Homeಮುಖಪುಟಧರ್ಮೇಂದ್ರ ಪ್ರಧಾನ್ ತನ್ನ ನಾಲಿಗೆ ಹಿಡಿತದಲ್ಲಿಟ್ಟುಕೊಳ್ಳಬೇಕು - ಸಿಎಂ ಸ್ಟಾಲಿನ್ ಎಚ್ಚರಿಕೆ

ಧರ್ಮೇಂದ್ರ ಪ್ರಧಾನ್ ತನ್ನ ನಾಲಿಗೆ ಹಿಡಿತದಲ್ಲಿಟ್ಟುಕೊಳ್ಳಬೇಕು – ಸಿಎಂ ಸ್ಟಾಲಿನ್ ಎಚ್ಚರಿಕೆ

- Advertisement -
- Advertisement -

ಧರ್ಮೇಂದ್ರ ಪ್ರಧಾನ್ ಅವರು ಡಿಎಂಕೆ ಸಂಸದರ ಕುರಿತು ಸದನದಲ್ಲಿ ನೀಡಿದ್ದ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸ್ಟಾಲಿನ್, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಕ್ಷಮಿಸುತ್ತಾರೆಯೇ ಎಂದು ಕೇಳಿದ್ದಾರೆ. ಅವರ ಹೇಳಿಕೆಯು ತಮಿಳುನಾಡಿನ ನಿವಾಸಿಗಳಿಗೆ ಮಾಡಿದ ಅವಮಾನ ಎಂದು ಅವರು ಹೇಳಿಕೊಂಡಿದ್ದಾರೆ.

“ತಾನು ರಾಜನೆಂದು ಭಾವಿಸಿ ದುರಹಂಕಾರದಿಂದ ಮಾತನಾಡುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ತನ್ನ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. “ತಮಿಳುನಾಡಿಗೆ ನಿಧಿ ನೀಡದೆ [ನಮ್ಮನ್ನು] ಮೋಸ ಮಾಡುತ್ತಿರುವ ನೀವು, ತಮಿಳುನಾಡು ಸಂಸದರು ಅನಾಗರಿಕರು ಎಂದು ಹೇಳುತ್ತಿದ್ದೀರಾ?” ಎಂದು ಕೇಳಿದ್ದಾರೆ.

 ಸೋಮವಾರ ಸನದಲ್ಲಿ ಎನ್‌ಇಪಿ ಮತ್ತು ಹಿಂದಿ ಹೇರಿಕೆ ಬಗ್ಗೆ ಸದನದಲ್ಲಿ ಮಾತನಾಡಿದ್ದ ಪ್ರಧಾನ್ “ತಮಿಳುನಾಡು ಸರ್ಕಾರ ಆರಂಭದಲ್ಲಿ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಕೊಂಡಿತ್ತು. ಆದರೆ ಈಗ ಅವರು ನಿಲುವನ್ನು ಬದಲಾಯಿಸಿದ್ದಾರೆ. ಅವರು [ದ್ರಾವಿಡ ಮುನ್ನೇತ್ರ ಕಳಗಂ] ಅಪ್ರಾಮಾಣಿಕರು ಮತ್ತು ತಮಿಳುನಾಡಿನ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಭಾಷಾ ಅಡೆತಡೆಗಳನ್ನು ಹುಟ್ಟುಹಾಕುವುದು ಅವರ ಏಕೈಕ ಕೆಲಸ. ಅವರು ರಾಜಕೀಯ ಮಾಡುತ್ತಿದ್ದಾರೆ… ಅವರು ಪ್ರಜಾಪ್ರಭುತ್ವ ವಿರೋಧಿಗಳು ಮತ್ತು ಅನಾಗರಿಕರು.” ಎಂದು ಸಚಿವ ಪ್ರಧಾನ್ ಹೇಳಿದ್ದಾರೆ
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಆದೇಶದ ಕುರಿತು ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ ಯೋಜನೆಯ ಕುರಿತಾದ ತಿಳುವಳಿಕೆ ಪತ್ರವನ್ನು ತಮಿಳುನಾಡು ಸರ್ಕಾರ ತಿರಸ್ಕರಿಸಿದೆ ಎಂದು ಸೂಚಿಸುವ ಆಗಸ್ಟ್‌ನಲ್ಲಿ ಪ್ರಧಾನ್ ಅವರಿಂದ ಬಂದ ಸಂದೇಶವನ್ನು ಸ್ಟಾಲಿನ್ ಇದೇ ವೇಳೆ ಹಂಚಿಕೊಂಡಿದ್ದಾರೆ.

“ಎನ್‌ಇಪಿ [ರಾಷ್ಟ್ರೀಯ ಶಿಕ್ಷಣ ನೀತಿ] ಮತ್ತು ತ್ರಿಭಾಷಾ ನೀತಿಯ ಕುರಿತು ಪಿಎಂ ಶ್ರೀಗಾಗಿ ಮಾಡಿಕೊಂಡ ಒಪ್ಪಂದವನ್ನು ತಮಿಳುನಾಡು ಸರ್ಕಾರ ತಿರಸ್ಕರಿಸಿದೆ ಎಂದು ಹೇಳುವ ಪತ್ರವನ್ನು ನೀವು ಕಳುಹಿಸಿಲ್ಲವೇ?. ನಿಮ್ಮ ಕಾರ್ಯಕ್ರಮವನ್ನು ಜಾರಿಗೆ ತರಲು ನಾವು ಮುಂದೆ ಬಂದಿಲ್ಲ. ಹಾಗಿದ್ದಲ್ಲಿ, ಅದನ್ನು ಜಾರಿಗೆ ತರಲು ಯಾರೂ ನಮ್ಮನ್ನು ಒತ್ತಾಯಿಸಲು ಸಾಧ್ಯವಿಲ್ಲ.” ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.

“ತಮಿಳುನಾಡಿನ ವಿದ್ಯಾರ್ಥಿಗಳಿಗೆ ಬಾಕಿ ಇರುವ ಹಣವನ್ನು ನೀವು ಬಿಡುಗಡೆ ಮಾಡುತ್ತೀರಾ ಎಂಬುದನ್ನು ಸ್ಪಷ್ಟಪಡಿಸಿ. ಅದನ್ನು ನೀವು ನಮ್ಮಿಂದ ತೆರಿಗೆಯಾಗಿ ಸಂಗ್ರಹಿಸಿದ್ದೀರಿ” ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 28 ರಂದು ಪ್ರತಿಕ್ರಿಯಿಸಿದ್ದ ಸ್ಟಾಲಿನ್, ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಶಾಲೆಗಳಲ್ಲಿ ಮೂರನೇ ಭಾಷೆಯ ಬೋಧನೆಯನ್ನು ಒತ್ತಾಯಿಸುವುದು ಅನಗತ್ಯ ಎಂದು ಹೇಳಿದ್ದರು. “ಸುಧಾರಿತ ಅನುವಾದ ತಂತ್ರಜ್ಞಾನವು ಈಗಾಗಲೇ ಭಾಷಾ ಅಡೆತಡೆಗಳನ್ನು ತಕ್ಷಣವೇ ತೆಗೆದುಹಾಕುತ್ತದೆ. ವಿದ್ಯಾರ್ಥಿಗಳ ಮೇಲೆ ಹೆಚ್ಚುವರಿ ಭಾಷೆಗಳಿಂದ ಹೊರೆಯಾಗಬಾರದು.” ಎಂದು ತಿಳಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ನೀತಿಯು ಹಿಂದಿಯನ್ನು ಹೇರುವುದಿಲ್ಲ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ದ್ರಾವಿಡ ಮುನ್ನೇತ್ರ ಕಳಗಂ “ರಾಜಕೀಯ ಕಾರಣಗಳಿಗಾಗಿ” ಅದನ್ನು ವಿರೋಧಿಸುತ್ತಿದೆ ಎಂದು ಆರೋಪಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...