Homeಚಳವಳಿ46 ದಿನ ಪೂರೈಸಿದ ಒಳಮೀಸಲಾತಿಗಾಗಿನ ಧರಣಿ: ಬಜೆಟ್ ಅಧಿವೇಶನದ ವೇಳೆಗೆ ಬೃಹತ್ ಹೋರಾಟಕ್ಕೆ ನಿರ್ಧಾರ

46 ದಿನ ಪೂರೈಸಿದ ಒಳಮೀಸಲಾತಿಗಾಗಿನ ಧರಣಿ: ಬಜೆಟ್ ಅಧಿವೇಶನದ ವೇಳೆಗೆ ಬೃಹತ್ ಹೋರಾಟಕ್ಕೆ ನಿರ್ಧಾರ

- Advertisement -
- Advertisement -

ಸಾಮಾಜಿಕ ನ್ಯಾಯಕ್ಕಾಗಿ‌ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮೀಸಲಾತಿ ವರ್ಗೀಕರಣಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯು 46 ದಿನ ಪೂರೈಸಿದೆ. ಸತತ ಹೋರಾಟ ಮಾಡಿದರೂ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲು ಸಮಿತಿಯು ನಿರ್ಧರಿಸಿದೆ.

ಧರಣಿಯ ಸ್ಥಳದಲ್ಲಿ 74 ನೇ ಗಣರಾಜ್ಯೋತ್ಸವವನ್ನು ಬಾಬಾಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಹೂ ಹಾಕುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಹಿರಿಯ ಹೋರಾಟಗಾರ ಎನ್.ವೆಂಕಟೇಶ್‌ರವರು ಮಾತನಾಡಿ, “ಒಳಮೀಸಲಾತಿ ಜಾರಿ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ. ಬಿಜೆಪಿ ಪಕ್ಷವು ಕೇವಲ ಮಾತುಗಳ ಮೂಲಕ ಹೊಟ್ಟೆ ತುಂಬಿಸುತ್ತಿದೆಯೆ ಹೊರತು ಒಳಮೀಸಲಾತಿ ಜಾರಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಅವರು ಮಾಡುತ್ತಿರುವ ಮೋಸಕ್ಕೆ ಚುನಾವಣೆ ಸಂದರ್ಭದಲ್ಲಿ ತಕ್ಕ ಪಾಠ ಕಲಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ದಲಿತ ಸಮುದಾಯಗಳೆಲ್ಲ ಒಂದಾಗಿ ಇಂದು ಈ ಹೋರಾಟ ನಡೆಸುತ್ತಿದ್ದೇವೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ವರ್ಗೀಕರಣ ಮಾಡಬೇಕಿರುವುದು ಸಂವಿಧಾನದ ಆಶಯ. ಆದರೆ ಆಳುವ ಸರ್ಕಾರಗಳು ಸಂವಿಧಾನವನ್ನೆ ಗಾಳಿಗೆ ತೂರಿವೆ. ಹಾಗಾಗಿ ಹೋರಾಟವೊಂದೆ ನಮಗುಳಿದಿರುವ ದಾರಿ. ಚುನಾವಣೆ ಸಂದರ್ಭದಲ್ಲಿ ಈ ಸರ್ಕಾರಕ್ಕೆ ಪಾಠ ಕಲಿಸಲು ದಲಿತ ಸಮುದಾಯ ನಿರ್ಧರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದಿನ ಗಣರಾಜ್ಯೋತ್ಸವ ಆಚರಣೆ ವೇಳೆ ಒಳ ಮೀಸಲಾತಿ ಹೋರಾಟವನ್ನು ಮುನ್ನಡೆಸುತ್ತಿರುವ ಹೋರಾಟಗಾರ ಅಂಬಣ್ಣ ಅರೋಲಿಕರ್ ಸಂವಿಧಾನ ಪೀಠಿಕೆ ಓದಿದರು. ಎಸ್.ಮಾರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆನಂತರ ಸಭೆ ಸೇರಿ ಮೂರು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

1. ಸಾಮಾಜಿಕ ನ್ಯಾಯದ ಉಳಿವಿಗಾಗಿ ಸಂವಿಧಾನವನ್ನು ಸಂರಕ್ಷಿಸಿಕೊಳ್ಳುವುದು ದಲಿತ ಚಳವಳಿಯ ಆದ್ಯತೆಯಾಗಿರುವುದರಿಂದ ಒಳಮೀಸಲಾತಿ ಹೋರಾಟದ ಜೊತೆಗೇ ಸಂವಿಧಾನ ಸಂರಕ್ಷಣಾ ಹೋರಾಟಗಳನ್ನು ರೂಪಿಸಲು ನಿರ್ಧರಿಸಲಾಯಿತು.

2. ಮುಂದಿನ ಚುನಾವಣೆಯಲ್ಲಿ ವಚನಭ್ರಷ್ಟ, ದಲಿತ ವಿರೋಧಿ, ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು ಮತ್ತು ಅದಕ್ಕಾಗಿ ಫೆಬ್ರವರಿ ಮೊದಲ ವಾರದಿಂದ ರಾಜ್ಯದ 150 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲಾ ಪರಿಶಿಷ್ಟ ಜಾತಿಗಳ ನಾಯಕರ ಪ್ರವಾಸ ಹಮ್ಮಿಕೊಳ್ಳುವುದಾಗಿ ತೀರ್ಮಾನಿಸಲಾಯಿತು.

3. ಮಾದಿಗ ಸಂಬಂಧಿತ ತ್ರಿಮತಸ್ಥ (ಸಮಗಾರ, ಮೋಚಿ, ಮಚ್ಚಗಾರ) ಸಮಯದಾಯಗಳಿಗೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಒಕ್ಕರಲಿನಿಂದ‌ ಒತ್ತಾಯಿಸಲಾಯಿತು.

ಸಭೆಯಲ್ಲಿ ಹೋರಾಟಗಾರಾದ ಹೆಣ್ಣೂರು ಶ್ರೀನಿವಾಸ್, ಬಸವರಾಜ ಕೌತಾಳ್, ಆರ್.ಮೋಹನರಾಜ್, ಸಿ.ದಾನಪ್ಪ ಮದೋಗಲ್, ಎಂ.ಗುರುಮೂರ್ತಿ, ಕೇಶವಮೂರ್ತಿ, ಕರ್ನಾಟಕ ಜನಶಕ್ತಿಯ ಗೌರಿ, ಶಿವರಾಜ ಅಕ್ಕರಕಿ, ಗೌಡಗೆರೆ ಮಾಯುಶ್ರೀ, ಬಿ.ಆರ್.ಭಾಸ್ಕರ್ ಪ್ರಸಾದ್, ನಾಗಮಣಿ, ಕರಿಯಪ್ಪ ಗುಡಿಮನಿ, ಕನಕೇನಹಳ್ಳಿ ಕೃಷ್ಣಪ್ಪ, ಹೇಮರಾಜ್, ಪುಷ್ಪಲತ, ವೆಂಕಟೇಶ್, ನಂದಕುಮಾರ್, ಕರ್ನಾಟಕ ರಾಜ್ಯ ತ್ರಿಮತಸ್ಥ ಸಮಾಜ ಪರಿಷತ್ ಅಧ್ಯಕ್ಷ ಗುರುರಾಜ್ ಬೇಡಿಕರ್, ಅಲೆಮಾರಿ ಬುಡಕಟ್ಟು ಮಹಾಸಭಾ ಅಧ್ಯಕ್ಷ ಬಿ.ಎಲ್.ಹನುಮಂತಪ್ಪ, ಸಹಬಾಳೆ ಸಂಸ್ಥೆಯ ಮಹಮದ್ ಯೂಸೂಫ್ ಖನಿ ಮೊದಲಾದವರು ಧರಣಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ ; ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...