Homeಕರ್ನಾಟಕಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ; ನಟ-ರಂಗಕರ್ಮಿ ಜಹಾಂಗೀರ್ ಹೆಸರು ಮುನ್ನೆಲೆಗೆ

ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ; ನಟ-ರಂಗಕರ್ಮಿ ಜಹಾಂಗೀರ್ ಹೆಸರು ಮುನ್ನೆಲೆಗೆ

- Advertisement -
- Advertisement -

ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ಕಳೆದ ನಿಧನರಾಗಿದ್ದು, ಇದೀಗ ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ ಖಾಲಿ ಉಳಿಸಿದೆ. ಆ ಜಾಗಕ್ಕೆ ಹಿರಿಯ ನಟ, ರಂಗಕರ್ಮಿ ಜಹಾಂಗೀರ್ ಎಂಎಸ್‌ ಅವರ ಹೆಸರು ಕೇಳಿಬರುತ್ತಿದೆ.

ನೀನಾಸಂ ರಂಗಶಿಕ್ಷಣಕೇಂದ್ರದಲ್ಲಿ ನಟನಾ ಡಿಪ್ಲೊಮ ಪದವಿ ಪಡೆದಿರುವ ಅವರು, ಹಲವು ಕನ್ನಡ ಧಾರಾವಾಹಿ, ಚಲನಚಿತ್ರ ಮತ್ತು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ನೀನಾಸಂ ತಿರುಗಾಟದಲ್ಲಿ ಅವರು ಚೋರಚರಣದಾಸ, ಸಂಸಾರದಲ್ಲಿಸನಿದಪ, ಜುಜಬಿ ದೇವರ ಜುಗಾರಿ ಆಟ, ಮಹಾತ್ಮ, ಚೂರಿಕಟ್ಟೆ, ಧರ್ಮ ದುರಂತ, ಜತೆಗಿರುವನು ಚಂದಿರ, ಸಹ್ಯಾದ್ರಿಕಾಂಡ, ಕೆಂಪುಕಣಗಿಲೆ ಸೇರಿದಂತೆ ಹಲವು ನಾಟಕಗಳಲ್ಲಿ ಅಭಿನಯಿಸಿದ್ದಾರೆ.

ಮೈಸೂರು ರಂಗಾಯಣಕ್ಕಾಗಿ ದೊರೆ ಈಡೀಪಸ್, ರಂಗಶಂಕರದ ಸಂಕೇತ್ ಗಾಗಿ
ನೀನಾನಾದ್ರೆ ನಾ ನೀನೇನ ನಾಟಕಗಳನ್ನು ನಿರ್ದೇಶನ ಮಾಡಿದ್ದಾರೆ.

ಅಮೇರಿಕದ ‘ಬ್ರೆಡ್ ಆಂಡ್ ಪೋಪೆಟ್’ ಥಿಯಟರ್ ನಲ್ಲಿ ಕೆಲಸ ಮಾಡಿದ ಅನುಭವ ಇದ್ದು, ಕರ್ನಾಟಕದ ಹಲವಾರು ಜಿಲ್ಲೆಯಾದ್ಯಂತ ಹವ್ಯಾಸಿ ರಂಗಭೂಮಿ ತಂಡಗಳೂಂದಿಗೆ ನಟ ತಂತ್ರಜ್ಞನಾಗಿ ಕೆಲಸ ಮಾಡಿದ್ದಾರೆ.

ಕನ್ನಡ ದೂರದರ್ಶನದ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ಪಾಪಾ ಪಾಂಡು, ಪಾಂಡುರಂಗ ವಿಠಲ, ಪಾತು ಸಾತು ಹಲವಾರು ಧಾರವಾಹಿಗಳಲ್ಲಿ ನಟನೆ ಮಾಡಿದ್ದಾರೆ.

ಕಾನ್ಸ್ ಪ್ರಶಸ್ತಿ ವಿಜೇತ, ಆಸ್ಕರ್ ನಾಮನಿದೇ೯ಶಿತವಾದ ಸೂರ್ಯ ಕಾಂತಿ ಹೊಗಳಿಗೆ ಮದಲೇಗೊತ್ತಿತ್ತು ಸೇರಿದಂತೆ ಪೋಟೋ, ಯಜಮಾನ, ಬಹದ್ದೂರ್, ವಾಘಚಿಪಾಣಿ, ಸದ್ದು ವಿಚಾರಣೆ ನೆಡೆಯುತ್ತಿದೆ, ಅಭಿಮನ್ಯೂ ಸೇರಿದಂತೆ ಇನ್ನೂ ಹಲವಾರು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಅಮೇರಿಕಾದ ಬೆಡ್ಅಂಡ್ ಪಪೆಟ್ ಥಿಯೇಟರ್, ಕರ್ನಾಟಕದ ನೀನಾಸಮ್, ಪುಣೆಯ ಎಫ್‌ಟಿಐಐ, ರಂಗಾಯಣ, ರಂಗಶಂಕರ ಸಂಕೇತ್ ಸೇರಿದಂತೆ ಹಲವಾರು ತಂಡಗಳ ಜೊತೆಗೆ ನಟನೆ, ನಿರ್ದೇಶನದ ಜೊತೆಗೆ ತಂತ್ರಜ್ಞರಾಗಿಯೂ ಕೆಲಸ ಮಾಡಿದ ಅನುಭವ ಇದೆ. ಕಳೆದ 15 ವರ್ಷ ದಿಂದ ಹುಬ್ಬಳಿಯಲ್ಲಿ ವಾಸ ಮಾಡುತ್ತಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಟ ಎಂ.ಎಸ್‌. ಜಹಾಂಗೀರ್, “ಜಾತ್ಯತೀತ ಸರ್ಕಾರಗಳು ಅಧಿಕಾರಕ್ಕೆ ಬಂದಾಗ ಅವಕಾಶ ವಂಚಿತ ಸಮುದಾಯಗಳಿಗೆ ಆದ್ಯತೆ ನೀಡುವ ಪದ್ಧತಿ ಹಿಂದಿನಿಂದಲೂ ಚಾಲ್ತಿಯಲ್ಲಿದೆ. ನಾವು ಇಂಥ ಸರ್ಕಾರಗಳಿಂದ ಮಾತ್ರವೇ ಸಾಮಾಜಿಕ ನ್ಯಾಯ ನಿರೀಕ್ಷೆ ಮಾಡಬಹುದು. ಈ ಹಿಂದೆ ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಅವರು, ಅಲ್ಪಸಂಖ್ಯಾತ ಸಮುದಾಯದಲ್ಲೇ ಸಣ್ಣ ಗುಂಪಾದ ಪಿಂಜಾರ ಸಮುದಾಯಕ್ಕೆ ಸೇರಿದ್ದವರಾಗಿದ್ದರು. ಈವರೆಗೆ ಆ ಸಮುದಾಯಗಳಿಗೆ ಸಿಕ್ಕ ಅವಕಾಶ ಬಹಳ ಕಡಿಮೆ. ಈ ರೀತಿಯ ಅತಿ ಸೂಕ್ಷ್ಮ ಸಮುದಾಯದ ವ್ಯಕ್ತಿಗೆ ಸರ್ಕಾರ ಅವಕಾಶ ನೀಡಿತ್ತು. ಆದರೆ, ದುರಾದೃಷ್ಟವಶಾತ್ ರಾಜು ತಾಳಿಕೋಟೆ ನಮ್ಮನ್ನು ಅಗಲಿದ್ದಾರೆ. ಅಪರೂಪಕ್ಕೆ ಈ ಸಮುದಾಯಕ್ಕೆ ಅವಕಾಶ ಸಿಕ್ಕಿದ್ದು, ಸರ್ಕಾರ ಪ್ರಾದೇಶಿಕ ಮತ್ತು ಪ್ರಾತಿನಿಧ್ಯ ಆಧಾರದಲ್ಲಿ ಇದೇ ಸಮುದಾಕ್ಕೆ ಮತ್ತೊಮ್ಮೆ ಅವಕಾಶ ನೀಡಿದರೆ ಉತ್ತಮವಾಗಿರುತ್ತದೆ” ಎಂದರು.

“ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನಕ್ಕೆ ನನ್ನ ಹೆಸರು ಮಾತ್ರವಲ್ಲ, ಇದೇ ಸಮುದಾಯದ ಸಹನಾ ಪಿಂಜಾರ ಅವರು ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಪದವಿ ಪಡೆದಿದ್ದಾರೆ. ಶಕೀಲ್‌ ಅಹಮದ್‌ ಎನ್ನುವವರು ಹಲವು ರಂಗ ತಂಡಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯದವರನ್ನೇ ನಿರ್ದೇಶಕರನ್ನಾಗಿ ಮಾಡುತ್ತೇವೆ ಎಂದು ಬೇರೆ ಯಾರನ್ನೋ ಆಯ್ಕೆ ಮಾಡುವ ಬದಲಿಗೆ ಸೂಕ್ಷ್ಮ ಗುಂಪುಗಳಾದ ನದಾಫ್‌ ಮತ್ತು ಪಿಂಜಾರ ಸಮುದಾಯದ ಕಲಾವಿದರಿಗೆ ಅವಕಾಶ ನಿಡಬೇಕು. ಕಳೆದ ಮೂವತ್ತು ವರ್ಷಗಳಿಂದ ನಾನು ರಂಗಭೂಮಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ. ಅವಕಾಶ ಸಿಕ್ಕರೆ ಉತ್ತಮವಾಗಿ ಕೆಲಸ ಮಾಡಿಕೊಂಡು ಹೋಗಬಹುದು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...