Homeಕರ್ನಾಟಕಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

ಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

- Advertisement -
- Advertisement -

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾಂತ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌ ಅವರ ವ್ಯಾಪಾರಕ್ಕೆ ಅಡ್ಡಿಪಡಿಸಿ, ಕಲ್ಲಂಗಡಿಗಳನ್ನು ರಸ್ತೆಗೆ ಎಸೆದು ವಿಕೃತಿ ಮೆರೆದ ಶ್ರೀರಾಮಸೇನೆಯ ದುಷ್ಕರ್ಮಿಗಳಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಶ್ರೀರಾಮಸೇನೆಯ ಗೂಂಡಾಗಳು ನಬಿಸಾಬ್‌ ಅವರಿಗೆ ಸೇರಿದ ಸುಮಾರು ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿರುವ ಪ್ರಕರಣದಲ್ಲಿ ಹಲವು ದುಷ್ಕರ್ಮಿಗಳ ವಿರುದ್ದ FIR ದಾಖಲಿಸಲಾಗಿದೆ.

ಬಂಧಿತ ದುಷ್ಕರ್ಮಿಗಳನ್ನು ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ, ಕುಮಾರ ಕಟ್ಟಿಮನಿ ಎಂದು ಗುರುತಿಸಲಾಗಿದೆ. ನಬಿಸಾಬ್ ಅವರು ನೀಡಿದ ದೂರಿನ ಅನ್ವಯ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್‌ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌, ಶ್ರೀರಾಮಸೇನೆಯ ಗೂಂಡಾಗಳಿಂದ ತೊಂದರೆಗೊಳಗಾಗಿದ್ದಾರೆ. ದೇವಸ್ಥಾನದ ಬಳಿ ಕಲ್ಲಂಗಡಿ ಮಾರುತ್ತಿದ್ದ ಕಾರಣಕ್ಕೆ ಗೂಂಡಾಗಳು ದಾಂಧಲೆ ನಡೆಸಿದ್ದಾರೆ. ಸುಮಾರು ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿ ವಿಕೃತಿ ಮೆರೆದಿದ್ದರು.

ಇದನ್ನೂ ಓದಿ: ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

ಘಟನೆ ನಡೆದ ದಿನ ಮಾಧ್ಯಮಗಳ ಮುಂದೆ ನೋವು ತೋಡಿಕೊಂಡಿದ್ದ ನಬಿಸಾಬ್‌, “ಬಂದವರು ಪಟ್‌ ಪಟ್‌ ಅಂತ ಕಲ್ಲಂಗಡಿ ಕಾಯಿಗಳನ್ನು ಒಡೆದರು. ಒಂದೆರಡು ಕಾಯಿಯಲ್ಲ, ತೆಗೆದುಕೊಳ್ಳುತ್ತೀವಿ ಸ್ವಾಮಿ ಸ್ವಲ್ಪ ನಿಲ್ಲಿಸಿ ಎಂದರೂ ಕೇಳಲಿಲ್ಲ. ಎಲ್ಲವನ್ನೂ ಒಡೆದುಹಾಕಿದರು. ನಾನೇನು ಮಾಡಬೇಕಾಗುತ್ರೀ?” ಎಂದು ಸಂಕಟ ವ್ಯಕ್ತಪಡಿಸಿದ್ದರು.

“ನಾವು ಸರಿದು ನಿಂತುಬಿಟ್ಟಿವಿ. ಅವರು ಒಡೆಯುತ್ತಿದ್ದಾಗ ನಾವೇನು ಮಾಡಲು ಆಗುತ್ರೀ? ಅವರು ಎಂಟು ಹತ್ತು ಇದ್ದರು, ನಾವೊಬ್ಬ ಇದ್ದೀನಿ. ಒಂದು ಕಾಯಿ ತೆಗೆದು ಇಡುವಷ್ಟರಲ್ಲಿ ಹತ್ತು ಕಾಯಿ ಒಡೆಯುತ್ತಿದ್ದರು. ಆರು ಕಿಂಟ್ವಾಲ್‌ ತೆಗೆದುಕೊಂಡು ಬಂದಿದ್ದೆ. ಒಂದು ಕಿಂಟ್ವಾಲ್ ಮಾತ್ರ ಮಾರಿದ್ದೆ. ಉಳಿದೆಲ್ಲವನ್ನೂ ಒಡೆದು ಹಾಕಿದ್ರು” ಎಂದು ನೋವು ತೋಡಿಕೊಂಡಿದ್ದರು.

ದುಷ್ಕರ್ಮಿಗಳ ಈ ಕೃತ್ಯಕ್ಕೆ ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಹಲವಾರು ಜನರು ನಬಿಸಾಬ್ ಅವರಿಗೆ ಮಿಡಿದಿದ್ದರು.

ಸೋಮವಾರದಂದು ಧಾರವಾಡ ಜಿಲ್ಲಾ ಕಚೇರಿಯ ಮುಂದೆ ಜನಪರ ಸಂಘಟನೆಗಳ ವೇದಿಕೆಯ ವತಿಯಿಂದ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು ಸಂತ್ರಸ್ಥರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯಿತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....