Homeಮುಖಪುಟಧಾರವಾಡ: ಮೋದಿ ಬರುವ ಹಿನ್ನೆಲೆಯಲ್ಲಿ ಹಾಸ್ಟೆಲ್ ಖಾಲಿ ಮಾಡಲು ಸೂಚನೆ; ವಿದ್ಯಾರ್ಥಿಗಳ ಆಕ್ರೋಶ

ಧಾರವಾಡ: ಮೋದಿ ಬರುವ ಹಿನ್ನೆಲೆಯಲ್ಲಿ ಹಾಸ್ಟೆಲ್ ಖಾಲಿ ಮಾಡಲು ಸೂಚನೆ; ವಿದ್ಯಾರ್ಥಿಗಳ ಆಕ್ರೋಶ

- Advertisement -
- Advertisement -

ಧಾರವಾಡಕ್ಕೆ ಪ್ರಧಾನಿ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ವಿರೋಧಿ ನಿಲುವನ್ನು ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯ ತಾಳಿರುವುದು ಟೀಕೆಗೆ ಗುರಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಒಂಬತ್ತು ದಿನಗಳ ಕಾಲ ಹಾಸ್ಟೆಲ್ ಖಾಲಿ ಮಾಡುವಂತೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ (ಕೆಯುಡಿ) ವಿದ್ಯಾರ್ಥಿಗಳಿಗೆ ಸೂಚಿಸಿದೆ.

2023ರ ಜನವರಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಆಗಮಿಸುವ ಅತಿಥಿಗಳ ವಾಸ್ತವ್ಯಕ್ಕಾಗಿ ಒಂಬತ್ತು ದಿನಗಳ ಕಾಲ ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿರುವ ʼಕೆಯುಡಿಯʼ ವಿರುದ್ಧ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ‘ಈದಿನ.ಕಾಂ’ ವರದಿ ಮಾಡಿದೆ.

ಐದು ದಿನಗಳ ಉತ್ಸವವನ್ನು ಜನವರಿ 12ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾಲೇಜು ಮೈದಾನದಲ್ಲಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಸಾವಿರಾರು ವಿದ್ಯಾರ್ಥಿಗಳು ಧಾರವಾಡಕ್ಕೆ ಬರಲಿದ್ದಾರೆ.

ವಿಶ್ವವಿದ್ಯಾನಿಲಯದ ನಿಲುವನ್ನು ನಿರ್ಧಾರವನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು, “ಕಾರ್ಯಕ್ರಮದ ಅತಿಥಿಗಳಿಗೆ ಕಾಲೇಜು ಕೊಠಡಿಗಳನ್ನು ಬಳಸುವಂತೆ ಹೇಳಬಹುದಿತ್ತು. ಹೋಟೆಲ್‌ಗಳನ್ನು ಕಾಯ್ದಿರಿಸಬಹುದಿತ್ತು ಅಥವಾ ಟೆಂಟ್‌ಗಳನ್ನು ಹಾಕಬಹುದಿತ್ತು. ಇದೆಲ್ಲದರ ಬದಲಿಗೆ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಖಾಲಿ ಮಾಡಿಸುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದಾರೆ.

“ಕಾರ್ಯಕ್ರಮಕ್ಕಾಗಿ ಸರ್ಕಾರ ₹20 ಕೋಟಿ ಖರ್ಚು ಮಾಡಲಾಗುತ್ತಿದೆ. ಆದರೆ, ಕಾರ್ಯಕ್ರಮಕ್ಕೆ ಬರುವವರು ತಂಗಲು ವ್ಯವಸ್ಥೆ ಮಾಡಲು ಹಾಸ್ಟೆಲ್ ಖಾಲಿ ಮಾಡಿಸುತ್ತಿರುವುದು ಮಾತ್ರ ವಿಚಿತ್ರವಾಗಿದೆ. ಈಗಾಗಲೇ ನಮ್ಮ ತರಗತಿಗಳು ನಿಗದಿತ ಸಮಯದಲ್ಲಿ ಮುಗಿಯದೆ ಹಿಂದೆ ಉಳಿದಿದೆ. ಇಂತಹ ಸಮಯದಲ್ಲಿ ಒಂಬತ್ತು ದಿನ ಹಾಸ್ಟೆಲ್ ಖಾಲಿ ಮಾಡಿಸುವುದು ಸರಿಯಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಯುಡಿ ಕುಲಪತಿ ಬಿ.ಗುಡಸಿ ಪ್ರತಿಕ್ರಿಯಿಸಿದ್ದು, “ವಿದ್ಯಾರ್ಥಿಗಳನ್ನು ಬಲವಂತವಾಗಿ ಸ್ಥಳಾಂತರಿಸುವುದಿಲ್ಲ. ಕಾರ್ಯಕ್ರಮ ಮುಗಿಯುವವರೆಗೆ ಅವರ ವಸ್ತುಗಳನ್ನು ಬೇರೆ ಕಡೆ ಇಡುವುದಕ್ಕೆ ವ್ಯವಸ್ಥೆ ಮಾಡಿದ್ದೇವೆ. ಅವರಿಗೆ ರಜೆ ಘೋಷಿಸಲಾಗಿದೆ” ಎಂದು ತಿಳಿಸಿದ್ದಾರೆ.

ಅಧ್ಯಾಪಕರೊಬ್ಬರು ಪ್ರತಿಕ್ರಿಯಿಸಿದ್ದು, “ಕೋರ್ಸು ನಿಗದಿತ ಅವಧಿಗಿಂತ ಹಿಂದಿದ್ದರೂ ವಿಶ್ವವಿದ್ಯಾಲಯವು ಯಾವುದೇ ಅತಿಥಿ ಉಪನ್ಯಾಸಕರನ್ನು ನೇಮಿಸಿಲ್ಲ. ರಜಾದಿನಗಳನ್ನು ಘೋಷಿಸುವುದರಿಂದ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಇನ್ನಷ್ಟು ವಿಳಂಬವಾಗುತ್ತದೆ. ನಾವೂ ಮನೆಗೆ ಹೋಗುವುದಕ್ಕಿಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಯಸುತ್ತೇವೆ” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಸ್ಟೆಲ್ ಗಳು ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ನಡೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ತೊಂದರೆ ಕೊಡುವುದು ಸೂಕ್ತ ಎಲ್ಲಾ ……

  2. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಸ್ಟೆಲ್ ಗಳು ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ನಡೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ತೊಂದರೆ ಕೊಡುವುದು ಸೂಕ್ತ ವಲ್ಲಾ ……

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...