Homeಕರ್ನಾಟಕಧಾರವಾಡ: 8 ದಿನಗಳಿಂದ ಪೌರಕಾರ್ಮಿಕರ ಪ್ರತಿಭಟನೆ - ತಿರುಗಿ ನೋಡದ ಜಿಲ್ಲಾಡಳಿತ

ಧಾರವಾಡ: 8 ದಿನಗಳಿಂದ ಪೌರಕಾರ್ಮಿಕರ ಪ್ರತಿಭಟನೆ – ತಿರುಗಿ ನೋಡದ ಜಿಲ್ಲಾಡಳಿತ

ನೇರ ನೇಮಕಾತಿ ಮತ್ತು ನೇರ ಪಾವತಿಗೆ ರಾಜ್ಯಸರ್ಕಾರ ಆದೇಶ ನೀಡಿದ್ದಾಗ್ಯೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈ ಆದೇಶವನ್ನು ಪಾಲಿಸದೆ ಪೌರಕಾರ್ಮಿಕರಿಗೆ ವಂಚನೆ ಮಾಡುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

- Advertisement -
- Advertisement -

ನೂರಾರು ಪೌರಕಾರ್ಮಿಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ 8 ದಿನಗಳಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮತ್ತು ನೇರ ಪಾವತಿಗೆ ರಾಜ್ಯಸರ್ಕಾರ ಆದೇಶ ನೀಡಿದ್ದಾಗ್ಯೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈ ಆದೇಶವನ್ನು ಪಾಲಿಸದೆ ಪೌರಕಾರ್ಮಿಕರಿಗೆ ವಂಚನೆ ಮಾಡುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ನಾನುಗೌರಿ.ಕಾಂ ನೊಂದಿಗೆ ಮಾತನಾಡಿದ ಹೋರಾಟಗಾರರಾದ ವಿಜಯ್ ಗುಂತ್ರಾಲ್, “2017ರಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನೇರ ನೇಮಕಾತಿ ಮತ್ತು ನೇರ ಪಾವತಿಗೆಂದು ಆದೇಶ ಹೊರಡಿಸಿ 4 ವರ್ಷಗಳು ಕಳೆದರೂ ಇನ್ನೂ ಜಾರಿಗೆ ಬಂದಿಲ್ಲ. ಹಾಗಾಗಿ ಇದನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಆಗಿನಿಂದಲೂ ಪ್ರತಿಭಟಿಸುತ್ತಲೇ ಇದ್ದೇವೆ. ಈಗ ಕಳೆದ 8 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ:ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

“ನೇರ ವೇತನ ಪಾವತಿ ಮಾಡುವುದಕ್ಕೆ 2018ರಲ್ಲಿ ಜಿಲ್ಲಾಧಿಕಾರಿಗಳು ಅನುಮೋದನೆ ಕೊಟ್ಟಿದ್ದಾರೆ. ಆದರೆ ಇಲ್ಲಿಯವರೆಗೂ ಇದು ಅನುಷ್ಠಾನಗೊಂಡಿಲ್ಲ. ಇಷ್ಟೇ ಅಲ್ಲದೇ, ಕನಿಷ್ಟ ವೇತನ ವೇತನ ಬಾಕಿ 9 ಕೋಟಿ, ಪಿಎಫ್ ವಂಚನೆಗೆ ಸಂಬಂಧಿಸಿದಂತೆ 3 ಕೋಟಿ, ತುಟ್ಟಿ ಭತ್ಯೆಯ ಬಾಕಿ 2 ಕೋಟಿ, 868 ಮಹಿಳಾ ಪೌರ ಕಾರ್ಮಿಕರಿಗೆ ನೀಡಬೇಕಾದ ವೈದ್ಯಕೀಯ ಬೋನಸ್ ಹಣ 21.70 ಲಕ್ಷ ಸೇರಿದಂತೆ ಸುಮಾರು 14 ಕೋಟಿಯ 21 ಲಕ್ಷದ 70ಸಾವಿರ ರೂ.ಗಳು ಮಹಾನಗರ ಪಾಲಿಕೆಯಿಂದ ಬಾಕಿ ಹಣ ಬರಬೇಕಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಅಧಿಕೃತ ಆದೇಶ ಹೊರಬಿದ್ದಿದ್ದರೂ ಸಹ ನಮಗೆ ಇನ್ನೂ ಹಣ ಪಾವತಿಯಾಗಿಲ್ಲ” ಎಂದು ನೋವು ತೋಡಿಕೊಂಡರು.

ಪೌರ ಕಾರ್ಮಿಕರ ಪ್ರತಿಭಟನೆಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

“ಕಸ ತುಂಬಿಕೊಂಡು ಹೋಗುವ ಆಟೋ ಟಿಪ್ಪರ್ ವಾಹನ ಚಾಲಕರು, ತಮಗೆ 3 ತಿಂಗಳಿನಿಂದ ಬರಬೇಕಾಗಿರುವ ಸಂಬಳ ನೀಡಲು ಒತ್ತಾಯಿಸಿದ್ದಕ್ಕಾಗಿ, ಮಹಾನಗರ ಪಾಲಿಕೆಯ ಆಯುಕ್ತರು ಯಾವುದೇ ನೋಟೀಸ್ ನೀಡದೇ, 51 ಜನ ಚಾಲಕರನ್ನು ಕಾನೂನುಬಾಹಿರವಾಗಿ ಕೆಲಸದಿಂದ ತೆಗೆದಿದ್ದಾರೆ. ಪೌರ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು, ಸಂಬಳ ಬಾಕಿ ಉಳಿಸಿಕೊಳ್ಳಬಾರದು ಎಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೇ ಆದೇಶ ಹೊರಡಿಸಿದ್ದರೂ ಪಾಲಿಕೆಯು ಇಂತಹ ಕೃತ್ಯವೆಸಗಿದೆ. ಪಾಲಿಕೆಯ ಆಯುಕ್ತರು ಮತ್ತು ಗುತ್ತಿಗೆದಾರರಾದ ಆದರ್ಶ್‌ ಎಂಟರ್‌ಪ್ರೈಸಸ್ ಸೇರಿಕೊಂಡು, 1948ರ ಕನಿಷ್ಠ ವೇತನ ಕಾಯ್ದೆಯ ಉಲ್ಲಂಘನೆ, 1936ರ ವೇತನ ಪಾವತಿ ಕಾಯ್ದೆಯ ಉಲ್ಲಂಘನೆ ಮಾಡಿದ್ದಾರೆ. ಜೊತೆಗೆ, ಈ ಗುತ್ತಿಗೆ ದಾರರು ಪರವಾನಗಿಯೇ ಇಲ್ಲದೇ ಕಳೆದ 16 ವರ್ಷಗಳಿಂದ ಪಾಲಿಕೆಯ ಟೆಂಡರ್ ಪಡೆದುಕೊಳ್ಳುತ್ತಿದ್ದು, 1970ರ ಕಾಂಟ್ರಾಕ್ಟ್ ಲೇಬರ್ ಕಾಯ್ದೆಯನ್ನೂ ಉಲ್ಲಂಘಿಸಿದ್ದಾರೆ. ಈ ಕಾನೂನಬಾಹಿರ ಗುತ್ತಿಗೆದಾರರಿಗೆ 14.60 ಕೋಟಿ ಮೌಲ್ಯದ 146 ವಾಹನಗಳನ್ನ ನಿತ್ಯ ನಿರ್ವಹಣೆಗೆ ನೀಡಲಾಗಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ – ಆತಂಕದಲ್ಲಿ ಪೌರಕಾರ್ಮಿಕರು

ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರಕಾರ್ಮಿಕರು ಕಳೆದ 8 ದಿನಗಳಿಂದ ಅಹೋರಾತ್ರಿ ಅನಿರ್ಧಿಷ್ಟಾವದಿ ಪ್ರತಿಭಟನೆಯನ್ನು ಮಾಡುತ್ತಿದ್ದು, ಇದುವರೆಗೂ ಸಹ ಯಾವುದೇ ಜನಪ್ರತಿನಿಧಿಗಳು ಇವರನ್ನು ಭೇಟಿಯಾಗಿ ಇವರ ಸಮಸ್ಯೆಗಳನ್ನು ಆಲಿಸಿರುವುದಿಲ್ಲ. ಆದರೂ ಕೆಲವು ಪೌರ ಕಾರ್ಮಿಕರು ತಮ್ಮ ಕೆಲಸವನ್ನು ಮುಗಿಸಿಕೊಂಡು ನಂತರ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ತಮ್ಮ ಕರ್ತವ್ಯನಿಷ್ಠೆಯನ್ನು ಮೆರೆದಿದ್ದಾರೆ ಎಂದರು.

ಇದನ್ನೂ ಓದಿ:ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…


ಇದನ್ನೂ ಓದಿ: ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...