Homeಮುಖಪುಟಧರ್ಮೇಂದ್ರ ಪ್ರಧಾನ್ ತನ್ನ ನಾಲಿಗೆ ಹಿಡಿತದಲ್ಲಿಟ್ಟುಕೊಳ್ಳಬೇಕು - ಸಿಎಂ ಸ್ಟಾಲಿನ್ ಎಚ್ಚರಿಕೆ

ಧರ್ಮೇಂದ್ರ ಪ್ರಧಾನ್ ತನ್ನ ನಾಲಿಗೆ ಹಿಡಿತದಲ್ಲಿಟ್ಟುಕೊಳ್ಳಬೇಕು – ಸಿಎಂ ಸ್ಟಾಲಿನ್ ಎಚ್ಚರಿಕೆ

- Advertisement -
- Advertisement -

ಧರ್ಮೇಂದ್ರ ಪ್ರಧಾನ್ ಅವರು ಡಿಎಂಕೆ ಸಂಸದರ ಕುರಿತು ಸದನದಲ್ಲಿ ನೀಡಿದ್ದ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸ್ಟಾಲಿನ್, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಕ್ಷಮಿಸುತ್ತಾರೆಯೇ ಎಂದು ಕೇಳಿದ್ದಾರೆ. ಅವರ ಹೇಳಿಕೆಯು ತಮಿಳುನಾಡಿನ ನಿವಾಸಿಗಳಿಗೆ ಮಾಡಿದ ಅವಮಾನ ಎಂದು ಅವರು ಹೇಳಿಕೊಂಡಿದ್ದಾರೆ.

“ತಾನು ರಾಜನೆಂದು ಭಾವಿಸಿ ದುರಹಂಕಾರದಿಂದ ಮಾತನಾಡುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ತನ್ನ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. “ತಮಿಳುನಾಡಿಗೆ ನಿಧಿ ನೀಡದೆ [ನಮ್ಮನ್ನು] ಮೋಸ ಮಾಡುತ್ತಿರುವ ನೀವು, ತಮಿಳುನಾಡು ಸಂಸದರು ಅನಾಗರಿಕರು ಎಂದು ಹೇಳುತ್ತಿದ್ದೀರಾ?” ಎಂದು ಕೇಳಿದ್ದಾರೆ.

 ಸೋಮವಾರ ಸನದಲ್ಲಿ ಎನ್‌ಇಪಿ ಮತ್ತು ಹಿಂದಿ ಹೇರಿಕೆ ಬಗ್ಗೆ ಸದನದಲ್ಲಿ ಮಾತನಾಡಿದ್ದ ಪ್ರಧಾನ್ “ತಮಿಳುನಾಡು ಸರ್ಕಾರ ಆರಂಭದಲ್ಲಿ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಕೊಂಡಿತ್ತು. ಆದರೆ ಈಗ ಅವರು ನಿಲುವನ್ನು ಬದಲಾಯಿಸಿದ್ದಾರೆ. ಅವರು [ದ್ರಾವಿಡ ಮುನ್ನೇತ್ರ ಕಳಗಂ] ಅಪ್ರಾಮಾಣಿಕರು ಮತ್ತು ತಮಿಳುನಾಡಿನ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಭಾಷಾ ಅಡೆತಡೆಗಳನ್ನು ಹುಟ್ಟುಹಾಕುವುದು ಅವರ ಏಕೈಕ ಕೆಲಸ. ಅವರು ರಾಜಕೀಯ ಮಾಡುತ್ತಿದ್ದಾರೆ… ಅವರು ಪ್ರಜಾಪ್ರಭುತ್ವ ವಿರೋಧಿಗಳು ಮತ್ತು ಅನಾಗರಿಕರು.” ಎಂದು ಸಚಿವ ಪ್ರಧಾನ್ ಹೇಳಿದ್ದಾರೆ
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಆದೇಶದ ಕುರಿತು ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ ಯೋಜನೆಯ ಕುರಿತಾದ ತಿಳುವಳಿಕೆ ಪತ್ರವನ್ನು ತಮಿಳುನಾಡು ಸರ್ಕಾರ ತಿರಸ್ಕರಿಸಿದೆ ಎಂದು ಸೂಚಿಸುವ ಆಗಸ್ಟ್‌ನಲ್ಲಿ ಪ್ರಧಾನ್ ಅವರಿಂದ ಬಂದ ಸಂದೇಶವನ್ನು ಸ್ಟಾಲಿನ್ ಇದೇ ವೇಳೆ ಹಂಚಿಕೊಂಡಿದ್ದಾರೆ.

“ಎನ್‌ಇಪಿ [ರಾಷ್ಟ್ರೀಯ ಶಿಕ್ಷಣ ನೀತಿ] ಮತ್ತು ತ್ರಿಭಾಷಾ ನೀತಿಯ ಕುರಿತು ಪಿಎಂ ಶ್ರೀಗಾಗಿ ಮಾಡಿಕೊಂಡ ಒಪ್ಪಂದವನ್ನು ತಮಿಳುನಾಡು ಸರ್ಕಾರ ತಿರಸ್ಕರಿಸಿದೆ ಎಂದು ಹೇಳುವ ಪತ್ರವನ್ನು ನೀವು ಕಳುಹಿಸಿಲ್ಲವೇ?. ನಿಮ್ಮ ಕಾರ್ಯಕ್ರಮವನ್ನು ಜಾರಿಗೆ ತರಲು ನಾವು ಮುಂದೆ ಬಂದಿಲ್ಲ. ಹಾಗಿದ್ದಲ್ಲಿ, ಅದನ್ನು ಜಾರಿಗೆ ತರಲು ಯಾರೂ ನಮ್ಮನ್ನು ಒತ್ತಾಯಿಸಲು ಸಾಧ್ಯವಿಲ್ಲ.” ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.

“ತಮಿಳುನಾಡಿನ ವಿದ್ಯಾರ್ಥಿಗಳಿಗೆ ಬಾಕಿ ಇರುವ ಹಣವನ್ನು ನೀವು ಬಿಡುಗಡೆ ಮಾಡುತ್ತೀರಾ ಎಂಬುದನ್ನು ಸ್ಪಷ್ಟಪಡಿಸಿ. ಅದನ್ನು ನೀವು ನಮ್ಮಿಂದ ತೆರಿಗೆಯಾಗಿ ಸಂಗ್ರಹಿಸಿದ್ದೀರಿ” ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 28 ರಂದು ಪ್ರತಿಕ್ರಿಯಿಸಿದ್ದ ಸ್ಟಾಲಿನ್, ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಶಾಲೆಗಳಲ್ಲಿ ಮೂರನೇ ಭಾಷೆಯ ಬೋಧನೆಯನ್ನು ಒತ್ತಾಯಿಸುವುದು ಅನಗತ್ಯ ಎಂದು ಹೇಳಿದ್ದರು. “ಸುಧಾರಿತ ಅನುವಾದ ತಂತ್ರಜ್ಞಾನವು ಈಗಾಗಲೇ ಭಾಷಾ ಅಡೆತಡೆಗಳನ್ನು ತಕ್ಷಣವೇ ತೆಗೆದುಹಾಕುತ್ತದೆ. ವಿದ್ಯಾರ್ಥಿಗಳ ಮೇಲೆ ಹೆಚ್ಚುವರಿ ಭಾಷೆಗಳಿಂದ ಹೊರೆಯಾಗಬಾರದು.” ಎಂದು ತಿಳಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ನೀತಿಯು ಹಿಂದಿಯನ್ನು ಹೇರುವುದಿಲ್ಲ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ದ್ರಾವಿಡ ಮುನ್ನೇತ್ರ ಕಳಗಂ “ರಾಜಕೀಯ ಕಾರಣಗಳಿಗಾಗಿ” ಅದನ್ನು ವಿರೋಧಿಸುತ್ತಿದೆ ಎಂದು ಆರೋಪಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...