಿಕೆಗಳನ್ನು ನೀಡುತ್ತಿರುವ ರಾಜಕೀಯ ನಾಯಕರನ್ನು ನಿಯಂತ್ರಿಸಬೇಕು ಎಂದು ಆಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಮಾಡಿದೆ.

ಮಹಿಳಾ ಆಯೋಗದ ಸಕಾರಾತ್ಮಕ ಪ್ರತಿಕ್ರಿಯೆ ನಿರೀಕ್ಷೆ: ಈ ಗಂಭೀರ ಪ್ರಕರಣಗಳ ವಿಚಾರಣೆಗಾಗಿ ಎಸ್‌ಐಟಿ ರಚನೆಯಲ್ಲಿ ಮಹಿಳಾ ಆಯೋಗದ ಸಕಾರಾತ್ಮಕ ಪಾತ್ರವನ್ನು ಆಂದೋಲನ ಶ್ಲಾಘಿಸಿದೆ. ಪ್ರಸ್ತುತ ಮಹಿಳಾ ಆಯೋಗದ ಅಧ್ಯಕ್ಷರಾಗಿರುವ ಡಾ. ನಾಗಲಕ್ಷ್ಮಿ ಚೌಧರಿಯವರು ಈ ಪ್ರಕರಣದಲ್ಲೂ ನ್ಯಾಯದ ಪರವಾಗಿ ದನಿಯೆತ್ತುತ್ತಾರೆ ಎಂದು ಆಂದೋಲನದ ಪ್ರತಿನಿಧಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹೋರಾಟವು ಕೇವಲ ಆಯೋಗದ ಜವಾಬ್ದಾರಿಯಲ್ಲ, ಬದಲಾಗಿ ದೌರ್ಜನ್ಯಕ್ಕೆ ತುತ್ತಾದ ಮಹಿಳೆಯರಿಗೆ ನ್ಯಾಯವನ್ನು ಒದಗಿಸುವ ಚಾರಿತ್ರಿಕ ಜವಾಬ್ದಾರಿಯೂ ಹೌದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆಂದೋಲನದಲ್ಲಿ ಭಾಗವಹಿಸಿದವರು: ಈ ಆಂದೋಲನದಲ್ಲಿ “ನಾವೆದ್ದು ನಿಲ್ಲದಿದ್ದರೆ” ಸಂಘಟನೆಯ ಮಮತಾ ಯಜಮಾನ್, ಮಧುಭೂಷಣ್, ಜನವಾದಿ ಮಹಿಳಾ ಸಂಘಟನೆಯ ಲಕ್ಷ್ಮಿ ಕೆ.ಎಸ್, ಮಾನಸ ಬಳಗದ ಚಂಪಾವತಿ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಗೌರಿ, ದಲಿತ ಮಹಿಳಾ ಸಂಘಟನೆಯ ನಾಗಮಣಿ, ಮಹಿಳಾ ಮುನ್ನಡೆ ಮತ್ತು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ಸಾಧನಾ ಮಹಿಳಾ ಗುಂಪಿನ ವಿನುತಾ, ಚಂದ್ರಶಿ, ಗೀತಾ, ಆಯೆಷಾ, ಹಸಿರು ದಳದ ಮೀನಾಕ್ಷಿ ಮತ್ತು ಶಶಿಕಲಾ ಸೇರಿದಂತೆ ಅನೇಕ ಮಹಿಳಾ ಹಕ್ಕುಗಳ ಹೋರಾಟಗಾರರು ಭಾಗವಹಿಸಿದ್ದರು.

ಪೊಲೀಸ್ ಮಹಾನಿರ್ದೇಶಕರ ಭೇಟಿ ಈ ಆಂದೋಲನದ ಪ್ರತಿನಿಧಿಗಳಾದ ಮಧುಭೂಷಣ್, ಮನು ಚೌಧರಿ, ವಿನಯ್ ಶ್ರೀನಿವಾಸ್, ಮೀನಾಕ್ಷಿ ಮತ್ತು ಪದ್ಮಾವತಿ ಅವರು ಆಗಸ್ಟ್ 28ರಂದು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ, ಸಾಕ್ಷಿಗಳ ಮೇಲೆ ಮಾಧ್ಯಮ ಟ್ರಯಲ್ ನಡೆಯುತ್ತಿರುವ ಬಗ್ಗೆ ಗಮನ ಸೆಳೆದರು ಮತ್ತು ಅದನ್ನು ತಡೆಗಟ್ಟುವಂತೆ ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...