Homeಕರ್ನಾಟಕಧಾರವಾಡ: 8 ದಿನಗಳಿಂದ ಪೌರಕಾರ್ಮಿಕರ ಪ್ರತಿಭಟನೆ - ತಿರುಗಿ ನೋಡದ ಜಿಲ್ಲಾಡಳಿತ

ಧಾರವಾಡ: 8 ದಿನಗಳಿಂದ ಪೌರಕಾರ್ಮಿಕರ ಪ್ರತಿಭಟನೆ – ತಿರುಗಿ ನೋಡದ ಜಿಲ್ಲಾಡಳಿತ

ನೇರ ನೇಮಕಾತಿ ಮತ್ತು ನೇರ ಪಾವತಿಗೆ ರಾಜ್ಯಸರ್ಕಾರ ಆದೇಶ ನೀಡಿದ್ದಾಗ್ಯೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈ ಆದೇಶವನ್ನು ಪಾಲಿಸದೆ ಪೌರಕಾರ್ಮಿಕರಿಗೆ ವಂಚನೆ ಮಾಡುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

- Advertisement -
- Advertisement -

ನೂರಾರು ಪೌರಕಾರ್ಮಿಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ 8 ದಿನಗಳಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮತ್ತು ನೇರ ಪಾವತಿಗೆ ರಾಜ್ಯಸರ್ಕಾರ ಆದೇಶ ನೀಡಿದ್ದಾಗ್ಯೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈ ಆದೇಶವನ್ನು ಪಾಲಿಸದೆ ಪೌರಕಾರ್ಮಿಕರಿಗೆ ವಂಚನೆ ಮಾಡುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ನಾನುಗೌರಿ.ಕಾಂ ನೊಂದಿಗೆ ಮಾತನಾಡಿದ ಹೋರಾಟಗಾರರಾದ ವಿಜಯ್ ಗುಂತ್ರಾಲ್, “2017ರಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನೇರ ನೇಮಕಾತಿ ಮತ್ತು ನೇರ ಪಾವತಿಗೆಂದು ಆದೇಶ ಹೊರಡಿಸಿ 4 ವರ್ಷಗಳು ಕಳೆದರೂ ಇನ್ನೂ ಜಾರಿಗೆ ಬಂದಿಲ್ಲ. ಹಾಗಾಗಿ ಇದನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಆಗಿನಿಂದಲೂ ಪ್ರತಿಭಟಿಸುತ್ತಲೇ ಇದ್ದೇವೆ. ಈಗ ಕಳೆದ 8 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ:ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

“ನೇರ ವೇತನ ಪಾವತಿ ಮಾಡುವುದಕ್ಕೆ 2018ರಲ್ಲಿ ಜಿಲ್ಲಾಧಿಕಾರಿಗಳು ಅನುಮೋದನೆ ಕೊಟ್ಟಿದ್ದಾರೆ. ಆದರೆ ಇಲ್ಲಿಯವರೆಗೂ ಇದು ಅನುಷ್ಠಾನಗೊಂಡಿಲ್ಲ. ಇಷ್ಟೇ ಅಲ್ಲದೇ, ಕನಿಷ್ಟ ವೇತನ ವೇತನ ಬಾಕಿ 9 ಕೋಟಿ, ಪಿಎಫ್ ವಂಚನೆಗೆ ಸಂಬಂಧಿಸಿದಂತೆ 3 ಕೋಟಿ, ತುಟ್ಟಿ ಭತ್ಯೆಯ ಬಾಕಿ 2 ಕೋಟಿ, 868 ಮಹಿಳಾ ಪೌರ ಕಾರ್ಮಿಕರಿಗೆ ನೀಡಬೇಕಾದ ವೈದ್ಯಕೀಯ ಬೋನಸ್ ಹಣ 21.70 ಲಕ್ಷ ಸೇರಿದಂತೆ ಸುಮಾರು 14 ಕೋಟಿಯ 21 ಲಕ್ಷದ 70ಸಾವಿರ ರೂ.ಗಳು ಮಹಾನಗರ ಪಾಲಿಕೆಯಿಂದ ಬಾಕಿ ಹಣ ಬರಬೇಕಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಅಧಿಕೃತ ಆದೇಶ ಹೊರಬಿದ್ದಿದ್ದರೂ ಸಹ ನಮಗೆ ಇನ್ನೂ ಹಣ ಪಾವತಿಯಾಗಿಲ್ಲ” ಎಂದು ನೋವು ತೋಡಿಕೊಂಡರು.

ಪೌರ ಕಾರ್ಮಿಕರ ಪ್ರತಿಭಟನೆಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

“ಕಸ ತುಂಬಿಕೊಂಡು ಹೋಗುವ ಆಟೋ ಟಿಪ್ಪರ್ ವಾಹನ ಚಾಲಕರು, ತಮಗೆ 3 ತಿಂಗಳಿನಿಂದ ಬರಬೇಕಾಗಿರುವ ಸಂಬಳ ನೀಡಲು ಒತ್ತಾಯಿಸಿದ್ದಕ್ಕಾಗಿ, ಮಹಾನಗರ ಪಾಲಿಕೆಯ ಆಯುಕ್ತರು ಯಾವುದೇ ನೋಟೀಸ್ ನೀಡದೇ, 51 ಜನ ಚಾಲಕರನ್ನು ಕಾನೂನುಬಾಹಿರವಾಗಿ ಕೆಲಸದಿಂದ ತೆಗೆದಿದ್ದಾರೆ. ಪೌರ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು, ಸಂಬಳ ಬಾಕಿ ಉಳಿಸಿಕೊಳ್ಳಬಾರದು ಎಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೇ ಆದೇಶ ಹೊರಡಿಸಿದ್ದರೂ ಪಾಲಿಕೆಯು ಇಂತಹ ಕೃತ್ಯವೆಸಗಿದೆ. ಪಾಲಿಕೆಯ ಆಯುಕ್ತರು ಮತ್ತು ಗುತ್ತಿಗೆದಾರರಾದ ಆದರ್ಶ್‌ ಎಂಟರ್‌ಪ್ರೈಸಸ್ ಸೇರಿಕೊಂಡು, 1948ರ ಕನಿಷ್ಠ ವೇತನ ಕಾಯ್ದೆಯ ಉಲ್ಲಂಘನೆ, 1936ರ ವೇತನ ಪಾವತಿ ಕಾಯ್ದೆಯ ಉಲ್ಲಂಘನೆ ಮಾಡಿದ್ದಾರೆ. ಜೊತೆಗೆ, ಈ ಗುತ್ತಿಗೆ ದಾರರು ಪರವಾನಗಿಯೇ ಇಲ್ಲದೇ ಕಳೆದ 16 ವರ್ಷಗಳಿಂದ ಪಾಲಿಕೆಯ ಟೆಂಡರ್ ಪಡೆದುಕೊಳ್ಳುತ್ತಿದ್ದು, 1970ರ ಕಾಂಟ್ರಾಕ್ಟ್ ಲೇಬರ್ ಕಾಯ್ದೆಯನ್ನೂ ಉಲ್ಲಂಘಿಸಿದ್ದಾರೆ. ಈ ಕಾನೂನಬಾಹಿರ ಗುತ್ತಿಗೆದಾರರಿಗೆ 14.60 ಕೋಟಿ ಮೌಲ್ಯದ 146 ವಾಹನಗಳನ್ನ ನಿತ್ಯ ನಿರ್ವಹಣೆಗೆ ನೀಡಲಾಗಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ – ಆತಂಕದಲ್ಲಿ ಪೌರಕಾರ್ಮಿಕರು

ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರಕಾರ್ಮಿಕರು ಕಳೆದ 8 ದಿನಗಳಿಂದ ಅಹೋರಾತ್ರಿ ಅನಿರ್ಧಿಷ್ಟಾವದಿ ಪ್ರತಿಭಟನೆಯನ್ನು ಮಾಡುತ್ತಿದ್ದು, ಇದುವರೆಗೂ ಸಹ ಯಾವುದೇ ಜನಪ್ರತಿನಿಧಿಗಳು ಇವರನ್ನು ಭೇಟಿಯಾಗಿ ಇವರ ಸಮಸ್ಯೆಗಳನ್ನು ಆಲಿಸಿರುವುದಿಲ್ಲ. ಆದರೂ ಕೆಲವು ಪೌರ ಕಾರ್ಮಿಕರು ತಮ್ಮ ಕೆಲಸವನ್ನು ಮುಗಿಸಿಕೊಂಡು ನಂತರ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ತಮ್ಮ ಕರ್ತವ್ಯನಿಷ್ಠೆಯನ್ನು ಮೆರೆದಿದ್ದಾರೆ ಎಂದರು.

ಇದನ್ನೂ ಓದಿ:ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…


ಇದನ್ನೂ ಓದಿ: ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...