Homeಚಳವಳಿ46 ದಿನ ಪೂರೈಸಿದ ಒಳಮೀಸಲಾತಿಗಾಗಿನ ಧರಣಿ: ಬಜೆಟ್ ಅಧಿವೇಶನದ ವೇಳೆಗೆ ಬೃಹತ್ ಹೋರಾಟಕ್ಕೆ ನಿರ್ಧಾರ

46 ದಿನ ಪೂರೈಸಿದ ಒಳಮೀಸಲಾತಿಗಾಗಿನ ಧರಣಿ: ಬಜೆಟ್ ಅಧಿವೇಶನದ ವೇಳೆಗೆ ಬೃಹತ್ ಹೋರಾಟಕ್ಕೆ ನಿರ್ಧಾರ

- Advertisement -
- Advertisement -

ಸಾಮಾಜಿಕ ನ್ಯಾಯಕ್ಕಾಗಿ‌ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮೀಸಲಾತಿ ವರ್ಗೀಕರಣಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯು 46 ದಿನ ಪೂರೈಸಿದೆ. ಸತತ ಹೋರಾಟ ಮಾಡಿದರೂ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲು ಸಮಿತಿಯು ನಿರ್ಧರಿಸಿದೆ.

ಧರಣಿಯ ಸ್ಥಳದಲ್ಲಿ 74 ನೇ ಗಣರಾಜ್ಯೋತ್ಸವವನ್ನು ಬಾಬಾಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಹೂ ಹಾಕುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಹಿರಿಯ ಹೋರಾಟಗಾರ ಎನ್.ವೆಂಕಟೇಶ್‌ರವರು ಮಾತನಾಡಿ, “ಒಳಮೀಸಲಾತಿ ಜಾರಿ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ. ಬಿಜೆಪಿ ಪಕ್ಷವು ಕೇವಲ ಮಾತುಗಳ ಮೂಲಕ ಹೊಟ್ಟೆ ತುಂಬಿಸುತ್ತಿದೆಯೆ ಹೊರತು ಒಳಮೀಸಲಾತಿ ಜಾರಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಅವರು ಮಾಡುತ್ತಿರುವ ಮೋಸಕ್ಕೆ ಚುನಾವಣೆ ಸಂದರ್ಭದಲ್ಲಿ ತಕ್ಕ ಪಾಠ ಕಲಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ದಲಿತ ಸಮುದಾಯಗಳೆಲ್ಲ ಒಂದಾಗಿ ಇಂದು ಈ ಹೋರಾಟ ನಡೆಸುತ್ತಿದ್ದೇವೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ವರ್ಗೀಕರಣ ಮಾಡಬೇಕಿರುವುದು ಸಂವಿಧಾನದ ಆಶಯ. ಆದರೆ ಆಳುವ ಸರ್ಕಾರಗಳು ಸಂವಿಧಾನವನ್ನೆ ಗಾಳಿಗೆ ತೂರಿವೆ. ಹಾಗಾಗಿ ಹೋರಾಟವೊಂದೆ ನಮಗುಳಿದಿರುವ ದಾರಿ. ಚುನಾವಣೆ ಸಂದರ್ಭದಲ್ಲಿ ಈ ಸರ್ಕಾರಕ್ಕೆ ಪಾಠ ಕಲಿಸಲು ದಲಿತ ಸಮುದಾಯ ನಿರ್ಧರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದಿನ ಗಣರಾಜ್ಯೋತ್ಸವ ಆಚರಣೆ ವೇಳೆ ಒಳ ಮೀಸಲಾತಿ ಹೋರಾಟವನ್ನು ಮುನ್ನಡೆಸುತ್ತಿರುವ ಹೋರಾಟಗಾರ ಅಂಬಣ್ಣ ಅರೋಲಿಕರ್ ಸಂವಿಧಾನ ಪೀಠಿಕೆ ಓದಿದರು. ಎಸ್.ಮಾರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆನಂತರ ಸಭೆ ಸೇರಿ ಮೂರು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

1. ಸಾಮಾಜಿಕ ನ್ಯಾಯದ ಉಳಿವಿಗಾಗಿ ಸಂವಿಧಾನವನ್ನು ಸಂರಕ್ಷಿಸಿಕೊಳ್ಳುವುದು ದಲಿತ ಚಳವಳಿಯ ಆದ್ಯತೆಯಾಗಿರುವುದರಿಂದ ಒಳಮೀಸಲಾತಿ ಹೋರಾಟದ ಜೊತೆಗೇ ಸಂವಿಧಾನ ಸಂರಕ್ಷಣಾ ಹೋರಾಟಗಳನ್ನು ರೂಪಿಸಲು ನಿರ್ಧರಿಸಲಾಯಿತು.

2. ಮುಂದಿನ ಚುನಾವಣೆಯಲ್ಲಿ ವಚನಭ್ರಷ್ಟ, ದಲಿತ ವಿರೋಧಿ, ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು ಮತ್ತು ಅದಕ್ಕಾಗಿ ಫೆಬ್ರವರಿ ಮೊದಲ ವಾರದಿಂದ ರಾಜ್ಯದ 150 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲಾ ಪರಿಶಿಷ್ಟ ಜಾತಿಗಳ ನಾಯಕರ ಪ್ರವಾಸ ಹಮ್ಮಿಕೊಳ್ಳುವುದಾಗಿ ತೀರ್ಮಾನಿಸಲಾಯಿತು.

3. ಮಾದಿಗ ಸಂಬಂಧಿತ ತ್ರಿಮತಸ್ಥ (ಸಮಗಾರ, ಮೋಚಿ, ಮಚ್ಚಗಾರ) ಸಮಯದಾಯಗಳಿಗೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಒಕ್ಕರಲಿನಿಂದ‌ ಒತ್ತಾಯಿಸಲಾಯಿತು.

ಸಭೆಯಲ್ಲಿ ಹೋರಾಟಗಾರಾದ ಹೆಣ್ಣೂರು ಶ್ರೀನಿವಾಸ್, ಬಸವರಾಜ ಕೌತಾಳ್, ಆರ್.ಮೋಹನರಾಜ್, ಸಿ.ದಾನಪ್ಪ ಮದೋಗಲ್, ಎಂ.ಗುರುಮೂರ್ತಿ, ಕೇಶವಮೂರ್ತಿ, ಕರ್ನಾಟಕ ಜನಶಕ್ತಿಯ ಗೌರಿ, ಶಿವರಾಜ ಅಕ್ಕರಕಿ, ಗೌಡಗೆರೆ ಮಾಯುಶ್ರೀ, ಬಿ.ಆರ್.ಭಾಸ್ಕರ್ ಪ್ರಸಾದ್, ನಾಗಮಣಿ, ಕರಿಯಪ್ಪ ಗುಡಿಮನಿ, ಕನಕೇನಹಳ್ಳಿ ಕೃಷ್ಣಪ್ಪ, ಹೇಮರಾಜ್, ಪುಷ್ಪಲತ, ವೆಂಕಟೇಶ್, ನಂದಕುಮಾರ್, ಕರ್ನಾಟಕ ರಾಜ್ಯ ತ್ರಿಮತಸ್ಥ ಸಮಾಜ ಪರಿಷತ್ ಅಧ್ಯಕ್ಷ ಗುರುರಾಜ್ ಬೇಡಿಕರ್, ಅಲೆಮಾರಿ ಬುಡಕಟ್ಟು ಮಹಾಸಭಾ ಅಧ್ಯಕ್ಷ ಬಿ.ಎಲ್.ಹನುಮಂತಪ್ಪ, ಸಹಬಾಳೆ ಸಂಸ್ಥೆಯ ಮಹಮದ್ ಯೂಸೂಫ್ ಖನಿ ಮೊದಲಾದವರು ಧರಣಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ ; ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...