Homeಮುಖಪುಟಧರ್ಮೇಂದ್ರ ಪ್ರಧಾನ್ ತನ್ನ ನಾಲಿಗೆ ಹಿಡಿತದಲ್ಲಿಟ್ಟುಕೊಳ್ಳಬೇಕು - ಸಿಎಂ ಸ್ಟಾಲಿನ್ ಎಚ್ಚರಿಕೆ

ಧರ್ಮೇಂದ್ರ ಪ್ರಧಾನ್ ತನ್ನ ನಾಲಿಗೆ ಹಿಡಿತದಲ್ಲಿಟ್ಟುಕೊಳ್ಳಬೇಕು – ಸಿಎಂ ಸ್ಟಾಲಿನ್ ಎಚ್ಚರಿಕೆ

- Advertisement -
- Advertisement -

ಧರ್ಮೇಂದ್ರ ಪ್ರಧಾನ್ ಅವರು ಡಿಎಂಕೆ ಸಂಸದರ ಕುರಿತು ಸದನದಲ್ಲಿ ನೀಡಿದ್ದ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸ್ಟಾಲಿನ್, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಕ್ಷಮಿಸುತ್ತಾರೆಯೇ ಎಂದು ಕೇಳಿದ್ದಾರೆ. ಅವರ ಹೇಳಿಕೆಯು ತಮಿಳುನಾಡಿನ ನಿವಾಸಿಗಳಿಗೆ ಮಾಡಿದ ಅವಮಾನ ಎಂದು ಅವರು ಹೇಳಿಕೊಂಡಿದ್ದಾರೆ.

“ತಾನು ರಾಜನೆಂದು ಭಾವಿಸಿ ದುರಹಂಕಾರದಿಂದ ಮಾತನಾಡುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ತನ್ನ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. “ತಮಿಳುನಾಡಿಗೆ ನಿಧಿ ನೀಡದೆ [ನಮ್ಮನ್ನು] ಮೋಸ ಮಾಡುತ್ತಿರುವ ನೀವು, ತಮಿಳುನಾಡು ಸಂಸದರು ಅನಾಗರಿಕರು ಎಂದು ಹೇಳುತ್ತಿದ್ದೀರಾ?” ಎಂದು ಕೇಳಿದ್ದಾರೆ.

 ಸೋಮವಾರ ಸನದಲ್ಲಿ ಎನ್‌ಇಪಿ ಮತ್ತು ಹಿಂದಿ ಹೇರಿಕೆ ಬಗ್ಗೆ ಸದನದಲ್ಲಿ ಮಾತನಾಡಿದ್ದ ಪ್ರಧಾನ್ “ತಮಿಳುನಾಡು ಸರ್ಕಾರ ಆರಂಭದಲ್ಲಿ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಕೊಂಡಿತ್ತು. ಆದರೆ ಈಗ ಅವರು ನಿಲುವನ್ನು ಬದಲಾಯಿಸಿದ್ದಾರೆ. ಅವರು [ದ್ರಾವಿಡ ಮುನ್ನೇತ್ರ ಕಳಗಂ] ಅಪ್ರಾಮಾಣಿಕರು ಮತ್ತು ತಮಿಳುನಾಡಿನ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಭಾಷಾ ಅಡೆತಡೆಗಳನ್ನು ಹುಟ್ಟುಹಾಕುವುದು ಅವರ ಏಕೈಕ ಕೆಲಸ. ಅವರು ರಾಜಕೀಯ ಮಾಡುತ್ತಿದ್ದಾರೆ… ಅವರು ಪ್ರಜಾಪ್ರಭುತ್ವ ವಿರೋಧಿಗಳು ಮತ್ತು ಅನಾಗರಿಕರು.” ಎಂದು ಸಚಿವ ಪ್ರಧಾನ್ ಹೇಳಿದ್ದಾರೆ
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಆದೇಶದ ಕುರಿತು ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ ಯೋಜನೆಯ ಕುರಿತಾದ ತಿಳುವಳಿಕೆ ಪತ್ರವನ್ನು ತಮಿಳುನಾಡು ಸರ್ಕಾರ ತಿರಸ್ಕರಿಸಿದೆ ಎಂದು ಸೂಚಿಸುವ ಆಗಸ್ಟ್‌ನಲ್ಲಿ ಪ್ರಧಾನ್ ಅವರಿಂದ ಬಂದ ಸಂದೇಶವನ್ನು ಸ್ಟಾಲಿನ್ ಇದೇ ವೇಳೆ ಹಂಚಿಕೊಂಡಿದ್ದಾರೆ.

“ಎನ್‌ಇಪಿ [ರಾಷ್ಟ್ರೀಯ ಶಿಕ್ಷಣ ನೀತಿ] ಮತ್ತು ತ್ರಿಭಾಷಾ ನೀತಿಯ ಕುರಿತು ಪಿಎಂ ಶ್ರೀಗಾಗಿ ಮಾಡಿಕೊಂಡ ಒಪ್ಪಂದವನ್ನು ತಮಿಳುನಾಡು ಸರ್ಕಾರ ತಿರಸ್ಕರಿಸಿದೆ ಎಂದು ಹೇಳುವ ಪತ್ರವನ್ನು ನೀವು ಕಳುಹಿಸಿಲ್ಲವೇ?. ನಿಮ್ಮ ಕಾರ್ಯಕ್ರಮವನ್ನು ಜಾರಿಗೆ ತರಲು ನಾವು ಮುಂದೆ ಬಂದಿಲ್ಲ. ಹಾಗಿದ್ದಲ್ಲಿ, ಅದನ್ನು ಜಾರಿಗೆ ತರಲು ಯಾರೂ ನಮ್ಮನ್ನು ಒತ್ತಾಯಿಸಲು ಸಾಧ್ಯವಿಲ್ಲ.” ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.

“ತಮಿಳುನಾಡಿನ ವಿದ್ಯಾರ್ಥಿಗಳಿಗೆ ಬಾಕಿ ಇರುವ ಹಣವನ್ನು ನೀವು ಬಿಡುಗಡೆ ಮಾಡುತ್ತೀರಾ ಎಂಬುದನ್ನು ಸ್ಪಷ್ಟಪಡಿಸಿ. ಅದನ್ನು ನೀವು ನಮ್ಮಿಂದ ತೆರಿಗೆಯಾಗಿ ಸಂಗ್ರಹಿಸಿದ್ದೀರಿ” ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 28 ರಂದು ಪ್ರತಿಕ್ರಿಯಿಸಿದ್ದ ಸ್ಟಾಲಿನ್, ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಶಾಲೆಗಳಲ್ಲಿ ಮೂರನೇ ಭಾಷೆಯ ಬೋಧನೆಯನ್ನು ಒತ್ತಾಯಿಸುವುದು ಅನಗತ್ಯ ಎಂದು ಹೇಳಿದ್ದರು. “ಸುಧಾರಿತ ಅನುವಾದ ತಂತ್ರಜ್ಞಾನವು ಈಗಾಗಲೇ ಭಾಷಾ ಅಡೆತಡೆಗಳನ್ನು ತಕ್ಷಣವೇ ತೆಗೆದುಹಾಕುತ್ತದೆ. ವಿದ್ಯಾರ್ಥಿಗಳ ಮೇಲೆ ಹೆಚ್ಚುವರಿ ಭಾಷೆಗಳಿಂದ ಹೊರೆಯಾಗಬಾರದು.” ಎಂದು ತಿಳಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ನೀತಿಯು ಹಿಂದಿಯನ್ನು ಹೇರುವುದಿಲ್ಲ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ದ್ರಾವಿಡ ಮುನ್ನೇತ್ರ ಕಳಗಂ “ರಾಜಕೀಯ ಕಾರಣಗಳಿಗಾಗಿ” ಅದನ್ನು ವಿರೋಧಿಸುತ್ತಿದೆ ಎಂದು ಆರೋಪಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...