Homeಕರ್ನಾಟಕಧಾರವಾಡ: 8 ದಿನಗಳಿಂದ ಪೌರಕಾರ್ಮಿಕರ ಪ್ರತಿಭಟನೆ - ತಿರುಗಿ ನೋಡದ ಜಿಲ್ಲಾಡಳಿತ

ಧಾರವಾಡ: 8 ದಿನಗಳಿಂದ ಪೌರಕಾರ್ಮಿಕರ ಪ್ರತಿಭಟನೆ – ತಿರುಗಿ ನೋಡದ ಜಿಲ್ಲಾಡಳಿತ

ನೇರ ನೇಮಕಾತಿ ಮತ್ತು ನೇರ ಪಾವತಿಗೆ ರಾಜ್ಯಸರ್ಕಾರ ಆದೇಶ ನೀಡಿದ್ದಾಗ್ಯೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈ ಆದೇಶವನ್ನು ಪಾಲಿಸದೆ ಪೌರಕಾರ್ಮಿಕರಿಗೆ ವಂಚನೆ ಮಾಡುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

- Advertisement -
- Advertisement -

ನೂರಾರು ಪೌರಕಾರ್ಮಿಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ 8 ದಿನಗಳಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮತ್ತು ನೇರ ಪಾವತಿಗೆ ರಾಜ್ಯಸರ್ಕಾರ ಆದೇಶ ನೀಡಿದ್ದಾಗ್ಯೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈ ಆದೇಶವನ್ನು ಪಾಲಿಸದೆ ಪೌರಕಾರ್ಮಿಕರಿಗೆ ವಂಚನೆ ಮಾಡುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ನಾನುಗೌರಿ.ಕಾಂ ನೊಂದಿಗೆ ಮಾತನಾಡಿದ ಹೋರಾಟಗಾರರಾದ ವಿಜಯ್ ಗುಂತ್ರಾಲ್, “2017ರಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನೇರ ನೇಮಕಾತಿ ಮತ್ತು ನೇರ ಪಾವತಿಗೆಂದು ಆದೇಶ ಹೊರಡಿಸಿ 4 ವರ್ಷಗಳು ಕಳೆದರೂ ಇನ್ನೂ ಜಾರಿಗೆ ಬಂದಿಲ್ಲ. ಹಾಗಾಗಿ ಇದನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಆಗಿನಿಂದಲೂ ಪ್ರತಿಭಟಿಸುತ್ತಲೇ ಇದ್ದೇವೆ. ಈಗ ಕಳೆದ 8 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ:ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

“ನೇರ ವೇತನ ಪಾವತಿ ಮಾಡುವುದಕ್ಕೆ 2018ರಲ್ಲಿ ಜಿಲ್ಲಾಧಿಕಾರಿಗಳು ಅನುಮೋದನೆ ಕೊಟ್ಟಿದ್ದಾರೆ. ಆದರೆ ಇಲ್ಲಿಯವರೆಗೂ ಇದು ಅನುಷ್ಠಾನಗೊಂಡಿಲ್ಲ. ಇಷ್ಟೇ ಅಲ್ಲದೇ, ಕನಿಷ್ಟ ವೇತನ ವೇತನ ಬಾಕಿ 9 ಕೋಟಿ, ಪಿಎಫ್ ವಂಚನೆಗೆ ಸಂಬಂಧಿಸಿದಂತೆ 3 ಕೋಟಿ, ತುಟ್ಟಿ ಭತ್ಯೆಯ ಬಾಕಿ 2 ಕೋಟಿ, 868 ಮಹಿಳಾ ಪೌರ ಕಾರ್ಮಿಕರಿಗೆ ನೀಡಬೇಕಾದ ವೈದ್ಯಕೀಯ ಬೋನಸ್ ಹಣ 21.70 ಲಕ್ಷ ಸೇರಿದಂತೆ ಸುಮಾರು 14 ಕೋಟಿಯ 21 ಲಕ್ಷದ 70ಸಾವಿರ ರೂ.ಗಳು ಮಹಾನಗರ ಪಾಲಿಕೆಯಿಂದ ಬಾಕಿ ಹಣ ಬರಬೇಕಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಅಧಿಕೃತ ಆದೇಶ ಹೊರಬಿದ್ದಿದ್ದರೂ ಸಹ ನಮಗೆ ಇನ್ನೂ ಹಣ ಪಾವತಿಯಾಗಿಲ್ಲ” ಎಂದು ನೋವು ತೋಡಿಕೊಂಡರು.

ಪೌರ ಕಾರ್ಮಿಕರ ಪ್ರತಿಭಟನೆಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

“ಕಸ ತುಂಬಿಕೊಂಡು ಹೋಗುವ ಆಟೋ ಟಿಪ್ಪರ್ ವಾಹನ ಚಾಲಕರು, ತಮಗೆ 3 ತಿಂಗಳಿನಿಂದ ಬರಬೇಕಾಗಿರುವ ಸಂಬಳ ನೀಡಲು ಒತ್ತಾಯಿಸಿದ್ದಕ್ಕಾಗಿ, ಮಹಾನಗರ ಪಾಲಿಕೆಯ ಆಯುಕ್ತರು ಯಾವುದೇ ನೋಟೀಸ್ ನೀಡದೇ, 51 ಜನ ಚಾಲಕರನ್ನು ಕಾನೂನುಬಾಹಿರವಾಗಿ ಕೆಲಸದಿಂದ ತೆಗೆದಿದ್ದಾರೆ. ಪೌರ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು, ಸಂಬಳ ಬಾಕಿ ಉಳಿಸಿಕೊಳ್ಳಬಾರದು ಎಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೇ ಆದೇಶ ಹೊರಡಿಸಿದ್ದರೂ ಪಾಲಿಕೆಯು ಇಂತಹ ಕೃತ್ಯವೆಸಗಿದೆ. ಪಾಲಿಕೆಯ ಆಯುಕ್ತರು ಮತ್ತು ಗುತ್ತಿಗೆದಾರರಾದ ಆದರ್ಶ್‌ ಎಂಟರ್‌ಪ್ರೈಸಸ್ ಸೇರಿಕೊಂಡು, 1948ರ ಕನಿಷ್ಠ ವೇತನ ಕಾಯ್ದೆಯ ಉಲ್ಲಂಘನೆ, 1936ರ ವೇತನ ಪಾವತಿ ಕಾಯ್ದೆಯ ಉಲ್ಲಂಘನೆ ಮಾಡಿದ್ದಾರೆ. ಜೊತೆಗೆ, ಈ ಗುತ್ತಿಗೆ ದಾರರು ಪರವಾನಗಿಯೇ ಇಲ್ಲದೇ ಕಳೆದ 16 ವರ್ಷಗಳಿಂದ ಪಾಲಿಕೆಯ ಟೆಂಡರ್ ಪಡೆದುಕೊಳ್ಳುತ್ತಿದ್ದು, 1970ರ ಕಾಂಟ್ರಾಕ್ಟ್ ಲೇಬರ್ ಕಾಯ್ದೆಯನ್ನೂ ಉಲ್ಲಂಘಿಸಿದ್ದಾರೆ. ಈ ಕಾನೂನಬಾಹಿರ ಗುತ್ತಿಗೆದಾರರಿಗೆ 14.60 ಕೋಟಿ ಮೌಲ್ಯದ 146 ವಾಹನಗಳನ್ನ ನಿತ್ಯ ನಿರ್ವಹಣೆಗೆ ನೀಡಲಾಗಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ – ಆತಂಕದಲ್ಲಿ ಪೌರಕಾರ್ಮಿಕರು

ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರಕಾರ್ಮಿಕರು ಕಳೆದ 8 ದಿನಗಳಿಂದ ಅಹೋರಾತ್ರಿ ಅನಿರ್ಧಿಷ್ಟಾವದಿ ಪ್ರತಿಭಟನೆಯನ್ನು ಮಾಡುತ್ತಿದ್ದು, ಇದುವರೆಗೂ ಸಹ ಯಾವುದೇ ಜನಪ್ರತಿನಿಧಿಗಳು ಇವರನ್ನು ಭೇಟಿಯಾಗಿ ಇವರ ಸಮಸ್ಯೆಗಳನ್ನು ಆಲಿಸಿರುವುದಿಲ್ಲ. ಆದರೂ ಕೆಲವು ಪೌರ ಕಾರ್ಮಿಕರು ತಮ್ಮ ಕೆಲಸವನ್ನು ಮುಗಿಸಿಕೊಂಡು ನಂತರ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ತಮ್ಮ ಕರ್ತವ್ಯನಿಷ್ಠೆಯನ್ನು ಮೆರೆದಿದ್ದಾರೆ ಎಂದರು.

ಇದನ್ನೂ ಓದಿ:ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…


ಇದನ್ನೂ ಓದಿ: ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...