Homeಮುಖಪುಟಧರ್ಮೇಂದ್ರ ಪ್ರಧಾನ್ ತನ್ನ ನಾಲಿಗೆ ಹಿಡಿತದಲ್ಲಿಟ್ಟುಕೊಳ್ಳಬೇಕು - ಸಿಎಂ ಸ್ಟಾಲಿನ್ ಎಚ್ಚರಿಕೆ

ಧರ್ಮೇಂದ್ರ ಪ್ರಧಾನ್ ತನ್ನ ನಾಲಿಗೆ ಹಿಡಿತದಲ್ಲಿಟ್ಟುಕೊಳ್ಳಬೇಕು – ಸಿಎಂ ಸ್ಟಾಲಿನ್ ಎಚ್ಚರಿಕೆ

- Advertisement -
- Advertisement -

ಧರ್ಮೇಂದ್ರ ಪ್ರಧಾನ್ ಅವರು ಡಿಎಂಕೆ ಸಂಸದರ ಕುರಿತು ಸದನದಲ್ಲಿ ನೀಡಿದ್ದ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸ್ಟಾಲಿನ್, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಕ್ಷಮಿಸುತ್ತಾರೆಯೇ ಎಂದು ಕೇಳಿದ್ದಾರೆ. ಅವರ ಹೇಳಿಕೆಯು ತಮಿಳುನಾಡಿನ ನಿವಾಸಿಗಳಿಗೆ ಮಾಡಿದ ಅವಮಾನ ಎಂದು ಅವರು ಹೇಳಿಕೊಂಡಿದ್ದಾರೆ.

“ತಾನು ರಾಜನೆಂದು ಭಾವಿಸಿ ದುರಹಂಕಾರದಿಂದ ಮಾತನಾಡುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ತನ್ನ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. “ತಮಿಳುನಾಡಿಗೆ ನಿಧಿ ನೀಡದೆ [ನಮ್ಮನ್ನು] ಮೋಸ ಮಾಡುತ್ತಿರುವ ನೀವು, ತಮಿಳುನಾಡು ಸಂಸದರು ಅನಾಗರಿಕರು ಎಂದು ಹೇಳುತ್ತಿದ್ದೀರಾ?” ಎಂದು ಕೇಳಿದ್ದಾರೆ.

 ಸೋಮವಾರ ಸನದಲ್ಲಿ ಎನ್‌ಇಪಿ ಮತ್ತು ಹಿಂದಿ ಹೇರಿಕೆ ಬಗ್ಗೆ ಸದನದಲ್ಲಿ ಮಾತನಾಡಿದ್ದ ಪ್ರಧಾನ್ “ತಮಿಳುನಾಡು ಸರ್ಕಾರ ಆರಂಭದಲ್ಲಿ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಕೊಂಡಿತ್ತು. ಆದರೆ ಈಗ ಅವರು ನಿಲುವನ್ನು ಬದಲಾಯಿಸಿದ್ದಾರೆ. ಅವರು [ದ್ರಾವಿಡ ಮುನ್ನೇತ್ರ ಕಳಗಂ] ಅಪ್ರಾಮಾಣಿಕರು ಮತ್ತು ತಮಿಳುನಾಡಿನ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಭಾಷಾ ಅಡೆತಡೆಗಳನ್ನು ಹುಟ್ಟುಹಾಕುವುದು ಅವರ ಏಕೈಕ ಕೆಲಸ. ಅವರು ರಾಜಕೀಯ ಮಾಡುತ್ತಿದ್ದಾರೆ… ಅವರು ಪ್ರಜಾಪ್ರಭುತ್ವ ವಿರೋಧಿಗಳು ಮತ್ತು ಅನಾಗರಿಕರು.” ಎಂದು ಸಚಿವ ಪ್ರಧಾನ್ ಹೇಳಿದ್ದಾರೆ
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಆದೇಶದ ಕುರಿತು ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ ಯೋಜನೆಯ ಕುರಿತಾದ ತಿಳುವಳಿಕೆ ಪತ್ರವನ್ನು ತಮಿಳುನಾಡು ಸರ್ಕಾರ ತಿರಸ್ಕರಿಸಿದೆ ಎಂದು ಸೂಚಿಸುವ ಆಗಸ್ಟ್‌ನಲ್ಲಿ ಪ್ರಧಾನ್ ಅವರಿಂದ ಬಂದ ಸಂದೇಶವನ್ನು ಸ್ಟಾಲಿನ್ ಇದೇ ವೇಳೆ ಹಂಚಿಕೊಂಡಿದ್ದಾರೆ.

“ಎನ್‌ಇಪಿ [ರಾಷ್ಟ್ರೀಯ ಶಿಕ್ಷಣ ನೀತಿ] ಮತ್ತು ತ್ರಿಭಾಷಾ ನೀತಿಯ ಕುರಿತು ಪಿಎಂ ಶ್ರೀಗಾಗಿ ಮಾಡಿಕೊಂಡ ಒಪ್ಪಂದವನ್ನು ತಮಿಳುನಾಡು ಸರ್ಕಾರ ತಿರಸ್ಕರಿಸಿದೆ ಎಂದು ಹೇಳುವ ಪತ್ರವನ್ನು ನೀವು ಕಳುಹಿಸಿಲ್ಲವೇ?. ನಿಮ್ಮ ಕಾರ್ಯಕ್ರಮವನ್ನು ಜಾರಿಗೆ ತರಲು ನಾವು ಮುಂದೆ ಬಂದಿಲ್ಲ. ಹಾಗಿದ್ದಲ್ಲಿ, ಅದನ್ನು ಜಾರಿಗೆ ತರಲು ಯಾರೂ ನಮ್ಮನ್ನು ಒತ್ತಾಯಿಸಲು ಸಾಧ್ಯವಿಲ್ಲ.” ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.

“ತಮಿಳುನಾಡಿನ ವಿದ್ಯಾರ್ಥಿಗಳಿಗೆ ಬಾಕಿ ಇರುವ ಹಣವನ್ನು ನೀವು ಬಿಡುಗಡೆ ಮಾಡುತ್ತೀರಾ ಎಂಬುದನ್ನು ಸ್ಪಷ್ಟಪಡಿಸಿ. ಅದನ್ನು ನೀವು ನಮ್ಮಿಂದ ತೆರಿಗೆಯಾಗಿ ಸಂಗ್ರಹಿಸಿದ್ದೀರಿ” ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 28 ರಂದು ಪ್ರತಿಕ್ರಿಯಿಸಿದ್ದ ಸ್ಟಾಲಿನ್, ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಶಾಲೆಗಳಲ್ಲಿ ಮೂರನೇ ಭಾಷೆಯ ಬೋಧನೆಯನ್ನು ಒತ್ತಾಯಿಸುವುದು ಅನಗತ್ಯ ಎಂದು ಹೇಳಿದ್ದರು. “ಸುಧಾರಿತ ಅನುವಾದ ತಂತ್ರಜ್ಞಾನವು ಈಗಾಗಲೇ ಭಾಷಾ ಅಡೆತಡೆಗಳನ್ನು ತಕ್ಷಣವೇ ತೆಗೆದುಹಾಕುತ್ತದೆ. ವಿದ್ಯಾರ್ಥಿಗಳ ಮೇಲೆ ಹೆಚ್ಚುವರಿ ಭಾಷೆಗಳಿಂದ ಹೊರೆಯಾಗಬಾರದು.” ಎಂದು ತಿಳಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ನೀತಿಯು ಹಿಂದಿಯನ್ನು ಹೇರುವುದಿಲ್ಲ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ದ್ರಾವಿಡ ಮುನ್ನೇತ್ರ ಕಳಗಂ “ರಾಜಕೀಯ ಕಾರಣಗಳಿಗಾಗಿ” ಅದನ್ನು ವಿರೋಧಿಸುತ್ತಿದೆ ಎಂದು ಆರೋಪಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...